Homeಕರ್ನಾಟಕಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

- Advertisement -
- Advertisement -

ಪುಲಕೇಶಿ ನಗರ ಕಾಂಗ್ರೆಸ್ ಶಾಸಕ‌ ಅಖಂಡ ಶ್ರೀನಿವಾಸ ಮೂರ್ತಿಯವರ ತಂಗಿಯ ಮಗ ನವೀನ್‌ ಎಂಬಾತ ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧ ದೂರು ನೀಡಲು ಹಲವರು ಮುಂದಾಗಿದ್ದರು. ಅದೇ ಸಮಯದಲ್ಲಿ ತಮ್ಮ ಪ್ರವಾದಿ ಮುಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿ ಕಮೆಂಟ್ ನೋಡಿ ಇನ್ನೊಂದೆಡೆ ಶಾಸಕ ಅಖಂಡ ಶ್ರೀನಿವಾಸ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕ್ಯಾಂಪೇನ್‌ಗಳು ಆರಂಭವಾಗಿತ್ತು ಎನ್ನಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಒಂದು ನಿರ್ದಿಷ್ಟ ಗುಂಪು ರಾತ್ರಿ ಸಮಯದಲ್ಲಿ ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಮುಂದೆ ಜಮಾಯಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಉದ್ರಿಕ್ತಗೊಂಡ ಗುಂಪೊಂದು ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಕೆಲವು ವಾಹನಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿತ್ತು. ಬಳಿಕ ಪರಿಸ್ಥಿತಿ ನಿಯಂತ್ರಣ ಕೈತಪ್ಪಿತ್ತಲ್ಲದೆ, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರ ಸಾಹಸಪಟ್ಟರು.

ಇದರ ನಡುವೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ವೀಡಿಯೋ ಒಂದರ ಮೂಲಕ ಪ್ರತಿಕ್ರಿಯಿಸಿ, “ಕಿಡಿಗೇಡಿಗಳ ತಪ್ಪಿಗೆ ಯಾರೂ ಗಲಾಟೆ ಮಾಡಬಾರದು, ತಪ್ಪು ಮಾಡಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ”. ಯಾವುದೇ ಕಾರಣಕ್ಕೂ ಗಲಾಟೆ ಮಾಡದಂತೆ ವಿನಂತಿಸಿದರು.

ಅಷ್ಟೊತ್ತಿಗಾಗಲೇ ಪ್ರತಿಭಟನೆಯ ಸ್ವರೂಪ ಬದಲಾಗಿತ್ತು, ಪೊಲೀಸ್ ಠಾಣೆಗಳಿಗೆ ಕಲ್ಲು ತೂರಾಟ, ಪೊಲೀಸರ ಮೇಲೆ ಕಲ್ಲು ತೂರುವ ಮೂಲಕ ಗುಂಪೊಂದು ಪರಿಸ್ಥಿತಿ ಕೈಮೀರುವಂತೆ ಮಾಡಿತು.

ಈ ಸಂದರ್ಭದಲ್ಲಿ ಶಾಸಕ ಝಮೀರ್ ಹಾಗೂ ರಿಝ್ವಾನ್ ಅರ್ಶದ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡ ಪೊಲೀಸರು ಗಲಭೆಯಲ್ಲಿ ಪಾಲ್ಗೊಂಡವರನ್ನು ಸಮಾಧಾನ ಪಡಿಸುವ ಪ್ರಯತ್ನಕ್ಕೆ ಮುಂದಾದರೂ ಸಹ ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗಿಲ್ಲ. ಶಾಸಕ ಝಮೀರ್ ಅವರ ಕೈಗೂ ಈ ಸಂದರ್ಭದಲ್ಲಿ ಗಾಯವಾಗಿತ್ತು ಎನ್ನಲಾಗಿದೆ.

ಪೊಲೀಸರು ಗಲಭೆ ನಿತಂತ್ರಣಕ್ಕೆ ಅಶ್ರುವಾಯು ಪ್ರಯೋಗ, ಗೊಲೀಬಾರ್ ನಡೆಸಿದರು. ಈ ವೇಳೆ ಗೋಲಿಬಾರ್ ಗೆ 3 ಮಂದಿ ಗಾಯಾಳುಗಳು ಬಲಿಯಾಗಿದ್ದಾರೆ.

ಏನು ಮಾಡಬೇಕಾಗಿತ್ತು…

ಪ್ರವಾದಿ ನಿಂದನೆ ಮಾಡಿದ್ದು ಖಂಡನೀಯ. ೧೦ ಜನ ಹೋಗಿ ಪ್ರಕರಣ ದಾಖಲಿಸಬಹುದಿತ್ತು. ಆದರೆ ಇದೆ ಕೋಪದಲ್ಲಿ ಸಾರ್ವಜನಿಕ ಆಸ್ತಿ ಹಾಳು ಮಾಡಿದ್ದು ಸರಿ ಅಲ್ಲ. ಬೆಂಕಿ ಹಚ್ಚುವುದು, ಅಮಾಯಾಕರ ಆಸ್ತಿಗಳನ್ನು ನಷ್ಟ ಮಾಡುವುದು ಯಾರು ಕೂಡ ಮಾಡಬಾರದು.

ಪ್ರವಾದಿ (ಸ) ನೈಜ ಅನುಯಾಯಿಗಳು ಎಂದಿಗೂ ಬೆಂಕಿ ಹಚ್ಚುವವರಲ್ಲ ಮತ್ತು ಅದನ್ನು ಸಮರ್ಥಿಸುವವರಲ್ಲ. ತೀವ್ರವಾಗಿ ಕಲ್ಲು ತೂರಾಟ ಆದಾಗ ಅಲ್ಲೇ ಸಮೀಪದಲ್ಲಿರುವ ದೇವಸ್ಥಾನಕ್ಕೆ ಹಾನಿಯಾಗದಂತೆ ರಕ್ಷಣೆಗೆ ನಿಂತಿದ್ದು ಮುಸ್ಲಿಂ ಸಹೋದರರು.. ಇದು ನಮ್ಮ ಪ್ರವಾದಿ ಕಲಿಸಿದ ಶಿಕ್ಷಣ.

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

ಒಟ್ಟಾರೆ ಈ ಘಟನೆ ನಡೆಯಬಾರದಿತ್ತು. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ನಿಂದನೆ, ಇದರ ವಿರುದ್ಧ ಒಂದೆಡೆ ಆಕೋಶದ ಮಾತುಗಳು ಕೇಳಿ ಬರುತ್ತಲೇ ಇದ್ದರೂ ಸರಕಾರಕ್ಕೆ ಈ ಗಲಭೆಯ ಮುನ್ಸೂಚನೆ ಯಾಕೆ ಸಿಕ್ಕಿಲ್ಲ? ಪೊಲೀಸರು ಎಫ್‌ಐಆರ್‌ ದಾಖಲಿಸಲು ವಿಳಂಬ ಮಾಡಿದ್ದೇಕೆ? ಗುಪ್ತಚರ ಇಲಾಖೆ ಏನು ಮಾಡ್ತಾ ಇತ್ತು? ಗಲಭೆ ಸುಮಾರು 3 ಗಂಟೆಗಳ ಕಾಲ ನಡೆಯುತ್ತಿದ್ದರೂ ಹೆಚ್ಚಿನ ಪೊಲೀಸರ ನಿಯೋಜನೆ ಯಾಕೆ ವಿಳಂಬವಾಯಿತು? ಈ ಎಲ್ಲಾ ಪ್ರಶ್ನೆಗಳು ಪ್ರಶ್ನೆಯಾಗಿಯೇ ಉಳಿದಿದೆ.

-ನಾಝಿಯಾ ಕೌಸರ್. (ಯುವ ಪತ್ರಕರ್ತರು, ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ – ಶಾಂತಿ ಕಾಪಾಡಲು ಮುಖಂಡರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...