Homeಮುಖಪುಟವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದೊಯ್ದ ಪ್ರಾಂಶುಪಾಲರ ವಿರುದ್ಧ ದೂರು ದಾಖಲು

ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದೊಯ್ದ ಪ್ರಾಂಶುಪಾಲರ ವಿರುದ್ಧ ದೂರು ದಾಖಲು

- Advertisement -
- Advertisement -

ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದೊಯ್ದ ಪ್ರಾಂಶುಪಾಲರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದ್ದು, ಇದೀಗ ಅವರನ್ನು ಅಮಾನತುಗೊಳಿಸಿದ ಘಟನೆ ದಕ್ಷಿಣ ಗೋವಾದಲ್ಲಿ ನಡೆದಿದೆ.

ಕೇಶವ್ ಸ್ಮೃತಿ ಹೈಯರ್ ಸೆಕೆಂಡರಿ ಶಾಲೆಯ 11ನೇ ತರಗತಿಯ ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದುಕೊಂಡು ಹೋಗಿದ್ದಕ್ಕೆ ಶಾಲಾ ಆಡಳಿತ ಮಂಡಳಿಯು ಪ್ರಾಂಶುಪಾಲರನ್ನು ಅಮಾನತುಗೊಳಿಸಿದೆ. ಈ ಕುರಿತು ರಾಜ್ಯ ಶಿಕ್ಷಣ ಇಲಾಖೆ ಕೂಡ ಶಾಲಾ ಆಡಳಿತ ಮಂಡಳಿಯಿಂದ ವಿವರಣೆ ಕೇಳಿದೆ.

ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು, ದೇಶವಿರೋಧಿ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರ ವಿರುದ್ಧ ವಾಸ್ಕೋದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕಾರ್ಯಾಗಾರವನ್ನು ನಿಷೇಧಿತ ಪಾಪ್ಯುಲರ್ ಫ್ರಂಟ್‌ನೊಂದಿಗೆ ಸಂಬಂಧ ಹೊಂದಿರುವ ಸಂಘಟನೆಯು ಆಯೋಜಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಶಿಕ್ಷಣ ಇಲಾಖೆಯ ನಿರ್ದೇಶಕ ಶೈಲೇಶ್ ಜಿಂಗ್ಡೆ ಈ ಕುರಿತು ಮಾತನಾಡಿದ್ದು, ಆಲ್ಟೊ-ಡಬೋಲಿಮ್‌ನಲ್ಲಿರುವ ಕೇಶವ್ ಸ್ಮೃತಿ ಹೈಯರ್ ಸೆಕೆಂಡರಿ ಶಾಲೆಯ 11 ನೇ ತರಗತಿಯ ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದುಕೊಂಡು ಹೋಗಲಾಗಿದೆ. ಈ ಕುರಿತು ಇಲಾಖೆಯು ಶಾಲಾ ಆಡಳಿತ ಮಂಡಳಿಯಿಂದ ವಿವರಣೆ ಕೇಳಿದೆ. ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಶಾಲಾ ಮುಖ್ಯೋಪಾಧ್ಯಾಯ ಶಂಕರ್ ಗಾಂವ್ಕರ್ ಈ ಕುರಿತು ಮಾತನಾಡಿದ್ದು, ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ) ಆಹ್ವಾನದ ಮೇರೆಗೆ ಕೋಮು ಸೌಹಾರ್ದತೆಯನ್ನು ಉತ್ತೇಜಿಸಲು ದಾಬೋಲಿಮ್‌ನಲ್ಲಿರುವ ಮಸೀದಿಗೆ ಭೇಟಿ ನೀಡಲಾಗಿದೆ. ನಮ್ಮ ಶಾಲೆಯ ಮೂವರು ವಿದ್ಯಾರ್ಥಿನಿಯರು ಮತ್ತು ಶಿಕ್ಷಕಿ ಸೇರಿದಂತೆ ಒಟ್ಟು 21 ವಿದ್ಯಾರ್ಥಿಗಳನ್ನು ಮಸೀದಿಗೆ ಕರೆದೊಯ್ಯಲಾಗಿತ್ತು. ಮಸೀದಿಯಲ್ಲಿ ಪ್ರಾರ್ಥನೆಯನ್ನು ಎಲ್ಲಿ ನಡೆಸಲಾಗುತ್ತದೆ ಮತ್ತು ಪ್ರವೇಶ-ನಿರ್ಗಮನ ಪ್ರದೇಶಗಳನ್ನು ವಿದ್ಯಾರ್ಥಿಗಳಿಗೆ ತೋರಿಸಲಾಯಿತು. ಕೆಲವು ವಿದ್ಯಾರ್ಥಿಗಳು ಗೌರವಾರ್ಥವಾಗಿ ತಲೆ ಮುಚ್ಚಿಕೊಂಡಿರಬಹುದು. ವಿದ್ಯಾರ್ಥಿಗಳನ್ನು ಹಿಜಾಬ್ ಧರಿಸಲು ಅಥವಾ ಆಚರಣೆಗಳನ್ನು ಮಾಡಲು ಬಲವಂತಪಡಿಸಲಾಗಿದೆ ಎಂಬುವುದು ಸುಳ್ಳು ಎಂದು ಹೇಳಿದ್ದಾರೆ.

ಈ ಹಿಂದೆಯೂ ಕೂಡ ನಾವು ದೇವಾಲಯಗಳು, ಚರ್ಚ್‌ಗಳು ಮತ್ತು ಮಸೀದಿಗಳಿಗೆ ವಿದ್ಯಾರ್ಥಿಗಳ ಭೇಟಿಯನ್ನು ಆಯೋಜಿಸಿದ್ದೇವೆ. ಎಲ್ಲಾ ಧರ್ಮದ ಮಕ್ಕಳು ಶಾಲೆಯಲ್ಲಿ ಓದುತ್ತಾರೆ. ಬೇರೆ ಶಾಲೆಯ ಕೆಲವು ವಿದ್ಯಾರ್ಥಿಗಳು ಕೂಡ ಮಸೀದಿಗೆ ಭೇಟಿ ನೀಡಿದ್ದರು. ನನ್ನನ್ನು ಏಕೆ ಅಮಾನತುಗೊಳಿಸಲಾಗಿದೆ ಎಂದು ನನಗೆ ತಿಳಿದಿಲ್ಲ ಎಂದು ಗಾಂವ್ಕರ್ ಹೇಳಿದ್ದಾರೆ.

ಇದನ್ನು ಓದಿ; ಜಲ ಜೀವನ್ ಮಿಷನ್‌ ಹಗರಣ ಬಯಲಿಗೆಳೆದ ದಲಿತ ಐಎಎಸ್ ಅಧಿಕಾರಿಗೆ ಕಿರುಕುಳ: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...