Homeಕರ್ನಾಟಕಬಸವಕಲ್ಯಾಣದ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನದಲ್ಲಿ ಎದ್ದ ಪ್ರಶ್ನೆಗಳು

ಬಸವಕಲ್ಯಾಣದ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನದಲ್ಲಿ ಎದ್ದ ಪ್ರಶ್ನೆಗಳು

- Advertisement -
- Advertisement -

ಸಮಾನತೆಯ ತತ್ವ ಸಾರಿದ ಬಸವಾದಿ ಶರಣರ ಆಶಯಗಳನ್ನು ಜನಮಾನಸಕ್ಕೆ ಮುಟ್ಟಿಸುವ ಉದ್ದೇಶವಷ್ಟೇ ಅಲ್ಲದೆ ’ಲಿಂಗಾಯತ ಸ್ವತಂತ್ರ ಧರ್ಮ’ ಆಗಬೇಕು, ಅದಕ್ಕೆ ಸಾಂವಿಧಾನಿಕ ಮಾನ್ಯತೆ ದೊರೆಯಬೇಕೆಂದು ರಾಜ್ಯದ ವಿವಿಧ ಮಠಾಧೀಶರು ಮತ್ತು ಬಸವಪರ ಸಂಘಟನೆಗಳ ನೇತೃತ್ವದಲ್ಲಿ ಹಿಂದಿನಿಂದಲೂ ಹೋರಾಟಗಳು ನಡೆಯುತ್ತಿವೆ. 2017ರಲ್ಲಿ ಮಾತೆ ಮಹಾದೇವಿ ಅವರ ನೇತೃತ್ವದಲ್ಲಿ ಮೊದಲು ಬೀದರ್‌ದಿಂದ ಆರಂಭವಾದ ಹೋರಾಟ ರಾಜ್ಯವಷ್ಟೇ ಅಲ್ಲದೆ ಮಹಾರಾಷ್ಟ್ರ, ದೆಹಲಿಗಳಲ್ಲಿಯೂ ನಡೆದು ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು

ಕಾಯಕ ಸಮುದಾಯಗಳು ಕೂಡಿ ಕಟ್ಟಿದ ಲಿಂಗಾಯತ ಧರ್ಮ ಹಿಂದೂ ಧರ್ಮದ ಭಾಗವಲ್ಲ; ಇದೊಂದು ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತ ಧರ್ಮ. ಹೀಗಾಗಿ ಸಾಂವಿಧಾನಿಕ ಮಾನ್ಯತೆ ದೊರೆಯಬೇಕೆಂಬ ಪ್ರಬಲ ಒತ್ತಾಯವನ್ನು ಲಿಂಗಾಯತ ಸಮುದಾಯ ಹಲವು ವರ್ಷಗಳಿಂದ ಮಾಡುತ್ತಿದೆ. ಈ ಹೋರಾಟಗಳ ಪ್ರತಿಫಲವಾಗಿ 2013-18ರವರೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚಿಸಿದ್ದ ಅಂದಿನ ಸಿಎಂ ಸಿದ್ದರಾಮಯ್ಯ ಅವರು ನ್ಯಾ. ನಾಗಮೋಹನ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು; ಆ ಮಟ್ಟಕ್ಕೆ ಲಿಂಗಾಯತ ಸಮುದಾಯ ಯಶಸ್ಸು ಕಂಡಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು ಒಪ್ಪಿರಲಿಲ್ಲ. ಅಲ್ಲಿಂದ ಲಿಂಗಾಯತ ಧರ್ಮ ಮಾನ್ಯತೆ ಹೋರಾಟ ಮುಂದುವರಿಯಲಿಲ್ಲ. ನಂತರ ರಾಜ್ಯದಲ್ಲಿ ಸರ್ಕಾರ ಬದಲಾಯಿತು.

ಮಾತೆ ಮಹಾದೇವಿ

ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಾಬಲ್ಯ ಹೊಂದಿರುವ ಲಿಂಗಾಯತ ಸಮುದಾಯ ಸೇರಿದಂತೆ ದೇಶದ ನಾನಾ ರಾಜ್ಯಗಳ ಲಿಂಗಾಯತರನ್ನು ಒಗ್ಗೂಡಿಸಿ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಹೋರಾಟ ಆರಂಭಿಸಬೇಕೆಂಬ ಉದ್ದೇಶದಿಂದ ಜಾಗತಿಕ ಲಿಂಗಾಯತ ಮಹಾಸಭಾ ರಚನೆಯಾಯಿತು. ಅದರ ವತಿಯಿಂದ, ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ದೊರಕಿಸಿಕೊಳ್ಳುವುದಕ್ಕಾಗಿ, ಮುಂದಿನ ಹೋರಾಟದ ದಿಕ್ಕುದೆಸೆ ಕಂಡುಕೊಳ್ಳುವುದಕ್ಕಾಗಿ ಹಾಗೂ ಸಮುದಾಯದ ಜಾಗೃತಿಗಾಗಿ ಮಾರ್ಚ್ 4, 5ರಂದು ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನವನ್ನು ಹಮ್ಮಿಕೊಳ್ಳಲಾಗಿತ್ತು.

ದೇಶದ ನಾನಾ ಭಾಗಗಳಿಂದ ಲಿಂಗಾಯತ ಸಮುದಾಯದವರನ್ನು ಆಹ್ವಾನಿಸಿ ಧರ್ಮ ಮಾನ್ಯತೆಯ ಹೋರಾಟ, ಮೀಸಲಾತಿ, ಜನಗಣತಿ ಸೇರಿದಂತೆ ಇತರೆ ವಿಷಯಗಳನ್ನು ಕುರಿತು ಚರ್ಚಿಸುವುದು ಅಧಿವೇಶನದ ಘನ ಉದ್ದೇಶವಾಗಿತ್ತು.

ಇದನ್ನೂ ಓದಿ: ಒಕ್ಕಲಿಗ-ಲಿಂಗಾಯಿತರ ಮೀಸಲಾತಿ ಹೆಚ್ಚಳ; ಮೂಗಿಗೆ ತುಪ್ಪ ಸವರಿದ ಸರ್ಕಾರ

ರಾಷ್ಟ್ರೀಯ ಲಿಂಗಾಯತ ಅಧಿವೇಶನವನ್ನು ಎರಡುಮೂರು ವರ್ಷಗಳ ಹಿಂದೆಯೇ ಮಾಡಬೇಕಿತ್ತು. ಆದರೆ ಕೋವಿಡ್ ಕಾರಣ ಸಾಧ್ಯವಾಗದಿದ್ದರಿಂದ ಈ ವರ್ಷ ಮಾರ್ಚ್ 4-5ರಂದು ಆಯೋಜಿಸಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಶಿವಾನಂದ ಜಾಮದರ್ ಹೇಳಿದರು. ಅಧಿವೇಶನವು ಎರಡು ದಿನಗಳ ಕಾಲ ಬಸವಕಲ್ಯಾಣದ ಥೇರ ಮೈದಾನದಲ್ಲಿ ನಡೆಸಲು ಅನುಮತಿ ಪಡೆಯಲಾಗಿತ್ತು. ಎಲ್ಲಾ ಸಿದ್ಧತೆಗಳು ನಡೆದಿದ್ದವು.

ಅಧಿವೇಶನದ ಮುನ್ನಾ ದಿನವೇ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ಜಾಗತಿಕ ಲಿಂಗಾಯತ ಮಹಾಸಭಾ ಆಯೋಜಿಸಿದ್ದ ಎರಡು ದಿನದ ಅಧಿವೇಶನದ ಮುನ್ನಾ ದಿನ ಅಂದರೆ ಮಾರ್ಚ್ 3ರಂದು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯನ್ನು ಏಕಾಏಕಿ ನಿಗದಿಗೊಳಿಸಿ ಅದೇ ಸ್ಥಳದಲ್ಲಿ ಆಯೋಜಿಸಲಾಯಿತು. ಪೂರ್ವ ನಿಯೋಜಿತವಾಗಿದ್ದ ಲಿಂಗಾಯತ ಮಹಾ ಅಧಿವೇಶನವನ್ನು ಅದೇ ಜಾಗದಲ್ಲಿ ನಡೆಸಲು ಒಂದಿಷ್ಟು ಮುಜುಗರವೂ ಉಂಟಾಯಿತು. ಬೃಹತ್ ವೇದಿಕೆ ಸೇರಿದಂತೆ ಬೇರೆ ರಾಜ್ಯಗಳಿಂದ ಅಧಿವೇಶನಕ್ಕೆ ಆಗಮಿಸುವ ವಿವಿಧ ಮಠಾಧೀಶರಿಗೆ, ಲಿಂಗಾಯತ ಅನುಯಾಯಿಗಳ ವಾಸ್ತವ್ಯಕ್ಕೆ ವಿವಿಧ ಕಾಲೇಜು, ಅನುಭವ ಮಂಟಪ ಸೇರಿದಂತೆ ನಾನಾ ಕಡೆ ವ್ಯವಸ್ಥೆ ಮಾಡಲಾಗಿತ್ತು. ಈ ಮಧ್ಯೆ ಬಿಜೆಪಿಯ ಕಾರ್ಯಕ್ರಮ ನಿಗದಿಯಾದ ಕಾರಣ ಹಲವರಿಗೆ ಅನುಮಾನ ಹುಟ್ಟಿಸಿತು.

ಅಧಿವೇಶನ ಮುನ್ನಾ ದಿನವೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವೇದಿಕೆ ಮೇಲಿದ್ದ ಬಿಜೆಪಿ ಕಾರ್ಯಕ್ರಮ ಆಯೋಜಿಸಿದ ಹಿಂದಿನ ಮರ್ಮವೇನು ಎಂಬುದು ಹಲವರಿಗೆ ಒಳಗೊಳಗೆ ಅನುಮಾನ ಕಾಡಿತು.

ಮಾರ್ಚ್ 3ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಸವಕಲ್ಯಾಣದ ಅನುಭವ ಮಂಟಪದಿಂದ ಯಾತ್ರೆಗೆ ಚಾಲನೆ ನೀಡಿ, ಬೃಹತ್ ರೋಡ್ ಶೋ ಹಾಗೂ ಬಹಿರಂಗ ಸಮಾವೇಶ ನಡೆಸಿದರು. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿಯ ಘಟಾನುಘಟಿ ನಾಯಕರು ಭಾಗವಹಿಸಿದ್ದರು. ವಿಜಯ ಸಂಕಲ್ಪ ಯಾತ್ರೆ ನೆಪದಲ್ಲಿ ಲಿಂಗಾಯತ ಸಮುದಾಯವನ್ನು ಸೆಳೆಯುವ ಪ್ರಯತ್ನ ಈ ಕಾರ್ಯಕ್ರಮದಲ್ಲಿ ನಡೆಯಿತು. ಲಿಂಗಾಯತರ ’ಜನಪ್ರಿಯ’ ನಾಯಕ ಎಂದು ಗುರುತಿಸಿಕೊಂಡಿದ್ದ ಬಿಎಸ್‌ವೈ ಅವರಿಗೆ ದಿಢೀರನೆ ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಲಿಂಗಾಯತ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದ ಬಿಜೆಪಿಗೆ ಲಿಂಗಾಯತ ಸಮುದಾಯದ ಸಿಟ್ಟನ್ನು ಶಮನಗೊಳಿಸುವುದು ಅತ್ಯಗತ್ಯವಾಗಿತ್ತು. ಅದಕ್ಕಾಗಿ ಈ ವೇದಿಕೆ ಸಜ್ಜಾಗಿತ್ತು. ಈ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರಿಂದ ಮಾತನಾಡಿಸಿ, ’ನನಗೆ ಯಾರೂ ಕುರ್ಚಿಯಿಂದ ಕೆಳಗಿಳಿಸಲಿಲ್ಲ, ನಾನೇ ಸ್ವಇಚ್ಛೆಯಿಂದ ಇಳಿದಿದ್ದೇನೆ, ಆದರೆ ಬಿಜೆಪಿ ಪಕ್ಷ ಸಂಘಟಿಸಲು ಉಸಿರಿರುವವರೆಗೆ ಶ್ರಮಿಸುವೆ’ ಎಂಬ ಸಂದೇಶವನ್ನು ರವಾನಿಸಲಾಗಿದೆ. ಇದರಿಂದ ಲಿಂಗಾಯತ ಸಮುದಾಯದ ಕೋಪ ಇಳಿಸಿದ್ದು ಅಷ್ಟೇ ಅಲ್ಲದೆ ಬಸವಕಲ್ಯಾಣದಲ್ಲಿ ಬಿಜೆಪಿ ಭದ್ರಕೋಟೆಯಾಗಿ ಕಟ್ಟಲು ಸಹಕಾರಿಯಾಗಿದೆ ಎಂದು ಮಾತನಾಡಿಕೊಳ್ಳಲಾಗುತ್ತಿದೆ.

ಬಸವಕಲ್ಯಾಣದ ಥೇರ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ವೇದಿಕೆ ಕಾರ್ಯಕ್ರಮ ಮುಗಿದ ಮರುದಿನವೇ ಅದೇ ಸ್ಥಳ ಹಾಗೂ ಅದೇ ವೇದಿಕೆಯಲ್ಲಿ ಲಿಂಗಾಯತ ಅಧಿವೇಶನ ಜರುಗಿತು. ರಾಜ್ಯ ಮತ್ತು ರಾಷ್ಟ್ರಮಟ್ಟದ ಬಿಜೆಪಿ ನಾಯಕರ ಅಬ್ಬರದ ಬ್ಯಾನರ್ ಮತ್ತು ಧ್ವಜಗಳು ಕಲ್ಯಾಣ ನೆಲದಲ್ಲಿ ರಾರಾಜಿಸುತ್ತಿದ್ದವು. ಅವುಗಳ ಮಧ್ಯೆ ಲಿಂಗಾಯತ ಅಧಿವೇಶನದ ಧ್ವಜಗಳು ಮತ್ತು ಬ್ಯಾನರ್‌ಗಳು ಸೇರಿದಂತೆ ಬಸವಾದಿ ಶರಣರ ಭಾವಚಿತ್ರಗಳು ಎದ್ದು ಕಾಣುತ್ತಿದ್ದವು.

ಜಾನಪದ ವಿದ್ವಾಂಸ ಗೋ.ರು. ಚನ್ನಬಸಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಈ ಅಧಿವೇಶನ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಪಡೆಯಲು ಮುಂದಿನ ಹೋರಾಟ ಏನು? ಮೀಸಲಾತಿ ಹೇಗೆ ಸಿಗುತ್ತದೆ? ಕೇಂದ್ರಕ್ಕೆ ಶಿಫಾರಸ್ಸು ಮಾಡುವುದು ಸೇರಿದಂತೆ ವೀರಶೈವ-ಲಿಂಗಾಯತ ಗೊಂದಲ ಕುರಿತು ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆದವು.

ಬಾಲಾಜಿ ಕುಂಬಾರ ಚಟ್ನಾಳ

ಬಾಲಾಜಿ ಕುಂಬಾರ ಚಟ್ನಾಳ
ಬೀದರ್‌ನಲ್ಲಿ ವಾಸವಿರುವ ಬಾಲಾಜಿ ಕುಂಬಾರ ಚಟ್ನಾಳರವರು ಶಿಕ್ಷಕರು ಮತ್ತು ಯುವ ಬರಹಗಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...