Homeಕರ್ನಾಟಕಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17...

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ.

ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ಶನಿವಾರ ದಾಳಿ ನಡೆಸಿದ್ದರು. ಆದರೆ, ಪುತ್ತೂರು ಶಾಸಕ ಅಶೋಕ್ ರೈ ಖುದ್ದು ಮುಂದೆ ನಿಂತು ಸಂಪ್ರದಾಯದ ಹೆಸರಿನಲ್ಲಿ ಕೋಳಿ ಅಂಕ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕೋಳಿ ಅಂಕಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮತಿ ನೀಡಿರಲಿಲ್ಲ. ಹಾಗಾಗಿ, ಶನಿವಾರ ಮಧ್ಯಾಹ್ನ ಕೋಳಿ ಅಂಕ ಆರಂಭವಾಗುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಅಡ್ಡಿಪಡಿಸಿದ ಹಿನ್ನೆಲೆ, ಸ್ಥಳಕ್ಕೆ ತೆರಳಿದ ಶಾಸಕ ಅಶೋಕ್ ಕುಮಾರ್ ರೈ, “ಯಾರೂ ಓಡಬೇಡಿ ಕೋಳಿ ಅಂಕ ಸಂಜೆಯವರೆಗೆ ನಡೆದೇ ನಡೆಯುತ್ತದೆ. ನಾನು ಕೂಡ ನಿಮ್ಮ ಜೊತೆಗೆ ಇರುತ್ತೇನೆ” ಎಂದು ಹೇಳಿ ಸಂಜೆ 5 ಗಂಟೆಯವರೆಗೆ ಸ್ಥಳದಲ್ಲಿ ನಿಂತು ಕೋಳಿ ಅಂಕ ನಡೆಸಿದ್ದಾರೆ.

https://www.facebook.com/share/v/1CLEbhH6oj/

ಮಾಧ್ಯಮಗಳ ಜೊತೆ ಮಾತನಾಡಿರುವ ಅಶೋಕ್ ರೈ,”800 ವರ್ಷಗಳ ಇತಿಹಾಸವಿರುವ ಈ ಕ್ಷೇತ್ರದಲ್ಲಿ ಪ್ರತಿ ವರ್ಷ ಕೋಳಿ ಅಂಕ ನಡೆಯುತ್ತದೆ. ಇದು ಧಾರ್ಮಿಕ ಭಾವನೆ. ಇಲ್ಲಿ ಯಾವುದೇ ಜೂಜು ನಡೆಯುವುದಿಲ್ಲ. ಜನರು ಪ್ರೀತಿಯಿಂದ ಸಾಕಿದ ಕೋಳಿಯನ್ನು ಹರಕೆ ರೂಪದಲ್ಲಿ ತಂದು ಕೋಳಿ ಅಂಕ ನಡೆಸಿ, ಅದನ್ನು ರೈತರು ತೆಗೆದುಕೊಂಡು ಹೋಗುತ್ತಾರೆ. ಇದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ ಎಂಬುವುದ ನಮಗೆ ಗೊತ್ತಿದೆ. ಆದರೆ, ಜನರ ಧಾರ್ಮಿಕ ಭಾವನೆಗಳನ್ನು ಮನಗಂಡು ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಆದರೂ ಪೊಲೀಸರು ಬಂದು ಚದುರಿಸುವಂತ ಪ್ರಯತ್ನ ಮಾಡಿದ್ದಾರೆ. ನಾವು ಕಾನೂನು ಬಾಹಿರ ಕೆಲಸ ಮಾಡಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

ಅಶೋಕ್ ರೈ ಸೇರಿ 17 ಮಂದಿಯ ವಿರುದ್ದ ಪ್ರಕರಣ

ಯಾವುದೇ ಸೂಕ್ತ ಪರವಾನಿಗೆ ಪಡೆಯದೇ ಕಾನೂನುಬಾಹಿರವಾಗಿ ಕೋಳಿ ಅಂಕ ಆಯೋಜಿಸಿದ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಹಿತ 17 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಡಿ.20ರಂದು ಮಧ್ಯಾಹ್ನ ಕೇಪುವಿನ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಕಾನೂನುಬಾಹಿರವಾಗಿ ಕೋಳಿ ಅಂಕ ಆಡಲು ಮುಂದಾಗುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಹಲವು ಮಂದಿ ಕೋಳಿ ಅಂಕಕ್ಕೆ ಸಿದ್ಧರಾಗಿ ಗುಂಪು ಸೇರಿದ್ದರು. ಪೊಲೀಸರು ಅಲ್ಲಿದ್ದವರಿಗೆ ಕಾನೂನುಬಾಹಿರ ಕೋಳಿ ಅಂಕದ ಬಗ್ಗೆ ಕಾನೂನು ತಿಳುವಳಿಕೆ ನೀಡಿದ್ದಾರೆ. ಆದರೆ ಈ ವೇಳೆ ಸ್ಥಳದಲ್ಲಿ ಹಾಜರಿದ್ದ ಪುತ್ತೂರು ಶಾಸಕ ಅಶೋಕ್ ರೈ ಸೇರಿದ್ದ ಜನರಿಗೆ ಕಾನೂನುಬಾಹಿರವಾಗಿ ಕೋಳಿ ಅಂಕವನ್ನು ಮುಂದುವರಿಸುವಂತೆ ಪ್ರಚೋದನೆ ಮತ್ತು ದುಷ್ಪ್ರೇರಣೆ ನೀಡಿದ್ದಾರೆ. ಅದರಂತೆ ಸ್ಥಳದಲ್ಲಿ ಸೇರಿದ್ದ ಜನರು ಕೋಳಿ ಅಂಕ ಆರಂಭಿಸಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವೇಳೆ ಪೊಲೀಸರು ಕೋಳಿ ಅಂಕ ಆಟವಾಡುತ್ತಿದ್ದ 16 ಮಂದಿಯನ್ನು ವಶಕ್ಕೆ ಪಡೆದು, 22 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಬಾಳು(ಕತ್ತಿ)ಗಳನ್ನು ವಶಕ್ಕೆ ಪಡೆದಿದ್ದಾರೆ.

ಪರವಾನಿಗೆ ಪಡೆಯದೆ ಕಾನೂನು ಬಾಹಿರವಾಗಿ ಕೋಳಿ ಅಂಕಕ್ಕೆ ಅವಕಾಶ ಮಾಡಿಕೊಟ್ಟ ಜಾಗದ ಮಾಲಕ ಮುರಳೀಧರ ರೈ, ಕಾನೂನುಬಾಹಿರ ಕೃತ್ಯವನ್ನು ನಡೆಸಲು ಪ್ರಚೋದನೆ-ದುಷ್ಪ್ರೇರಣೆ ನೀಡಿದ ಆರೋಪದಲ್ಲಿ ಶಾಸಕ ಅಶೋಕ್ ರೈ ವಿರುದ್ಧ ಹಾಗೂ ಕೋಳಿ ಅಂಕದಲ್ಲಿ ತೊಡಗಿದ್ದ 16 ಮಂದಿಯ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರ: 190/2025, ಕಲಂ:189(2),49, 221,223,190)BNS-2023, PREVENTION OF CRUELTY TO ANIMALS ACT, 1960 (U/s-3,11) ರಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...