Homeಮುಖಪುಟಕ್ವಾರಂಟೈನ್‌ ಸಮಯದಲ್ಲಿ ಈ ವಲಸೆ ಕಾರ್ಮಿಕರು ಮಾಡಿದ ಜನ ಮೆಚ್ಚುವ ಕೆಲಸ ಯಾವುದೇ ಗೊತ್ತೆ?

ಕ್ವಾರಂಟೈನ್‌ ಸಮಯದಲ್ಲಿ ಈ ವಲಸೆ ಕಾರ್ಮಿಕರು ಮಾಡಿದ ಜನ ಮೆಚ್ಚುವ ಕೆಲಸ ಯಾವುದೇ ಗೊತ್ತೆ?

ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ದೇಶದ ಇತರ ಸ್ಥಳಗಳಿಂದ ವಲಸೆ ಬಂದ ಕಾರ್ಮಿಕರು ಆ ಶಾಲೆಯಲ್ಲಿ ಉಳಿದುಕೊಂಡಿದ್ದರು. ಗ್ರಾಮಸ್ಥರು ನೀಡಿದ ಸೇವೆಯಿಂದ ತುಂಬಾ ಸಂತೋಷಗೊಂಡಿದ್ದ ಅವರು ಶಾಲೆಯನ್ನು ಚೆನ್ನಾಗಿ ಮಾಡುವು ಮೂಲಕ ಮಾದರಿಯಾಗಿದ್ದಾರೆ.

- Advertisement -
- Advertisement -

ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಿ ಹತ್ತಿರ ಹತ್ತಿರ ಒಂದು ತಿಂಗಳಾಗುತ್ತಿದೆ. ಮನೆಯಲ್ಲಿರಲಾರದೇ ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ರಾಜ್ಯದಲ್ಲಿ 71,000 ಪ್ರಕರಣಗಳು ದಾಖಲಾಗಿವೆ ಎಂಬ ವರದಿಗಳು ಬರುತ್ತಿವೆ. ಇಂತಹ ಸಮಯದಲ್ಲಿ ಶಾಲೆಯೊಂದರಲ್ಲಿ ಕ್ವಾರಂಟೈನ್‌‌ಗೆ ಒಳಗಾಗಿದ್ದ ಹತ್ತಾರು ವಲಸೆ ಕಾರ್ಮಿಕರು ಸೇರಿ ಆ ಶಾಲೆಗೆ ಸುಣ್ಣ ಬಣ್ಣ ಬಳಿದು ಮಿಂಚುವಂತೆ ಮಾಡಿದ್ದಾರೆ. ಆ ಮೂಲಕ ಅವರು ದೇಶದ ಗಮನಸೆಳೆದಿದ್ದಾರೆ.

ರಾಜಸ್ಥಾನದ ಸಿಕಾರ್‌ ಎಂಬ ಗ್ರಾಮದಲ್ಲಿ ಹತ್ತಾರು ವಲಸೆ ಕಾರ್ಮಿಕರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಆ ಕಾರ್ಮಿಕರನ್ನು ಆ ಊರಿನ ಜನ ಉತ್ತಮ ಊಟ ಬಟ್ಟೆ ನೀಡಿ ಪ್ರೀತಿಯಿಂದ ನೋಡಿಕೊಂಡಿದ್ದರು. ಪ್ರತಿದಿನವೂ ಕೆಲಸ ಮಾಡುತ್ತಾ ಕ್ರಿಯಾಶೀಲರಾಗಿದ್ದ ಅಲ್ಲಿನ ಕಾರ್ಮಿಕರಿಗೆ ಸುಮ್ಮನೆ ಕೂರುವುದಕ್ಕಿಂತ ಇದ್ದಲ್ಲೇ ಏನಾದರೂ ಮಾಡುವ ಆಸೆಯಾಯಿತು. ಶಾಲೆಗೆ ಬಣ್ಣ ಬಳಿದು ಬಹಳ ದಿನಗಳಾಗಿದ್ದನ್ನು ಗಮನಿಸಿದ ಅವರು ಗ್ರಾಮದ ಸರಪಂಚರಲ್ಲಿ ನೀವು ಬಣ್ಣ ಕೊಡಿಸುವುದಾದರೆ ಶಾಲೆಗೆ ಬಣ್ಣ ಬಳಿಯುತ್ತೇವೆ ಎಂದು ಮನವಿ ಮಾಡಿದ್ದರು.

ಇದಕ್ಕೆ ಸರಪಂಚರು ಒಪ್ಪಿ ಬಣ್ಣ ಕೊಡಿಸಿದ್ದೆ ತಡ ಎಲ್ಲಾ ಕಾರ್ಮಿಕರು ಸೇರಿ ಶಾಲೆಗೆ ಬಣ್ಣ ಹೊಡೆದು ನಳನಳಿಸುವಂತೆ ಮಾಡಿದ್ದಾರೆ. ಆ ಮೂಲಕ ಊರಿನವರು ತಮ್ಮನ್ನು ನೋಡಿಕೊಂಡ ಋಣ ತೀರಿಸಿದ ಭಾವನೆ ಅವರಲ್ಲಿದೆ.

ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ದೇಶದ ಇತರ ಸ್ಥಳಗಳಿಂದ ವಲಸೆ ಬಂದ ಕಾರ್ಮಿಕರು ಆ ಶಾಲೆಯಲ್ಲಿ ಉಳಿದುಕೊಂಡಿದ್ದರು. ಗ್ರಾಮಸ್ಥರು ನೀಡಿದ ಸೇವೆಯಿಂದ ತುಂಬಾ ಸಂತೋಷಗೊಂಡಿದ್ದ ಅವರು ಶಾಲೆಯನ್ನು ಚೆನ್ನಾಗಿ ಮಾಡುವು ಮೂಲಕ ಮಾದರಿಯಾಗಿದ್ದಾರೆ.

ಶಾಲೆಯ ಹೊರಾಂಗಣವನ್ನು ಎಲ್ಲರೂ ಸೇರಿ ಸ್ವಚ್ಛಗೊಳಿಸಿದ್ದಲ್ಲದೇ ಶಾಲೆಯ ಗೋಡೆಗಳ ಮೇಲೆ ಚಿತ್ರಬಿಡಿಸಲು ಸಹ ಮುಂದಾಗಿದ್ದಾರೆ ಎಂದು ಹಲವು ಹಿಂದಿ ಪತ್ರಿಕೆಗಳು ವರದಿ ಮಾಡಿವೆ.

ಕಳೆದ ಒಂಬತ್ತು ವರ್ಷಗಳಿಂದ ಶಾಲೆಗೆ ಬಣ್ಣ ಬಳಿದಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರ್ಮಿಕರ ಕೆಲಸಕ್ಕೆ ಸರಪಂಚರು ವೇತನ ನೀಡಲು ಮುಂದಾದಾದ ಆ ವಲಸೆ ಕಾರ್ಮಿಕರು ಯಾವುದೇ ಹಣವನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಕ್ವಾರಂಟೈನ್‌ ಸಮಯದಲ್ಲಿ ಗ್ರಾಮಸ್ಥರು ತಮ್ಮನ್ನು ಚೆನ್ನಾಗಿ ನೋಡಿಕೊಂಡಿದ್ದರಿಂದ ಇದು ನಮ್ಮ ಪ್ರತಿ ಕೊಡುಗೆಯಾಗಿದ್ದು ನಮಗೆ ಯಾವುದೇ ಹಣ ಬೇಡ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಈ ಮಾದರಿ ನಡೆಯಿಂದಾಗಿ ಆ ವಲಸೆ ಕಾರ್ಮಿಕರು ಮತ್ತು ಸಿಕಾರ್ ಗ್ರಾಮಸ್ಥರು ಭಾರೀ ಪ್ರಶಂಸೆಗೆ ಒಳಗಾಗಿದ್ದಾರೆ. ಊರಿನ ಶಾಲೆಯನ್ನು ಎಲ್ಲರೂ ಸೇರಿ ಉತ್ತಮ ಪಡಿಸಿದ ಸಾರ್ಥಕ ಮನೋಭಾವ ಅವರದಾಗಿದೆ. ಇತ್ತ ವಲಸೆ ಕಾರ್ಮಿಕರ ಕ್ವಾರಂಟೈನ್‌ ಅವಧಿ ಸಹ ಮುಗಿದಿದ್ದು ಅವರು ಒಳ್ಳೆಯ ಕೆಲಸ ಮಾಡಿದ ಭಾವದಲ್ಲಿದ್ದಾರೆ. ಆ ಮೂಲಕ ಇದೊಂದು ಸಣ್ಣ ಕೆಲಸವಾದರೂ ಸಹ ಈ ಊರು ದೇಶಕ್ಕೆ ಒಂದು ಸೌಹಾರ್ದಯುತ ಉದಾಹರಣೆಯಾಗಿದೆ.


ಇದನ್ನೂ ಓದಿ: ಮೂರು ಆಸ್ಪತ್ರೆ ಅಲೆದರು. ಕೊನೆಗೆ ಬೆಡ್ ಸಿಕ್ಕಿತ್ತು. ಆದರೆ ತುಂಬಾ ತಡವಾಗಿತ್ತು: ನ್ಯೂಯಾರ್ಕ್‌‌ನ ಮನಮಿಡಿಯುವ ಘಟನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...