Homeಅಂತರಾಷ್ಟ್ರೀಯಸಂವಿಧಾನಕ್ಕೆ ತಿದ್ದುಪಡಿ: 2036 ರವರೆಗೂ ರಷ್ಯಾದಲ್ಲಿ ಪುಟಿನ್ ಅಧ್ಯಕ್ಷ?

ಸಂವಿಧಾನಕ್ಕೆ ತಿದ್ದುಪಡಿ: 2036 ರವರೆಗೂ ರಷ್ಯಾದಲ್ಲಿ ಪುಟಿನ್ ಅಧ್ಯಕ್ಷ?

ಬೃಹತ್ ಪ್ರಚಾರ ಅಭಿಯಾನ ಮತ್ತು ಸಂಘಟಿತ ಸವಾಲನ್ನು ಎದುರಿಸಲು ಪ್ರತಿಪಕ್ಷಗಳು ವಿಫಲವಾದ ಕಾರಣ ಪುಟಿನ್ ಅವರು ಬಯಸಿದ ಫಲಿತಾಂಶವನ್ನು ಪಡೆದರು ಎನ್ನಲಾಗಿದೆ.

- Advertisement -
- Advertisement -

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 2036 ರವರೆಗೆ ಅಧಿಕಾರ ಹೊಂದಲು ಅನುವು ಮಾಡಿಕೊಡುವ ಸಂವಿಧಾನದ ಬದಲಾವಣೆಗಳನ್ನು ರಷ್ಯಾದ ಹೆಚ್ಚಿನ ಮತದಾರರು ಅಂಗೀಕರಿಸಿದ್ದಾರೆ ಎಂಬ ವರದಿಗಳು ಬಂದಿವೆ. ಬುಧವಾರ ಮುಕ್ತಾಯಗೊಂಡ ವಾರಾಂತ್ಯದ ಜನಾಭಿಪ್ರಾಯ ಸಂಗ್ರಹದಲ್ಲಿ ಅಕ್ರಮಗಳು ನಡೆದಿದ್ದು, ಮತದಾರರ ಮೇಲೆ ಒತ್ತಡ ಹೇರಲಾಗಿದೆ ಎಂಬ ಟೀಕೆಗಳು ಸಹ ಕೇಳಿಬಂದಿವೆ.

ರಾಷ್ಟ್ರದ ಬಹುತೇಕ ಚುನಾವಣೆ ಮುಗಿದಿದ್ದು, 20% ಪ್ರಾಂತದ ಮತಗಳನ್ನು ಎಣಿಸಲಾಗಿದೆ. 72% ಜನರು ಸಾಂವಿಧಾನಿಕ ತಿದ್ದುಪಡಿ ಪರ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ರಷ್ಯಾದಲ್ಲಿ ಮೊದಲ ಬಾರಿಗೆ, ಮತ ಚಲಾಯಿಸುವಲ್ಲಿ ಜನಸಂದಣಿ ತಡೆಗಟ್ಟಲು ಮತದಾನಕ್ಕೆ ಒಂದು ವಾರದವರೆಗೂ ಅವಕಾಶ ನೀಡಲಾಗಿತ್ತು.

ಬೃಹತ್ ಪ್ರಚಾರ ಅಭಿಯಾನ ಮತ್ತು ಸಂಘಟಿತ ಸವಾಲನ್ನು ಎದುರಿಸಲು ಪ್ರತಿಪಕ್ಷಗಳು ವಿಫಲವಾದ ಕಾರಣ ಪುಟಿನ್ ಅವರು ಬಯಸಿದ ಫಲಿತಾಂಶವನ್ನು ಪಡೆದರು ಎನ್ನಲಾಗಿದೆ.

ಚುನಾವಣಾ ಅಧಿಕಾರಿಗಳ ಪ್ರಕಾರ, ಮಾಸ್ಕೋ ಮತ್ತು ಪಶ್ಚಿಮ ರಷ್ಯಾದ ಇತರ ಭಾಗಗಳಲ್ಲಿ ಮತದಾನ ಮುಕ್ತಾಯಗೊಳ್ಳುವ ಹೊತ್ತಿಗೆ ಮತದಾನವು 65% ರಷ್ಟಿತ್ತು. ಕೆಲವು ಪ್ರದೇಶಗಳಲ್ಲಿ, ಸುಮಾರು 90% ಅರ್ಹ ಮತದಾರರು ಮತ ಚಲಾಯಿಸಿದ್ದಾರೆ.

ರಷ್ಯಾದ ಪೂರ್ವ ದಿಕ್ಕಿನ ಚುಕ್ಚಿ ಪರ್ಯಾಯ ದ್ವೀಪದಲ್ಲಿ, ಮಾಸ್ಕೋಕ್ಕಿಂತ ಒಂಬತ್ತು ಗಂಟೆಗಳ ಮುಂಚಿತವಾಗಿ ಪ್ರಾಥಮಿಕ ಫಲಿತಾಂಶಗಳನ್ನು ಘೋಷಿಸಿ, 80% ಮತದಾರರು ತಿದ್ದುಪಡಿಗಳನ್ನು ಬೆಂಬಲಿಸಿದ್ದಾರೆ ಎಂದಿದ್ದಾರೆ. ಪೂರ್ವದ ಇತರ ಭಾಗಗಳಲ್ಲಿ, 70% ರಷ್ಟು ಮತದಾರರು ಬದಲಾವಣೆಗಳನ್ನು ಬೆಂಬಲಿಸಿದ್ದಾರೆ ಎಂದು ಅವರು ಹೇಳಿದರು.

ಕ್ರೆಮ್ಲಿನ್ ವಿಮರ್ಶಕರು ಮತ್ತು ಸ್ವತಂತ್ರ ಚುನಾವಣಾ ವೀಕ್ಷಕರು ಮತದಾನದ ಅಂಕಿಅಂಶಗಳನ್ನು ಪ್ರಶ್ನಿಸಿದ್ದಾರೆ.

2024ಕ್ಕೆ ಪುಟಿನ್‌ರವರ ಅಧಿಕಾರವಧಿ ಮುಗಿಯಲಿದೆ. ಆದರೆ ಅದರ ನಂತರವೂ ಸಹ 12 ವರ್ಷಗಳ ಕಾಲ ಅಧ್ಯಕ್ಷರಾಗಿ ಮುಂದುವರೆಯುವಂತೆ ಅವರು ತಂದ ಸಂವಿಧಾನ ತಿದ್ದುಪಡಿಗಳಿಗೆ ರಷ್ಯಾ ಸಂಸತ್ತು ಭಾರೀ ಬಹುಮತದೊಂದಿಗೆ ಅಂಗೀಕರಿಸಿತ್ತು.


ಓದಿ: ಜನ ಮನೆಯಿಂದ ಹೊರಬರದಿರಲು ರಷ್ಯಾ 800 ಸಿಂಹಗಳನ್ನು ಬೀದಿಗೆ ಬಿಟ್ಟಿತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...