Homeಮುಖಪುಟಕ್ವಾರಂಟೈನ್‌ ಸಮಯದಲ್ಲಿ ಈ ವಲಸೆ ಕಾರ್ಮಿಕರು ಮಾಡಿದ ಜನ ಮೆಚ್ಚುವ ಕೆಲಸ ಯಾವುದೇ ಗೊತ್ತೆ?

ಕ್ವಾರಂಟೈನ್‌ ಸಮಯದಲ್ಲಿ ಈ ವಲಸೆ ಕಾರ್ಮಿಕರು ಮಾಡಿದ ಜನ ಮೆಚ್ಚುವ ಕೆಲಸ ಯಾವುದೇ ಗೊತ್ತೆ?

ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ದೇಶದ ಇತರ ಸ್ಥಳಗಳಿಂದ ವಲಸೆ ಬಂದ ಕಾರ್ಮಿಕರು ಆ ಶಾಲೆಯಲ್ಲಿ ಉಳಿದುಕೊಂಡಿದ್ದರು. ಗ್ರಾಮಸ್ಥರು ನೀಡಿದ ಸೇವೆಯಿಂದ ತುಂಬಾ ಸಂತೋಷಗೊಂಡಿದ್ದ ಅವರು ಶಾಲೆಯನ್ನು ಚೆನ್ನಾಗಿ ಮಾಡುವು ಮೂಲಕ ಮಾದರಿಯಾಗಿದ್ದಾರೆ.

- Advertisement -
- Advertisement -

ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಿ ಹತ್ತಿರ ಹತ್ತಿರ ಒಂದು ತಿಂಗಳಾಗುತ್ತಿದೆ. ಮನೆಯಲ್ಲಿರಲಾರದೇ ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ರಾಜ್ಯದಲ್ಲಿ 71,000 ಪ್ರಕರಣಗಳು ದಾಖಲಾಗಿವೆ ಎಂಬ ವರದಿಗಳು ಬರುತ್ತಿವೆ. ಇಂತಹ ಸಮಯದಲ್ಲಿ ಶಾಲೆಯೊಂದರಲ್ಲಿ ಕ್ವಾರಂಟೈನ್‌‌ಗೆ ಒಳಗಾಗಿದ್ದ ಹತ್ತಾರು ವಲಸೆ ಕಾರ್ಮಿಕರು ಸೇರಿ ಆ ಶಾಲೆಗೆ ಸುಣ್ಣ ಬಣ್ಣ ಬಳಿದು ಮಿಂಚುವಂತೆ ಮಾಡಿದ್ದಾರೆ. ಆ ಮೂಲಕ ಅವರು ದೇಶದ ಗಮನಸೆಳೆದಿದ್ದಾರೆ.

ರಾಜಸ್ಥಾನದ ಸಿಕಾರ್‌ ಎಂಬ ಗ್ರಾಮದಲ್ಲಿ ಹತ್ತಾರು ವಲಸೆ ಕಾರ್ಮಿಕರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಆ ಕಾರ್ಮಿಕರನ್ನು ಆ ಊರಿನ ಜನ ಉತ್ತಮ ಊಟ ಬಟ್ಟೆ ನೀಡಿ ಪ್ರೀತಿಯಿಂದ ನೋಡಿಕೊಂಡಿದ್ದರು. ಪ್ರತಿದಿನವೂ ಕೆಲಸ ಮಾಡುತ್ತಾ ಕ್ರಿಯಾಶೀಲರಾಗಿದ್ದ ಅಲ್ಲಿನ ಕಾರ್ಮಿಕರಿಗೆ ಸುಮ್ಮನೆ ಕೂರುವುದಕ್ಕಿಂತ ಇದ್ದಲ್ಲೇ ಏನಾದರೂ ಮಾಡುವ ಆಸೆಯಾಯಿತು. ಶಾಲೆಗೆ ಬಣ್ಣ ಬಳಿದು ಬಹಳ ದಿನಗಳಾಗಿದ್ದನ್ನು ಗಮನಿಸಿದ ಅವರು ಗ್ರಾಮದ ಸರಪಂಚರಲ್ಲಿ ನೀವು ಬಣ್ಣ ಕೊಡಿಸುವುದಾದರೆ ಶಾಲೆಗೆ ಬಣ್ಣ ಬಳಿಯುತ್ತೇವೆ ಎಂದು ಮನವಿ ಮಾಡಿದ್ದರು.

ಇದಕ್ಕೆ ಸರಪಂಚರು ಒಪ್ಪಿ ಬಣ್ಣ ಕೊಡಿಸಿದ್ದೆ ತಡ ಎಲ್ಲಾ ಕಾರ್ಮಿಕರು ಸೇರಿ ಶಾಲೆಗೆ ಬಣ್ಣ ಹೊಡೆದು ನಳನಳಿಸುವಂತೆ ಮಾಡಿದ್ದಾರೆ. ಆ ಮೂಲಕ ಊರಿನವರು ತಮ್ಮನ್ನು ನೋಡಿಕೊಂಡ ಋಣ ತೀರಿಸಿದ ಭಾವನೆ ಅವರಲ್ಲಿದೆ.

ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ದೇಶದ ಇತರ ಸ್ಥಳಗಳಿಂದ ವಲಸೆ ಬಂದ ಕಾರ್ಮಿಕರು ಆ ಶಾಲೆಯಲ್ಲಿ ಉಳಿದುಕೊಂಡಿದ್ದರು. ಗ್ರಾಮಸ್ಥರು ನೀಡಿದ ಸೇವೆಯಿಂದ ತುಂಬಾ ಸಂತೋಷಗೊಂಡಿದ್ದ ಅವರು ಶಾಲೆಯನ್ನು ಚೆನ್ನಾಗಿ ಮಾಡುವು ಮೂಲಕ ಮಾದರಿಯಾಗಿದ್ದಾರೆ.

ಶಾಲೆಯ ಹೊರಾಂಗಣವನ್ನು ಎಲ್ಲರೂ ಸೇರಿ ಸ್ವಚ್ಛಗೊಳಿಸಿದ್ದಲ್ಲದೇ ಶಾಲೆಯ ಗೋಡೆಗಳ ಮೇಲೆ ಚಿತ್ರಬಿಡಿಸಲು ಸಹ ಮುಂದಾಗಿದ್ದಾರೆ ಎಂದು ಹಲವು ಹಿಂದಿ ಪತ್ರಿಕೆಗಳು ವರದಿ ಮಾಡಿವೆ.

ಕಳೆದ ಒಂಬತ್ತು ವರ್ಷಗಳಿಂದ ಶಾಲೆಗೆ ಬಣ್ಣ ಬಳಿದಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರ್ಮಿಕರ ಕೆಲಸಕ್ಕೆ ಸರಪಂಚರು ವೇತನ ನೀಡಲು ಮುಂದಾದಾದ ಆ ವಲಸೆ ಕಾರ್ಮಿಕರು ಯಾವುದೇ ಹಣವನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಕ್ವಾರಂಟೈನ್‌ ಸಮಯದಲ್ಲಿ ಗ್ರಾಮಸ್ಥರು ತಮ್ಮನ್ನು ಚೆನ್ನಾಗಿ ನೋಡಿಕೊಂಡಿದ್ದರಿಂದ ಇದು ನಮ್ಮ ಪ್ರತಿ ಕೊಡುಗೆಯಾಗಿದ್ದು ನಮಗೆ ಯಾವುದೇ ಹಣ ಬೇಡ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಈ ಮಾದರಿ ನಡೆಯಿಂದಾಗಿ ಆ ವಲಸೆ ಕಾರ್ಮಿಕರು ಮತ್ತು ಸಿಕಾರ್ ಗ್ರಾಮಸ್ಥರು ಭಾರೀ ಪ್ರಶಂಸೆಗೆ ಒಳಗಾಗಿದ್ದಾರೆ. ಊರಿನ ಶಾಲೆಯನ್ನು ಎಲ್ಲರೂ ಸೇರಿ ಉತ್ತಮ ಪಡಿಸಿದ ಸಾರ್ಥಕ ಮನೋಭಾವ ಅವರದಾಗಿದೆ. ಇತ್ತ ವಲಸೆ ಕಾರ್ಮಿಕರ ಕ್ವಾರಂಟೈನ್‌ ಅವಧಿ ಸಹ ಮುಗಿದಿದ್ದು ಅವರು ಒಳ್ಳೆಯ ಕೆಲಸ ಮಾಡಿದ ಭಾವದಲ್ಲಿದ್ದಾರೆ. ಆ ಮೂಲಕ ಇದೊಂದು ಸಣ್ಣ ಕೆಲಸವಾದರೂ ಸಹ ಈ ಊರು ದೇಶಕ್ಕೆ ಒಂದು ಸೌಹಾರ್ದಯುತ ಉದಾಹರಣೆಯಾಗಿದೆ.


ಇದನ್ನೂ ಓದಿ: ಮೂರು ಆಸ್ಪತ್ರೆ ಅಲೆದರು. ಕೊನೆಗೆ ಬೆಡ್ ಸಿಕ್ಕಿತ್ತು. ಆದರೆ ತುಂಬಾ ತಡವಾಗಿತ್ತು: ನ್ಯೂಯಾರ್ಕ್‌‌ನ ಮನಮಿಡಿಯುವ ಘಟನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...