Homeಕರ್ನಾಟಕಪುತ್ತೂರು: ನಮಗೆ ಹಣ ಬೇಡ, ಮೂಲಭೂತ ಸೌಲಭ್ಯ ನೀಡಿ- ಶರವೂರು, ಕಂದ್ಲಾಜೆ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ...

ಪುತ್ತೂರು: ನಮಗೆ ಹಣ ಬೇಡ, ಮೂಲಭೂತ ಸೌಲಭ್ಯ ನೀಡಿ- ಶರವೂರು, ಕಂದ್ಲಾಜೆ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ ಬೆದರಿಕೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕು ಕೇಂದ್ರದಿಂದ 20 ಕಿ,ಮೀ ದೂರದಲ್ಲಿರುವ ಶರವೂರು, ಕಂದ್ಲಾಜೆ, ನಗ್ರಿ ಗ್ರಾಮಗಳಿಗೆ ರಸ್ತೆ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ನಾವು ಎಲ್ಲಾ ರೀತಿಯ ತೆರಿಗೆ ಕಟ್ಟುತ್ತೇವೆ. ಜಿಎಸ್‌ಟಿ ಕಟ್ಟುತ್ತೇವೆ, ಆದರೆ ನಮಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು, ಕೂಡಲೇ ರಸ್ತೆ ಮಾಡಿಸದಿದ್ದರೆ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಚುನಾವಣೆಯಲ್ಲಿ ನಮಗೆ ಹಣ ನೀಡುವುದು ಬೇಡ. ನಾವು ನಮ್ಮ ಮನೆಗೆ ಏನಾದರೂ ಮಾಡಿಕೊಡಿ ಎಂದು ಕೇಳುತ್ತಿಲ್ಲ. ಬದಲಿಗೆ ಗ್ರಾಮದ ಅಭಿವೃದ್ದಿ ಮಾಡಿ ಎನ್ನುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಶಾಸಕ ಸಂಜೀವ ಮಠಂದೂರರು ಪ್ರತಿನಿಧಿಸುವ ಪುತ್ತೂರು ಕ್ಷೇತ್ರದ ವ್ಯಾಪ್ತಿಗೆ ಈ ಮೇಲಿನ ಗ್ರಾಮಗಳು ಬರಲಿದ್ದು, ಶಾಸಕರು ಅಭಿವೃದ್ದಿಯ ಕಡೆ ಗಮನ ಹರಿಸಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

ಈ ಹಿಂದೆ ಶಾಸಕ ಸಂಜೀವ ಮಠಂದೂರರ ತವರು ಗ್ರಾಮ ಹಿರೇಬಂಡಾಡಿಯ ಮಂದಿಯೆ ರಸ್ತೆ ನಿರ್ಮಾಣಕ್ಕಾಗಿ ಮತ್ತು ಕಳಪೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸಿ ಶಾಸಕರಿಗೆ ಘೇರಾವ್ ಹಾಕಿದ್ದರು.

ಕೋಟ್ಯಂತರ ರೂ ಅಡಿಕೆ ವ್ಯವಹಾರದ ದುಡ್ಡಿನ ಪುತ್ತೂರು ಪೇಟೆಯ ಥಳುಕು-ಬಳುಕು ಕಂಡರೆ ಇಡೀ ತಾಲೂಕು ಅಭಿವೃದ್ದಿಯಾಗಿದೆ ಎಂಬ ಭ್ರಮೆ ಮೂಡುತ್ತದೆ. ಆದರೆ ವಾಸ್ತವ ಅದಕ್ಕೆ ವಿರುದ್ಧವಾಗಿದೆ. ಸರಿಯಾದ ರಸ್ತೆ, ಸಂಪರ್ಕ ಸೇತುವೆ, ಕುಡಿಯುವ ನೀರು, ಪ್ರಾಥಮಿಕ ಆರೋಗ್ಯ ಸೌಕರ್ಯ, ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಸಮಸ್ಯೆಗಳಿವೆ ಎಂದು ಸ್ಥಳೀಯರು ಹೇಳುತ್ತಾರೆ. ಈ ಕ್ಷೇತ್ರವನ್ನು ಇಂದೆ ಮಾಜಿ ಸಿಎಂ ಡಿ.ವಿ ಸದಾನಂದಗೌಡರು ಪ್ರತಿನಿಧಿಸಿದ್ದರು. ಆದರೂ ಅಭಿವೃದ್ದಿಯಾಗಿಲ್ಲ ಎಂಬ ಆರೋಪ ಅವರದು.

ಇನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿಯೂ ಬಿಜೆಪಿ ಕಾರ್ಯಕರ್ತರೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ವಿರುದ್ಧ ಬುಧವಾರ ಪ್ರತಿಭಟನೆ ನಡೆಸಿದ್ದಾರೆ. ಚುನಾವಣೆ ಹತ್ತಿರಬಂದಾಗ ಭೂಮಿ ಪೂಜೆ ಮಾಡಲು ಬಂದಿದ್ದೀರಾ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರಸಮೀಕ್ಷೆ; ಪುತ್ತೂರು: ಸಂಘ ಪರಿವಾರದ ಆಡಂಬೊಲದಲ್ಲಿ ಸಜ್ಜುಗೊಳ್ಳುತ್ತಿದ್ದಾರೆಯೇ ನಳಿನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...