Homeಮುಖಪುಟಅವಧಿ ಮುಗಿದರೂ ಕ್ವಾರಂಟೈನ್ ಮುಂದುವರಿಕೆ : ತುಮಕೂರು ವೈದ್ಯಾಧಿಕಾರಿ ವಿರುದ್ಧ ಆಕ್ರೋಶ

ಅವಧಿ ಮುಗಿದರೂ ಕ್ವಾರಂಟೈನ್ ಮುಂದುವರಿಕೆ : ತುಮಕೂರು ವೈದ್ಯಾಧಿಕಾರಿ ವಿರುದ್ಧ ಆಕ್ರೋಶ

- Advertisement -
- Advertisement -

ತುಮಕೂರಿನ ನಗರದ ಹಾಸ್ಟೆಲ್‌ವೊಂದರಲ್ಲಿ ಕ್ವಾರಂಟೈನ್‌ನಲ್ಲಿಟ್ಟು ನಿಗದಿತ ಸಮಯ ಕಳೆದು ಮೂರು ದಿನವಾದರೂ ಬಿಡುಗಡೆಗೊಳಿಸದೆ ಅನಗತ್ಯವಾಗಿ ವಿಳಂಬ ಮಾಡುತ್ತಿದ್ದು, ಈ ಮೂಲಕ ಕ್ವಾರಂಟೈನ್ ನಲ್ಲಿರುವ ಒಂದು ಸಮುದಾಯದವರಿಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.

ನಾಗವಲ್ಲಿಯಲ್ಲಿ ಏಪ್ರಿಲ್ 30ರಂದು ಮೃತದೇಹದ ದಫನ್ ಕ್ರಿಯೆಯಲ್ಲಿ ಭಾಗವಹಿಸಿದ್ದರೆಂದು ಹೇಳಲಾದ 56 ಜನರನ್ನು ಕರೆತಂದು ನಗರದ ಬಿಎಚ್ ರಸ್ತೆಯಲ್ಲಿರುವ ಹಾಸ್ಟೆಲ್ ನಲ್ಲಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಎಲ್ಲರ ರಕ್ತ ಮತ್ತು ಗಂಟಲು ದ್ರವ ತೆಗೆದುಕೊಂಡು ಪರೀಕ್ಷೆಗೆ ಕಳಿಸಿ ನೆಗೆಟಿವ್ ವರದಿ ಬಂದಿದ್ದರೂ ಅವರನ್ನು ಮನೆಗಳಿಗೆ ಕಳುಹಿಸದೇ ಅನುಮತಿ ನೀಡುತ್ತಿಲ್ಲ ಎಂದು ದೂರಲಾಗಿದೆ.

ಹಾಸ್ಟೆಲ್ ಉಸ್ತುವಾರಿಗೆ ನಿಯೋಜಿಸಿರುವ ವೈದ್ಯಾಧಿಕಾರಿ ರಕ್ಷಿತ್ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುತ್ತಿಲ್ಲ. ಕ್ವಾರಂಟೈನ್ ನಲ್ಲಿರುವವರೊಂದಿಗೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದು, ಬೇಕೆಂದೇ ಮಾಹಿತಿ ನೀಡದೆ  ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ನಿಯಮ ಪ್ರಕಾರ 10 ದಿನ ಕ್ವಾರಂಟೈನ್ ನಲ್ಲಿ ಇರಿಸಿಕೊಳ್ಳಬೇಕು. ಆದರೆ 17 ದಿನಗಳು ಕಳೆದರೂ ಅವರನ್ನು ಬಿಡುಗಡೆ ಮಾಡಿಲ್ಲ. 56 ಮಂದಿಯಲ್ಲಿ 22 ಮಂದಿ ಮಹಿಳೆಯರು, 29 ಮಂದಿ ಪುರುಷರು, 10 ತಿಂಗಳ ಮಗುವೊಂದಿದ್ದು ಅವರೆಲ್ಲರ  ಕ್ವಾರಂಟೈನ್ ಅವಧಿ ಮುಗಿದಿದೆ. ಆದರೂ ವೈದ್ಯಾಧಿಕಾರಿ ನಮ್ಮನ್ನು ಮನೆಗೆ ಕಳುಹಿಸದೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ. ನಮ್ಮ ಕುಟುಂಬಗಳ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ದೂರಲಾಗಿದೆ.

ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಷರೀಫ್ ಮಾತನಾಡಿ, ವೈದ್ಯಾಧಿಕಾರಿ ರಕ್ಷಿತ್ ಬೇಕೆಂದೇ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ. ನಮ್ಮ ಕೈಗೆ ಸಿಗದಂತೆ ಓಡಾಡುತ್ತಿದ್ದಾರೆ. ಮೊಬೈಲ್ ಕರೆ ಮಾಡಿದರೂ ತೆಗೆದುಕೊಳ್ಳುತ್ತಿಲ್ಲ. ಕ್ವಾರಂಟೈನ್‌ನಲ್ಲಿರುವವರನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳನ್ನು ಕೇಳಿದರೆ ವೈದ್ಯರ ಮೇಲೆ ಹೇಳುತ್ತಾರೆ. ಇಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಟೀಕಿಸಿದರು.

ಕೆಬಿಎಚ್ ಕಾಲೋನಿಯ ವೃದ್ದರೊಬ್ಬರು ನಿಧನರಾಗಿದ್ದರು. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಮಾಡಿದ ಎಡವಟ್ಟಿನಿಂದ ಮೃತದೇಹವನ್ನು ನಾಗವಲ್ಲಿ ಸಮೀಪ ದಫನ್ ಮಾಡಲಾಗಿತ್ತು. ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರೆಂದು ಶಂಕಿಸಿ 56 ಮಂದಿಯನ್ನು ನಗರಕ್ಕೆ ತಂದು ಹಾಸ್ಟೆಲ್ ನಲ್ಲಿ ಇರಿಸಿದ್ದಾರೆ. 17 ದಿನ ಕಳೆದರೂ ಅವರನ್ನು ಬಿಡುಗಡೆ ಮಾಡಿಲ್ಲ. ಜಿಲ್ಲಾಡಳಿತವೂ ಈ ಬಗ್ಗೆ ಮೌನ ವಹಿಸಿದೆ. ಅವರನ್ನು ಬಿಡುಗಡೆ ಮಾಡದೆ ಇರಲು ಕಾರಣವೇನು? ಎರಡು ಬಾರಿಯ ವರದಿಯಲ್ಲೂ ನೆಗೆಟೀವ್ ಬಂದಿದ್ದರೂ ಇನ್ನೂ ಇಟ್ಟುಕೊಂಡಿರುವುದರ ಉದ್ದೇಶವೇನು ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಈ ಕುರಿತು ಪ್ರತಿಕ್ರಿಯೆಗಾಗಿ ವೈದ್ಯಾಧಿಕಾರಿ ರಕ್ಷಿತ್‌ರವರನ್ನು ಸಂಪರ್ಕಿಸಲಾಯಿತು. ಅವರು “ವೈದ್ಯಾಧಿಕಾರಿ ರಕ್ಷಿತ್ ಮಾತನಾಡಿ ವರದಿ ನೆಗೆಟೀವ್ ಬಂದಿದೆ. ತಹಶೀಲ್ದಾರ್ ಮತ್ತು ಎಸಿ ಕ್ವಾರಂಟೈನ್ ನಲ್ಲಿರುವವರನ್ನು ಬಿಡುಗಡೆ ಮಾಡುವಂತೆ ನಮಗೆ ಪತ್ರ ಕೊಟ್ಟ ಕೂಡಲೇ ಬಿಡುಗಡೆ ಮಾಡುತ್ತೇವೆ. ಪತ್ರಕ್ಕಾಗಿ ಎದುರು ನೋಡುತ್ತಿದ್ದೇವೆ. ವಾಹನಗಳನ್ನು ವ್ಯವಸ್ಥೆ ಮಾಡಿದ್ದೇವೆ” ಎಂದು ಸ್ಪಷ್ಟೀಕರಣ ನೀಡಿದರು


ಇದನ್ನೂ ಓದಿ: ಮಣಿವಣ್ಣನ್ ಔಟ್, ಎಂ.ಎಂ.ರಾವ್ ಇನ್ : ಕೊರೊನ ಕಾಲದಲ್ಲಿ ಮುಸುಕಿನ ರಾಜಕೀಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...