Homeಮುಖಪುಟಕ್ವಾರಂಟೈನ್‌ ಸಮಯದಲ್ಲಿ ಈ ವಲಸೆ ಕಾರ್ಮಿಕರು ಮಾಡಿದ ಜನ ಮೆಚ್ಚುವ ಕೆಲಸ ಯಾವುದೇ ಗೊತ್ತೆ?

ಕ್ವಾರಂಟೈನ್‌ ಸಮಯದಲ್ಲಿ ಈ ವಲಸೆ ಕಾರ್ಮಿಕರು ಮಾಡಿದ ಜನ ಮೆಚ್ಚುವ ಕೆಲಸ ಯಾವುದೇ ಗೊತ್ತೆ?

ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ದೇಶದ ಇತರ ಸ್ಥಳಗಳಿಂದ ವಲಸೆ ಬಂದ ಕಾರ್ಮಿಕರು ಆ ಶಾಲೆಯಲ್ಲಿ ಉಳಿದುಕೊಂಡಿದ್ದರು. ಗ್ರಾಮಸ್ಥರು ನೀಡಿದ ಸೇವೆಯಿಂದ ತುಂಬಾ ಸಂತೋಷಗೊಂಡಿದ್ದ ಅವರು ಶಾಲೆಯನ್ನು ಚೆನ್ನಾಗಿ ಮಾಡುವು ಮೂಲಕ ಮಾದರಿಯಾಗಿದ್ದಾರೆ.

- Advertisement -
- Advertisement -

ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಿ ಹತ್ತಿರ ಹತ್ತಿರ ಒಂದು ತಿಂಗಳಾಗುತ್ತಿದೆ. ಮನೆಯಲ್ಲಿರಲಾರದೇ ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ರಾಜ್ಯದಲ್ಲಿ 71,000 ಪ್ರಕರಣಗಳು ದಾಖಲಾಗಿವೆ ಎಂಬ ವರದಿಗಳು ಬರುತ್ತಿವೆ. ಇಂತಹ ಸಮಯದಲ್ಲಿ ಶಾಲೆಯೊಂದರಲ್ಲಿ ಕ್ವಾರಂಟೈನ್‌‌ಗೆ ಒಳಗಾಗಿದ್ದ ಹತ್ತಾರು ವಲಸೆ ಕಾರ್ಮಿಕರು ಸೇರಿ ಆ ಶಾಲೆಗೆ ಸುಣ್ಣ ಬಣ್ಣ ಬಳಿದು ಮಿಂಚುವಂತೆ ಮಾಡಿದ್ದಾರೆ. ಆ ಮೂಲಕ ಅವರು ದೇಶದ ಗಮನಸೆಳೆದಿದ್ದಾರೆ.

ರಾಜಸ್ಥಾನದ ಸಿಕಾರ್‌ ಎಂಬ ಗ್ರಾಮದಲ್ಲಿ ಹತ್ತಾರು ವಲಸೆ ಕಾರ್ಮಿಕರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಆ ಕಾರ್ಮಿಕರನ್ನು ಆ ಊರಿನ ಜನ ಉತ್ತಮ ಊಟ ಬಟ್ಟೆ ನೀಡಿ ಪ್ರೀತಿಯಿಂದ ನೋಡಿಕೊಂಡಿದ್ದರು. ಪ್ರತಿದಿನವೂ ಕೆಲಸ ಮಾಡುತ್ತಾ ಕ್ರಿಯಾಶೀಲರಾಗಿದ್ದ ಅಲ್ಲಿನ ಕಾರ್ಮಿಕರಿಗೆ ಸುಮ್ಮನೆ ಕೂರುವುದಕ್ಕಿಂತ ಇದ್ದಲ್ಲೇ ಏನಾದರೂ ಮಾಡುವ ಆಸೆಯಾಯಿತು. ಶಾಲೆಗೆ ಬಣ್ಣ ಬಳಿದು ಬಹಳ ದಿನಗಳಾಗಿದ್ದನ್ನು ಗಮನಿಸಿದ ಅವರು ಗ್ರಾಮದ ಸರಪಂಚರಲ್ಲಿ ನೀವು ಬಣ್ಣ ಕೊಡಿಸುವುದಾದರೆ ಶಾಲೆಗೆ ಬಣ್ಣ ಬಳಿಯುತ್ತೇವೆ ಎಂದು ಮನವಿ ಮಾಡಿದ್ದರು.

ಇದಕ್ಕೆ ಸರಪಂಚರು ಒಪ್ಪಿ ಬಣ್ಣ ಕೊಡಿಸಿದ್ದೆ ತಡ ಎಲ್ಲಾ ಕಾರ್ಮಿಕರು ಸೇರಿ ಶಾಲೆಗೆ ಬಣ್ಣ ಹೊಡೆದು ನಳನಳಿಸುವಂತೆ ಮಾಡಿದ್ದಾರೆ. ಆ ಮೂಲಕ ಊರಿನವರು ತಮ್ಮನ್ನು ನೋಡಿಕೊಂಡ ಋಣ ತೀರಿಸಿದ ಭಾವನೆ ಅವರಲ್ಲಿದೆ.

ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ದೇಶದ ಇತರ ಸ್ಥಳಗಳಿಂದ ವಲಸೆ ಬಂದ ಕಾರ್ಮಿಕರು ಆ ಶಾಲೆಯಲ್ಲಿ ಉಳಿದುಕೊಂಡಿದ್ದರು. ಗ್ರಾಮಸ್ಥರು ನೀಡಿದ ಸೇವೆಯಿಂದ ತುಂಬಾ ಸಂತೋಷಗೊಂಡಿದ್ದ ಅವರು ಶಾಲೆಯನ್ನು ಚೆನ್ನಾಗಿ ಮಾಡುವು ಮೂಲಕ ಮಾದರಿಯಾಗಿದ್ದಾರೆ.

ಶಾಲೆಯ ಹೊರಾಂಗಣವನ್ನು ಎಲ್ಲರೂ ಸೇರಿ ಸ್ವಚ್ಛಗೊಳಿಸಿದ್ದಲ್ಲದೇ ಶಾಲೆಯ ಗೋಡೆಗಳ ಮೇಲೆ ಚಿತ್ರಬಿಡಿಸಲು ಸಹ ಮುಂದಾಗಿದ್ದಾರೆ ಎಂದು ಹಲವು ಹಿಂದಿ ಪತ್ರಿಕೆಗಳು ವರದಿ ಮಾಡಿವೆ.

ಕಳೆದ ಒಂಬತ್ತು ವರ್ಷಗಳಿಂದ ಶಾಲೆಗೆ ಬಣ್ಣ ಬಳಿದಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರ್ಮಿಕರ ಕೆಲಸಕ್ಕೆ ಸರಪಂಚರು ವೇತನ ನೀಡಲು ಮುಂದಾದಾದ ಆ ವಲಸೆ ಕಾರ್ಮಿಕರು ಯಾವುದೇ ಹಣವನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಕ್ವಾರಂಟೈನ್‌ ಸಮಯದಲ್ಲಿ ಗ್ರಾಮಸ್ಥರು ತಮ್ಮನ್ನು ಚೆನ್ನಾಗಿ ನೋಡಿಕೊಂಡಿದ್ದರಿಂದ ಇದು ನಮ್ಮ ಪ್ರತಿ ಕೊಡುಗೆಯಾಗಿದ್ದು ನಮಗೆ ಯಾವುದೇ ಹಣ ಬೇಡ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಈ ಮಾದರಿ ನಡೆಯಿಂದಾಗಿ ಆ ವಲಸೆ ಕಾರ್ಮಿಕರು ಮತ್ತು ಸಿಕಾರ್ ಗ್ರಾಮಸ್ಥರು ಭಾರೀ ಪ್ರಶಂಸೆಗೆ ಒಳಗಾಗಿದ್ದಾರೆ. ಊರಿನ ಶಾಲೆಯನ್ನು ಎಲ್ಲರೂ ಸೇರಿ ಉತ್ತಮ ಪಡಿಸಿದ ಸಾರ್ಥಕ ಮನೋಭಾವ ಅವರದಾಗಿದೆ. ಇತ್ತ ವಲಸೆ ಕಾರ್ಮಿಕರ ಕ್ವಾರಂಟೈನ್‌ ಅವಧಿ ಸಹ ಮುಗಿದಿದ್ದು ಅವರು ಒಳ್ಳೆಯ ಕೆಲಸ ಮಾಡಿದ ಭಾವದಲ್ಲಿದ್ದಾರೆ. ಆ ಮೂಲಕ ಇದೊಂದು ಸಣ್ಣ ಕೆಲಸವಾದರೂ ಸಹ ಈ ಊರು ದೇಶಕ್ಕೆ ಒಂದು ಸೌಹಾರ್ದಯುತ ಉದಾಹರಣೆಯಾಗಿದೆ.


ಇದನ್ನೂ ಓದಿ: ಮೂರು ಆಸ್ಪತ್ರೆ ಅಲೆದರು. ಕೊನೆಗೆ ಬೆಡ್ ಸಿಕ್ಕಿತ್ತು. ಆದರೆ ತುಂಬಾ ತಡವಾಗಿತ್ತು: ನ್ಯೂಯಾರ್ಕ್‌‌ನ ಮನಮಿಡಿಯುವ ಘಟನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...