Homeಮುಖಪುಟಕ್ವಾರಂಟೈನ್‌ ಸಮಯದಲ್ಲಿ ಈ ವಲಸೆ ಕಾರ್ಮಿಕರು ಮಾಡಿದ ಜನ ಮೆಚ್ಚುವ ಕೆಲಸ ಯಾವುದೇ ಗೊತ್ತೆ?

ಕ್ವಾರಂಟೈನ್‌ ಸಮಯದಲ್ಲಿ ಈ ವಲಸೆ ಕಾರ್ಮಿಕರು ಮಾಡಿದ ಜನ ಮೆಚ್ಚುವ ಕೆಲಸ ಯಾವುದೇ ಗೊತ್ತೆ?

ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ದೇಶದ ಇತರ ಸ್ಥಳಗಳಿಂದ ವಲಸೆ ಬಂದ ಕಾರ್ಮಿಕರು ಆ ಶಾಲೆಯಲ್ಲಿ ಉಳಿದುಕೊಂಡಿದ್ದರು. ಗ್ರಾಮಸ್ಥರು ನೀಡಿದ ಸೇವೆಯಿಂದ ತುಂಬಾ ಸಂತೋಷಗೊಂಡಿದ್ದ ಅವರು ಶಾಲೆಯನ್ನು ಚೆನ್ನಾಗಿ ಮಾಡುವು ಮೂಲಕ ಮಾದರಿಯಾಗಿದ್ದಾರೆ.

- Advertisement -
- Advertisement -

ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಿ ಹತ್ತಿರ ಹತ್ತಿರ ಒಂದು ತಿಂಗಳಾಗುತ್ತಿದೆ. ಮನೆಯಲ್ಲಿರಲಾರದೇ ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ರಾಜ್ಯದಲ್ಲಿ 71,000 ಪ್ರಕರಣಗಳು ದಾಖಲಾಗಿವೆ ಎಂಬ ವರದಿಗಳು ಬರುತ್ತಿವೆ. ಇಂತಹ ಸಮಯದಲ್ಲಿ ಶಾಲೆಯೊಂದರಲ್ಲಿ ಕ್ವಾರಂಟೈನ್‌‌ಗೆ ಒಳಗಾಗಿದ್ದ ಹತ್ತಾರು ವಲಸೆ ಕಾರ್ಮಿಕರು ಸೇರಿ ಆ ಶಾಲೆಗೆ ಸುಣ್ಣ ಬಣ್ಣ ಬಳಿದು ಮಿಂಚುವಂತೆ ಮಾಡಿದ್ದಾರೆ. ಆ ಮೂಲಕ ಅವರು ದೇಶದ ಗಮನಸೆಳೆದಿದ್ದಾರೆ.

ರಾಜಸ್ಥಾನದ ಸಿಕಾರ್‌ ಎಂಬ ಗ್ರಾಮದಲ್ಲಿ ಹತ್ತಾರು ವಲಸೆ ಕಾರ್ಮಿಕರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಆ ಕಾರ್ಮಿಕರನ್ನು ಆ ಊರಿನ ಜನ ಉತ್ತಮ ಊಟ ಬಟ್ಟೆ ನೀಡಿ ಪ್ರೀತಿಯಿಂದ ನೋಡಿಕೊಂಡಿದ್ದರು. ಪ್ರತಿದಿನವೂ ಕೆಲಸ ಮಾಡುತ್ತಾ ಕ್ರಿಯಾಶೀಲರಾಗಿದ್ದ ಅಲ್ಲಿನ ಕಾರ್ಮಿಕರಿಗೆ ಸುಮ್ಮನೆ ಕೂರುವುದಕ್ಕಿಂತ ಇದ್ದಲ್ಲೇ ಏನಾದರೂ ಮಾಡುವ ಆಸೆಯಾಯಿತು. ಶಾಲೆಗೆ ಬಣ್ಣ ಬಳಿದು ಬಹಳ ದಿನಗಳಾಗಿದ್ದನ್ನು ಗಮನಿಸಿದ ಅವರು ಗ್ರಾಮದ ಸರಪಂಚರಲ್ಲಿ ನೀವು ಬಣ್ಣ ಕೊಡಿಸುವುದಾದರೆ ಶಾಲೆಗೆ ಬಣ್ಣ ಬಳಿಯುತ್ತೇವೆ ಎಂದು ಮನವಿ ಮಾಡಿದ್ದರು.

ಇದಕ್ಕೆ ಸರಪಂಚರು ಒಪ್ಪಿ ಬಣ್ಣ ಕೊಡಿಸಿದ್ದೆ ತಡ ಎಲ್ಲಾ ಕಾರ್ಮಿಕರು ಸೇರಿ ಶಾಲೆಗೆ ಬಣ್ಣ ಹೊಡೆದು ನಳನಳಿಸುವಂತೆ ಮಾಡಿದ್ದಾರೆ. ಆ ಮೂಲಕ ಊರಿನವರು ತಮ್ಮನ್ನು ನೋಡಿಕೊಂಡ ಋಣ ತೀರಿಸಿದ ಭಾವನೆ ಅವರಲ್ಲಿದೆ.

ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ದೇಶದ ಇತರ ಸ್ಥಳಗಳಿಂದ ವಲಸೆ ಬಂದ ಕಾರ್ಮಿಕರು ಆ ಶಾಲೆಯಲ್ಲಿ ಉಳಿದುಕೊಂಡಿದ್ದರು. ಗ್ರಾಮಸ್ಥರು ನೀಡಿದ ಸೇವೆಯಿಂದ ತುಂಬಾ ಸಂತೋಷಗೊಂಡಿದ್ದ ಅವರು ಶಾಲೆಯನ್ನು ಚೆನ್ನಾಗಿ ಮಾಡುವು ಮೂಲಕ ಮಾದರಿಯಾಗಿದ್ದಾರೆ.

ಶಾಲೆಯ ಹೊರಾಂಗಣವನ್ನು ಎಲ್ಲರೂ ಸೇರಿ ಸ್ವಚ್ಛಗೊಳಿಸಿದ್ದಲ್ಲದೇ ಶಾಲೆಯ ಗೋಡೆಗಳ ಮೇಲೆ ಚಿತ್ರಬಿಡಿಸಲು ಸಹ ಮುಂದಾಗಿದ್ದಾರೆ ಎಂದು ಹಲವು ಹಿಂದಿ ಪತ್ರಿಕೆಗಳು ವರದಿ ಮಾಡಿವೆ.

ಕಳೆದ ಒಂಬತ್ತು ವರ್ಷಗಳಿಂದ ಶಾಲೆಗೆ ಬಣ್ಣ ಬಳಿದಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರ್ಮಿಕರ ಕೆಲಸಕ್ಕೆ ಸರಪಂಚರು ವೇತನ ನೀಡಲು ಮುಂದಾದಾದ ಆ ವಲಸೆ ಕಾರ್ಮಿಕರು ಯಾವುದೇ ಹಣವನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಕ್ವಾರಂಟೈನ್‌ ಸಮಯದಲ್ಲಿ ಗ್ರಾಮಸ್ಥರು ತಮ್ಮನ್ನು ಚೆನ್ನಾಗಿ ನೋಡಿಕೊಂಡಿದ್ದರಿಂದ ಇದು ನಮ್ಮ ಪ್ರತಿ ಕೊಡುಗೆಯಾಗಿದ್ದು ನಮಗೆ ಯಾವುದೇ ಹಣ ಬೇಡ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಈ ಮಾದರಿ ನಡೆಯಿಂದಾಗಿ ಆ ವಲಸೆ ಕಾರ್ಮಿಕರು ಮತ್ತು ಸಿಕಾರ್ ಗ್ರಾಮಸ್ಥರು ಭಾರೀ ಪ್ರಶಂಸೆಗೆ ಒಳಗಾಗಿದ್ದಾರೆ. ಊರಿನ ಶಾಲೆಯನ್ನು ಎಲ್ಲರೂ ಸೇರಿ ಉತ್ತಮ ಪಡಿಸಿದ ಸಾರ್ಥಕ ಮನೋಭಾವ ಅವರದಾಗಿದೆ. ಇತ್ತ ವಲಸೆ ಕಾರ್ಮಿಕರ ಕ್ವಾರಂಟೈನ್‌ ಅವಧಿ ಸಹ ಮುಗಿದಿದ್ದು ಅವರು ಒಳ್ಳೆಯ ಕೆಲಸ ಮಾಡಿದ ಭಾವದಲ್ಲಿದ್ದಾರೆ. ಆ ಮೂಲಕ ಇದೊಂದು ಸಣ್ಣ ಕೆಲಸವಾದರೂ ಸಹ ಈ ಊರು ದೇಶಕ್ಕೆ ಒಂದು ಸೌಹಾರ್ದಯುತ ಉದಾಹರಣೆಯಾಗಿದೆ.


ಇದನ್ನೂ ಓದಿ: ಮೂರು ಆಸ್ಪತ್ರೆ ಅಲೆದರು. ಕೊನೆಗೆ ಬೆಡ್ ಸಿಕ್ಕಿತ್ತು. ಆದರೆ ತುಂಬಾ ತಡವಾಗಿತ್ತು: ನ್ಯೂಯಾರ್ಕ್‌‌ನ ಮನಮಿಡಿಯುವ ಘಟನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...