Homeಮುಖಪುಟಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಅರುಣಾಚಲದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಅರುಣಾಚಲದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

- Advertisement -
- Advertisement -

ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ವಿರುದ್ಧ ಶುಕ್ರವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬಳಿಕ ಇಟಾನಗರದಲ್ಲಿ ನಾಲ್ವರು ಭದ್ರತಾ ಅಧಿಕಾರಿಗಳು ಸೇರಿದಂತೆ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಪ್ರತಿಭಟನಾಕಾರರ ವಿರುದ್ಧ ಭದ್ರತಾ ಸಿಬ್ಬಂದಿ ಅಶ್ರುವಾಯು ಪ್ರಯೋಗಿಸಿ, ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಪೊಲೀಸ್ ಮಹಾನಿರೀಕ್ಷಕ ಚುಕು ಅಪಾ ಹೇಳಿದ್ದಾರೆ.

“ಕೆಲವು ಪ್ರತಿಭಟನಾಕಾರರು ಮೋಟಾರ್ ಸೈಕಲ್, ನಾಲ್ಕು ಚಕ್ರದ ವಾಹನವನ್ನು ಸುಟ್ಟುಹಾಕಿದಾಗ ಪರಿಸ್ಥಿತಿ ಹಿಂಸಾತ್ಮಕವಾಗಿ ಮಾರ್ಪಟ್ಟಿತು. ಆಸ್ತಿಪಾಸ್ತಿಗಳನ್ನು ಹಾನಿಗೊಳಿಸಲಾಗಿದೆ. ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆದಿದೆ” ಎಂದು ಅಪಾ ತಿಳಿಸಿದ್ದಾರೆ.

“ಯಾವುದೇ ಅಹಿತಕರ ಪರಿಸ್ಥಿತಿಯನ್ನು ಎದುರಿಸಲು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಇಟಾನಗರ ಪ್ರದೇಶದಲ್ಲಿ ಸಾಕಷ್ಟು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಇತ್ತೀಚೆಗೆ ಸೋರಿಕೆಯಾಗಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಜೊತೆಗೆ ಶಂತನು ದಯಾಳ್ ಅವರನ್ನು ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ಪರೀಕ್ಷೆಯ ಅಧ್ಯಕ್ಷರನ್ನಾಗಿ ನೇಮಿಸುವುದಕ್ಕೂ ಪ್ರತಿಭಟನಾಕಾರರು ವಿರೋಧ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿರುವ ಪ್ಯಾನ್ ಅರುಣಾಚಲ ಜಂಟಿ ಸ್ಟೀರಿಂಗ್ ಕಮಿಟಿ (ಪಿಎಜೆಎಸ್‌ಸಿ) ಪ್ರತಿಕ್ರಿಯಿಸಿದ್ದು, “ದಯಾಳ್ ಅವರಿಗೆ 61 ವರ್ಷ ವಯಸ್ಸಾಗಿದೆ. ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಕೇವಲ ಒಂದು ವರ್ಷ ಮಾತ್ರ ಸಾಧ್ಯ. 62 ವರ್ಷಗಳಿಗೆ ಆಯೋಗದಿಂದ ನಿವೃತ್ತಿ ಹೊಂದುವುದು ಕಡ್ಡಾಯವಾಗಿದೆ” ಎಂದಿದೆ.

“ಸರ್ಕಾರ ಮತ್ತು ಆಯೋಗವು ತಮ್ಮ ಪತ್ರಿಕೆ-ಮಾರಾಟದ ವ್ಯವಹಾರವನ್ನು ಪೂರ್ಣಗೊಳಿಸುವ ಉದ್ದೇಶದಲ್ಲಿದೆ. ಅದಕ್ಕಾಗಿಯೇ ಅವರು ಕೇವಲ ಒಂದು ವರ್ಷ ಅಧಿಕಾರದಲ್ಲಿ ಉಳಿಯಲಿರುವ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಲು ಆತುರಪಡಲಾಗುತ್ತಿದೆ” ಎಂದು ಪಿಎಜೆಎಸ್‌ಸಿ ಸದಸ್ಯ ಗ್ಯಾಮರ್ ಪಡಂಗ್ ಗುರುವಾರ ಆರೋಪಿಸಿದ್ದಾರೆ.

ಇಟಾನಗರದಲ್ಲಿ ವ್ಯಾಪಾರ ಸಂಸ್ಥೆಗಳು, ಮಾರುಕಟ್ಟೆಗಳು, ಬ್ಯಾಂಕ್‌ಗಳು, ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಮತ್ತು ಖಾಸಗಿ ಕಚೇರಿಗಳನ್ನು ಮುಚ್ಚಿ ಒಂದು ದಿನದ ಬಂದ್‌ಗೆ ಕರೆ ನೀಡಲಾಗಿತ್ತು ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿರಿ: ಹರಿರ್ಯಾಣ- ರಾಜಸ್ಥಾನ ಗಡಿ: ಇಬ್ಬರು ಮುಸ್ಲಿಮರನ್ನು ಜೀವಂತವಾಗಿ ಸುಟ್ಟ ದುಷ್ಕರ್ಮಿಗಳು; ಸ್ಥಳೀಯರಲ್ಲಿ ಭೀತಿ

ರಾಜ್ಯದಲ್ಲಿನ ಎಲ್ಲಾ ನೇಮಕಾತಿ ಪರೀಕ್ಷೆಗಳನ್ನು ಕೇಂದ್ರ ಲೋಕಸೇವಾ ಆಯೋಗವು ನಡೆಸುತ್ತದೆ, ಪತ್ರಿಕೆ ಸೋರಿಕೆ ಕುರಿತು ತ್ರಿಸದಸ್ಯ ಸಮಿತಿಯ ವರದಿಯನ್ನು ಸಾರ್ವಜನಿಕಗೊಳಿಸಬೇಕು, ರಾಜ್ಯ ಆಯೋಗದ ಅಡಿಯಲ್ಲಿ ನಿಯೋಜಿಸಲಾದ ಮೂವರು ರಾಜ್ಯ ಸರ್ಕಾರಿ ಅಧಿಕಾರಿಗಳನ್ನು ಹಿಂಪಡೆಯಬೇಕು. ನೊಂದ ಅಭ್ಯರ್ಥಿಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಪಿಎಜೆಎಸ್‌ಸಿ ಒತ್ತಾಯಿಸಿದೆ.

ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ವಿರುದ್ಧದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ, ರಾಜ್ಯ ಸಚಿವ ಸಂಪುಟವು ದಯಾಳ್ ಮತ್ತು ಇತರ ಅಧಿಕಾರಿಗಳ ಪ್ರಮಾಣವಚನ ಸಮಾರಂಭವನ್ನು ಶುಕ್ರವಾರ ರದ್ದುಗೊಳಿಸಿತು.

“ಈ ವಿಷಯವನ್ನು ಅರುಣಾಚಲ ಪ್ರದೇಶದ ಎಲ್ಲಾ ಸಮುದಾಯ-ಆಧಾರಿತ ಸಂಸ್ಥೆಗಳು ಮತ್ತು ಭಾಗಿಧಾರರೊಂದಿಗೆ ಚರ್ಚಿಸಲಾಗುವುದು” ಎಂದು ಕ್ಯಾಬಿನೆಟ್ ತಿಳಿಸಿರುವುದಾಗಿ ಅರುಣಾಚಲ ಟೈಮ್ಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...