Homeಮುಖಪುಟಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ತಂತ್ರಜ್ಞ ಪುಟ್ಟಣ್ಣ ಕಣಗಲ್ ಸ್ಮರಣೆ

ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ತಂತ್ರಜ್ಞ ಪುಟ್ಟಣ್ಣ ಕಣಗಲ್ ಸ್ಮರಣೆ

ಕಲಾವಿದರಿಗೆ ಸ್ವತಃ ತಾವೇ ಅಭಿನಯಿಸಿ ತೋರಿಸುವ ಪರಿಪಾಠ ರೂಢಿಸಿಕೊಂಡಿದ್ದ ನಿರ್ದೇಶಕ ಅವರು. ನಟ, ನಟಿಯರು ಇದನ್ನು ಶ್ರದ್ಧೆಯಿಂದ ಅನುಸರಿಸಿದರೆ ಸಾಕಿತ್ತು. ಹೀಗೆ ಪುಟ್ಟಣ್ಣನವರ ನಿರ್ದೇಶನದಲ್ಲಿ ತೀರಾ ಸಾಧಾರಣ ಎನ್ನುವವರು ಕೂಡ ಪಳಗಿದ ಕಲಾವಿದರಾಗಿ ಹೆಸರು ಮಾಡಿದರು.

- Advertisement -
- Advertisement -

70-80ರ ದಶಕಗಳಲ್ಲಿ ದಕ್ಷಿಣ ಭಾರತದ ಇತರೆ ಚಿತ್ರರಂಗಗಳು ಮಾತ್ರವಲ್ಲ ಬಾಲಿವುಡ್‍ನವರೂ ಕನ್ನಡ ಸಿನಿಮಾದತ್ತ ಹೊರಳಿ ನೋಡುವಂಥ ಚಿತ್ರಗಳನ್ನು ರೂಪಿಸಿದವರು ಪುಟ್ಟಣ್ಣ ಕಣಗಾಲ್. ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ತಂತ್ರಜ್ಞ ಪುಟ್ಟಣ್ಣ ಅಗಲಿ ಇಂದಿಗೆ (ಜೂನ್ 5) ಮೂವತ್ತೈದು ವರ್ಷ. ಪುಟ್ಟಣ್ಣನವರ ಹತ್ತು ಸಿನಿಮಾಗಳಿಗೆ ಸ್ಥಿರಚಿತ್ರ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ ಪ್ರಗತಿ ಅಶ್ವತ್ಥ ನಾರಾಯಣ ಅವರು ಮೇರು ನಿರ್ದೇಶಕನನ್ನು ಸ್ಮರಿಸಿಕೊಂಡಿದ್ದಾರೆ.

***

ಪುಟ್ಟಣ್ಣನವರನ್ನು ಮೊದಲ ಬಾರಿ ನಾನು ಭೇಟಿ ಮಾಡಿದ್ದು ಮದರಾಸಿನ ವೀನಸ್ ಸ್ಟುಡಿಯೋದಲ್ಲಿ. ಅವರ ’ಬೆಳ್ಳಿಮೋಡ’ (1965) ಸಿನಿಮಾ ಸ್ಟಿಲ್ ಫೋಟೋಗ್ರಫಿಗೆಂದು ಹೋಗಿದ್ದೆ. ಮುಂದೆ ಅವರ ನಿರ್ದೇಶನದ ಹತ್ತು ಸಿನಿಮಾಗಳಿಗೆ (ಒಂಬತ್ತು ಕನ್ನಡ ಮತ್ತು ಒಂದು ಮಲಯಾಳಂ) ಕೆಲಸ ಮಾಡಿದೆ. ಅವರೊಂದಿಗೆ ಕೆಲಸ ಮಾಡುವ ಮೂಲಕ ನನಗೂ ಕಲಿಯಲು ಸಾಧ್ಯವಾಯ್ತು ಎಂದು ಹೇಳಬಹುದು. ಈಗಲೂ ನಿರ್ದೇಶಕರಾದ ಪುಟ್ಟಣ್ಣ ಕಣಗಾಲ್, ಸಿದ್ದಲಿಂಗಯ್ಯನವರ ಹೆಸರು ಹೇಳಿ ನನ್ನನ್ನು ಗುರುತಿಸುವಾಗ ಹೆಮ್ಮೆ ಎನಿಸುತ್ತದೆ.
ನೀವು ಗಮನಿಸಿ, ಪುಟ್ಟಣ್ಣನವರ ಸಿನಿಮಾಗಳ ಪ್ರತೀ ಸೀನ್‍ಗಳಿಗೂ ಒಂದು ಕಲಾತ್ಮಕ ಫ್ರೇಮ್ ಇರುತ್ತದೆ. ಅವರಿಗೆ ಕ್ಯಾಮರಾ ಆಂಗಲ್‌ಗಳ ಬಗ್ಗೆ ಸ್ಪಷ್ಟ ಚಿತ್ರಣವಿತ್ತು. ಅಗ್ಗದ ಗಿಮಿಕ್‍ಗಳ ಬಗ್ಗೆ ಕಿಡಿಕಾರುತ್ತಿದ್ದ ಅವರು ಅನಗತ್ಯವಾಗಿ  ಟೆಕ್ನಾಲಜಿ ಬಳಕೆ ಮಾಡುತ್ತಿರಲಿಲ್ಲ. ಕತೆ, ದೃಶ್ಯಕ್ಕೆ ಅಗತ್ಯವಿದ್ದರಷ್ಟೇ ಕ್ಯಾಮರಾ ತಂತ್ರಗಾರಿಕೆ ಬಳಕೆಯಾಗುತ್ತಿತ್ತು. ’ನಾಗರಹಾವು’ ಚಿತ್ರದ ಹಾಡನ್ನು ಸ್ಲೋ ಮೋಷನ್‍ನಲ್ಲಿ ಚಿತ್ರಿಸಿದ ಪುಟ್ಟಣ್ಣ ’ಋಣಮುಕ್ತಳು’ ಚಿತ್ರಕ್ಕೆ ಝೂಮ್ ಬಳಕೆ ಮಾಡಿರಲೇ ಇಲ್ಲ.

ತಂತ್ರಜ್ಞರನ್ನು ಅವರು ಅತ್ಯಂತ ಸಮರ್ಥವಾಗಿ ದುಡಿಸಿಕೊಂಡರು. ಸಾಧಾರಣ ಎನಿಸಿಕೊಂಡ ತಂತ್ರಜ್ಞರು ಕೂಡ ಪುಟ್ಟಣ್ಣನವರ ಸಂಗದಲ್ಲಿ ಅತ್ಯುತ್ತಮ ಕೆಲಸಗಾರರಾಗಿ ಹೊರಹೊಮ್ಮಿದರು. ಚಿತ್ರೀಕರಣವಾದ ನಂತರ ನಾನು ಸ್ಟಿಲ್ಸ್ ತೆಗೆದುಕೊಳ್ಳುವಾಗಲೂ ಅವರು ಅಲ್ಲಿರುತ್ತಿದ್ದರು. ಮೂವೀ ಕ್ಯಾಮರಾ ಪೊಸಿಷನ್‌ನಲ್ಲೇ ಫೋಟೋ ತೆಗೆಯಬೇಕಾಗಿತ್ತು. ಆಗ ಪುಟ್ಟಣ್ಣ ನನಗೂ ಸೂಕ್ತ ನಿರ್ದೇಶನ ನೀಡುತ್ತಿದ್ದರು. ಲೈಟಿಂಗ್ ಬಗ್ಗೆ ಅವರಿಗೆ ಅತಿಯಾದ ಕಾಳಜಿ. ಟೇಕ್‍ಗೆ ಮುನ್ನ ಕಲಾವಿದರಿಗೆ ಲೈಟಿಂಗ್ ರಿಹರ್ಸಲ್ ಕೊಡುತ್ತಿದ್ದುದು ಕಡ್ಡಾಯವಾಗಿತ್ತು.
ನಿರ್ದೇಶಕ ಪುಟ್ಟಣ್ಣನವರೊಂದಿಗೆ ಕೆಲಸ ಮಾಡಿದ ನಮಗೆ ಈಗಿನ ತಂತ್ರಜ್ಞರ ಕಾರ್ಯವೈಖರಿ ನೋಡಿದಾಗ ಕೆಲವು ಬಾರಿ ಸೋಜಿಗವೆನಿಸುತ್ತದೆ. ತೆರೆಯ ಮೇಲಿನ ಚಲಿಸುವ ಚಿತ್ರಗಳಿಗೂ, ಹಿನ್ನೆಲೆ ಸಂಗೀತಕ್ಕೂ ಸಂಬಂಧವಿಲ್ಲದಿದ್ದರೆ ಫ್ರೇಮ್‍ಗಳು ನೀರಸವೆನಿಸುತ್ತವೆ. ದೃಶ್ಯ ಮಾಧ್ಯಮವನ್ನು ದುಡಿಸಿಕೊಳ್ಳುವ ಕಲೆ ಗೊತ್ತಿರದಿದ್ದರೆ ಜನರನ್ನು ತಲುಪಲು ಸಾಧ್ಯವೇ ಇಲ್ಲ. ಪುಟ್ಟಣ್ಣನವರಿಗೆ ಸಿನಿಮಾದ ಎಲ್ಲಾ ವಿಭಾಗಗಳಲ್ಲಿಯೂ ಅಪಾರ ಜ್ಞಾನವಿತ್ತು ಮತ್ತು ಅವರು ಇದನ್ನು ಸಮರ್ಪಕವಾಗಿ ದುಡಿಸಿಕೊಳ್ಳುತ್ತಿದ್ದರು. ಹಾಗಾಗಿಯೇ ಅವರು ಚಿತ್ರಿಸಿರುವ ಪ್ರತೀ ಸನ್ನಿವೇಶಗಳಲ್ಲಿಯೂ ಜೀವಂತಿಕೆ ಕಾಣಿಸುವುದು.

ಸ್ಥಿರಚಿತ್ರ ಛಾಯಾಗ್ರಾಹಕ ಪ್ರಗತಿ ಅಶ್ವತ್ಥ ನಾರಾಯಣ ಅವರೊಂದಿಗೆ

ಸೆಟ್‍ನಲ್ಲಿ ಪುಟ್ಟಣ್ಣನವರೊಂದಿಗೆ ಚಿತ್ರಕ್ಕೆ ಸಂಭಾಷಣೆ, ಗೀತೆಗಳನ್ನು ಬರೆದವರು ಇರುತ್ತಿದ್ದರು. ಪ್ರತೀ ಶಾಟ್‍ಗೆ ಮುನ್ನ ಪರಸ್ಪರರಲ್ಲಿ ಚರ್ಚೆ ನಡೆಯುತ್ತಿತ್ತು. ಸೆಟ್‍ನಲ್ಲಿ ಜೊತೆಗಿರುವ ಬರಹಗಾರರ ಅಭಿಪ್ರಾಯಗಳನ್ನು ಪಡೆದ ನಂತರ ತಮ್ಮ ಹೇಳಿಕೆಯನ್ನೂ ಪುಟ್ಟಣ್ಣ ದಾಖಲಿಸುತ್ತಿದ್ದರು. ಇವುಗಳಲ್ಲಿ ಅತ್ಯಂತ ಸಮರ್ಪಕವೆನಿಸುವ ಅಭಿಪ್ರಾಯವೊಂದು ಸನ್ನಿವೇಶವಾಗಿ ಮೈದಾಳುತ್ತಿತ್ತು. ಪುಟ್ಟಣ್ಣ ಸನ್ನಿವೇಶವೊಂದನ್ನು ಕ್ಷಣಕ್ಷಣಕ್ಕೂ ಚೆಂದಗೊಳಿಸಲು ಶ್ರಮಿಸುತ್ತಿದ್ದರು. ಕಲಾವಿದರಿಗೆ ಸ್ವತಃ ತಾವೇ ಅಭಿನಯಿಸಿ ತೋರಿಸುವ ಪರಿಪಾಠ ರೂಢಿಸಿಕೊಂಡಿದ್ದ ನಿರ್ದೇಶಕ ಅವರು. ನಟ, ನಟಿಯರು ಇದನ್ನು ಶ್ರದ್ಧೆಯಿಂದ ಅನುಸರಿಸಿದರೆ ಸಾಕಿತ್ತು. ಹೀಗೆ ಪುಟ್ಟಣ್ಣನವರ ನಿರ್ದೇಶನದಲ್ಲಿ ತೀರಾ ಸಾಧಾರಣ ಎನ್ನುವವರು ಕೂಡ ಪಳಗಿದ ಕಲಾವಿದರಾಗಿ ಹೆಸರು ಮಾಡಿದರು.

ನಾನು ನೋಡಿದಂತೆ, ವೃತ್ತಿಪರತೆಗೆ ಒಳ್ಳೆಯ ಉದಾಹರಣೆ ಪುಟ್ಟಣ್ಣ. ಅವರ ಶೂಟಿಂಗ್ ಸೆಟ್‍ನಲ್ಲಿ ಕೆಲಸ ಮಾಡುವ ಎಲ್ಲರಲ್ಲೂ ಶಿಸ್ತು ಮೈಗೂಡಿರುತ್ತಿತ್ತು. ಸೆಟ್‍ನಲ್ಲಿ ಕೆಲಸ ಮಾಡುವಾಗ ಅನುಚಿತ ವರ್ತನೆ, ಜೋರು ದನಿಯಲ್ಲಿ ಮಾತನಾಡುವುದನ್ನು ಪುಟ್ಟಣ್ಣ ಸಹಿಸುತ್ತಿರಲಿಲ್ಲ. ಯಾವುದೇ ಒತ್ತಡವಿಲ್ಲದೆ ಆರಾಮವಾಗಿ ಚಿತ್ರಿಸುವುದು ಅವರ ಶೈಲಿ. ಸೆಟ್‍ನಲ್ಲಿ ಎಲ್ಲರಿಗೂ ಪುಟ್ಟಣ್ಣನವರ ರೀತಿ, ನೀತಿಯ ಅರಿವಿರುತ್ತಿತ್ತು. ಹಾಗಾಗಿ ಅವರ ಕೋಪಕ್ಕೆ ಆಸ್ಪದ ನೀಡದಂತೆ ನಡೆದುಕೊಳ್ಳುತ್ತಿದ್ದರು.

‘ಧರ್ಮಸೆರೆ’ ಸಿನಿಮಾ ಚಿತ್ರೀಕರಣದಲ್ಲಿ ಕಲಾವಿದರಿಗೆ ನಿರ್ದೇಶನ

ಬೆಳಗ್ಗೆ ಒಂಬತ್ತೂವರೆಗೇ ಪ್ಯಾಕ್ ಅಪ್!

ಪುಟ್ಟಣ್ಣನವರು ತಾವು ಅಂದುಕೊಂಡಂತೆಯೇ ಶಾಟ್ ಮೂಡಿಬರಬೇಕೆಂದು ಪಟ್ಟು ಹಿಡಿಯುತ್ತಿದ್ದರು. ಇದಕ್ಕಾಗಿ ಅವರೆಷ್ಟು ಶ್ರಮ ಹಾಕುತ್ತಿದ್ದರು ಎನ್ನುವುದಕ್ಕೆ ’ಪಡುವಾರಹಳ್ಳಿ ಪಾಂಡವರು’ ಚಿತ್ರದ ಸನ್ನಿವೇಶವೊಂದನ್ನು ಉದಾಹರಿಸಬಹುದು. ಚಿತ್ರದ ಕತೆಗೆ ತಿರುವು ನೀಡುವಂಥ ಸನ್ನಿವೇಶವೊಂದನ್ನು ಅಂದು ಚಿತ್ರಿಸಬೇಕಿತ್ತು. ನಟ ರಾಮಕೃಷ್ಣ ತನ್ನ ಮನೆ ತೊರೆದು ಹೋಗುವ ಸನ್ನಿವೇಶವದು. ಆತ ಗ್ರಾಮದ ಪ್ರತೀ ಮನೆ ಎದುರು ನಿಂತು ಡೈಲಾಗ್ ಹೇಳಿ ಊರಿನ ಹೆಬ್ಬಾಗಿಲಿನಿಂದ ತೆರಳುತ್ತಾನೆ. ಸುಮಾರು ಇನ್ನೂರೈವತ್ತು – ಮುನ್ನೂರು ಅಡಿಗಳ ಶಾಟ್ ಅದು. ಪುಟ್ಟಣ್ಣ ಇದನ್ನು ಒಂದೇ ಶಾಟ್‍ನಲ್ಲಿ ಚಿತ್ರಿಸಬೇಕೆಂದಿದ್ದರು.

ಅತಿ ಹೆಚ್ಚೆಂದರೆ ನೂರು ಅಡಿವರೆಗಷ್ಟೇ ಚಿತ್ರಿಸಲು ಸಾಧ್ಯವಾಗುತ್ತಿದ್ದುದು. ಮುನ್ನೂರು ಅಡಿಯಷ್ಟು ದೂರಕ್ಕೆ ಟ್ರ್ಯಾಲಿ, ಟ್ರ್ಯಾಕ್ ಹಾಕಲು ಸಾಧ್ಯವಿರಲಿಲ್ಲ. ಈ ಶಾಟ್‍ಗಾಗಿ ಎರಡು ದಿನ ಏನೇನೋ ಪ್ರಯೋಗಗಳನ್ನು ನಡೆಸಿದ್ದಾಯ್ತು. ದೇವರನ್ನು ಪಲ್ಲಕ್ಕಿಯಲ್ಲಿ ಹೊತ್ತೊಯ್ಯುವಂತೆ ನಾಲ್ವರು ಕ್ಯಾಮರಾ ಹೊತ್ತೊಯ್ದರು. ಇದೇ ರೀತಿ ಹಲವಾರು ಪ್ರಯತ್ನಗಳನ್ನು ನಡೆಸಿದ್ದಾಯ್ತು. ಜರ್ಕ್ ಬರುತ್ತಿದ್ದುದರಿಂದ ಈ ಐಡಿಯಾಗಳು ವರ್ಕ್ ಆಗಲಿಲ್ಲ. ಅಂದು ಸಂಜೆ ಪುಟ್ಟಣ್ಣ, ನಟಿ ಆರತಿ ಅಣ್ಣ ಮುಕುಂದ ಹಾಗೂ ಛಾಯಾಗ್ರಾಹಕ ಮಾರುತಿ ರಾವ್ ಮತ್ತೊಂದು ಪ್ರಯೋಗ ನಡೆಸುವುದೆಂದು ಮಾತನಾಡಿಕೊಂಡರು.

ಛಾಯಾಗ್ರಾಹಕ ಬಿ.ಎಸ್.ಬಸವರಾಜ್ ಅವರೊಂದಿಗೆ

ಮರುದಿನ ಬೆಳಗ್ಗೆ ಆರೂವರೆ ಹೊತ್ತಿಗೆ ಶೂಟಿಂಗ್ ಶುರುವಾಯ್ತು. ನಟ ರಾಮಕೃಷ್ಣ ಹಾದು ಹೋಗುವ ರಸ್ತೆಗೆ ಮಣ್ಣು ಹಾಕಿ ಸಮತಟ್ಟು ಮಾಡಲಾಗಿತ್ತು. ಹಿಂದಿನ ದಿನ ಮಾತನಾಡಿಕೊಂಡಂತೆ, ಸಹ ನಿರ್ದೇಶಕ ಮುಕುಂದ ನಿಧಾನವಾಗಿ ಸ್ಕೂಟರ್ ಓಡಿಸಬೇಕು. ಹಿಂದೆ ಕುಳಿತ ಮಾರುತಿರಾವ್ ತಮ್ಮ ಕ್ಯಾಮರಾದಲ್ಲಿ ದೃಶ್ಯ ಸೆರೆಹಿಡಿಯಬೇಕಾಗಿತ್ತು. ಪುಟ್ಟಣ್ಣ ಆ್ಯಕ್ಷನ್ ಹೇಳುತ್ತಿದ್ದಂತೆ ರಾಮಕೃಷ್ಣ ಸಂಭಾಷಣೆ ಹೇಳುತ್ತಾ ಪ್ರತೀ ಮನೆಯನ್ನು ಹಾದು ಊರಿನಿಂದ ಹೊರಗೆ ತೆರಳಿದರು. ಮುಕುಂದ, ಮಾರುತಿರಾವ್ ಸ್ಕೂಟರ್ ಮೇಲೆ ಅವರನ್ನು ಅನುಸರಿಸಿಕೊಂಡು ಹೋದರು. ಶಾಟ್ ಓಕೆ ಆಯ್ತು! ಪುಟ್ಟಣ್ಣನವರು ಅಂದುಕೊಂಡಂತೆಯೇ ಶಾಟ್ ಬಂತು. ಬೆಳಗ್ಗೆ ಏಳೂವರೆಗೆ ಶುರುವಾದ ಚಿತ್ರೀಕರಣ ಒಂಭತ್ತೂವರೆ ಹೊತ್ತಿಗೆ ಮುಗಿದಿತ್ತು. ಪುಟ್ಟಣ್ಣ, ’ಪ್ಯಾಕ್‍ಅಪ್’ ಅಂದರು! ಎಲ್ಲರಿಗೂ ಆಶ್ಚರ್ಯ! ’ನಾನು ಇಂದು ಏನು ಚಿತ್ರಿಸಬೇಕು ಅಂದುಕೊಂಡಿದ್ದೆನೋ ಅದು ಮುಗಿದಿದೆ. ಮುಂದಿನ ಶಾಟ್ ಏನೂಂತ ಯೋಚಿಸಿಲ್ಲ. ನಾಳೆ ನೋಡೋಣ. ಎಲ್ಲರೂ ಹೋಗಿ..!’ ಎಂದರು ಪುಟ್ಟಣ್ಣ. ಬೆಳ್ಳಂಬೆಳಗ್ಗೆ ಪ್ಯಾಕ್‍ಅಪ್ ಹೇಳಿದ್ದು ಆಗ ಗಾಂಧಿನಗರದಲ್ಲಿ ದೊಡ್ಡ ಸುದ್ದಿಯಾಗಿತ್ತು.

ಪುಟ್ಟಣ್ಣರ ಅಭಿಮಾನಿ ಬಾಲಚಂದರ್

ಸೂಪರ್‌ಹಿಟ್ `ಅವಳ್ ಒರು ತೊಡರ್ ಕಥೈ’ ತಮಿಳು ಚಿತ್ರವನ್ನು ಕನ್ನಡಕ್ಕೆ ತರಲು ನಿರ್ಮಾಪಕ ಚಂದೂಲಾಲ್ ಜೈನ್ ನಿರ್ಧರಿಸಿದ್ದರು. ತಮಿಳು ಸಿನಿಮಾ ನಿರ್ದೇಶಿಸಿದ್ದ ಕೆ.ಬಾಲಚಂದರ್ ಅವರೇ ಕನ್ನಡ ಅವತರಣಿಕೆಯನ್ನೂ (ಬೆಂಕಿಯಲ್ಲಿ ಅರಳಿದ ಹೂ) ನಿರ್ದೇಶಿಸುವುದೆಂದು ಗೊತ್ತಾಯಿತು. ಕನ್ನಡ ಅವತರಣಿಕೆಗೂ ತಮ್ಮೊಂದಿಗೆ ಮದರಾಸಿನ ತಂತ್ರಜ್ಞರೇ ಕೆಲಸ ಮಾಡಬೇಕೆಂದು ಬಾಲಚಂದರ್ ಹೇಳಿದ್ದರು. ಆದರೆ, ಸ್ಟಿಲ್ ಫೋಟೋಗ್ರಾಫರ್ ಆಗಿ ನಾನೇ ಕೆಲಸ ಮಾಡಬೇಕೆನ್ನುವುದು ನಿರ್ಮಾಪಕ ಚಂದೂಲಾಲ್ ಜೈನ್ ಆಶಯವಾಗಿತ್ತು. ಸ್ಟಿಲ್‍ಗಳಿಗೆಂದು ಪ್ರತೀ ಬಾರಿ ಮದ್ರಾಸ್‍ಗೆ ಹೋಗಿ ಬರುವ ತಾಪತ್ರಯ ತಪ್ಪುತ್ತದೆ ಎನ್ನುವ ಉದ್ದೇಶವೂ ಇದರ ಹಿಂದಿತ್ತು.

’ಇವರು ಪುಟ್ಟಣ್ಣ ಕಣಗಾಲ್ ಸಿನಿಮಾಗಳಿಗೆ ಕೆಲಸ ಮಾಡಿದ್ದಾರೆ. ನಿಮ್ಮ ಚಿತ್ರಕ್ಕೂ ಇವರೇ ಇರಲಿ..’ ಎಂದು ಚಂದೂಲಾಲ್ ನಿರ್ದೇಶಕ ಬಾಲಚಂದರ್‌ಗೆ ನನ್ನನ್ನು ಪರಿಚಯಿಸಿದ್ದರು. ಪುಟ್ಟಣ್ಣನವರೊಂದಿಗೆ ಕೆಲಸ ಮಾಡಿದ ಫೋಟೋಗ್ರಾಫರ್ ಎನ್ನುವ ಒಂದೇ ಕಾರಣಕ್ಕೆ ಬಾಲಚಂದರ್ ನನ್ನನ್ನು ಒಪ್ಪಿಕೊಂಡರು. ಅವರು ಪುಟ್ಟಣ್ಣನವರ ಅಭಿಮಾನಿ ಎನ್ನುವುದು ಮುಂದಿನ ದಿನಗಳಲ್ಲಿ ನನಗೆ ಮನವರಿಕೆಯಾಯ್ತು. ’ಬೆಂಕಿಯಲ್ಲಿ ಅರಳಿದ ಹೂ’ ಚಿತ್ರೀಕರಣದುದ್ದಕ್ಕೂ ಬಾಲಚಂದರ್, ಪುಟ್ಟಣ್ಣನವರ ವರ್ಕಿಂಗ್ ಸ್ಟೈಲ್ ಹಾಗೂ ಇತರೆ ಸಂಗತಿಗಳ ಬಗ್ಗೆ ನನ್ನನ್ನು ಕೇಳುತ್ತಿದ್ದರು. ಬಾಲಚಂದರ್ ಕೂಡ ದೊಡ್ಡ ನಿರ್ದೇಶಕರೇ. ಆದಾಗ್ಯೂ ಯಾವುದೇ ಹೆಚ್ಚುಗಾರಿಕೆ ಇಲ್ಲದೆ ಪುಟ್ಟಣ್ಣನವರ ಬಗ್ಗೆ ಅವರು ಕೇಳಿ ತಿಳಿದುಕೊಳ್ಳುತ್ತಿದ್ದರು. ಇದು ಬಾಲಚಂದರ್ ಸರಳತೆ, ಸಜ್ಜನಿಕೆಯನ್ನು ಎತ್ತಿ ಹಿಡಿದಿತ್ತು.

(ಫೋಟೋಗಳು: ಪ್ರಗತಿ ಅಶ್ವತ್ಥ ನಾರಾಯಣ)

(ನಿರೂಪಣೆ: ಶಶಿಧರ ಚಿತ್ರದುರ್ಗ)


ಇದನ್ನೂ ಓದಿ: 120 ಕ್ಕೂ ಹೆಚ್ಚು ಹೀರೋಗಳಿಗೆ ಹಾಡಿದ್ದಾರೆ ಎಸ್.ಪಿ.ಬಾಲಸುಬ್ರಹ್ಮಣ್ಯಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...