Homeಕರ್ನಾಟಕಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

- Advertisement -
- Advertisement -

ಪುಲಕೇಶಿ ನಗರ ಕಾಂಗ್ರೆಸ್ ಶಾಸಕ‌ ಅಖಂಡ ಶ್ರೀನಿವಾಸ ಮೂರ್ತಿಯವರ ತಂಗಿಯ ಮಗ ನವೀನ್‌ ಎಂಬಾತ ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧ ದೂರು ನೀಡಲು ಹಲವರು ಮುಂದಾಗಿದ್ದರು. ಅದೇ ಸಮಯದಲ್ಲಿ ತಮ್ಮ ಪ್ರವಾದಿ ಮುಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿ ಕಮೆಂಟ್ ನೋಡಿ ಇನ್ನೊಂದೆಡೆ ಶಾಸಕ ಅಖಂಡ ಶ್ರೀನಿವಾಸ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕ್ಯಾಂಪೇನ್‌ಗಳು ಆರಂಭವಾಗಿತ್ತು ಎನ್ನಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಒಂದು ನಿರ್ದಿಷ್ಟ ಗುಂಪು ರಾತ್ರಿ ಸಮಯದಲ್ಲಿ ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಮುಂದೆ ಜಮಾಯಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಉದ್ರಿಕ್ತಗೊಂಡ ಗುಂಪೊಂದು ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಕೆಲವು ವಾಹನಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿತ್ತು. ಬಳಿಕ ಪರಿಸ್ಥಿತಿ ನಿಯಂತ್ರಣ ಕೈತಪ್ಪಿತ್ತಲ್ಲದೆ, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರ ಸಾಹಸಪಟ್ಟರು.

ಇದರ ನಡುವೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ವೀಡಿಯೋ ಒಂದರ ಮೂಲಕ ಪ್ರತಿಕ್ರಿಯಿಸಿ, “ಕಿಡಿಗೇಡಿಗಳ ತಪ್ಪಿಗೆ ಯಾರೂ ಗಲಾಟೆ ಮಾಡಬಾರದು, ತಪ್ಪು ಮಾಡಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ”. ಯಾವುದೇ ಕಾರಣಕ್ಕೂ ಗಲಾಟೆ ಮಾಡದಂತೆ ವಿನಂತಿಸಿದರು.

ಅಷ್ಟೊತ್ತಿಗಾಗಲೇ ಪ್ರತಿಭಟನೆಯ ಸ್ವರೂಪ ಬದಲಾಗಿತ್ತು, ಪೊಲೀಸ್ ಠಾಣೆಗಳಿಗೆ ಕಲ್ಲು ತೂರಾಟ, ಪೊಲೀಸರ ಮೇಲೆ ಕಲ್ಲು ತೂರುವ ಮೂಲಕ ಗುಂಪೊಂದು ಪರಿಸ್ಥಿತಿ ಕೈಮೀರುವಂತೆ ಮಾಡಿತು.

ಈ ಸಂದರ್ಭದಲ್ಲಿ ಶಾಸಕ ಝಮೀರ್ ಹಾಗೂ ರಿಝ್ವಾನ್ ಅರ್ಶದ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡ ಪೊಲೀಸರು ಗಲಭೆಯಲ್ಲಿ ಪಾಲ್ಗೊಂಡವರನ್ನು ಸಮಾಧಾನ ಪಡಿಸುವ ಪ್ರಯತ್ನಕ್ಕೆ ಮುಂದಾದರೂ ಸಹ ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗಿಲ್ಲ. ಶಾಸಕ ಝಮೀರ್ ಅವರ ಕೈಗೂ ಈ ಸಂದರ್ಭದಲ್ಲಿ ಗಾಯವಾಗಿತ್ತು ಎನ್ನಲಾಗಿದೆ.

ಪೊಲೀಸರು ಗಲಭೆ ನಿತಂತ್ರಣಕ್ಕೆ ಅಶ್ರುವಾಯು ಪ್ರಯೋಗ, ಗೊಲೀಬಾರ್ ನಡೆಸಿದರು. ಈ ವೇಳೆ ಗೋಲಿಬಾರ್ ಗೆ 3 ಮಂದಿ ಗಾಯಾಳುಗಳು ಬಲಿಯಾಗಿದ್ದಾರೆ.

ಏನು ಮಾಡಬೇಕಾಗಿತ್ತು…

ಪ್ರವಾದಿ ನಿಂದನೆ ಮಾಡಿದ್ದು ಖಂಡನೀಯ. ೧೦ ಜನ ಹೋಗಿ ಪ್ರಕರಣ ದಾಖಲಿಸಬಹುದಿತ್ತು. ಆದರೆ ಇದೆ ಕೋಪದಲ್ಲಿ ಸಾರ್ವಜನಿಕ ಆಸ್ತಿ ಹಾಳು ಮಾಡಿದ್ದು ಸರಿ ಅಲ್ಲ. ಬೆಂಕಿ ಹಚ್ಚುವುದು, ಅಮಾಯಾಕರ ಆಸ್ತಿಗಳನ್ನು ನಷ್ಟ ಮಾಡುವುದು ಯಾರು ಕೂಡ ಮಾಡಬಾರದು.

ಪ್ರವಾದಿ (ಸ) ನೈಜ ಅನುಯಾಯಿಗಳು ಎಂದಿಗೂ ಬೆಂಕಿ ಹಚ್ಚುವವರಲ್ಲ ಮತ್ತು ಅದನ್ನು ಸಮರ್ಥಿಸುವವರಲ್ಲ. ತೀವ್ರವಾಗಿ ಕಲ್ಲು ತೂರಾಟ ಆದಾಗ ಅಲ್ಲೇ ಸಮೀಪದಲ್ಲಿರುವ ದೇವಸ್ಥಾನಕ್ಕೆ ಹಾನಿಯಾಗದಂತೆ ರಕ್ಷಣೆಗೆ ನಿಂತಿದ್ದು ಮುಸ್ಲಿಂ ಸಹೋದರರು.. ಇದು ನಮ್ಮ ಪ್ರವಾದಿ ಕಲಿಸಿದ ಶಿಕ್ಷಣ.

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

ಒಟ್ಟಾರೆ ಈ ಘಟನೆ ನಡೆಯಬಾರದಿತ್ತು. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ನಿಂದನೆ, ಇದರ ವಿರುದ್ಧ ಒಂದೆಡೆ ಆಕೋಶದ ಮಾತುಗಳು ಕೇಳಿ ಬರುತ್ತಲೇ ಇದ್ದರೂ ಸರಕಾರಕ್ಕೆ ಈ ಗಲಭೆಯ ಮುನ್ಸೂಚನೆ ಯಾಕೆ ಸಿಕ್ಕಿಲ್ಲ? ಪೊಲೀಸರು ಎಫ್‌ಐಆರ್‌ ದಾಖಲಿಸಲು ವಿಳಂಬ ಮಾಡಿದ್ದೇಕೆ? ಗುಪ್ತಚರ ಇಲಾಖೆ ಏನು ಮಾಡ್ತಾ ಇತ್ತು? ಗಲಭೆ ಸುಮಾರು 3 ಗಂಟೆಗಳ ಕಾಲ ನಡೆಯುತ್ತಿದ್ದರೂ ಹೆಚ್ಚಿನ ಪೊಲೀಸರ ನಿಯೋಜನೆ ಯಾಕೆ ವಿಳಂಬವಾಯಿತು? ಈ ಎಲ್ಲಾ ಪ್ರಶ್ನೆಗಳು ಪ್ರಶ್ನೆಯಾಗಿಯೇ ಉಳಿದಿದೆ.

-ನಾಝಿಯಾ ಕೌಸರ್. (ಯುವ ಪತ್ರಕರ್ತರು, ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ – ಶಾಂತಿ ಕಾಪಾಡಲು ಮುಖಂಡರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...