Homeಮುಖಪುಟದೀರ್ಘಾವಧಿ ಬ್ರಿಟನ್‌ ಆಳಿದ ರಾಣಿ 2ನೇ ಎಲಿಜಬೆತ್ ನಿಧನ

ದೀರ್ಘಾವಧಿ ಬ್ರಿಟನ್‌ ಆಳಿದ ರಾಣಿ 2ನೇ ಎಲಿಜಬೆತ್ ನಿಧನ

- Advertisement -
- Advertisement -

ಬ್ರಿಟಿಷ್‌ ಇತಿಹಾಸದಲ್ಲಿಯೇ ಸುದೀರ್ಘ ಕಾಲ ರಾಣಿಯಾಗಿದ್ದ 2ನೇ ಎಲಿಜಬೆತ್ (96) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. ಬಂಕಿಂಗ್‌ಹ್ಯಾಮ್‌ ಅರಮನೆ ನಿಧನದ ವಾರ್ತೆಯನ್ನು ತಿಳಿಸಿದೆ.

ಬ್ರಿಟನ್‌ನಲ್ಲಿ 10 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ. ರಾಣಿಯ ಪಾರ್ಥಿವ ಶರೀರವನ್ನು ಬಾಲ್‌ಮೊರಲ್‌ ಎಸ್ಟೇಟ್‌ನಲ್ಲಿ ಇಡಲಿದ್ದು, ಶುಕ್ರವಾರ ಲಂಡನ್‌ಗೆ ಒಯ್ಯಲಾಗುವುದು ಎಂದು ಅರಮನೆಯ ಹೇಳಿಕೆಯು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕ್ವೀನ್‌ 2ನೇ ಎಜಿಜಬೆತ್‌ಗೆ ನಾಲ್ವರು ಮಕ್ಕಳಿದ್ದು, ಹಿರಿಯ ಮಗ ವೇಲ್ಸ್‌ನ ರಾಜಕುಮಾರ, 73 ವರ್ಷದ ಚಾರ್ಲ್ಸ್‌ ಅವರು ತಕ್ಷಣದಿಂದಲೇ ರಾಜನಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಗುರುವಾರ ಸಂಜೆ ರಾಣಿಯ ಆರೋಗ್ಯ ಸ್ವಲ್ಪಮಟ್ಟಿಗೆ ಹದಗೆಟ್ಟಿತ್ತು. ವೈದ್ಯರ ನಿಗಾದಲ್ಲಿಯೇ ಇದ್ದರು. ರಾಣಿಯ ಮಕ್ಕಳಾದ ಚಾರ್ಲ್ಸ್‌, ರಾಜಕುಮಾರಿ 72 ವರ್ಷದ ಆ್ಯನೆ, ರಾಜಕುಮಾರರಾದ 62 ವರ್ಷದ ಆಂಡ್ರ್ಯೂ ಮತ್ತು 58 ವರ್ಷದ ಎಡ್ವರ್ಡ್‌ ಅವರು ಬಾಲ್‌ಮೊರಲ್‌ನಲ್ಲಿರುವ ರಾಣಿಯ ಎಸ್ಟೇಟ್‌ಗೆ ಧಾವಿಸಿದ್ದರು. ರಾಣಿಯಾಗಿ ಅವರು ಬುಧವಾರವಷ್ಟೇ ಬ್ರಿಟನ್‌ನ 15ನೇ ಪ್ರಧಾನಿಯಾಗಿ ಲಿಜ್‌ ಟ್ರಸ್‌ ಅವರನ್ನು ನೇಮಕಮಾಡಿದ್ದರು.

1952ರಲ್ಲಿ ಸಿಂಹಾಸನವನ್ನು ಏರಿದ ಎಲಿಜಬೆತ್ ರಾಜಕೀಯ ಕ್ರಾಂತಿಯ ಸಮಯದಲ್ಲಿ ಯುಕೆಯನ್ನು ಮುನ್ನಡೆಸಿದರು. 1837ರಿಂದ 1901ರವರೆಗೆ ಆಳಿದ ರಾಣಿ ವಿಕ್ಟೋರಿಯಾ ಅವರ ದಾಖಲೆಯನ್ನು ಎಲಿಜಬೆತ್‌ ಮುರಿದಿದ್ದರು. ಯುಕೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದವರಾಗಿ 2015ರಲ್ಲಿ ಗುರುತಿಸಿಕೊಂಡರು.

ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

“ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಮ್ಮ ಕಾಲದ ಧೀಮಂತ ನಾಯಕಿಯಾಗಿ ಸದಾ ನೆನಪಿನಲ್ಲುಳಿಯಲಿದ್ದಾರೆ. ಅವರು ತಮ್ಮ ದೇಶದ ಜನರಿಗೆ ಸ್ಫೂರ್ತಿದಾಯಕ ನಾಯಕತ್ವವನ್ನು ನೀಡಿದ್ದರು. ಸಾರ್ವಜನಿಕ ಜೀವನದಲ್ಲಿ ಘನತೆ ಮತ್ತು ಸಭ್ಯತೆಯಿಂದ ಇದ್ದರು. ಅವರ ಕುಟುಂಬದ ಮತ್ತು ಬ್ರಿಟನ್‌ ಜನರ ಈ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ, ಅವರ ಜತೆ ನಾವಿದ್ದೇವೆ” ಎಂದು ಮೋದಿ ತಿಳಿಸಿದ್ದಾರೆ.

“2015 ಮತ್ತು 2018ರಲ್ಲಿ ಬ್ರಿಟನ್‌ಗೆ ಭೇಟಿ ನೀಡಿದ್ದಾಗ ರಾಣಿ 2ನೇ ಎಲಿಜಬೆತ್ ಜತೆ ಮಾತುಕತೆ ನಡೆಸಿರುವುದು ಸ್ಮರಣೀಯವಾಗಿದೆ. ಅವರ ಸ್ವಾಗತ ಮತ್ತು ದಯಾಪರತೆಯನ್ನು ಎಂದಿಗೂ ಮರೆಯಲಾರೆ. ಮಹಾತ್ಮ ಗಾಂಧಿಯವರು ಮದುವೆಗೆ ಉಡುಗೊರೆಯಾಗಿ ನೀಡಿದ್ದ ಕರವಸ್ತ್ರವನ್ನು ಸಭೆಯೊಂದರ ವೇಳೆ ಅವರು ನನಗೆ ತೋರಿಸಿದ್ದರು” ಎಂದು ಅವರು ಸ್ಮರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...