Homeಕರ್ನಾಟಕಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

- Advertisement -
- Advertisement -

ಪುಲಕೇಶಿ ನಗರ ಕಾಂಗ್ರೆಸ್ ಶಾಸಕ‌ ಅಖಂಡ ಶ್ರೀನಿವಾಸ ಮೂರ್ತಿಯವರ ತಂಗಿಯ ಮಗ ನವೀನ್‌ ಎಂಬಾತ ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧ ದೂರು ನೀಡಲು ಹಲವರು ಮುಂದಾಗಿದ್ದರು. ಅದೇ ಸಮಯದಲ್ಲಿ ತಮ್ಮ ಪ್ರವಾದಿ ಮುಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿ ಕಮೆಂಟ್ ನೋಡಿ ಇನ್ನೊಂದೆಡೆ ಶಾಸಕ ಅಖಂಡ ಶ್ರೀನಿವಾಸ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕ್ಯಾಂಪೇನ್‌ಗಳು ಆರಂಭವಾಗಿತ್ತು ಎನ್ನಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಒಂದು ನಿರ್ದಿಷ್ಟ ಗುಂಪು ರಾತ್ರಿ ಸಮಯದಲ್ಲಿ ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಮುಂದೆ ಜಮಾಯಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಉದ್ರಿಕ್ತಗೊಂಡ ಗುಂಪೊಂದು ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಕೆಲವು ವಾಹನಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿತ್ತು. ಬಳಿಕ ಪರಿಸ್ಥಿತಿ ನಿಯಂತ್ರಣ ಕೈತಪ್ಪಿತ್ತಲ್ಲದೆ, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರ ಸಾಹಸಪಟ್ಟರು.

ಇದರ ನಡುವೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ವೀಡಿಯೋ ಒಂದರ ಮೂಲಕ ಪ್ರತಿಕ್ರಿಯಿಸಿ, “ಕಿಡಿಗೇಡಿಗಳ ತಪ್ಪಿಗೆ ಯಾರೂ ಗಲಾಟೆ ಮಾಡಬಾರದು, ತಪ್ಪು ಮಾಡಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ”. ಯಾವುದೇ ಕಾರಣಕ್ಕೂ ಗಲಾಟೆ ಮಾಡದಂತೆ ವಿನಂತಿಸಿದರು.

ಅಷ್ಟೊತ್ತಿಗಾಗಲೇ ಪ್ರತಿಭಟನೆಯ ಸ್ವರೂಪ ಬದಲಾಗಿತ್ತು, ಪೊಲೀಸ್ ಠಾಣೆಗಳಿಗೆ ಕಲ್ಲು ತೂರಾಟ, ಪೊಲೀಸರ ಮೇಲೆ ಕಲ್ಲು ತೂರುವ ಮೂಲಕ ಗುಂಪೊಂದು ಪರಿಸ್ಥಿತಿ ಕೈಮೀರುವಂತೆ ಮಾಡಿತು.

ಈ ಸಂದರ್ಭದಲ್ಲಿ ಶಾಸಕ ಝಮೀರ್ ಹಾಗೂ ರಿಝ್ವಾನ್ ಅರ್ಶದ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡ ಪೊಲೀಸರು ಗಲಭೆಯಲ್ಲಿ ಪಾಲ್ಗೊಂಡವರನ್ನು ಸಮಾಧಾನ ಪಡಿಸುವ ಪ್ರಯತ್ನಕ್ಕೆ ಮುಂದಾದರೂ ಸಹ ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗಿಲ್ಲ. ಶಾಸಕ ಝಮೀರ್ ಅವರ ಕೈಗೂ ಈ ಸಂದರ್ಭದಲ್ಲಿ ಗಾಯವಾಗಿತ್ತು ಎನ್ನಲಾಗಿದೆ.

ಪೊಲೀಸರು ಗಲಭೆ ನಿತಂತ್ರಣಕ್ಕೆ ಅಶ್ರುವಾಯು ಪ್ರಯೋಗ, ಗೊಲೀಬಾರ್ ನಡೆಸಿದರು. ಈ ವೇಳೆ ಗೋಲಿಬಾರ್ ಗೆ 3 ಮಂದಿ ಗಾಯಾಳುಗಳು ಬಲಿಯಾಗಿದ್ದಾರೆ.

ಏನು ಮಾಡಬೇಕಾಗಿತ್ತು…

ಪ್ರವಾದಿ ನಿಂದನೆ ಮಾಡಿದ್ದು ಖಂಡನೀಯ. ೧೦ ಜನ ಹೋಗಿ ಪ್ರಕರಣ ದಾಖಲಿಸಬಹುದಿತ್ತು. ಆದರೆ ಇದೆ ಕೋಪದಲ್ಲಿ ಸಾರ್ವಜನಿಕ ಆಸ್ತಿ ಹಾಳು ಮಾಡಿದ್ದು ಸರಿ ಅಲ್ಲ. ಬೆಂಕಿ ಹಚ್ಚುವುದು, ಅಮಾಯಾಕರ ಆಸ್ತಿಗಳನ್ನು ನಷ್ಟ ಮಾಡುವುದು ಯಾರು ಕೂಡ ಮಾಡಬಾರದು.

ಪ್ರವಾದಿ (ಸ) ನೈಜ ಅನುಯಾಯಿಗಳು ಎಂದಿಗೂ ಬೆಂಕಿ ಹಚ್ಚುವವರಲ್ಲ ಮತ್ತು ಅದನ್ನು ಸಮರ್ಥಿಸುವವರಲ್ಲ. ತೀವ್ರವಾಗಿ ಕಲ್ಲು ತೂರಾಟ ಆದಾಗ ಅಲ್ಲೇ ಸಮೀಪದಲ್ಲಿರುವ ದೇವಸ್ಥಾನಕ್ಕೆ ಹಾನಿಯಾಗದಂತೆ ರಕ್ಷಣೆಗೆ ನಿಂತಿದ್ದು ಮುಸ್ಲಿಂ ಸಹೋದರರು.. ಇದು ನಮ್ಮ ಪ್ರವಾದಿ ಕಲಿಸಿದ ಶಿಕ್ಷಣ.

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

ಒಟ್ಟಾರೆ ಈ ಘಟನೆ ನಡೆಯಬಾರದಿತ್ತು. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ನಿಂದನೆ, ಇದರ ವಿರುದ್ಧ ಒಂದೆಡೆ ಆಕೋಶದ ಮಾತುಗಳು ಕೇಳಿ ಬರುತ್ತಲೇ ಇದ್ದರೂ ಸರಕಾರಕ್ಕೆ ಈ ಗಲಭೆಯ ಮುನ್ಸೂಚನೆ ಯಾಕೆ ಸಿಕ್ಕಿಲ್ಲ? ಪೊಲೀಸರು ಎಫ್‌ಐಆರ್‌ ದಾಖಲಿಸಲು ವಿಳಂಬ ಮಾಡಿದ್ದೇಕೆ? ಗುಪ್ತಚರ ಇಲಾಖೆ ಏನು ಮಾಡ್ತಾ ಇತ್ತು? ಗಲಭೆ ಸುಮಾರು 3 ಗಂಟೆಗಳ ಕಾಲ ನಡೆಯುತ್ತಿದ್ದರೂ ಹೆಚ್ಚಿನ ಪೊಲೀಸರ ನಿಯೋಜನೆ ಯಾಕೆ ವಿಳಂಬವಾಯಿತು? ಈ ಎಲ್ಲಾ ಪ್ರಶ್ನೆಗಳು ಪ್ರಶ್ನೆಯಾಗಿಯೇ ಉಳಿದಿದೆ.

-ನಾಝಿಯಾ ಕೌಸರ್. (ಯುವ ಪತ್ರಕರ್ತರು, ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ – ಶಾಂತಿ ಕಾಪಾಡಲು ಮುಖಂಡರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...