Homeಕರ್ನಾಟಕಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

- Advertisement -
- Advertisement -

ಪುಲಕೇಶಿ ನಗರ ಕಾಂಗ್ರೆಸ್ ಶಾಸಕ‌ ಅಖಂಡ ಶ್ರೀನಿವಾಸ ಮೂರ್ತಿಯವರ ತಂಗಿಯ ಮಗ ನವೀನ್‌ ಎಂಬಾತ ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧ ದೂರು ನೀಡಲು ಹಲವರು ಮುಂದಾಗಿದ್ದರು. ಅದೇ ಸಮಯದಲ್ಲಿ ತಮ್ಮ ಪ್ರವಾದಿ ಮುಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿ ಕಮೆಂಟ್ ನೋಡಿ ಇನ್ನೊಂದೆಡೆ ಶಾಸಕ ಅಖಂಡ ಶ್ರೀನಿವಾಸ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕ್ಯಾಂಪೇನ್‌ಗಳು ಆರಂಭವಾಗಿತ್ತು ಎನ್ನಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಒಂದು ನಿರ್ದಿಷ್ಟ ಗುಂಪು ರಾತ್ರಿ ಸಮಯದಲ್ಲಿ ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಮುಂದೆ ಜಮಾಯಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಉದ್ರಿಕ್ತಗೊಂಡ ಗುಂಪೊಂದು ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಕೆಲವು ವಾಹನಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿತ್ತು. ಬಳಿಕ ಪರಿಸ್ಥಿತಿ ನಿಯಂತ್ರಣ ಕೈತಪ್ಪಿತ್ತಲ್ಲದೆ, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರ ಸಾಹಸಪಟ್ಟರು.

ಇದರ ನಡುವೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ವೀಡಿಯೋ ಒಂದರ ಮೂಲಕ ಪ್ರತಿಕ್ರಿಯಿಸಿ, “ಕಿಡಿಗೇಡಿಗಳ ತಪ್ಪಿಗೆ ಯಾರೂ ಗಲಾಟೆ ಮಾಡಬಾರದು, ತಪ್ಪು ಮಾಡಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ”. ಯಾವುದೇ ಕಾರಣಕ್ಕೂ ಗಲಾಟೆ ಮಾಡದಂತೆ ವಿನಂತಿಸಿದರು.

ಅಷ್ಟೊತ್ತಿಗಾಗಲೇ ಪ್ರತಿಭಟನೆಯ ಸ್ವರೂಪ ಬದಲಾಗಿತ್ತು, ಪೊಲೀಸ್ ಠಾಣೆಗಳಿಗೆ ಕಲ್ಲು ತೂರಾಟ, ಪೊಲೀಸರ ಮೇಲೆ ಕಲ್ಲು ತೂರುವ ಮೂಲಕ ಗುಂಪೊಂದು ಪರಿಸ್ಥಿತಿ ಕೈಮೀರುವಂತೆ ಮಾಡಿತು.

ಈ ಸಂದರ್ಭದಲ್ಲಿ ಶಾಸಕ ಝಮೀರ್ ಹಾಗೂ ರಿಝ್ವಾನ್ ಅರ್ಶದ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡ ಪೊಲೀಸರು ಗಲಭೆಯಲ್ಲಿ ಪಾಲ್ಗೊಂಡವರನ್ನು ಸಮಾಧಾನ ಪಡಿಸುವ ಪ್ರಯತ್ನಕ್ಕೆ ಮುಂದಾದರೂ ಸಹ ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗಿಲ್ಲ. ಶಾಸಕ ಝಮೀರ್ ಅವರ ಕೈಗೂ ಈ ಸಂದರ್ಭದಲ್ಲಿ ಗಾಯವಾಗಿತ್ತು ಎನ್ನಲಾಗಿದೆ.

ಪೊಲೀಸರು ಗಲಭೆ ನಿತಂತ್ರಣಕ್ಕೆ ಅಶ್ರುವಾಯು ಪ್ರಯೋಗ, ಗೊಲೀಬಾರ್ ನಡೆಸಿದರು. ಈ ವೇಳೆ ಗೋಲಿಬಾರ್ ಗೆ 3 ಮಂದಿ ಗಾಯಾಳುಗಳು ಬಲಿಯಾಗಿದ್ದಾರೆ.

ಏನು ಮಾಡಬೇಕಾಗಿತ್ತು…

ಪ್ರವಾದಿ ನಿಂದನೆ ಮಾಡಿದ್ದು ಖಂಡನೀಯ. ೧೦ ಜನ ಹೋಗಿ ಪ್ರಕರಣ ದಾಖಲಿಸಬಹುದಿತ್ತು. ಆದರೆ ಇದೆ ಕೋಪದಲ್ಲಿ ಸಾರ್ವಜನಿಕ ಆಸ್ತಿ ಹಾಳು ಮಾಡಿದ್ದು ಸರಿ ಅಲ್ಲ. ಬೆಂಕಿ ಹಚ್ಚುವುದು, ಅಮಾಯಾಕರ ಆಸ್ತಿಗಳನ್ನು ನಷ್ಟ ಮಾಡುವುದು ಯಾರು ಕೂಡ ಮಾಡಬಾರದು.

ಪ್ರವಾದಿ (ಸ) ನೈಜ ಅನುಯಾಯಿಗಳು ಎಂದಿಗೂ ಬೆಂಕಿ ಹಚ್ಚುವವರಲ್ಲ ಮತ್ತು ಅದನ್ನು ಸಮರ್ಥಿಸುವವರಲ್ಲ. ತೀವ್ರವಾಗಿ ಕಲ್ಲು ತೂರಾಟ ಆದಾಗ ಅಲ್ಲೇ ಸಮೀಪದಲ್ಲಿರುವ ದೇವಸ್ಥಾನಕ್ಕೆ ಹಾನಿಯಾಗದಂತೆ ರಕ್ಷಣೆಗೆ ನಿಂತಿದ್ದು ಮುಸ್ಲಿಂ ಸಹೋದರರು.. ಇದು ನಮ್ಮ ಪ್ರವಾದಿ ಕಲಿಸಿದ ಶಿಕ್ಷಣ.

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

ಒಟ್ಟಾರೆ ಈ ಘಟನೆ ನಡೆಯಬಾರದಿತ್ತು. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ನಿಂದನೆ, ಇದರ ವಿರುದ್ಧ ಒಂದೆಡೆ ಆಕೋಶದ ಮಾತುಗಳು ಕೇಳಿ ಬರುತ್ತಲೇ ಇದ್ದರೂ ಸರಕಾರಕ್ಕೆ ಈ ಗಲಭೆಯ ಮುನ್ಸೂಚನೆ ಯಾಕೆ ಸಿಕ್ಕಿಲ್ಲ? ಪೊಲೀಸರು ಎಫ್‌ಐಆರ್‌ ದಾಖಲಿಸಲು ವಿಳಂಬ ಮಾಡಿದ್ದೇಕೆ? ಗುಪ್ತಚರ ಇಲಾಖೆ ಏನು ಮಾಡ್ತಾ ಇತ್ತು? ಗಲಭೆ ಸುಮಾರು 3 ಗಂಟೆಗಳ ಕಾಲ ನಡೆಯುತ್ತಿದ್ದರೂ ಹೆಚ್ಚಿನ ಪೊಲೀಸರ ನಿಯೋಜನೆ ಯಾಕೆ ವಿಳಂಬವಾಯಿತು? ಈ ಎಲ್ಲಾ ಪ್ರಶ್ನೆಗಳು ಪ್ರಶ್ನೆಯಾಗಿಯೇ ಉಳಿದಿದೆ.

-ನಾಝಿಯಾ ಕೌಸರ್. (ಯುವ ಪತ್ರಕರ್ತರು, ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ – ಶಾಂತಿ ಕಾಪಾಡಲು ಮುಖಂಡರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...