Homeಮುಖಪುಟವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದೊಯ್ದ ಪ್ರಾಂಶುಪಾಲರ ವಿರುದ್ಧ ದೂರು ದಾಖಲು

ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದೊಯ್ದ ಪ್ರಾಂಶುಪಾಲರ ವಿರುದ್ಧ ದೂರು ದಾಖಲು

- Advertisement -
- Advertisement -

ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದೊಯ್ದ ಪ್ರಾಂಶುಪಾಲರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದ್ದು, ಇದೀಗ ಅವರನ್ನು ಅಮಾನತುಗೊಳಿಸಿದ ಘಟನೆ ದಕ್ಷಿಣ ಗೋವಾದಲ್ಲಿ ನಡೆದಿದೆ.

ಕೇಶವ್ ಸ್ಮೃತಿ ಹೈಯರ್ ಸೆಕೆಂಡರಿ ಶಾಲೆಯ 11ನೇ ತರಗತಿಯ ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದುಕೊಂಡು ಹೋಗಿದ್ದಕ್ಕೆ ಶಾಲಾ ಆಡಳಿತ ಮಂಡಳಿಯು ಪ್ರಾಂಶುಪಾಲರನ್ನು ಅಮಾನತುಗೊಳಿಸಿದೆ. ಈ ಕುರಿತು ರಾಜ್ಯ ಶಿಕ್ಷಣ ಇಲಾಖೆ ಕೂಡ ಶಾಲಾ ಆಡಳಿತ ಮಂಡಳಿಯಿಂದ ವಿವರಣೆ ಕೇಳಿದೆ.

ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು, ದೇಶವಿರೋಧಿ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರ ವಿರುದ್ಧ ವಾಸ್ಕೋದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕಾರ್ಯಾಗಾರವನ್ನು ನಿಷೇಧಿತ ಪಾಪ್ಯುಲರ್ ಫ್ರಂಟ್‌ನೊಂದಿಗೆ ಸಂಬಂಧ ಹೊಂದಿರುವ ಸಂಘಟನೆಯು ಆಯೋಜಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಶಿಕ್ಷಣ ಇಲಾಖೆಯ ನಿರ್ದೇಶಕ ಶೈಲೇಶ್ ಜಿಂಗ್ಡೆ ಈ ಕುರಿತು ಮಾತನಾಡಿದ್ದು, ಆಲ್ಟೊ-ಡಬೋಲಿಮ್‌ನಲ್ಲಿರುವ ಕೇಶವ್ ಸ್ಮೃತಿ ಹೈಯರ್ ಸೆಕೆಂಡರಿ ಶಾಲೆಯ 11 ನೇ ತರಗತಿಯ ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದುಕೊಂಡು ಹೋಗಲಾಗಿದೆ. ಈ ಕುರಿತು ಇಲಾಖೆಯು ಶಾಲಾ ಆಡಳಿತ ಮಂಡಳಿಯಿಂದ ವಿವರಣೆ ಕೇಳಿದೆ. ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಶಾಲಾ ಮುಖ್ಯೋಪಾಧ್ಯಾಯ ಶಂಕರ್ ಗಾಂವ್ಕರ್ ಈ ಕುರಿತು ಮಾತನಾಡಿದ್ದು, ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ) ಆಹ್ವಾನದ ಮೇರೆಗೆ ಕೋಮು ಸೌಹಾರ್ದತೆಯನ್ನು ಉತ್ತೇಜಿಸಲು ದಾಬೋಲಿಮ್‌ನಲ್ಲಿರುವ ಮಸೀದಿಗೆ ಭೇಟಿ ನೀಡಲಾಗಿದೆ. ನಮ್ಮ ಶಾಲೆಯ ಮೂವರು ವಿದ್ಯಾರ್ಥಿನಿಯರು ಮತ್ತು ಶಿಕ್ಷಕಿ ಸೇರಿದಂತೆ ಒಟ್ಟು 21 ವಿದ್ಯಾರ್ಥಿಗಳನ್ನು ಮಸೀದಿಗೆ ಕರೆದೊಯ್ಯಲಾಗಿತ್ತು. ಮಸೀದಿಯಲ್ಲಿ ಪ್ರಾರ್ಥನೆಯನ್ನು ಎಲ್ಲಿ ನಡೆಸಲಾಗುತ್ತದೆ ಮತ್ತು ಪ್ರವೇಶ-ನಿರ್ಗಮನ ಪ್ರದೇಶಗಳನ್ನು ವಿದ್ಯಾರ್ಥಿಗಳಿಗೆ ತೋರಿಸಲಾಯಿತು. ಕೆಲವು ವಿದ್ಯಾರ್ಥಿಗಳು ಗೌರವಾರ್ಥವಾಗಿ ತಲೆ ಮುಚ್ಚಿಕೊಂಡಿರಬಹುದು. ವಿದ್ಯಾರ್ಥಿಗಳನ್ನು ಹಿಜಾಬ್ ಧರಿಸಲು ಅಥವಾ ಆಚರಣೆಗಳನ್ನು ಮಾಡಲು ಬಲವಂತಪಡಿಸಲಾಗಿದೆ ಎಂಬುವುದು ಸುಳ್ಳು ಎಂದು ಹೇಳಿದ್ದಾರೆ.

ಈ ಹಿಂದೆಯೂ ಕೂಡ ನಾವು ದೇವಾಲಯಗಳು, ಚರ್ಚ್‌ಗಳು ಮತ್ತು ಮಸೀದಿಗಳಿಗೆ ವಿದ್ಯಾರ್ಥಿಗಳ ಭೇಟಿಯನ್ನು ಆಯೋಜಿಸಿದ್ದೇವೆ. ಎಲ್ಲಾ ಧರ್ಮದ ಮಕ್ಕಳು ಶಾಲೆಯಲ್ಲಿ ಓದುತ್ತಾರೆ. ಬೇರೆ ಶಾಲೆಯ ಕೆಲವು ವಿದ್ಯಾರ್ಥಿಗಳು ಕೂಡ ಮಸೀದಿಗೆ ಭೇಟಿ ನೀಡಿದ್ದರು. ನನ್ನನ್ನು ಏಕೆ ಅಮಾನತುಗೊಳಿಸಲಾಗಿದೆ ಎಂದು ನನಗೆ ತಿಳಿದಿಲ್ಲ ಎಂದು ಗಾಂವ್ಕರ್ ಹೇಳಿದ್ದಾರೆ.

ಇದನ್ನು ಓದಿ; ಜಲ ಜೀವನ್ ಮಿಷನ್‌ ಹಗರಣ ಬಯಲಿಗೆಳೆದ ದಲಿತ ಐಎಎಸ್ ಅಧಿಕಾರಿಗೆ ಕಿರುಕುಳ: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...