Homeಅಂತರಾಷ್ಟ್ರೀಯಸಂವಿಧಾನಕ್ಕೆ ತಿದ್ದುಪಡಿ: 2036 ರವರೆಗೂ ರಷ್ಯಾದಲ್ಲಿ ಪುಟಿನ್ ಅಧ್ಯಕ್ಷ?

ಸಂವಿಧಾನಕ್ಕೆ ತಿದ್ದುಪಡಿ: 2036 ರವರೆಗೂ ರಷ್ಯಾದಲ್ಲಿ ಪುಟಿನ್ ಅಧ್ಯಕ್ಷ?

ಬೃಹತ್ ಪ್ರಚಾರ ಅಭಿಯಾನ ಮತ್ತು ಸಂಘಟಿತ ಸವಾಲನ್ನು ಎದುರಿಸಲು ಪ್ರತಿಪಕ್ಷಗಳು ವಿಫಲವಾದ ಕಾರಣ ಪುಟಿನ್ ಅವರು ಬಯಸಿದ ಫಲಿತಾಂಶವನ್ನು ಪಡೆದರು ಎನ್ನಲಾಗಿದೆ.

- Advertisement -
- Advertisement -

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 2036 ರವರೆಗೆ ಅಧಿಕಾರ ಹೊಂದಲು ಅನುವು ಮಾಡಿಕೊಡುವ ಸಂವಿಧಾನದ ಬದಲಾವಣೆಗಳನ್ನು ರಷ್ಯಾದ ಹೆಚ್ಚಿನ ಮತದಾರರು ಅಂಗೀಕರಿಸಿದ್ದಾರೆ ಎಂಬ ವರದಿಗಳು ಬಂದಿವೆ. ಬುಧವಾರ ಮುಕ್ತಾಯಗೊಂಡ ವಾರಾಂತ್ಯದ ಜನಾಭಿಪ್ರಾಯ ಸಂಗ್ರಹದಲ್ಲಿ ಅಕ್ರಮಗಳು ನಡೆದಿದ್ದು, ಮತದಾರರ ಮೇಲೆ ಒತ್ತಡ ಹೇರಲಾಗಿದೆ ಎಂಬ ಟೀಕೆಗಳು ಸಹ ಕೇಳಿಬಂದಿವೆ.

ರಾಷ್ಟ್ರದ ಬಹುತೇಕ ಚುನಾವಣೆ ಮುಗಿದಿದ್ದು, 20% ಪ್ರಾಂತದ ಮತಗಳನ್ನು ಎಣಿಸಲಾಗಿದೆ. 72% ಜನರು ಸಾಂವಿಧಾನಿಕ ತಿದ್ದುಪಡಿ ಪರ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ರಷ್ಯಾದಲ್ಲಿ ಮೊದಲ ಬಾರಿಗೆ, ಮತ ಚಲಾಯಿಸುವಲ್ಲಿ ಜನಸಂದಣಿ ತಡೆಗಟ್ಟಲು ಮತದಾನಕ್ಕೆ ಒಂದು ವಾರದವರೆಗೂ ಅವಕಾಶ ನೀಡಲಾಗಿತ್ತು.

ಬೃಹತ್ ಪ್ರಚಾರ ಅಭಿಯಾನ ಮತ್ತು ಸಂಘಟಿತ ಸವಾಲನ್ನು ಎದುರಿಸಲು ಪ್ರತಿಪಕ್ಷಗಳು ವಿಫಲವಾದ ಕಾರಣ ಪುಟಿನ್ ಅವರು ಬಯಸಿದ ಫಲಿತಾಂಶವನ್ನು ಪಡೆದರು ಎನ್ನಲಾಗಿದೆ.

ಚುನಾವಣಾ ಅಧಿಕಾರಿಗಳ ಪ್ರಕಾರ, ಮಾಸ್ಕೋ ಮತ್ತು ಪಶ್ಚಿಮ ರಷ್ಯಾದ ಇತರ ಭಾಗಗಳಲ್ಲಿ ಮತದಾನ ಮುಕ್ತಾಯಗೊಳ್ಳುವ ಹೊತ್ತಿಗೆ ಮತದಾನವು 65% ರಷ್ಟಿತ್ತು. ಕೆಲವು ಪ್ರದೇಶಗಳಲ್ಲಿ, ಸುಮಾರು 90% ಅರ್ಹ ಮತದಾರರು ಮತ ಚಲಾಯಿಸಿದ್ದಾರೆ.

ರಷ್ಯಾದ ಪೂರ್ವ ದಿಕ್ಕಿನ ಚುಕ್ಚಿ ಪರ್ಯಾಯ ದ್ವೀಪದಲ್ಲಿ, ಮಾಸ್ಕೋಕ್ಕಿಂತ ಒಂಬತ್ತು ಗಂಟೆಗಳ ಮುಂಚಿತವಾಗಿ ಪ್ರಾಥಮಿಕ ಫಲಿತಾಂಶಗಳನ್ನು ಘೋಷಿಸಿ, 80% ಮತದಾರರು ತಿದ್ದುಪಡಿಗಳನ್ನು ಬೆಂಬಲಿಸಿದ್ದಾರೆ ಎಂದಿದ್ದಾರೆ. ಪೂರ್ವದ ಇತರ ಭಾಗಗಳಲ್ಲಿ, 70% ರಷ್ಟು ಮತದಾರರು ಬದಲಾವಣೆಗಳನ್ನು ಬೆಂಬಲಿಸಿದ್ದಾರೆ ಎಂದು ಅವರು ಹೇಳಿದರು.

ಕ್ರೆಮ್ಲಿನ್ ವಿಮರ್ಶಕರು ಮತ್ತು ಸ್ವತಂತ್ರ ಚುನಾವಣಾ ವೀಕ್ಷಕರು ಮತದಾನದ ಅಂಕಿಅಂಶಗಳನ್ನು ಪ್ರಶ್ನಿಸಿದ್ದಾರೆ.

2024ಕ್ಕೆ ಪುಟಿನ್‌ರವರ ಅಧಿಕಾರವಧಿ ಮುಗಿಯಲಿದೆ. ಆದರೆ ಅದರ ನಂತರವೂ ಸಹ 12 ವರ್ಷಗಳ ಕಾಲ ಅಧ್ಯಕ್ಷರಾಗಿ ಮುಂದುವರೆಯುವಂತೆ ಅವರು ತಂದ ಸಂವಿಧಾನ ತಿದ್ದುಪಡಿಗಳಿಗೆ ರಷ್ಯಾ ಸಂಸತ್ತು ಭಾರೀ ಬಹುಮತದೊಂದಿಗೆ ಅಂಗೀಕರಿಸಿತ್ತು.


ಓದಿ: ಜನ ಮನೆಯಿಂದ ಹೊರಬರದಿರಲು ರಷ್ಯಾ 800 ಸಿಂಹಗಳನ್ನು ಬೀದಿಗೆ ಬಿಟ್ಟಿತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...