Homeಮುಖಪುಟವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದೊಯ್ದ ಪ್ರಾಂಶುಪಾಲರ ವಿರುದ್ಧ ದೂರು ದಾಖಲು

ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದೊಯ್ದ ಪ್ರಾಂಶುಪಾಲರ ವಿರುದ್ಧ ದೂರು ದಾಖಲು

- Advertisement -
- Advertisement -

ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದೊಯ್ದ ಪ್ರಾಂಶುಪಾಲರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದ್ದು, ಇದೀಗ ಅವರನ್ನು ಅಮಾನತುಗೊಳಿಸಿದ ಘಟನೆ ದಕ್ಷಿಣ ಗೋವಾದಲ್ಲಿ ನಡೆದಿದೆ.

ಕೇಶವ್ ಸ್ಮೃತಿ ಹೈಯರ್ ಸೆಕೆಂಡರಿ ಶಾಲೆಯ 11ನೇ ತರಗತಿಯ ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದುಕೊಂಡು ಹೋಗಿದ್ದಕ್ಕೆ ಶಾಲಾ ಆಡಳಿತ ಮಂಡಳಿಯು ಪ್ರಾಂಶುಪಾಲರನ್ನು ಅಮಾನತುಗೊಳಿಸಿದೆ. ಈ ಕುರಿತು ರಾಜ್ಯ ಶಿಕ್ಷಣ ಇಲಾಖೆ ಕೂಡ ಶಾಲಾ ಆಡಳಿತ ಮಂಡಳಿಯಿಂದ ವಿವರಣೆ ಕೇಳಿದೆ.

ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು, ದೇಶವಿರೋಧಿ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರ ವಿರುದ್ಧ ವಾಸ್ಕೋದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕಾರ್ಯಾಗಾರವನ್ನು ನಿಷೇಧಿತ ಪಾಪ್ಯುಲರ್ ಫ್ರಂಟ್‌ನೊಂದಿಗೆ ಸಂಬಂಧ ಹೊಂದಿರುವ ಸಂಘಟನೆಯು ಆಯೋಜಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಶಿಕ್ಷಣ ಇಲಾಖೆಯ ನಿರ್ದೇಶಕ ಶೈಲೇಶ್ ಜಿಂಗ್ಡೆ ಈ ಕುರಿತು ಮಾತನಾಡಿದ್ದು, ಆಲ್ಟೊ-ಡಬೋಲಿಮ್‌ನಲ್ಲಿರುವ ಕೇಶವ್ ಸ್ಮೃತಿ ಹೈಯರ್ ಸೆಕೆಂಡರಿ ಶಾಲೆಯ 11 ನೇ ತರಗತಿಯ ವಿದ್ಯಾರ್ಥಿಗಳನ್ನು ಮಸೀದಿಗೆ ಕಾರ್ಯಾಗಾರಕ್ಕೆ ಕರೆದುಕೊಂಡು ಹೋಗಲಾಗಿದೆ. ಈ ಕುರಿತು ಇಲಾಖೆಯು ಶಾಲಾ ಆಡಳಿತ ಮಂಡಳಿಯಿಂದ ವಿವರಣೆ ಕೇಳಿದೆ. ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಶಾಲಾ ಮುಖ್ಯೋಪಾಧ್ಯಾಯ ಶಂಕರ್ ಗಾಂವ್ಕರ್ ಈ ಕುರಿತು ಮಾತನಾಡಿದ್ದು, ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ) ಆಹ್ವಾನದ ಮೇರೆಗೆ ಕೋಮು ಸೌಹಾರ್ದತೆಯನ್ನು ಉತ್ತೇಜಿಸಲು ದಾಬೋಲಿಮ್‌ನಲ್ಲಿರುವ ಮಸೀದಿಗೆ ಭೇಟಿ ನೀಡಲಾಗಿದೆ. ನಮ್ಮ ಶಾಲೆಯ ಮೂವರು ವಿದ್ಯಾರ್ಥಿನಿಯರು ಮತ್ತು ಶಿಕ್ಷಕಿ ಸೇರಿದಂತೆ ಒಟ್ಟು 21 ವಿದ್ಯಾರ್ಥಿಗಳನ್ನು ಮಸೀದಿಗೆ ಕರೆದೊಯ್ಯಲಾಗಿತ್ತು. ಮಸೀದಿಯಲ್ಲಿ ಪ್ರಾರ್ಥನೆಯನ್ನು ಎಲ್ಲಿ ನಡೆಸಲಾಗುತ್ತದೆ ಮತ್ತು ಪ್ರವೇಶ-ನಿರ್ಗಮನ ಪ್ರದೇಶಗಳನ್ನು ವಿದ್ಯಾರ್ಥಿಗಳಿಗೆ ತೋರಿಸಲಾಯಿತು. ಕೆಲವು ವಿದ್ಯಾರ್ಥಿಗಳು ಗೌರವಾರ್ಥವಾಗಿ ತಲೆ ಮುಚ್ಚಿಕೊಂಡಿರಬಹುದು. ವಿದ್ಯಾರ್ಥಿಗಳನ್ನು ಹಿಜಾಬ್ ಧರಿಸಲು ಅಥವಾ ಆಚರಣೆಗಳನ್ನು ಮಾಡಲು ಬಲವಂತಪಡಿಸಲಾಗಿದೆ ಎಂಬುವುದು ಸುಳ್ಳು ಎಂದು ಹೇಳಿದ್ದಾರೆ.

ಈ ಹಿಂದೆಯೂ ಕೂಡ ನಾವು ದೇವಾಲಯಗಳು, ಚರ್ಚ್‌ಗಳು ಮತ್ತು ಮಸೀದಿಗಳಿಗೆ ವಿದ್ಯಾರ್ಥಿಗಳ ಭೇಟಿಯನ್ನು ಆಯೋಜಿಸಿದ್ದೇವೆ. ಎಲ್ಲಾ ಧರ್ಮದ ಮಕ್ಕಳು ಶಾಲೆಯಲ್ಲಿ ಓದುತ್ತಾರೆ. ಬೇರೆ ಶಾಲೆಯ ಕೆಲವು ವಿದ್ಯಾರ್ಥಿಗಳು ಕೂಡ ಮಸೀದಿಗೆ ಭೇಟಿ ನೀಡಿದ್ದರು. ನನ್ನನ್ನು ಏಕೆ ಅಮಾನತುಗೊಳಿಸಲಾಗಿದೆ ಎಂದು ನನಗೆ ತಿಳಿದಿಲ್ಲ ಎಂದು ಗಾಂವ್ಕರ್ ಹೇಳಿದ್ದಾರೆ.

ಇದನ್ನು ಓದಿ; ಜಲ ಜೀವನ್ ಮಿಷನ್‌ ಹಗರಣ ಬಯಲಿಗೆಳೆದ ದಲಿತ ಐಎಎಸ್ ಅಧಿಕಾರಿಗೆ ಕಿರುಕುಳ: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...