Homeಮುಖಪುಟಪ್ರಶ್ನೆ ಪತ್ರಿಕೆ ಸೋರಿಕೆ: 20 ಲಕ್ಷ ಜನರು ಬರೆಯಬೇಕಿದ್ದ ‘ಉತ್ತರ ಪ್ರದೇಶ TET’ ಪರೀಕ್ಷೆ ರದ್ದು!

ಪ್ರಶ್ನೆ ಪತ್ರಿಕೆ ಸೋರಿಕೆ: 20 ಲಕ್ಷ ಜನರು ಬರೆಯಬೇಕಿದ್ದ ‘ಉತ್ತರ ಪ್ರದೇಶ TET’ ಪರೀಕ್ಷೆ ರದ್ದು!

- Advertisement -
- Advertisement -

ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಭಾನುವಾರ ನಡೆಯಬೇಕಿದ್ದ ‘ಯುಪಿಟಿಇಟಿ’ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಪರೀಕ್ಷೆ ಪ್ರಾರಂಭವಾಗುವ ಸ್ವಲ್ಪ ಸಮಯದ ಮೊದಲು ಪ್ರಕಟಿಸಿದ್ದಾರೆ. ಸುಮಾರು 19.99 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಉತ್ತರ ಪ್ರದೇಶ ಶಿಕ್ಷಕರ ಅರ್ಹತಾ ಪರೀಕ್ಷೆಗೆ (UPTET) ಇಂದು ಹಾಜರಾಗಬೇಕಿತ್ತು.

ಪ್ರಕರಣದ ಹಿನ್ನಲೆಯಲ್ಲಿ ವಿಶೇಷ ಕಾರ್ಯಪಡೆಯು (ಎಸ್‌ಟಿಎಫ್) ಉತ್ತರ ಪ್ರದೇಶದ ವಿವಿಧ ನಗರಗಳಿಂದ ತಾಂತ್ರಿಕ ಮತ್ತು ಇತರ ಗುಪ್ತಚರಗಳನ್ನು ಬಳಸಿಕೊಂಡು ಕಳೆದ ರಾತ್ರಿ 23 ಜನರನ್ನು ಬಂಧಿಸಿದೆ ಎಂದು ಪ್ರಶಾಂತ್‌ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಎಸ್‌‌ಟಿಎಫ್‌‌ ಬಂಧಿಸಿರುವವರಲ್ಲಿ ಲಕ್ನೋದಿಂದ ನಾಲ್ವರು, ಪ್ರಯಾಗ್‌ರಾಜ್‌ನಿಂದ 13, ಮೀರತ್‌ನಿಂದ ಮೂವರು ಮತ್ತು ಕೌಶಂಬಿ ಜಿಲ್ಲೆಯ ಒಬ್ಬರು ಸೇರಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಕುಟುಂಬದ ನಾಲ್ವರ ಕೊಲೆ, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ

“ಆರೋಪಿಗಳಿಂದ ಪ್ರಶ್ನೆ ಪತ್ರಿಕೆಯ ಫೋಟೊಕಾಪಿಯನ್ನು ಪಡೆಯಲಾಗಿದ್ದು, ಅದನ್ನು ಸರ್ಕಾರದೊಂದಿಗೆ ಹಂಚಿಕೊಳ್ಳಲಾಗಿದೆ. ಇದು ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಒಂದೇ ಸೆಟ್ ಎಂಬುದಾಗಿ ಬೆಳಕಿಗೆ ಬಂದಿದೆ. ಆದ್ದರಿಂದ ತಕ್ಷಣವೇ ಈ ಪರೀಕ್ಷೆಗಳನ್ನು ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ. ಮುಂಬರುವ ಒಂದು ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು” ಎಂದು ಪ್ರಶಾಂತ್‌‌ ಕುಮಾರ್ ಹೇಳಿದ್ದಾರೆ.

“ಈ ಪರೀಕ್ಷೆಯಲ್ಲಿನ ಎಲ್ಲಾ ವೆಚ್ಚಗಳನ್ನು ಸರ್ಕಾರವು ಭರಿಸಲಿದೆ. ಅಭ್ಯರ್ಥಿಗಳು ಶುಲ್ಕವನ್ನು ಪಾವತಿಸಬೇಕಾಗಿಲ್ಲ ಅಥವಾ ಪರೀಕ್ಷಾ ಮೂನೆಯನ್ನು ಭರ್ತಿ ಮಾಡಬೇಕಾಗಿಲ್ಲ. ಇದಲ್ಲದೇ, UPSRTC ಬಸ್ಸುಗಳ ಮೂಲಕ ಆಯಾ ಅಭ್ಯರ್ಥಿಗಳ ಮನೆಗೆ ಉಚಿತವಾಗಿ ಅವರನ್ನು ಕಳುಹಿಸಲಾಗಿದೆ. ಪ್ರಕರಣವನ್ನು ಉತ್ತರ ಪ್ರದೇಶದ ಎಸ್‌ಟಿಎಫ್ ತನಿಖೆ ನಡೆಸಲಿದ್ದು, ಸೋರಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳನ್ನು ಕಾನೂನಿನ ಮುಂದೆ ತರಲಾಗುವುದು” ಪ್ರಶಾಂತ್‌ ಹೇಳಿದ್ದಾರೆ.

ಭಾನುವಾರ ಬೆಳಗಿನ ಜಾವದವರೆಗೂ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಪರೀಕ್ಷಾ ಕೇಂದ್ರಗಳಿಗೆ ತಲುಪಿರಲಿಲ್ಲ. ಪ್ರಸ್ತುತ ಪರೀಕ್ಷಾ ಕೇಂದ್ರಗಳಲ್ಲಿನ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಗಳಿಂದ ಮೊಬೈಲ್ ಫೋನ್ ಮತ್ತು ಪ್ರಶ್ನೆ ಪತ್ರಿಕೆಗಳ ನಕಲು ಪ್ರತಿಯನ್ನು ವಶಪಡಿಸಿಕೊಳ್ಳಲಾಗಿದೆ. ಉತ್ತರಪ್ರದೇಶದ ಹೊರತಾಗಿ, ಬಿಹಾರದ ಕೆಲವು ಜನರು ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಲಾಕಪ್ ಡೆತ್: ’ಉತ್ತರ ಪ್ರದೇಶದಲ್ಲಿ ಮಾನವ ಹಕ್ಕುಗಳು ಉಳಿದಿವೆಯೇ?’- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...