Homeಕರ್ನಾಟಕಪುತ್ತೂರು ದಲಿತ ಹುಡುಗಿಯ ಅಮಾನುಷ ಅತ್ಯಾಚಾರಕ್ಕೆ ನ್ಯಾಯ ಸಿಗಬೇಕಿದೆ... ಕಾರಣರಾದವರಿಗೆ ಗರಿಷ್ಠ ಶಿಕ್ಷೆಯಾಗಬೇಕಿದೆ

ಪುತ್ತೂರು ದಲಿತ ಹುಡುಗಿಯ ಅಮಾನುಷ ಅತ್ಯಾಚಾರಕ್ಕೆ ನ್ಯಾಯ ಸಿಗಬೇಕಿದೆ… ಕಾರಣರಾದವರಿಗೆ ಗರಿಷ್ಠ ಶಿಕ್ಷೆಯಾಗಬೇಕಿದೆ

- Advertisement -
- Advertisement -

ಪುತ್ತೂರಿನ ವಿವೇಕಾನಂದ ಕಾಲೇಜೆಂದರೆ ಶುದ್ದ ಸಂಘಪರಿವಾರದ ಸಂಸ್ಕಾರ- ಸಂಸ್ಕೃತಿಯ ವಿದ್ಯಾಸಂಸ್ಥೆ. ಹಿಂದೂತ್ವದ ಬ್ರೈನ್ ವಾಶಿಂಗ್ ಕೇಂದ್ರ; ಮತಾಂಧ ಆಕ್ರಮಣಶೀಲ ತರಬೇತಿಯ ಗರಡಿಮನೆ. ಎಬಿವಿಪಿ ಸಂಘಟನೆ ಒಂದನ್ನು ಬಿಟ್ಟು ಉಳಿದ್ಯಾವ ವಿದ್ಯಾರ್ಥಿ ಸಂಘಟನೆಗಳಿಗೂ ಈ ಕಾಲೇಜಿನಲ್ಲಿ ಅವಕಾಶವಿಲ್ಲ. ಕರಾವಳಿ ಸಂಘ ಅಂಗ ಪಡೆಗಳ ತೆರೆಮರೆಯ ರಿಂಗ್ ಮಾಸ್ಟರ್ ಕಲ್ಲಡ್ಕ ಪ್ರಭಾಕರ ಭಟ್ ಬಳಗದ ಯಜಮಾನಿಕೆಯಲ್ಲಿದೆ ವಿವೇಕಾನಂದ ಕಾಲೇಜು. ಹಿಂದು ಸಂಸ್ಕೃತಿಯಷ್ಟು ಪರಮ ಪವಿತ್ರ ಧರ್ಮ ಈ ಭೂಮಂಡಲದಲ್ಲೇ ಮತ್ತೊಂದಿಲ್ಲ ಎಂದು ಉದ್ದುದ್ದ ಭಾಷಣ ಬಿಗಿದು ಮುಗ್ಧ ಹಿಂದುಳಿದ ವರ್ಗದ ಯುವಕ/ಯುವತಿಯರ ದಿಕ್ಕು ತಪ್ಪಿಸುವ ಕಲ್ಲಡ್ಕ ಭಟ್ಟರ ಸದರಿ ಕಾಲೇಜಿನ ಐವರು ವಿದ್ಯಾರ್ಥಿಗಳು ಸಹಪಾಠಿ ದಲಿತ ವಿದ್ಯಾರ್ಥಿನಿಯನ್ನು ಕಾಡಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಇಂತಹ ದುರ್ನಡತೆಯನ್ನು ಮೊಬೈಲ್‍ನಲ್ಲಿ ಚಿತ್ರೀಕರಿಸಿ ಹರಿಯಬಿಟ್ಟಿದ್ದಾರೆ.

ಅಲ್ಲಿಗೆ ಹಿಂದುತ್ವದ ಅಸಲಿ ಅವತಾರ ಜಗತ್ತಿನಾದ್ಯಂತ ವೈರಲ್ ಆಗಿ ಹೋಗಿದೆ. ರೇಪಿಸ್ಟ್ ಹುಡುಗರೆಲ್ಲರೂ ಎಬಿವಿಪಿಯಲ್ಲಿ ಪಳಗಿದವರು. ಸಂತ್ರಸ್ಥೆಯು ಸಹ ಇದೇ ಕೇಸರಿ ಒಕ್ಕೂಟದ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದವಳೆ. ಸ್ನೇಹ-ಸಲಿಗೆಯಲ್ಲಿದ್ದವರು. ಬುಡಕಟ್ಟು ಸಮುದಯಕ್ಕೆ ಸೇರಿದ ಈ ಹುಡುಗಿಯ ತಾಯಿ ಬಿಜೆಪಿಯಿಂದ ಗೆದ್ದಿರುವ ಗ್ರಾಮ ಪಂಚಾಯತ್ ಸದಸ್ಯೆ ಕೂಡ. ಹಿಂದುತ್ವ ಆರ್.ಎಸ್.ಎಸ್ ಬಿಜೆಪಿ ಎಬಿವಿಪಿ ಕಲಸುಮೇಲೋಗರಗೊಂಡ ಕೂಟವಿದು.! ಆ ಕಿರಾತಕ ಹುಡುಗರು ಅದ್ಯಾವಾಗ ಈ ಅಮಾಯಕ ಹುಡುಗಿಯ ಮೇಲೆ ಕಣ್ಣು ಹಾಕಿ ಸ್ಕೆಚ್ ಹಾಕಿದ್ದರೋ?

ಮೊನ್ನೆ ಆಕೆ ಕ್ಲಾಸ್ ಮುಗಿಸಿ ಮನೆಗೆ ಹೋಗಲು ಬಸ್ ಕಾಯುತ್ತಾ ನಿಂತಿದ್ದಳು. ಆಗ ಬಸ್ ಸ್ಟ್ಯಾಂಡಿಗೆ ಬಂದ ಪಂಚ ಪಾತಕ ಪಡೆ ಏನೋ ಅರ್ಜೆಂಟಾಗಿ ಮುಖ್ಯವಾದ ವಿಷಯ ಮಾತಾಡಲಿಕ್ಕಿದೆ ಬಾ ಎಂದು ಹುಡುಗಿಯನ್ನು ಕಾರಲ್ಲಿ ಕರೆದೊಯ್ದಿದ್ದಾರೆ. ಕಾರು ಊರು ಬಿಟ್ಟು ಕಾಡಿನ ದಾರಿ ಹಿಡಿಯುತ್ತಿದ್ದಂತೆಯೇ ಅಪಾಯದ ಅರಿವಾದ ಹುಡುಗಿ ಕಂಗಾಲಾಗಿದ್ದಾಳೆ. ಬೊಬ್ಬೆ ಹೊಡೆದಿದ್ದಾಳೆ, ಕೊಸರಾಡಿ ಚೀರಾಡಿದ್ದಾಳೆ. ಆಗ ಆಕೆಯ ಬಾಯಿ ಒತ್ತಿ ಹಿಡಿದು ಸದ್ದು ಮಾಡದಂತೆ ತಡೆದಿದ್ದಾರೆ. ಆಕೆಗೆ ಬಲಾತ್ಕಾರವಾಗಿ ಮತ್ತು ಬರುವ ತಿಂಡಿ ತುರುಕಿದ್ದಾರೆ. ಅದರಲ್ಲಿ ಗಾಂಜಾ ಬೆರೆಸಲಾಗಿತ್ತು ಎಂದು ಹೇಳಲಾಗುತ್ತಿದೆ. ಪ್ರಜ್ಞೆ ತಪ್ಪಿದ ಹುಡುಗಿಯನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಆ ಮುಗ್ಧ ಹುಡುಗಿಯನ್ನು ಹುರಿದು ತಿಂದ ಈ ಕಾಮುಕರು ಕಿಶನ್ ಆಚಾರಿ, ಪ್ರಜ್ವಲ್, ಗುರುನಂದನ್, ಸುನೀಲ್ ಮತ್ತು ಪ್ರಖ್ಯಾತ್ ರಾತ್ರಿ ಹೊತ್ತು ಆರ್‍ಎಸ್‍ಎಸ್ ಪ್ರಣೀತ ದನ ಕಾಯುವ ಧರ್ಮರಕ್ಷಣೆ ಎಂಬ ನಾಟಕ ಮಾಡುವವರೆ ಆಗಿದ್ದಾರೆ.

ಈ ಫಟಿಂಗರು ಈ ಘಟನೆಯನ್ನು ಬೇರೆ ಎಲ್ಲಾದರೂ ಬಾಯ್ಬಿಟ್ಟರೆ ನಿನ್ನನ್ನು ಕೊಂದೇ ಹಾಕುವುದಾಗಿ ಬೆದರಿಕೆ ಹಾಕಿ ಕಾಡಿನಿಂದ ಸಿಟಿಗೆ ತಂದು ಬಿಟ್ಟಿದ್ದಾರೆ. ಈ ರೇಪಿಸ್ಟ್ ಗಳಲ್ಲಿ ಕೆಲವರು ಬೆಳ್ತಂಗಡಿಯ ಶಾಸಕ ಹರೀಶ್ ಪೂಜಾರಿಯ ನಂಟಿನವರಾದರೆ ಇನ್ನು ಕೆಲವರು ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್‍ಗೆ ಹತ್ತಿರದವರು. ಹೀಗಾಗಿ ಕಂಪ್ಲೇಟು ಕೊಟ್ಟರೆ ತನಗೆ ತೊಂದರೆಯಾಗಬಹುದೆಂದು ಹುಡುಗಿಯ ಹೆತ್ತವರು ಹಿಂಜರಿದಿದ್ದಾರೆ. ಕಾಮುಕ ಹುಡುಗರು ತಾವು ಶಾಸಕರ ಜೊತೆಗಿರುವ ಫೋಟೊವನ್ನು ಫೇಸ್ಬುಕ್ಕಿನಲ್ಲಿ ಹಾಕಿಕೊಂಡು ಪ್ರಭಾವಿ ಇಮೇಜು ಬೆಳೆಸಿಕೊಂಡಿದ್ದಾರೆ. ಇದು ಹುಡುಗಿ ಮನೆಯವರಿಗೆ ಇಕ್ಕಟ್ಟಿಗೆ ಸಿಲುಕಿಸಿದೆ. ಅಂತ ಸಂದರ್ಭದಲ್ಲಿ ಕಳೆದ ಬುಧವಾರದಂದು ಊರಿಗೆಲ್ಲಾ ಸುದ್ದಿ ಗೊತ್ತಾಗಿದ್ದರಿಂದ ಈ ಆ ಅತ್ಯಾಚಾರದ ವಿಡಿಯೋವನ್ನು ಆ ಕಾಮುಕನೊಬ್ಬ ತನ್ನ ವಾಟ್ಸಾಪ್ ಸ್ಟೇಟಸ್‍ಗೆ ಹಾಕಿಕೊಂಡಿದ್ದಾನೆ. ಅದನ್ನು ನೋಡಿದ ಕಾಲೇಜಿನ ಚುನಾವಣೆಯಲ್ಲಿ ಆತನ ವಿರುದ್ಧ ಗುಂಪಿನಲ್ಲಿದ್ದವನು ಅದನ್ನು ವಾಟ್ಸಾಪಿನಲ್ಲಿ ಹರಿಯಬಿಟ್ಟಿದ್ದಾನೆ. ಅಲ್ಲಿಂದ ಎಲ್ಲಾ ಕಡೆಗೆ ಹಬ್ಬಿದೆ. ಇದನ್ನು ನೋಡಿದ ಜನ ಬೆಚ್ಚಿ ಬಿದ್ದಿದ್ದಾರೆ.

ಇಷ್ಟೆಲ್ಲಾ ಆದರೂ ಏನು ಆಗದವರಿಂತೆ ಪೋಸು ಕೊಡುತ್ತಿದ್ದ ಆ ಕಾಮುಕರನ್ನು ನೇರವಾಗಿ ಎಸ್ಪಿಯೇ ಕಾಲೇಜಿಗೆ ಬಂದು ಎತ್ತಾಕಿಕೊಂಡು ಹೋಗಿದ್ದಾರೆ. ರೇಪಿಸ್ಟ್ ಗಳು ಎಬಿವಿಪಿ ಮತ್ತು ಕೌಬಾಯ್ ಗ್ಯಾಂಗಿನ ಸಕ್ರಿಯ ಸದಸ್ಯರೆಂಬ ಸತ್ಯ ಸಾಕ್ಷಾತ್ಕಾರ ಆಗುತ್ತಲೇ ಸಂಘಪರಿವಾರದ ಹೈಕಮಾಂಡಿನಲ್ಲಿ ಚಡಪಡಿಕೆ ಶುರುವಾಗಿದೆ. ಎಬಿವಿಪಿ ತಕ್ಷಣಾ ಹೇಳಿಕೆ ಬಿಡುಗಡೆ ಮಾಡಿ ಅವರಿಗೂ ತಮಗೂ ಸಂಬಂಧವಿಲ್ಲ ಎಂದು ಕೈತೊಳೆದುಕೊಳ್ಳಲು ಹವಣಿಸಿದೆ. ಎಬಿವಿಪಿ, ಸಂಘ ಪರಿವಾರದವರೆಲ್ಲ ಅವರು ನಮ್ಮವರಲ್ಲ ಎಂದು ತೋರಿಸಿಕೊಳ್ಳಲು ಎಷ್ಟೇ ಪ್ರಯತ್ನ ನಡೆಸಿದರೂ ರೇಪಿಸ್ಟ್ ಗಳು ಎಬಿವಿಪಿಯವರೇ ಎಂಬುದನ್ನು ಮಾರೆ ಮಾಚಲು ಸಾಧ್ಯವಾಗಿಲ್ಲ. ಸಾಮೂಹಿಕ ಅತ್ಯಾಚಾರ ಮಾಡಿದವರು ಆರ್.ಎಸ್.ಎಸ್ ಶಾಖೆಗಳಲ್ಲಿ “ಸಂಸ್ಕಾರ” ದೀಕ್ಷೆ ಪಡೆದವರು, ಸ್ವಯಂ ಘೋಷಿತ ಗೋರಕ್ಷಕರು, ಶಾಸಕರ ಜೊತೆಗಿದ್ದವರು ಎಂಬ ಸತ್ಯ ಎಲ್ಲೆಡೆ ಹರಿದಾಡುತ್ತಿದ್ದು ಬಿಜೆಪಿಯವರ ಚಿಂತೆಯನ್ನು ಹೆಚ್ಚು ಮಾಡಿದೆ.

ತಮ್ಮವರು ಸಿಕ್ಕಿಬಿದ್ದಾಗ ಉದಾತ್ತತೆ, ನಾಗರೀಕ ಶಿಷ್ಠಾಚಾರ, ಮನುಷ್ಯತ್ವ, ಧರ್ಮಾತೀತತೆ, ಜಾತ್ಯಾತೀತತೆಯ ಬಗ್ಗೆ ಪ್ರವಚನ ಬಿಗಿಯುವ ತಂತ್ರಗಾರಿಕೆ ಸಂಘಪರಿವಾರಕ್ಕೆ ಲಗಾಯ್ತಿನಿಂದಲೂ ಕರಗತ. ಈ ಬಾರಿಯೂ ಅದೇ ಅಸ್ತ್ರ ಬಳಸಿದ್ದಾರೆ. ಪುತ್ತೂರಿನ ಕ್ರೌರ್ಯದ ವಿಚಾರದಲ್ಲಿ ಜಾತಿ ತರಬೇಡಿ, ಧರ್ಮ ತರಬೇಡಿ, ಕೇಸರಿ ತರಬೇಡಿ, ಹಸಿರು ತರಬೇಡಿ ಎಂದೆಲ್ಲಾ ವೇದಾಂತ ಸಂಘಿ ಸಿಂಫಥೈಸರ್‍ಗಳು ಅವಲತ್ತುಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾನದಲ್ಲಿ ಗುಳೋ ಅಂತ ಅಳುತ್ತಿದ್ದಾರೆ. ಆದರೆ ಈ ಮಂದಿಯೆಲ್ಲಾ ದಕ್ಷಿಣ ಕನ್ನಡದ ಸಣ್ಣ ಪುಟ್ಟ ಹಿಂದು-ಮುಸ್ಲಿಂ ಜಗಳ ವ್ಯಾಜ್ಯದಲ್ಲಿಯೂ ಧರ್ಮದ ಹೆಸರು ಎಳೆದು ತಂದು, ಧರ್ಮದ ಬಣ್ಣ ಹಚ್ಚಿ ಶೂದ್ರ ಕಾಲಾಳುಗಳನ್ನು ಹಿಂದುತ್ವ ರಕ್ಷಣೆಯ ಯುದ್ಧಕ್ಕೆ ಛೂ ಬಿಟ್ಟು ನೋಡಿದವರು. ಶಾಂತಿಯ ಸಮಾಜಕ್ಕೆ ಧರ್ಮದ ಬೆಂಕಿ ಹಚ್ಚಿ ಮೈ ಕಾಯಿಸಿಕೊಂಡವರು.

ಕರಾವಳಿಯ ಅನೈತಿಕ ಪೊಲೀಸ್‍ಗಿರಯ ಪ್ರತಿಯೊಂದು ಘಟನೆಯಲ್ಲಿಯೂ ಕೇಸರಿ ಗ್ಯಾಂಗಿಗೆ ಈಗವರು ಪ್ರತಿಪಾದಿಸುತ್ತಿರುವ “ಪುತ್ತೂರಿನ ನೀತಿಯನ್ನೇ” ಏಕೆ ಅನುಸರಿಸಿರಲಿಲ್ಲ. ಆಗ ಜಾತಿಧರ್ಮದ ಬಣ್ಣ ಹಚ್ಚಿ ರಾಜಕೀಯ ಲಾಭ ಪಡೆದವರು ಈಗ ಮಾತ್ರ ಆದರ್ಶದ ಮಾತಾಡುತ್ತಿದ್ದಾರೆ. ಇಂದಿನ ಅವರ ಆದರ್ಶದ ಮಾನಸಿಕತೆ ಕರಾವಳಿಯ ಪ್ರತಿಯೊಂದು ಘಟನೆಯಲ್ಲಿಯೂ ಇದ್ದಿದ್ದರೆ ಪುತ್ತೂರಿನ ರೇಪ್ ದುರ್ಘಟನೆ ನಡೆಯುತ್ತಲೇ ಇರಲಿಲ್ಲ. ಪಾಪ ಆ ದಲಿತ ಹುಡುಗಿ ಇವರಿಗೆ ಹಿಂದೂ ಅನ್ನಿಸಲಿಲ್ಲವೇ? ಒಂದು ವೇಳೆ ಅತ್ಯಾಚಾರವೆಸಗಿದ ಪಾತಕಿಗಳು ಮುಸ್ಲಿಮರಾಗಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು ಯೋಚಿಸಿ? ಅದೃಷ್ಟವಶಾತ್ ಆ ಹುಡುಗಿ ಬದುಕಿದ್ದಾಳೆ. ಒಂದು ವೇಳೆ ಸತ್ತು ಹೋಗಿದ್ದರೆ? ಅದರಲ್ಲಿಯೂ ಅವಳು ಎಬಿವಿಪಿ ಹುಡುಗಿ ನಿಜವಾಗಿಯೂ ಈ ಪಾಪಿಗಳು ಅದನ್ನು ಮುಸ್ಲಿಂಮರ ತಲೆಗೆ ಕಟ್ಟಿ ರಾಡಿ ಎಬ್ಬಿಸಿ ಅಲ್ಲಿಯೂ ತಮ್ಮ ಬೇಳೆ ಬೇಯಿಸಿಕೊಂಡುಬಿಡುತ್ತಿದ್ದರು.

ಇದೆಂಥ ಹಿಂದುತ್ವ? ರೇಪ್ ಯಾವ ಧರ್ಮದವರು ಮಾಡಿದರು ಅದೂ ಘೋರ ಪಾಪವಲ್ಲವೇ? ಬರ್ಬರ ಅಮಾನುಷವಲ್ಲವೇ? ಈಗ ಬಿಜೆಪಿ ಬಳಗವೇಕೆ ಬಾಯಿಮುಚ್ಚಿ ಕುಳಿತಿದೆ. ಈ ಥರದ ಯಾವುದೇ ಘಟನೆ ಆದರೆ ಸಾಕು ಪ್ರತ್ಯಕ್ಷವಾಗಿ ಹಿಂದುತ್ವದ ರಣಕಹಳೆಯೂದುತ್ತಿದ್ದ ಕೂಗುಮಾರಿ ಶೋಭಾ ಕರಂದ್ಲಾಚೆಯವರು ಈಗ ಎಲ್ಲಿದ್ದಾರೆ? ಇದೇ ಪುತ್ತೂರು ಬಂಟ್ವಾಳ ಏರಿಯಾದಲ್ಲಿಯೂ ಹಲವು ಹಿಂದೂ ಹುಡುಗಿಯರಿಗೆ ಲೈಂಗಿಕ ತೊಂದರೆ ಕೊಟ್ಟು ಚಿನ್ನ ದೋಚಿ ಸೈನೈಡ್ ಕೊಟ್ಟು ಕೊಂದ ಸರಣಿ ಕಿಲ್ಲರ್ ಸೈನೈಡ್ ಮೋಹನನನ್ನು ‘ಹಿಂದೂ’ ಎಂಬ ಏಕೈಕ ಕಾರಣಕ್ಕೆ ಸಹಿಸಿಕೊಂಡ ಸಂಘಪರಿವಾರ ಪೂತ್ತೂರಿನ ಎಬಿವಿಪಿ ರಿಯಾಯಿತಿ ತೋರಿಸದೇ ಇರುತ್ತದಾ?

ಇನ್ನು ಎಬಿವಿಪಿ ಈ ಘಟನೆಯನ್ನು ಮರೆಮಾಚಲು ಗುರುವಾರ ಬಸ್ ಪಾಸ್ ಉಚಿತವಾಗಿ ಕೊಡುವಂತೆ ಒತ್ತಾಯಿಸಿ ಪ್ರತಿಭಟಿಸಿದೆ. ಅಂದರೆ ಸಮಾಜದ ಗಮನವನ್ನು ಬೇರೆಡೆಗೆ ಸೆಳೆಯುವ ಕುತಂತ್ರ ಎದ್ದು ಕಾಣುತ್ತಿದೆ. ಶಾಲೆಗಳು ಶುರುವಾಗಿ ಒಂದು ತಿಂಗಳ ನಂತರ ಹೋರಾಟ ಮಾಡುತ್ತದೆ ಎಂದರೆ ಪ್ರಕರಣವನ್ನು ಮುಚ್ಚಿಹಾಕಲು ಅದು ಎಷ್ಟು ಕ್ರಿಯಾಶಿಲವಾಗಿದೆ ನೋಡಿ. ಇದರ ಜೊತೆಗೆ ಕೆಲವು ಮತಾಂಧ ಕ್ರಿಮಿಗಳು ಫೇಸ್ ಬುಕ್ ನಲ್ಲಿ ಈ ಅತ್ಯಾಚಾರವನ್ನು ಬಹಿರಂಗವಾಗಿ ಬೆಂಬಲಿಸಿ ಪೋಸ್ಟ್ ಹಾಕಿದ್ದಾರೆ. ಈ ರೀತಿಯ ಘಟನೆ ಹಿಂದೆಂದೂ ನಡೆದಿರಲಿ

ಅಮಾಯಕ ಹುಡುಗಿಗಾದ ಅನ್ಯಾಯವನ್ನು ಖಂಡಿಸಿ ಉಳಿದ ಸಂಘಟನೆಗಳೇ ಹೋರಾಟ ರೂಪಿಸುತ್ತಿವೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಅತ್ಯಚಾರಗಳು ಸಂಭವಿಸದಂತೆ ತಡೆಯಬೇಕಿದೆ. ಇದಕ್ಕಾಗಿ ಸಮಾಜದ ನಾಗರೀಕರೆಲ್ಲರೂ ದನಿಯೆತ್ತಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...