Homeಕರ್ನಾಟಕಪುತ್ತೂರು: ಹಿಂದೂ ಯುವತಿಯ ಜೊತೆಗಿದ್ದ ಕಾರಣಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಪುತ್ತೂರು: ಹಿಂದೂ ಯುವತಿಯ ಜೊತೆಗಿದ್ದ ಕಾರಣಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ

- Advertisement -
- Advertisement -

ಕೋಮು ಸೂಕ್ಷ್ಮ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇಂದು ಪುತ್ತೂರು ತಾಲೂಕಿನಲ್ಲಿ ಹಿಂದೂ ಯುವತಿಯೊಂದಿಗೆ ಮಾತನಾಡಿದ ಮುಸ್ಲಿಂ ಯುವಕನಿಗೆ ಸ್ಥಳೀಯರು ಹಿಗ್ಗಾಮುಗ್ಗವಾಗಿ ಥಳಿಸಿದ ಘಟನೆ ನಡೆದಿದೆ.

ಹಿಂದೂ ಧರ್ಮದ ಯುವತಿಯೊಂದಿಗೆ ಸಿನಿಮಾ ನೋಡಲು ಹೋಗಿದ್ದ ಮುಸ್ಲಿಂ ಯುವಕನೊಬ್ಬನ ಮೇಲೆ ಪುಂಡರ ಗುಂಪೊಂದು ದಾಳಿ ಮಾಡಿರುವ ಘಟನೆ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಮರೀಲ್ ಕಾಡುಮನ ನಿವಾಸಿ ಇಬ್ರಾಹಿಂ ಅವರ ಪುತ್ರ ಮಹಮ್ಮದ್ ಪಾಲಿಶ್ (18) ಮೇಲೆ ದಾಳಿ ನಡೆದಿದ್ದು, ಈ ವಿದ್ಯಾರ್ಥಿಯ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ. ಯುವಕನ ಮೈಮೇಲೆ ಬಾಸುಂಡೆಗಳು ಎದ್ದಿವೆ.

ಮಹಮ್ಮದ್ ಪಾಲಿಶ್ ಹಾಗೂ ಆತನ ಜೊತೆಗಿದ್ದ ಯುವತಿ ಇಬ್ಬರೂ ವಿದ್ಯಾರ್ಥಿಗಳಾಗಿದ್ದು, ಇಬ್ಬರೂ ನಗರದ ಮಾಲ್‌ವೊಂದರ ಚಿತ್ರಮಂದಿರದಲ್ಲಿ ಒಟ್ಟಿಗೆ ಸಿನಿಮಾ ಸಿನಿಮಾ ವೀಕ್ಷಿಸಿದ್ದರು. ಬಳಿಕ ಜ್ಯೂಸ್ ಕುಡಿಯಲು ಜೊತೆಯಲ್ಲೇ ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದ ಯುವಕರ ಗುಂಪೊಂದು ಮಹಮ್ಮದ್ ಪಾರಿಕ್‌ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ” ಎಂದು ಹೇಳಲಾಗಿದೆ.

”ಸಧ್ಯ ಹಲ್ಲೆಗೊಳದಾಗ ಯುವಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಲ್ಲೆ ನಡೆಸಿದ ಮೂವರಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಮತ್ತೋರ್ವ ಬಾಲಕನೇ ಅಥವಾ ವಯಸ್ಕನೇ ಎಂಬ ಬಗ್ಗೆ ವಯಸ್ಸನ್ನು ಇನ್ನಷ್ಟೇ ಖಾತರಿಪಡಿಸಿಕೊಳ್ಳಬೇಕಿದೆ. ಮೂರನೇ ಆರೋಪಿಯ ಸುಳಿವು ಸಿಕ್ಕಿದ್ದು, ಶೀಘ್ರವೇ ಬಂಧಿಸಲಿದ್ದೇವೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಮ್ ಅಮಟೆ ತಿಳಿಸಿದ್ದಾರೆ.

”ಘಟನೆ ಬಗ್ಗೆ ಹಲ್ಲೆಗೊಳಗಾದ ಮಹಮ್ಮದ್ ಪಾರಿಶ್ ದೂರು ನೀಡಿದ್ದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕ ಯುವತಿ ಜೊತೆಯಲ್ಲಿ ಸಿನಿಮಾ ವೀಕ್ಷಿಸಲು ತೆರಳಿದ ಬಗ್ಗೆ ದೂರಿನಲ್ಲಿ ಉಲ್ಲೇಖವಿಲ್ಲ. ಐದಾರು ಮಂದಿಯ ಗುಂಪೊಂದು ಬಸ್ ನಿಲ್ದಾಣದ ಬಳಿ ಹಲ್ಲೆ ನಡೆಸಿದೆ ಎಂದು ಮಾತ್ರ ಉಲ್ಲೇಖಿಸಿದ್ದಾರೆ. ಆರೋಪಿಗಳ ಪತ್ತೆಗೆ ಕ್ರಮ ವಹಿಸಿದ್ದೇವೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೊಲೀಸ್ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್ ಹಾಗೂ ಪಿಎಸ್‌ಐ ಶ್ರೀಕಾಂತ್‌ ರಾಥೋಡ್ ನೇತೃತ್ವದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದು ‘ಮತೀಯ ಗೂಂಡಾಗಿರಿ’ ಎಂದು ಎಸ್‌ಡಿಪಿಐ ಹಾಗೂ ಮುಸ್ಲಿಂ ಯುವಜನ ಪರಿಷತ್‌ ಖಂಡಿಸಿವೆ.

ಇತ್ತೀಚೆಗಷ್ಟೇ ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಥಳಿಸಿದ ಘಟನೆ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿತ್ತು. ವಿದ್ಯಾರ್ಥಿನಿಯೊಂದಿಗೆ ತಿರುಗಾಡುತ್ತಿದ್ದ ಬಗ್ಗೆ ಮಾಹಿತಿಯಿದ್ದು, ಕುಕ್ಕೆ ಸುಬ್ರಹ್ಮಣ್ಯ ಬಸ್​ಸ್ಟ್ಯಾಂಡ್​ನಲ್ಲಿ ಈ ಜೋಡಿ ಕಂಡು ಬಂದಿದೆ. ಬಳಿಕ ಕುಮಾರಧಾರ ಬಳಿ ಬಂದಾಗ ಗುಂಪೊಂದು ಯುವಕನಿಗೆ ಥಳಿಸಿದ್ದಾರೆ. ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದರು. ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದು, ಆಕೆಯ ತಂದೆ ನೀಡಿದ ದೂರಿನ ಅನ್ವಯ ಯುವಕನ ವಿರುದ್ದ ಸುಬ್ರಹ್ಮಣ್ಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...