Homeಕರ್ನಾಟಕಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

- Advertisement -
- Advertisement -

ಪುಲಕೇಶಿ ನಗರ ಕಾಂಗ್ರೆಸ್ ಶಾಸಕ‌ ಅಖಂಡ ಶ್ರೀನಿವಾಸ ಮೂರ್ತಿಯವರ ತಂಗಿಯ ಮಗ ನವೀನ್‌ ಎಂಬಾತ ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧ ದೂರು ನೀಡಲು ಹಲವರು ಮುಂದಾಗಿದ್ದರು. ಅದೇ ಸಮಯದಲ್ಲಿ ತಮ್ಮ ಪ್ರವಾದಿ ಮುಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿ ಕಮೆಂಟ್ ನೋಡಿ ಇನ್ನೊಂದೆಡೆ ಶಾಸಕ ಅಖಂಡ ಶ್ರೀನಿವಾಸ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕ್ಯಾಂಪೇನ್‌ಗಳು ಆರಂಭವಾಗಿತ್ತು ಎನ್ನಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಒಂದು ನಿರ್ದಿಷ್ಟ ಗುಂಪು ರಾತ್ರಿ ಸಮಯದಲ್ಲಿ ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಮುಂದೆ ಜಮಾಯಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಉದ್ರಿಕ್ತಗೊಂಡ ಗುಂಪೊಂದು ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಕೆಲವು ವಾಹನಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿತ್ತು. ಬಳಿಕ ಪರಿಸ್ಥಿತಿ ನಿಯಂತ್ರಣ ಕೈತಪ್ಪಿತ್ತಲ್ಲದೆ, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರ ಸಾಹಸಪಟ್ಟರು.

ಇದರ ನಡುವೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ವೀಡಿಯೋ ಒಂದರ ಮೂಲಕ ಪ್ರತಿಕ್ರಿಯಿಸಿ, “ಕಿಡಿಗೇಡಿಗಳ ತಪ್ಪಿಗೆ ಯಾರೂ ಗಲಾಟೆ ಮಾಡಬಾರದು, ತಪ್ಪು ಮಾಡಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ”. ಯಾವುದೇ ಕಾರಣಕ್ಕೂ ಗಲಾಟೆ ಮಾಡದಂತೆ ವಿನಂತಿಸಿದರು.

ಅಷ್ಟೊತ್ತಿಗಾಗಲೇ ಪ್ರತಿಭಟನೆಯ ಸ್ವರೂಪ ಬದಲಾಗಿತ್ತು, ಪೊಲೀಸ್ ಠಾಣೆಗಳಿಗೆ ಕಲ್ಲು ತೂರಾಟ, ಪೊಲೀಸರ ಮೇಲೆ ಕಲ್ಲು ತೂರುವ ಮೂಲಕ ಗುಂಪೊಂದು ಪರಿಸ್ಥಿತಿ ಕೈಮೀರುವಂತೆ ಮಾಡಿತು.

ಈ ಸಂದರ್ಭದಲ್ಲಿ ಶಾಸಕ ಝಮೀರ್ ಹಾಗೂ ರಿಝ್ವಾನ್ ಅರ್ಶದ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡ ಪೊಲೀಸರು ಗಲಭೆಯಲ್ಲಿ ಪಾಲ್ಗೊಂಡವರನ್ನು ಸಮಾಧಾನ ಪಡಿಸುವ ಪ್ರಯತ್ನಕ್ಕೆ ಮುಂದಾದರೂ ಸಹ ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗಿಲ್ಲ. ಶಾಸಕ ಝಮೀರ್ ಅವರ ಕೈಗೂ ಈ ಸಂದರ್ಭದಲ್ಲಿ ಗಾಯವಾಗಿತ್ತು ಎನ್ನಲಾಗಿದೆ.

ಪೊಲೀಸರು ಗಲಭೆ ನಿತಂತ್ರಣಕ್ಕೆ ಅಶ್ರುವಾಯು ಪ್ರಯೋಗ, ಗೊಲೀಬಾರ್ ನಡೆಸಿದರು. ಈ ವೇಳೆ ಗೋಲಿಬಾರ್ ಗೆ 3 ಮಂದಿ ಗಾಯಾಳುಗಳು ಬಲಿಯಾಗಿದ್ದಾರೆ.

ಏನು ಮಾಡಬೇಕಾಗಿತ್ತು…

ಪ್ರವಾದಿ ನಿಂದನೆ ಮಾಡಿದ್ದು ಖಂಡನೀಯ. ೧೦ ಜನ ಹೋಗಿ ಪ್ರಕರಣ ದಾಖಲಿಸಬಹುದಿತ್ತು. ಆದರೆ ಇದೆ ಕೋಪದಲ್ಲಿ ಸಾರ್ವಜನಿಕ ಆಸ್ತಿ ಹಾಳು ಮಾಡಿದ್ದು ಸರಿ ಅಲ್ಲ. ಬೆಂಕಿ ಹಚ್ಚುವುದು, ಅಮಾಯಾಕರ ಆಸ್ತಿಗಳನ್ನು ನಷ್ಟ ಮಾಡುವುದು ಯಾರು ಕೂಡ ಮಾಡಬಾರದು.

ಪ್ರವಾದಿ (ಸ) ನೈಜ ಅನುಯಾಯಿಗಳು ಎಂದಿಗೂ ಬೆಂಕಿ ಹಚ್ಚುವವರಲ್ಲ ಮತ್ತು ಅದನ್ನು ಸಮರ್ಥಿಸುವವರಲ್ಲ. ತೀವ್ರವಾಗಿ ಕಲ್ಲು ತೂರಾಟ ಆದಾಗ ಅಲ್ಲೇ ಸಮೀಪದಲ್ಲಿರುವ ದೇವಸ್ಥಾನಕ್ಕೆ ಹಾನಿಯಾಗದಂತೆ ರಕ್ಷಣೆಗೆ ನಿಂತಿದ್ದು ಮುಸ್ಲಿಂ ಸಹೋದರರು.. ಇದು ನಮ್ಮ ಪ್ರವಾದಿ ಕಲಿಸಿದ ಶಿಕ್ಷಣ.

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

ಒಟ್ಟಾರೆ ಈ ಘಟನೆ ನಡೆಯಬಾರದಿತ್ತು. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ನಿಂದನೆ, ಇದರ ವಿರುದ್ಧ ಒಂದೆಡೆ ಆಕೋಶದ ಮಾತುಗಳು ಕೇಳಿ ಬರುತ್ತಲೇ ಇದ್ದರೂ ಸರಕಾರಕ್ಕೆ ಈ ಗಲಭೆಯ ಮುನ್ಸೂಚನೆ ಯಾಕೆ ಸಿಕ್ಕಿಲ್ಲ? ಪೊಲೀಸರು ಎಫ್‌ಐಆರ್‌ ದಾಖಲಿಸಲು ವಿಳಂಬ ಮಾಡಿದ್ದೇಕೆ? ಗುಪ್ತಚರ ಇಲಾಖೆ ಏನು ಮಾಡ್ತಾ ಇತ್ತು? ಗಲಭೆ ಸುಮಾರು 3 ಗಂಟೆಗಳ ಕಾಲ ನಡೆಯುತ್ತಿದ್ದರೂ ಹೆಚ್ಚಿನ ಪೊಲೀಸರ ನಿಯೋಜನೆ ಯಾಕೆ ವಿಳಂಬವಾಯಿತು? ಈ ಎಲ್ಲಾ ಪ್ರಶ್ನೆಗಳು ಪ್ರಶ್ನೆಯಾಗಿಯೇ ಉಳಿದಿದೆ.

-ನಾಝಿಯಾ ಕೌಸರ್. (ಯುವ ಪತ್ರಕರ್ತರು, ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ – ಶಾಂತಿ ಕಾಪಾಡಲು ಮುಖಂಡರ ಮನವಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...