Homeಮುಖಪುಟ8 ಮಂದಿ ಭಾರತೀಯರನ್ನು ಬಿಡುಗಡೆ ಮಾಡಿದ ಕತಾರ್‌ ಕೋರ್ಟ್‌

8 ಮಂದಿ ಭಾರತೀಯರನ್ನು ಬಿಡುಗಡೆ ಮಾಡಿದ ಕತಾರ್‌ ಕೋರ್ಟ್‌

- Advertisement -
- Advertisement -

ಕತಾರ್‌ನಲ್ಲಿ ಗೂಢಚರ್ಯೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳನ್ನು ಕತಾರ್ ನ್ಯಾಯಾಲಯವು ಬಿಡುಗಡೆ ಮಾಡಿದ್ದು, ಈ ಪೈಕಿ 7 ಮಂದಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಭಾರತೀಯ ನೌಕಾಪಡೆಯ ಮಾಜಿ ಸೈನಿಕರನ್ನು ಬಿಡುಗಡೆ ಮಾಡುವ ಕತಾರ್ ನ್ಯಾಯಾಲಯದ ನಿರ್ಧಾರವನ್ನು  ವಿದೇಶಾಂಗ ಸಚಿವಾಲಯವು ಸ್ವಾಗತಿಸಿದೆ. ಈ ಕುರಿತು ವಿದೇಶಾಂಗ ಸಚಿವಾಲಯವು ಅಧಿಕೃತ ಹೇಳಿಕೆಯನ್ನು ಹೊರಡಿಸಿದ್ದು, ಈ ಹಿಂದೆ ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಗಳನ್ನು ಬಿಡುಗಡೆ ಮಾಡುವ ಕತಾರ್ ನ್ಯಾಯಾಲಯದ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಎಂಟು ಮಂದಿಯಲ್ಲಿ 7 ಮಂದಿ ಭಾರತಕ್ಕೆ ಮರಳಿದ್ದಾರೆ. ಈ ಪ್ರಜೆಗಳ ಬಿಡುಗಡೆ ಮತ್ತು ಮನೆಗೆ ಕಳುಹಿಸಲು ಕ್ರಮವಹಿಸಿದ ಕತಾರ್ ರಾಜ್ಯದ ಅಮೀರ್ ಅವರ ನಿರ್ಧಾರವನ್ನು ನಾವು ಪ್ರಶಂಸಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಕತಾರ್‌ನಲ್ಲಿ ಸೆರೆಯಾಗಿದ್ದ ಒಟ್ಟು ಎಂಟು ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳ ಪೈಕಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ. ಕೊನೆಯದಾಗಿ ಬಿಡುಗಡೆಯಾದ ಯೋಧನನ್ನು ಮನೆಗೆ ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಕತಾರ್‌ನ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳಿಗೆ ತರಬೇತಿ ನೀಡುವ ಖಾಸಗಿ ಸಂಸ್ಥೆಯಾದ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ಗಾಗಿ ಕೆಲಸ ಮಾಡುತ್ತಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಕಳೆದ ವರ್ಷದ ಆಗಸ್ಟ್‌ನಲ್ಲಿ ಕತಾರ್‌ ಪೊಲೀಸರು ಬಂಧಿಸಿದ್ದರು.

ಬಂಧಿತರ ಮೇಲೆ ಬೇಹುಗಾರಿಕೆಯ ಆರೋಪವನ್ನು ಹೊರಿಸಲಾಗಿತ್ತು. ಈ 8 ಮಾಜಿ ಅಧಿಕಾರಿಗಳ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಗಿದೆ ಮತ್ತು ಅವರ ಬಂಧನವನ್ನು ಕತಾರ್ ಅಧಿಕಾರಿಗಳು ವಿಸ್ತರಿಸಿದ್ದರು. ಬಂಧಿತ ಭಾರತೀಯರಲ್ಲಿ ನಿವೃತ್ತ ಕಮಾಂಡರ್ ಪೂರ್ಣೇಂದು ತಿವಾರಿ ಅವರು ಅಲ್ ದಹ್ರಾ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಪ್ರಕರಣದಲ್ಲಿ 8 ಮಂದಿ ಅಧಿಕಾರಿಗಳಿಗೆ ಕತಾರ್‌ನ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿತ್ತು. ದಹ್ರಾ ಗ್ಲೋಬಲ್ ಪ್ರಕರಣವು 8 ಮಂದಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಆದೇಶದ ಬಳಿಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು.

ಆ ಬಳಿಕ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳ ಮರಣದಂಡನೆಯನ್ನು ಕತಾರ್‌ನ ಮೇಲ್ಮನವಿ ನ್ಯಾಯಾಲಯವು ಇಳಿಸಿದ್ದು, ಮರಣದಂಡನೆಯನ್ನು ಜೈಲು ಶಿಕ್ಷೆಗೆ ಪರಿವರ್ತಿಸಿತ್ತು.

ಇದನ್ನು ಓದಿ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕ್ಷಮಾಪಣೆ ಕೊಟ್ಟಿದ್ದಕ್ಕೆ ಹಂಗೇರಿ ಅಧ್ಯಕ್ಷೆ ರಾಜೀನಾಮೆ: ಭಾರತದಲ್ಲಿ ಹುಟ್ಟು ಹಾಕಿದ ಚರ್ಚೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...