Homeಅಂತರಾಷ್ಟ್ರೀಯಸಂವಿಧಾನಕ್ಕೆ ತಿದ್ದುಪಡಿ: 2036 ರವರೆಗೂ ರಷ್ಯಾದಲ್ಲಿ ಪುಟಿನ್ ಅಧ್ಯಕ್ಷ?

ಸಂವಿಧಾನಕ್ಕೆ ತಿದ್ದುಪಡಿ: 2036 ರವರೆಗೂ ರಷ್ಯಾದಲ್ಲಿ ಪುಟಿನ್ ಅಧ್ಯಕ್ಷ?

ಬೃಹತ್ ಪ್ರಚಾರ ಅಭಿಯಾನ ಮತ್ತು ಸಂಘಟಿತ ಸವಾಲನ್ನು ಎದುರಿಸಲು ಪ್ರತಿಪಕ್ಷಗಳು ವಿಫಲವಾದ ಕಾರಣ ಪುಟಿನ್ ಅವರು ಬಯಸಿದ ಫಲಿತಾಂಶವನ್ನು ಪಡೆದರು ಎನ್ನಲಾಗಿದೆ.

- Advertisement -
- Advertisement -

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 2036 ರವರೆಗೆ ಅಧಿಕಾರ ಹೊಂದಲು ಅನುವು ಮಾಡಿಕೊಡುವ ಸಂವಿಧಾನದ ಬದಲಾವಣೆಗಳನ್ನು ರಷ್ಯಾದ ಹೆಚ್ಚಿನ ಮತದಾರರು ಅಂಗೀಕರಿಸಿದ್ದಾರೆ ಎಂಬ ವರದಿಗಳು ಬಂದಿವೆ. ಬುಧವಾರ ಮುಕ್ತಾಯಗೊಂಡ ವಾರಾಂತ್ಯದ ಜನಾಭಿಪ್ರಾಯ ಸಂಗ್ರಹದಲ್ಲಿ ಅಕ್ರಮಗಳು ನಡೆದಿದ್ದು, ಮತದಾರರ ಮೇಲೆ ಒತ್ತಡ ಹೇರಲಾಗಿದೆ ಎಂಬ ಟೀಕೆಗಳು ಸಹ ಕೇಳಿಬಂದಿವೆ.

ರಾಷ್ಟ್ರದ ಬಹುತೇಕ ಚುನಾವಣೆ ಮುಗಿದಿದ್ದು, 20% ಪ್ರಾಂತದ ಮತಗಳನ್ನು ಎಣಿಸಲಾಗಿದೆ. 72% ಜನರು ಸಾಂವಿಧಾನಿಕ ತಿದ್ದುಪಡಿ ಪರ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ರಷ್ಯಾದಲ್ಲಿ ಮೊದಲ ಬಾರಿಗೆ, ಮತ ಚಲಾಯಿಸುವಲ್ಲಿ ಜನಸಂದಣಿ ತಡೆಗಟ್ಟಲು ಮತದಾನಕ್ಕೆ ಒಂದು ವಾರದವರೆಗೂ ಅವಕಾಶ ನೀಡಲಾಗಿತ್ತು.

ಬೃಹತ್ ಪ್ರಚಾರ ಅಭಿಯಾನ ಮತ್ತು ಸಂಘಟಿತ ಸವಾಲನ್ನು ಎದುರಿಸಲು ಪ್ರತಿಪಕ್ಷಗಳು ವಿಫಲವಾದ ಕಾರಣ ಪುಟಿನ್ ಅವರು ಬಯಸಿದ ಫಲಿತಾಂಶವನ್ನು ಪಡೆದರು ಎನ್ನಲಾಗಿದೆ.

ಚುನಾವಣಾ ಅಧಿಕಾರಿಗಳ ಪ್ರಕಾರ, ಮಾಸ್ಕೋ ಮತ್ತು ಪಶ್ಚಿಮ ರಷ್ಯಾದ ಇತರ ಭಾಗಗಳಲ್ಲಿ ಮತದಾನ ಮುಕ್ತಾಯಗೊಳ್ಳುವ ಹೊತ್ತಿಗೆ ಮತದಾನವು 65% ರಷ್ಟಿತ್ತು. ಕೆಲವು ಪ್ರದೇಶಗಳಲ್ಲಿ, ಸುಮಾರು 90% ಅರ್ಹ ಮತದಾರರು ಮತ ಚಲಾಯಿಸಿದ್ದಾರೆ.

ರಷ್ಯಾದ ಪೂರ್ವ ದಿಕ್ಕಿನ ಚುಕ್ಚಿ ಪರ್ಯಾಯ ದ್ವೀಪದಲ್ಲಿ, ಮಾಸ್ಕೋಕ್ಕಿಂತ ಒಂಬತ್ತು ಗಂಟೆಗಳ ಮುಂಚಿತವಾಗಿ ಪ್ರಾಥಮಿಕ ಫಲಿತಾಂಶಗಳನ್ನು ಘೋಷಿಸಿ, 80% ಮತದಾರರು ತಿದ್ದುಪಡಿಗಳನ್ನು ಬೆಂಬಲಿಸಿದ್ದಾರೆ ಎಂದಿದ್ದಾರೆ. ಪೂರ್ವದ ಇತರ ಭಾಗಗಳಲ್ಲಿ, 70% ರಷ್ಟು ಮತದಾರರು ಬದಲಾವಣೆಗಳನ್ನು ಬೆಂಬಲಿಸಿದ್ದಾರೆ ಎಂದು ಅವರು ಹೇಳಿದರು.

ಕ್ರೆಮ್ಲಿನ್ ವಿಮರ್ಶಕರು ಮತ್ತು ಸ್ವತಂತ್ರ ಚುನಾವಣಾ ವೀಕ್ಷಕರು ಮತದಾನದ ಅಂಕಿಅಂಶಗಳನ್ನು ಪ್ರಶ್ನಿಸಿದ್ದಾರೆ.

2024ಕ್ಕೆ ಪುಟಿನ್‌ರವರ ಅಧಿಕಾರವಧಿ ಮುಗಿಯಲಿದೆ. ಆದರೆ ಅದರ ನಂತರವೂ ಸಹ 12 ವರ್ಷಗಳ ಕಾಲ ಅಧ್ಯಕ್ಷರಾಗಿ ಮುಂದುವರೆಯುವಂತೆ ಅವರು ತಂದ ಸಂವಿಧಾನ ತಿದ್ದುಪಡಿಗಳಿಗೆ ರಷ್ಯಾ ಸಂಸತ್ತು ಭಾರೀ ಬಹುಮತದೊಂದಿಗೆ ಅಂಗೀಕರಿಸಿತ್ತು.


ಓದಿ: ಜನ ಮನೆಯಿಂದ ಹೊರಬರದಿರಲು ರಷ್ಯಾ 800 ಸಿಂಹಗಳನ್ನು ಬೀದಿಗೆ ಬಿಟ್ಟಿತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...