Homeಕರ್ನಾಟಕಪುತ್ತೂರು ದಲಿತ ಹುಡುಗಿಯ ಅಮಾನುಷ ಅತ್ಯಾಚಾರಕ್ಕೆ ನ್ಯಾಯ ಸಿಗಬೇಕಿದೆ... ಕಾರಣರಾದವರಿಗೆ ಗರಿಷ್ಠ ಶಿಕ್ಷೆಯಾಗಬೇಕಿದೆ

ಪುತ್ತೂರು ದಲಿತ ಹುಡುಗಿಯ ಅಮಾನುಷ ಅತ್ಯಾಚಾರಕ್ಕೆ ನ್ಯಾಯ ಸಿಗಬೇಕಿದೆ… ಕಾರಣರಾದವರಿಗೆ ಗರಿಷ್ಠ ಶಿಕ್ಷೆಯಾಗಬೇಕಿದೆ

- Advertisement -
- Advertisement -

ಪುತ್ತೂರಿನ ವಿವೇಕಾನಂದ ಕಾಲೇಜೆಂದರೆ ಶುದ್ದ ಸಂಘಪರಿವಾರದ ಸಂಸ್ಕಾರ- ಸಂಸ್ಕೃತಿಯ ವಿದ್ಯಾಸಂಸ್ಥೆ. ಹಿಂದೂತ್ವದ ಬ್ರೈನ್ ವಾಶಿಂಗ್ ಕೇಂದ್ರ; ಮತಾಂಧ ಆಕ್ರಮಣಶೀಲ ತರಬೇತಿಯ ಗರಡಿಮನೆ. ಎಬಿವಿಪಿ ಸಂಘಟನೆ ಒಂದನ್ನು ಬಿಟ್ಟು ಉಳಿದ್ಯಾವ ವಿದ್ಯಾರ್ಥಿ ಸಂಘಟನೆಗಳಿಗೂ ಈ ಕಾಲೇಜಿನಲ್ಲಿ ಅವಕಾಶವಿಲ್ಲ. ಕರಾವಳಿ ಸಂಘ ಅಂಗ ಪಡೆಗಳ ತೆರೆಮರೆಯ ರಿಂಗ್ ಮಾಸ್ಟರ್ ಕಲ್ಲಡ್ಕ ಪ್ರಭಾಕರ ಭಟ್ ಬಳಗದ ಯಜಮಾನಿಕೆಯಲ್ಲಿದೆ ವಿವೇಕಾನಂದ ಕಾಲೇಜು. ಹಿಂದು ಸಂಸ್ಕೃತಿಯಷ್ಟು ಪರಮ ಪವಿತ್ರ ಧರ್ಮ ಈ ಭೂಮಂಡಲದಲ್ಲೇ ಮತ್ತೊಂದಿಲ್ಲ ಎಂದು ಉದ್ದುದ್ದ ಭಾಷಣ ಬಿಗಿದು ಮುಗ್ಧ ಹಿಂದುಳಿದ ವರ್ಗದ ಯುವಕ/ಯುವತಿಯರ ದಿಕ್ಕು ತಪ್ಪಿಸುವ ಕಲ್ಲಡ್ಕ ಭಟ್ಟರ ಸದರಿ ಕಾಲೇಜಿನ ಐವರು ವಿದ್ಯಾರ್ಥಿಗಳು ಸಹಪಾಠಿ ದಲಿತ ವಿದ್ಯಾರ್ಥಿನಿಯನ್ನು ಕಾಡಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಇಂತಹ ದುರ್ನಡತೆಯನ್ನು ಮೊಬೈಲ್‍ನಲ್ಲಿ ಚಿತ್ರೀಕರಿಸಿ ಹರಿಯಬಿಟ್ಟಿದ್ದಾರೆ.

ಅಲ್ಲಿಗೆ ಹಿಂದುತ್ವದ ಅಸಲಿ ಅವತಾರ ಜಗತ್ತಿನಾದ್ಯಂತ ವೈರಲ್ ಆಗಿ ಹೋಗಿದೆ. ರೇಪಿಸ್ಟ್ ಹುಡುಗರೆಲ್ಲರೂ ಎಬಿವಿಪಿಯಲ್ಲಿ ಪಳಗಿದವರು. ಸಂತ್ರಸ್ಥೆಯು ಸಹ ಇದೇ ಕೇಸರಿ ಒಕ್ಕೂಟದ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದವಳೆ. ಸ್ನೇಹ-ಸಲಿಗೆಯಲ್ಲಿದ್ದವರು. ಬುಡಕಟ್ಟು ಸಮುದಯಕ್ಕೆ ಸೇರಿದ ಈ ಹುಡುಗಿಯ ತಾಯಿ ಬಿಜೆಪಿಯಿಂದ ಗೆದ್ದಿರುವ ಗ್ರಾಮ ಪಂಚಾಯತ್ ಸದಸ್ಯೆ ಕೂಡ. ಹಿಂದುತ್ವ ಆರ್.ಎಸ್.ಎಸ್ ಬಿಜೆಪಿ ಎಬಿವಿಪಿ ಕಲಸುಮೇಲೋಗರಗೊಂಡ ಕೂಟವಿದು.! ಆ ಕಿರಾತಕ ಹುಡುಗರು ಅದ್ಯಾವಾಗ ಈ ಅಮಾಯಕ ಹುಡುಗಿಯ ಮೇಲೆ ಕಣ್ಣು ಹಾಕಿ ಸ್ಕೆಚ್ ಹಾಕಿದ್ದರೋ?

ಮೊನ್ನೆ ಆಕೆ ಕ್ಲಾಸ್ ಮುಗಿಸಿ ಮನೆಗೆ ಹೋಗಲು ಬಸ್ ಕಾಯುತ್ತಾ ನಿಂತಿದ್ದಳು. ಆಗ ಬಸ್ ಸ್ಟ್ಯಾಂಡಿಗೆ ಬಂದ ಪಂಚ ಪಾತಕ ಪಡೆ ಏನೋ ಅರ್ಜೆಂಟಾಗಿ ಮುಖ್ಯವಾದ ವಿಷಯ ಮಾತಾಡಲಿಕ್ಕಿದೆ ಬಾ ಎಂದು ಹುಡುಗಿಯನ್ನು ಕಾರಲ್ಲಿ ಕರೆದೊಯ್ದಿದ್ದಾರೆ. ಕಾರು ಊರು ಬಿಟ್ಟು ಕಾಡಿನ ದಾರಿ ಹಿಡಿಯುತ್ತಿದ್ದಂತೆಯೇ ಅಪಾಯದ ಅರಿವಾದ ಹುಡುಗಿ ಕಂಗಾಲಾಗಿದ್ದಾಳೆ. ಬೊಬ್ಬೆ ಹೊಡೆದಿದ್ದಾಳೆ, ಕೊಸರಾಡಿ ಚೀರಾಡಿದ್ದಾಳೆ. ಆಗ ಆಕೆಯ ಬಾಯಿ ಒತ್ತಿ ಹಿಡಿದು ಸದ್ದು ಮಾಡದಂತೆ ತಡೆದಿದ್ದಾರೆ. ಆಕೆಗೆ ಬಲಾತ್ಕಾರವಾಗಿ ಮತ್ತು ಬರುವ ತಿಂಡಿ ತುರುಕಿದ್ದಾರೆ. ಅದರಲ್ಲಿ ಗಾಂಜಾ ಬೆರೆಸಲಾಗಿತ್ತು ಎಂದು ಹೇಳಲಾಗುತ್ತಿದೆ. ಪ್ರಜ್ಞೆ ತಪ್ಪಿದ ಹುಡುಗಿಯನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಆ ಮುಗ್ಧ ಹುಡುಗಿಯನ್ನು ಹುರಿದು ತಿಂದ ಈ ಕಾಮುಕರು ಕಿಶನ್ ಆಚಾರಿ, ಪ್ರಜ್ವಲ್, ಗುರುನಂದನ್, ಸುನೀಲ್ ಮತ್ತು ಪ್ರಖ್ಯಾತ್ ರಾತ್ರಿ ಹೊತ್ತು ಆರ್‍ಎಸ್‍ಎಸ್ ಪ್ರಣೀತ ದನ ಕಾಯುವ ಧರ್ಮರಕ್ಷಣೆ ಎಂಬ ನಾಟಕ ಮಾಡುವವರೆ ಆಗಿದ್ದಾರೆ.

ಈ ಫಟಿಂಗರು ಈ ಘಟನೆಯನ್ನು ಬೇರೆ ಎಲ್ಲಾದರೂ ಬಾಯ್ಬಿಟ್ಟರೆ ನಿನ್ನನ್ನು ಕೊಂದೇ ಹಾಕುವುದಾಗಿ ಬೆದರಿಕೆ ಹಾಕಿ ಕಾಡಿನಿಂದ ಸಿಟಿಗೆ ತಂದು ಬಿಟ್ಟಿದ್ದಾರೆ. ಈ ರೇಪಿಸ್ಟ್ ಗಳಲ್ಲಿ ಕೆಲವರು ಬೆಳ್ತಂಗಡಿಯ ಶಾಸಕ ಹರೀಶ್ ಪೂಜಾರಿಯ ನಂಟಿನವರಾದರೆ ಇನ್ನು ಕೆಲವರು ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್‍ಗೆ ಹತ್ತಿರದವರು. ಹೀಗಾಗಿ ಕಂಪ್ಲೇಟು ಕೊಟ್ಟರೆ ತನಗೆ ತೊಂದರೆಯಾಗಬಹುದೆಂದು ಹುಡುಗಿಯ ಹೆತ್ತವರು ಹಿಂಜರಿದಿದ್ದಾರೆ. ಕಾಮುಕ ಹುಡುಗರು ತಾವು ಶಾಸಕರ ಜೊತೆಗಿರುವ ಫೋಟೊವನ್ನು ಫೇಸ್ಬುಕ್ಕಿನಲ್ಲಿ ಹಾಕಿಕೊಂಡು ಪ್ರಭಾವಿ ಇಮೇಜು ಬೆಳೆಸಿಕೊಂಡಿದ್ದಾರೆ. ಇದು ಹುಡುಗಿ ಮನೆಯವರಿಗೆ ಇಕ್ಕಟ್ಟಿಗೆ ಸಿಲುಕಿಸಿದೆ. ಅಂತ ಸಂದರ್ಭದಲ್ಲಿ ಕಳೆದ ಬುಧವಾರದಂದು ಊರಿಗೆಲ್ಲಾ ಸುದ್ದಿ ಗೊತ್ತಾಗಿದ್ದರಿಂದ ಈ ಆ ಅತ್ಯಾಚಾರದ ವಿಡಿಯೋವನ್ನು ಆ ಕಾಮುಕನೊಬ್ಬ ತನ್ನ ವಾಟ್ಸಾಪ್ ಸ್ಟೇಟಸ್‍ಗೆ ಹಾಕಿಕೊಂಡಿದ್ದಾನೆ. ಅದನ್ನು ನೋಡಿದ ಕಾಲೇಜಿನ ಚುನಾವಣೆಯಲ್ಲಿ ಆತನ ವಿರುದ್ಧ ಗುಂಪಿನಲ್ಲಿದ್ದವನು ಅದನ್ನು ವಾಟ್ಸಾಪಿನಲ್ಲಿ ಹರಿಯಬಿಟ್ಟಿದ್ದಾನೆ. ಅಲ್ಲಿಂದ ಎಲ್ಲಾ ಕಡೆಗೆ ಹಬ್ಬಿದೆ. ಇದನ್ನು ನೋಡಿದ ಜನ ಬೆಚ್ಚಿ ಬಿದ್ದಿದ್ದಾರೆ.

ಇಷ್ಟೆಲ್ಲಾ ಆದರೂ ಏನು ಆಗದವರಿಂತೆ ಪೋಸು ಕೊಡುತ್ತಿದ್ದ ಆ ಕಾಮುಕರನ್ನು ನೇರವಾಗಿ ಎಸ್ಪಿಯೇ ಕಾಲೇಜಿಗೆ ಬಂದು ಎತ್ತಾಕಿಕೊಂಡು ಹೋಗಿದ್ದಾರೆ. ರೇಪಿಸ್ಟ್ ಗಳು ಎಬಿವಿಪಿ ಮತ್ತು ಕೌಬಾಯ್ ಗ್ಯಾಂಗಿನ ಸಕ್ರಿಯ ಸದಸ್ಯರೆಂಬ ಸತ್ಯ ಸಾಕ್ಷಾತ್ಕಾರ ಆಗುತ್ತಲೇ ಸಂಘಪರಿವಾರದ ಹೈಕಮಾಂಡಿನಲ್ಲಿ ಚಡಪಡಿಕೆ ಶುರುವಾಗಿದೆ. ಎಬಿವಿಪಿ ತಕ್ಷಣಾ ಹೇಳಿಕೆ ಬಿಡುಗಡೆ ಮಾಡಿ ಅವರಿಗೂ ತಮಗೂ ಸಂಬಂಧವಿಲ್ಲ ಎಂದು ಕೈತೊಳೆದುಕೊಳ್ಳಲು ಹವಣಿಸಿದೆ. ಎಬಿವಿಪಿ, ಸಂಘ ಪರಿವಾರದವರೆಲ್ಲ ಅವರು ನಮ್ಮವರಲ್ಲ ಎಂದು ತೋರಿಸಿಕೊಳ್ಳಲು ಎಷ್ಟೇ ಪ್ರಯತ್ನ ನಡೆಸಿದರೂ ರೇಪಿಸ್ಟ್ ಗಳು ಎಬಿವಿಪಿಯವರೇ ಎಂಬುದನ್ನು ಮಾರೆ ಮಾಚಲು ಸಾಧ್ಯವಾಗಿಲ್ಲ. ಸಾಮೂಹಿಕ ಅತ್ಯಾಚಾರ ಮಾಡಿದವರು ಆರ್.ಎಸ್.ಎಸ್ ಶಾಖೆಗಳಲ್ಲಿ “ಸಂಸ್ಕಾರ” ದೀಕ್ಷೆ ಪಡೆದವರು, ಸ್ವಯಂ ಘೋಷಿತ ಗೋರಕ್ಷಕರು, ಶಾಸಕರ ಜೊತೆಗಿದ್ದವರು ಎಂಬ ಸತ್ಯ ಎಲ್ಲೆಡೆ ಹರಿದಾಡುತ್ತಿದ್ದು ಬಿಜೆಪಿಯವರ ಚಿಂತೆಯನ್ನು ಹೆಚ್ಚು ಮಾಡಿದೆ.

ತಮ್ಮವರು ಸಿಕ್ಕಿಬಿದ್ದಾಗ ಉದಾತ್ತತೆ, ನಾಗರೀಕ ಶಿಷ್ಠಾಚಾರ, ಮನುಷ್ಯತ್ವ, ಧರ್ಮಾತೀತತೆ, ಜಾತ್ಯಾತೀತತೆಯ ಬಗ್ಗೆ ಪ್ರವಚನ ಬಿಗಿಯುವ ತಂತ್ರಗಾರಿಕೆ ಸಂಘಪರಿವಾರಕ್ಕೆ ಲಗಾಯ್ತಿನಿಂದಲೂ ಕರಗತ. ಈ ಬಾರಿಯೂ ಅದೇ ಅಸ್ತ್ರ ಬಳಸಿದ್ದಾರೆ. ಪುತ್ತೂರಿನ ಕ್ರೌರ್ಯದ ವಿಚಾರದಲ್ಲಿ ಜಾತಿ ತರಬೇಡಿ, ಧರ್ಮ ತರಬೇಡಿ, ಕೇಸರಿ ತರಬೇಡಿ, ಹಸಿರು ತರಬೇಡಿ ಎಂದೆಲ್ಲಾ ವೇದಾಂತ ಸಂಘಿ ಸಿಂಫಥೈಸರ್‍ಗಳು ಅವಲತ್ತುಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾನದಲ್ಲಿ ಗುಳೋ ಅಂತ ಅಳುತ್ತಿದ್ದಾರೆ. ಆದರೆ ಈ ಮಂದಿಯೆಲ್ಲಾ ದಕ್ಷಿಣ ಕನ್ನಡದ ಸಣ್ಣ ಪುಟ್ಟ ಹಿಂದು-ಮುಸ್ಲಿಂ ಜಗಳ ವ್ಯಾಜ್ಯದಲ್ಲಿಯೂ ಧರ್ಮದ ಹೆಸರು ಎಳೆದು ತಂದು, ಧರ್ಮದ ಬಣ್ಣ ಹಚ್ಚಿ ಶೂದ್ರ ಕಾಲಾಳುಗಳನ್ನು ಹಿಂದುತ್ವ ರಕ್ಷಣೆಯ ಯುದ್ಧಕ್ಕೆ ಛೂ ಬಿಟ್ಟು ನೋಡಿದವರು. ಶಾಂತಿಯ ಸಮಾಜಕ್ಕೆ ಧರ್ಮದ ಬೆಂಕಿ ಹಚ್ಚಿ ಮೈ ಕಾಯಿಸಿಕೊಂಡವರು.

ಕರಾವಳಿಯ ಅನೈತಿಕ ಪೊಲೀಸ್‍ಗಿರಯ ಪ್ರತಿಯೊಂದು ಘಟನೆಯಲ್ಲಿಯೂ ಕೇಸರಿ ಗ್ಯಾಂಗಿಗೆ ಈಗವರು ಪ್ರತಿಪಾದಿಸುತ್ತಿರುವ “ಪುತ್ತೂರಿನ ನೀತಿಯನ್ನೇ” ಏಕೆ ಅನುಸರಿಸಿರಲಿಲ್ಲ. ಆಗ ಜಾತಿಧರ್ಮದ ಬಣ್ಣ ಹಚ್ಚಿ ರಾಜಕೀಯ ಲಾಭ ಪಡೆದವರು ಈಗ ಮಾತ್ರ ಆದರ್ಶದ ಮಾತಾಡುತ್ತಿದ್ದಾರೆ. ಇಂದಿನ ಅವರ ಆದರ್ಶದ ಮಾನಸಿಕತೆ ಕರಾವಳಿಯ ಪ್ರತಿಯೊಂದು ಘಟನೆಯಲ್ಲಿಯೂ ಇದ್ದಿದ್ದರೆ ಪುತ್ತೂರಿನ ರೇಪ್ ದುರ್ಘಟನೆ ನಡೆಯುತ್ತಲೇ ಇರಲಿಲ್ಲ. ಪಾಪ ಆ ದಲಿತ ಹುಡುಗಿ ಇವರಿಗೆ ಹಿಂದೂ ಅನ್ನಿಸಲಿಲ್ಲವೇ? ಒಂದು ವೇಳೆ ಅತ್ಯಾಚಾರವೆಸಗಿದ ಪಾತಕಿಗಳು ಮುಸ್ಲಿಮರಾಗಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು ಯೋಚಿಸಿ? ಅದೃಷ್ಟವಶಾತ್ ಆ ಹುಡುಗಿ ಬದುಕಿದ್ದಾಳೆ. ಒಂದು ವೇಳೆ ಸತ್ತು ಹೋಗಿದ್ದರೆ? ಅದರಲ್ಲಿಯೂ ಅವಳು ಎಬಿವಿಪಿ ಹುಡುಗಿ ನಿಜವಾಗಿಯೂ ಈ ಪಾಪಿಗಳು ಅದನ್ನು ಮುಸ್ಲಿಂಮರ ತಲೆಗೆ ಕಟ್ಟಿ ರಾಡಿ ಎಬ್ಬಿಸಿ ಅಲ್ಲಿಯೂ ತಮ್ಮ ಬೇಳೆ ಬೇಯಿಸಿಕೊಂಡುಬಿಡುತ್ತಿದ್ದರು.

ಇದೆಂಥ ಹಿಂದುತ್ವ? ರೇಪ್ ಯಾವ ಧರ್ಮದವರು ಮಾಡಿದರು ಅದೂ ಘೋರ ಪಾಪವಲ್ಲವೇ? ಬರ್ಬರ ಅಮಾನುಷವಲ್ಲವೇ? ಈಗ ಬಿಜೆಪಿ ಬಳಗವೇಕೆ ಬಾಯಿಮುಚ್ಚಿ ಕುಳಿತಿದೆ. ಈ ಥರದ ಯಾವುದೇ ಘಟನೆ ಆದರೆ ಸಾಕು ಪ್ರತ್ಯಕ್ಷವಾಗಿ ಹಿಂದುತ್ವದ ರಣಕಹಳೆಯೂದುತ್ತಿದ್ದ ಕೂಗುಮಾರಿ ಶೋಭಾ ಕರಂದ್ಲಾಚೆಯವರು ಈಗ ಎಲ್ಲಿದ್ದಾರೆ? ಇದೇ ಪುತ್ತೂರು ಬಂಟ್ವಾಳ ಏರಿಯಾದಲ್ಲಿಯೂ ಹಲವು ಹಿಂದೂ ಹುಡುಗಿಯರಿಗೆ ಲೈಂಗಿಕ ತೊಂದರೆ ಕೊಟ್ಟು ಚಿನ್ನ ದೋಚಿ ಸೈನೈಡ್ ಕೊಟ್ಟು ಕೊಂದ ಸರಣಿ ಕಿಲ್ಲರ್ ಸೈನೈಡ್ ಮೋಹನನನ್ನು ‘ಹಿಂದೂ’ ಎಂಬ ಏಕೈಕ ಕಾರಣಕ್ಕೆ ಸಹಿಸಿಕೊಂಡ ಸಂಘಪರಿವಾರ ಪೂತ್ತೂರಿನ ಎಬಿವಿಪಿ ರಿಯಾಯಿತಿ ತೋರಿಸದೇ ಇರುತ್ತದಾ?

ಇನ್ನು ಎಬಿವಿಪಿ ಈ ಘಟನೆಯನ್ನು ಮರೆಮಾಚಲು ಗುರುವಾರ ಬಸ್ ಪಾಸ್ ಉಚಿತವಾಗಿ ಕೊಡುವಂತೆ ಒತ್ತಾಯಿಸಿ ಪ್ರತಿಭಟಿಸಿದೆ. ಅಂದರೆ ಸಮಾಜದ ಗಮನವನ್ನು ಬೇರೆಡೆಗೆ ಸೆಳೆಯುವ ಕುತಂತ್ರ ಎದ್ದು ಕಾಣುತ್ತಿದೆ. ಶಾಲೆಗಳು ಶುರುವಾಗಿ ಒಂದು ತಿಂಗಳ ನಂತರ ಹೋರಾಟ ಮಾಡುತ್ತದೆ ಎಂದರೆ ಪ್ರಕರಣವನ್ನು ಮುಚ್ಚಿಹಾಕಲು ಅದು ಎಷ್ಟು ಕ್ರಿಯಾಶಿಲವಾಗಿದೆ ನೋಡಿ. ಇದರ ಜೊತೆಗೆ ಕೆಲವು ಮತಾಂಧ ಕ್ರಿಮಿಗಳು ಫೇಸ್ ಬುಕ್ ನಲ್ಲಿ ಈ ಅತ್ಯಾಚಾರವನ್ನು ಬಹಿರಂಗವಾಗಿ ಬೆಂಬಲಿಸಿ ಪೋಸ್ಟ್ ಹಾಕಿದ್ದಾರೆ. ಈ ರೀತಿಯ ಘಟನೆ ಹಿಂದೆಂದೂ ನಡೆದಿರಲಿ

ಅಮಾಯಕ ಹುಡುಗಿಗಾದ ಅನ್ಯಾಯವನ್ನು ಖಂಡಿಸಿ ಉಳಿದ ಸಂಘಟನೆಗಳೇ ಹೋರಾಟ ರೂಪಿಸುತ್ತಿವೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಅತ್ಯಚಾರಗಳು ಸಂಭವಿಸದಂತೆ ತಡೆಯಬೇಕಿದೆ. ಇದಕ್ಕಾಗಿ ಸಮಾಜದ ನಾಗರೀಕರೆಲ್ಲರೂ ದನಿಯೆತ್ತಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...