Homeಮುಖಪುಟದೀರ್ಘಾವಧಿ ಬ್ರಿಟನ್‌ ಆಳಿದ ರಾಣಿ 2ನೇ ಎಲಿಜಬೆತ್ ನಿಧನ

ದೀರ್ಘಾವಧಿ ಬ್ರಿಟನ್‌ ಆಳಿದ ರಾಣಿ 2ನೇ ಎಲಿಜಬೆತ್ ನಿಧನ

- Advertisement -
- Advertisement -

ಬ್ರಿಟಿಷ್‌ ಇತಿಹಾಸದಲ್ಲಿಯೇ ಸುದೀರ್ಘ ಕಾಲ ರಾಣಿಯಾಗಿದ್ದ 2ನೇ ಎಲಿಜಬೆತ್ (96) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. ಬಂಕಿಂಗ್‌ಹ್ಯಾಮ್‌ ಅರಮನೆ ನಿಧನದ ವಾರ್ತೆಯನ್ನು ತಿಳಿಸಿದೆ.

ಬ್ರಿಟನ್‌ನಲ್ಲಿ 10 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ. ರಾಣಿಯ ಪಾರ್ಥಿವ ಶರೀರವನ್ನು ಬಾಲ್‌ಮೊರಲ್‌ ಎಸ್ಟೇಟ್‌ನಲ್ಲಿ ಇಡಲಿದ್ದು, ಶುಕ್ರವಾರ ಲಂಡನ್‌ಗೆ ಒಯ್ಯಲಾಗುವುದು ಎಂದು ಅರಮನೆಯ ಹೇಳಿಕೆಯು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕ್ವೀನ್‌ 2ನೇ ಎಜಿಜಬೆತ್‌ಗೆ ನಾಲ್ವರು ಮಕ್ಕಳಿದ್ದು, ಹಿರಿಯ ಮಗ ವೇಲ್ಸ್‌ನ ರಾಜಕುಮಾರ, 73 ವರ್ಷದ ಚಾರ್ಲ್ಸ್‌ ಅವರು ತಕ್ಷಣದಿಂದಲೇ ರಾಜನಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಗುರುವಾರ ಸಂಜೆ ರಾಣಿಯ ಆರೋಗ್ಯ ಸ್ವಲ್ಪಮಟ್ಟಿಗೆ ಹದಗೆಟ್ಟಿತ್ತು. ವೈದ್ಯರ ನಿಗಾದಲ್ಲಿಯೇ ಇದ್ದರು. ರಾಣಿಯ ಮಕ್ಕಳಾದ ಚಾರ್ಲ್ಸ್‌, ರಾಜಕುಮಾರಿ 72 ವರ್ಷದ ಆ್ಯನೆ, ರಾಜಕುಮಾರರಾದ 62 ವರ್ಷದ ಆಂಡ್ರ್ಯೂ ಮತ್ತು 58 ವರ್ಷದ ಎಡ್ವರ್ಡ್‌ ಅವರು ಬಾಲ್‌ಮೊರಲ್‌ನಲ್ಲಿರುವ ರಾಣಿಯ ಎಸ್ಟೇಟ್‌ಗೆ ಧಾವಿಸಿದ್ದರು. ರಾಣಿಯಾಗಿ ಅವರು ಬುಧವಾರವಷ್ಟೇ ಬ್ರಿಟನ್‌ನ 15ನೇ ಪ್ರಧಾನಿಯಾಗಿ ಲಿಜ್‌ ಟ್ರಸ್‌ ಅವರನ್ನು ನೇಮಕಮಾಡಿದ್ದರು.

1952ರಲ್ಲಿ ಸಿಂಹಾಸನವನ್ನು ಏರಿದ ಎಲಿಜಬೆತ್ ರಾಜಕೀಯ ಕ್ರಾಂತಿಯ ಸಮಯದಲ್ಲಿ ಯುಕೆಯನ್ನು ಮುನ್ನಡೆಸಿದರು. 1837ರಿಂದ 1901ರವರೆಗೆ ಆಳಿದ ರಾಣಿ ವಿಕ್ಟೋರಿಯಾ ಅವರ ದಾಖಲೆಯನ್ನು ಎಲಿಜಬೆತ್‌ ಮುರಿದಿದ್ದರು. ಯುಕೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದವರಾಗಿ 2015ರಲ್ಲಿ ಗುರುತಿಸಿಕೊಂಡರು.

ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

“ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಮ್ಮ ಕಾಲದ ಧೀಮಂತ ನಾಯಕಿಯಾಗಿ ಸದಾ ನೆನಪಿನಲ್ಲುಳಿಯಲಿದ್ದಾರೆ. ಅವರು ತಮ್ಮ ದೇಶದ ಜನರಿಗೆ ಸ್ಫೂರ್ತಿದಾಯಕ ನಾಯಕತ್ವವನ್ನು ನೀಡಿದ್ದರು. ಸಾರ್ವಜನಿಕ ಜೀವನದಲ್ಲಿ ಘನತೆ ಮತ್ತು ಸಭ್ಯತೆಯಿಂದ ಇದ್ದರು. ಅವರ ಕುಟುಂಬದ ಮತ್ತು ಬ್ರಿಟನ್‌ ಜನರ ಈ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ, ಅವರ ಜತೆ ನಾವಿದ್ದೇವೆ” ಎಂದು ಮೋದಿ ತಿಳಿಸಿದ್ದಾರೆ.

“2015 ಮತ್ತು 2018ರಲ್ಲಿ ಬ್ರಿಟನ್‌ಗೆ ಭೇಟಿ ನೀಡಿದ್ದಾಗ ರಾಣಿ 2ನೇ ಎಲಿಜಬೆತ್ ಜತೆ ಮಾತುಕತೆ ನಡೆಸಿರುವುದು ಸ್ಮರಣೀಯವಾಗಿದೆ. ಅವರ ಸ್ವಾಗತ ಮತ್ತು ದಯಾಪರತೆಯನ್ನು ಎಂದಿಗೂ ಮರೆಯಲಾರೆ. ಮಹಾತ್ಮ ಗಾಂಧಿಯವರು ಮದುವೆಗೆ ಉಡುಗೊರೆಯಾಗಿ ನೀಡಿದ್ದ ಕರವಸ್ತ್ರವನ್ನು ಸಭೆಯೊಂದರ ವೇಳೆ ಅವರು ನನಗೆ ತೋರಿಸಿದ್ದರು” ಎಂದು ಅವರು ಸ್ಮರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...