Homeಮುಖಪುಟ8 ಮಂದಿ ಭಾರತೀಯರನ್ನು ಬಿಡುಗಡೆ ಮಾಡಿದ ಕತಾರ್‌ ಕೋರ್ಟ್‌

8 ಮಂದಿ ಭಾರತೀಯರನ್ನು ಬಿಡುಗಡೆ ಮಾಡಿದ ಕತಾರ್‌ ಕೋರ್ಟ್‌

- Advertisement -
- Advertisement -

ಕತಾರ್‌ನಲ್ಲಿ ಗೂಢಚರ್ಯೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳನ್ನು ಕತಾರ್ ನ್ಯಾಯಾಲಯವು ಬಿಡುಗಡೆ ಮಾಡಿದ್ದು, ಈ ಪೈಕಿ 7 ಮಂದಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಭಾರತೀಯ ನೌಕಾಪಡೆಯ ಮಾಜಿ ಸೈನಿಕರನ್ನು ಬಿಡುಗಡೆ ಮಾಡುವ ಕತಾರ್ ನ್ಯಾಯಾಲಯದ ನಿರ್ಧಾರವನ್ನು  ವಿದೇಶಾಂಗ ಸಚಿವಾಲಯವು ಸ್ವಾಗತಿಸಿದೆ. ಈ ಕುರಿತು ವಿದೇಶಾಂಗ ಸಚಿವಾಲಯವು ಅಧಿಕೃತ ಹೇಳಿಕೆಯನ್ನು ಹೊರಡಿಸಿದ್ದು, ಈ ಹಿಂದೆ ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಗಳನ್ನು ಬಿಡುಗಡೆ ಮಾಡುವ ಕತಾರ್ ನ್ಯಾಯಾಲಯದ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಎಂಟು ಮಂದಿಯಲ್ಲಿ 7 ಮಂದಿ ಭಾರತಕ್ಕೆ ಮರಳಿದ್ದಾರೆ. ಈ ಪ್ರಜೆಗಳ ಬಿಡುಗಡೆ ಮತ್ತು ಮನೆಗೆ ಕಳುಹಿಸಲು ಕ್ರಮವಹಿಸಿದ ಕತಾರ್ ರಾಜ್ಯದ ಅಮೀರ್ ಅವರ ನಿರ್ಧಾರವನ್ನು ನಾವು ಪ್ರಶಂಸಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಕತಾರ್‌ನಲ್ಲಿ ಸೆರೆಯಾಗಿದ್ದ ಒಟ್ಟು ಎಂಟು ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳ ಪೈಕಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ. ಕೊನೆಯದಾಗಿ ಬಿಡುಗಡೆಯಾದ ಯೋಧನನ್ನು ಮನೆಗೆ ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಕತಾರ್‌ನ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳಿಗೆ ತರಬೇತಿ ನೀಡುವ ಖಾಸಗಿ ಸಂಸ್ಥೆಯಾದ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ಗಾಗಿ ಕೆಲಸ ಮಾಡುತ್ತಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಕಳೆದ ವರ್ಷದ ಆಗಸ್ಟ್‌ನಲ್ಲಿ ಕತಾರ್‌ ಪೊಲೀಸರು ಬಂಧಿಸಿದ್ದರು.

ಬಂಧಿತರ ಮೇಲೆ ಬೇಹುಗಾರಿಕೆಯ ಆರೋಪವನ್ನು ಹೊರಿಸಲಾಗಿತ್ತು. ಈ 8 ಮಾಜಿ ಅಧಿಕಾರಿಗಳ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಗಿದೆ ಮತ್ತು ಅವರ ಬಂಧನವನ್ನು ಕತಾರ್ ಅಧಿಕಾರಿಗಳು ವಿಸ್ತರಿಸಿದ್ದರು. ಬಂಧಿತ ಭಾರತೀಯರಲ್ಲಿ ನಿವೃತ್ತ ಕಮಾಂಡರ್ ಪೂರ್ಣೇಂದು ತಿವಾರಿ ಅವರು ಅಲ್ ದಹ್ರಾ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಪ್ರಕರಣದಲ್ಲಿ 8 ಮಂದಿ ಅಧಿಕಾರಿಗಳಿಗೆ ಕತಾರ್‌ನ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿತ್ತು. ದಹ್ರಾ ಗ್ಲೋಬಲ್ ಪ್ರಕರಣವು 8 ಮಂದಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಆದೇಶದ ಬಳಿಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು.

ಆ ಬಳಿಕ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳ ಮರಣದಂಡನೆಯನ್ನು ಕತಾರ್‌ನ ಮೇಲ್ಮನವಿ ನ್ಯಾಯಾಲಯವು ಇಳಿಸಿದ್ದು, ಮರಣದಂಡನೆಯನ್ನು ಜೈಲು ಶಿಕ್ಷೆಗೆ ಪರಿವರ್ತಿಸಿತ್ತು.

ಇದನ್ನು ಓದಿ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕ್ಷಮಾಪಣೆ ಕೊಟ್ಟಿದ್ದಕ್ಕೆ ಹಂಗೇರಿ ಅಧ್ಯಕ್ಷೆ ರಾಜೀನಾಮೆ: ಭಾರತದಲ್ಲಿ ಹುಟ್ಟು ಹಾಕಿದ ಚರ್ಚೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...