Homeಮುಖಪುಟಪ್ರಶ್ನೆಪತ್ರಿಕೆ ಸೋರಿಕೆ: ತಮ್ಮದೇ ಸರ್ಕಾರದ ವಿರುದ್ಧ ಸಿಡಿದೆದ್ದ ಸಚಿನ್ ಪೈಲಟ್

ಪ್ರಶ್ನೆಪತ್ರಿಕೆ ಸೋರಿಕೆ: ತಮ್ಮದೇ ಸರ್ಕಾರದ ವಿರುದ್ಧ ಸಿಡಿದೆದ್ದ ಸಚಿನ್ ಪೈಲಟ್

- Advertisement -
- Advertisement -

ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಶನಿವಾರ ಮತ್ತೊಮ್ಮೆ ರಾಜಸ್ಥಾನದಲ್ಲಿ ತಮ್ಮದೇ ಸರ್ಕಾರವನ್ನು ಟೀಕಿಸಿದ್ದಾರೆ. ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳುವಲ್ಲಿ ವಿಳಂಬವನ್ನು ಪ್ರಶ್ನಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಮ್ಮ ಮಕ್ಕಳು ವರ್ಷಗಳ ಕಾಲ ಕಷ್ಟಪಟ್ಟಿರುತ್ತಾರೆ, ಪೋಷಕರು ಮಕ್ಕಳ ಟ್ಯೂಷನ್ ತರಗತಿಗಳಿಗಾಗಿ ಅರೆಹೊಟ್ಟೆ ಮಾಡಿಕೊಂಡಿರುತ್ತಾರೆ” ಎಂದು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಪೈಲಟ್‌, ಬಾರ್ಮರ್ ಜಿಲ್ಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

“ಅವರು ಪರೀಕ್ಷೆಗಳಿಗೆ ಹಾಜರಾಗುತ್ತಾರೆ, ಪತ್ರಿಕೆ ಸೋರಿಕೆಯಾಗುತ್ತದೆ, ರದ್ದುಗೊಳ್ಳುತ್ತದೆ. ಅದರ ಮೇಲೆ ಕ್ರಮ ಕೈಗೊಳ್ಳಲು ಏಕೆ ಇಷ್ಟು ಸಮಯ ಬೇಕಾಗುತ್ತದೆ? ನ್ಯಾಯ ಪಡೆಯುವುದು ಏಕೆ ಕಷ್ಟ?” ಎಂದು ಪ್ರಶ್ನಿಸಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆಯ ಸರಣಿ ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರವನ್ನು ಕಾಡಿದೆ.

ಟೋಂಕ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಪೈಲಟ್, “ಉನ್ನತ ಹುದ್ದೆಯಲ್ಲಿರುವವರಿಗೆ ಶಿಕ್ಷಣಕ್ಕಾಗಿ ಖರ್ಚು ಮಾಡುವ ಸಾವಿರಾರು ರೂಪಾಯಿಗಳ ಮೌಲ್ಯ ತಿಳಿದಿಲ್ಲ. ಆದ್ದರಿಂದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ತುಂಬಾ ಸಮಯ ತೆಗೆದುಕೊಳ್ಳಲಾಗುತ್ತದೆ” ಎಂದು ಆರೋಪಿಸಿದ್ದಾರೆ.

ಕಳೆದ ತಿಂಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಪೈಲಟ್ ಒಂದು ದಿನದ ಉಪವಾಸವನ್ನು ನಡೆಸಿದ್ದರು. ಭಾರತೀಯ ಜನತಾ ಪಕ್ಷದ ವಸುಂಧರಾ ರಾಜೇ ಸಿಂಧಿಯಾ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಕ್ರಮ ಜರುಗಿಸಬೇಕೆಂದು ಪೈಲಟ್‌ ಧರಣಿ ಕುಳಿತ್ತಿದ್ದರು.

ಇಂತಹ ಬೆಳವಣಿಗೆಗಳು ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ನೀಡಿದ ಎಚ್ಚರಿಕೆಯನ್ನು ಅವರು ಧಿಕ್ಕರಿಸಿದ್ದರು.

“ಕೆಲವು ಜನರಿಗೆ ಇಷ್ಟವಾಗದಿದ್ದರೂ ಭ್ರಷ್ಟಾಚಾರದ ವಿರುದ್ಧ ಹೋರಾಡುವುದನ್ನು ಮುಂದುವರಿಸುತ್ತೇನೆ” ಎಂದು ಪೈಲಟ್ ಶನಿವಾರ ಹೇಳಿದ್ದಾರೆ. 2018ರ ಡಿಸೆಂಬರ್‌ನಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದಾಗಿನಿಂದ ಗೆಹ್ಲೋಟ್ ಮತ್ತು ಪೈಲಟ್ ನಡುವೆ ಅಧಿಕಾರದ ವಿಚಾರದಲ್ಲಿ ತಿಕ್ಕಾಟ ನಡೆಯುತ್ತಿದೆ.

“ದೇಶ ಮತ್ತು ರಾಜ್ಯದಲ್ಲಿ ಲೂಟಿ, ಭ್ರಷ್ಟಾಚಾರದ ವಿರುದ್ಧ ನಾವು ಧ್ವನಿ ಎತ್ತಬೇಕಾಗಿದೆ” ಎಂದು ಸಚಿನ್ ಪೈಲಟ್ ಅಭಿಪ್ರಾಯಪಟ್ಟಿದ್ದಾರೆ. “ಭ್ರಷ್ಟಾಚಾರವು ಗೆದ್ದಲಿನಂತಿದ್ದು ಅದು ದೇಶವನ್ನು ಟೊಳ್ಳಾಗಿಸುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: 32,000 ಮಹಿಳೆಯರು ಐಎಸ್‌ಐಎಸ್ ಸೇರಿದ್ದಾರೆಂಬ ಟೀಸರ್‌ ತೆರವು ಮಾಡಲಾಗುವುದು: ‘ದಿ ಕೇರಳ ಸ್ಟೋರಿ’ ನಿರ್ಮಾಪಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...