Homeಮುಖಪುಟದೀರ್ಘಾವಧಿ ಬ್ರಿಟನ್‌ ಆಳಿದ ರಾಣಿ 2ನೇ ಎಲಿಜಬೆತ್ ನಿಧನ

ದೀರ್ಘಾವಧಿ ಬ್ರಿಟನ್‌ ಆಳಿದ ರಾಣಿ 2ನೇ ಎಲಿಜಬೆತ್ ನಿಧನ

- Advertisement -
- Advertisement -

ಬ್ರಿಟಿಷ್‌ ಇತಿಹಾಸದಲ್ಲಿಯೇ ಸುದೀರ್ಘ ಕಾಲ ರಾಣಿಯಾಗಿದ್ದ 2ನೇ ಎಲಿಜಬೆತ್ (96) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. ಬಂಕಿಂಗ್‌ಹ್ಯಾಮ್‌ ಅರಮನೆ ನಿಧನದ ವಾರ್ತೆಯನ್ನು ತಿಳಿಸಿದೆ.

ಬ್ರಿಟನ್‌ನಲ್ಲಿ 10 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ. ರಾಣಿಯ ಪಾರ್ಥಿವ ಶರೀರವನ್ನು ಬಾಲ್‌ಮೊರಲ್‌ ಎಸ್ಟೇಟ್‌ನಲ್ಲಿ ಇಡಲಿದ್ದು, ಶುಕ್ರವಾರ ಲಂಡನ್‌ಗೆ ಒಯ್ಯಲಾಗುವುದು ಎಂದು ಅರಮನೆಯ ಹೇಳಿಕೆಯು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕ್ವೀನ್‌ 2ನೇ ಎಜಿಜಬೆತ್‌ಗೆ ನಾಲ್ವರು ಮಕ್ಕಳಿದ್ದು, ಹಿರಿಯ ಮಗ ವೇಲ್ಸ್‌ನ ರಾಜಕುಮಾರ, 73 ವರ್ಷದ ಚಾರ್ಲ್ಸ್‌ ಅವರು ತಕ್ಷಣದಿಂದಲೇ ರಾಜನಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಗುರುವಾರ ಸಂಜೆ ರಾಣಿಯ ಆರೋಗ್ಯ ಸ್ವಲ್ಪಮಟ್ಟಿಗೆ ಹದಗೆಟ್ಟಿತ್ತು. ವೈದ್ಯರ ನಿಗಾದಲ್ಲಿಯೇ ಇದ್ದರು. ರಾಣಿಯ ಮಕ್ಕಳಾದ ಚಾರ್ಲ್ಸ್‌, ರಾಜಕುಮಾರಿ 72 ವರ್ಷದ ಆ್ಯನೆ, ರಾಜಕುಮಾರರಾದ 62 ವರ್ಷದ ಆಂಡ್ರ್ಯೂ ಮತ್ತು 58 ವರ್ಷದ ಎಡ್ವರ್ಡ್‌ ಅವರು ಬಾಲ್‌ಮೊರಲ್‌ನಲ್ಲಿರುವ ರಾಣಿಯ ಎಸ್ಟೇಟ್‌ಗೆ ಧಾವಿಸಿದ್ದರು. ರಾಣಿಯಾಗಿ ಅವರು ಬುಧವಾರವಷ್ಟೇ ಬ್ರಿಟನ್‌ನ 15ನೇ ಪ್ರಧಾನಿಯಾಗಿ ಲಿಜ್‌ ಟ್ರಸ್‌ ಅವರನ್ನು ನೇಮಕಮಾಡಿದ್ದರು.

1952ರಲ್ಲಿ ಸಿಂಹಾಸನವನ್ನು ಏರಿದ ಎಲಿಜಬೆತ್ ರಾಜಕೀಯ ಕ್ರಾಂತಿಯ ಸಮಯದಲ್ಲಿ ಯುಕೆಯನ್ನು ಮುನ್ನಡೆಸಿದರು. 1837ರಿಂದ 1901ರವರೆಗೆ ಆಳಿದ ರಾಣಿ ವಿಕ್ಟೋರಿಯಾ ಅವರ ದಾಖಲೆಯನ್ನು ಎಲಿಜಬೆತ್‌ ಮುರಿದಿದ್ದರು. ಯುಕೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದವರಾಗಿ 2015ರಲ್ಲಿ ಗುರುತಿಸಿಕೊಂಡರು.

ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಬ್ರಿಟನ್ ರಾಣಿಗಿಂತ ಸೋನಿಯಾ ಶ್ರೀಮಂತೆ ಎಂಬುದು ಸುಳ್ಳು ಸುದ್ದಿ

“ಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಮ್ಮ ಕಾಲದ ಧೀಮಂತ ನಾಯಕಿಯಾಗಿ ಸದಾ ನೆನಪಿನಲ್ಲುಳಿಯಲಿದ್ದಾರೆ. ಅವರು ತಮ್ಮ ದೇಶದ ಜನರಿಗೆ ಸ್ಫೂರ್ತಿದಾಯಕ ನಾಯಕತ್ವವನ್ನು ನೀಡಿದ್ದರು. ಸಾರ್ವಜನಿಕ ಜೀವನದಲ್ಲಿ ಘನತೆ ಮತ್ತು ಸಭ್ಯತೆಯಿಂದ ಇದ್ದರು. ಅವರ ಕುಟುಂಬದ ಮತ್ತು ಬ್ರಿಟನ್‌ ಜನರ ಈ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ, ಅವರ ಜತೆ ನಾವಿದ್ದೇವೆ” ಎಂದು ಮೋದಿ ತಿಳಿಸಿದ್ದಾರೆ.

“2015 ಮತ್ತು 2018ರಲ್ಲಿ ಬ್ರಿಟನ್‌ಗೆ ಭೇಟಿ ನೀಡಿದ್ದಾಗ ರಾಣಿ 2ನೇ ಎಲಿಜಬೆತ್ ಜತೆ ಮಾತುಕತೆ ನಡೆಸಿರುವುದು ಸ್ಮರಣೀಯವಾಗಿದೆ. ಅವರ ಸ್ವಾಗತ ಮತ್ತು ದಯಾಪರತೆಯನ್ನು ಎಂದಿಗೂ ಮರೆಯಲಾರೆ. ಮಹಾತ್ಮ ಗಾಂಧಿಯವರು ಮದುವೆಗೆ ಉಡುಗೊರೆಯಾಗಿ ನೀಡಿದ್ದ ಕರವಸ್ತ್ರವನ್ನು ಸಭೆಯೊಂದರ ವೇಳೆ ಅವರು ನನಗೆ ತೋರಿಸಿದ್ದರು” ಎಂದು ಅವರು ಸ್ಮರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...