Homeಕರ್ನಾಟಕಬಸವಕಲ್ಯಾಣದ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನದಲ್ಲಿ ಎದ್ದ ಪ್ರಶ್ನೆಗಳು

ಬಸವಕಲ್ಯಾಣದ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನದಲ್ಲಿ ಎದ್ದ ಪ್ರಶ್ನೆಗಳು

- Advertisement -
- Advertisement -

ಸಮಾನತೆಯ ತತ್ವ ಸಾರಿದ ಬಸವಾದಿ ಶರಣರ ಆಶಯಗಳನ್ನು ಜನಮಾನಸಕ್ಕೆ ಮುಟ್ಟಿಸುವ ಉದ್ದೇಶವಷ್ಟೇ ಅಲ್ಲದೆ ’ಲಿಂಗಾಯತ ಸ್ವತಂತ್ರ ಧರ್ಮ’ ಆಗಬೇಕು, ಅದಕ್ಕೆ ಸಾಂವಿಧಾನಿಕ ಮಾನ್ಯತೆ ದೊರೆಯಬೇಕೆಂದು ರಾಜ್ಯದ ವಿವಿಧ ಮಠಾಧೀಶರು ಮತ್ತು ಬಸವಪರ ಸಂಘಟನೆಗಳ ನೇತೃತ್ವದಲ್ಲಿ ಹಿಂದಿನಿಂದಲೂ ಹೋರಾಟಗಳು ನಡೆಯುತ್ತಿವೆ. 2017ರಲ್ಲಿ ಮಾತೆ ಮಹಾದೇವಿ ಅವರ ನೇತೃತ್ವದಲ್ಲಿ ಮೊದಲು ಬೀದರ್‌ದಿಂದ ಆರಂಭವಾದ ಹೋರಾಟ ರಾಜ್ಯವಷ್ಟೇ ಅಲ್ಲದೆ ಮಹಾರಾಷ್ಟ್ರ, ದೆಹಲಿಗಳಲ್ಲಿಯೂ ನಡೆದು ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು

ಕಾಯಕ ಸಮುದಾಯಗಳು ಕೂಡಿ ಕಟ್ಟಿದ ಲಿಂಗಾಯತ ಧರ್ಮ ಹಿಂದೂ ಧರ್ಮದ ಭಾಗವಲ್ಲ; ಇದೊಂದು ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತ ಧರ್ಮ. ಹೀಗಾಗಿ ಸಾಂವಿಧಾನಿಕ ಮಾನ್ಯತೆ ದೊರೆಯಬೇಕೆಂಬ ಪ್ರಬಲ ಒತ್ತಾಯವನ್ನು ಲಿಂಗಾಯತ ಸಮುದಾಯ ಹಲವು ವರ್ಷಗಳಿಂದ ಮಾಡುತ್ತಿದೆ. ಈ ಹೋರಾಟಗಳ ಪ್ರತಿಫಲವಾಗಿ 2013-18ರವರೆಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚಿಸಿದ್ದ ಅಂದಿನ ಸಿಎಂ ಸಿದ್ದರಾಮಯ್ಯ ಅವರು ನ್ಯಾ. ನಾಗಮೋಹನ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು; ಆ ಮಟ್ಟಕ್ಕೆ ಲಿಂಗಾಯತ ಸಮುದಾಯ ಯಶಸ್ಸು ಕಂಡಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು ಒಪ್ಪಿರಲಿಲ್ಲ. ಅಲ್ಲಿಂದ ಲಿಂಗಾಯತ ಧರ್ಮ ಮಾನ್ಯತೆ ಹೋರಾಟ ಮುಂದುವರಿಯಲಿಲ್ಲ. ನಂತರ ರಾಜ್ಯದಲ್ಲಿ ಸರ್ಕಾರ ಬದಲಾಯಿತು.

ಮಾತೆ ಮಹಾದೇವಿ

ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಾಬಲ್ಯ ಹೊಂದಿರುವ ಲಿಂಗಾಯತ ಸಮುದಾಯ ಸೇರಿದಂತೆ ದೇಶದ ನಾನಾ ರಾಜ್ಯಗಳ ಲಿಂಗಾಯತರನ್ನು ಒಗ್ಗೂಡಿಸಿ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಹೋರಾಟ ಆರಂಭಿಸಬೇಕೆಂಬ ಉದ್ದೇಶದಿಂದ ಜಾಗತಿಕ ಲಿಂಗಾಯತ ಮಹಾಸಭಾ ರಚನೆಯಾಯಿತು. ಅದರ ವತಿಯಿಂದ, ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ದೊರಕಿಸಿಕೊಳ್ಳುವುದಕ್ಕಾಗಿ, ಮುಂದಿನ ಹೋರಾಟದ ದಿಕ್ಕುದೆಸೆ ಕಂಡುಕೊಳ್ಳುವುದಕ್ಕಾಗಿ ಹಾಗೂ ಸಮುದಾಯದ ಜಾಗೃತಿಗಾಗಿ ಮಾರ್ಚ್ 4, 5ರಂದು ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನವನ್ನು ಹಮ್ಮಿಕೊಳ್ಳಲಾಗಿತ್ತು.

ದೇಶದ ನಾನಾ ಭಾಗಗಳಿಂದ ಲಿಂಗಾಯತ ಸಮುದಾಯದವರನ್ನು ಆಹ್ವಾನಿಸಿ ಧರ್ಮ ಮಾನ್ಯತೆಯ ಹೋರಾಟ, ಮೀಸಲಾತಿ, ಜನಗಣತಿ ಸೇರಿದಂತೆ ಇತರೆ ವಿಷಯಗಳನ್ನು ಕುರಿತು ಚರ್ಚಿಸುವುದು ಅಧಿವೇಶನದ ಘನ ಉದ್ದೇಶವಾಗಿತ್ತು.

ಇದನ್ನೂ ಓದಿ: ಒಕ್ಕಲಿಗ-ಲಿಂಗಾಯಿತರ ಮೀಸಲಾತಿ ಹೆಚ್ಚಳ; ಮೂಗಿಗೆ ತುಪ್ಪ ಸವರಿದ ಸರ್ಕಾರ

ರಾಷ್ಟ್ರೀಯ ಲಿಂಗಾಯತ ಅಧಿವೇಶನವನ್ನು ಎರಡುಮೂರು ವರ್ಷಗಳ ಹಿಂದೆಯೇ ಮಾಡಬೇಕಿತ್ತು. ಆದರೆ ಕೋವಿಡ್ ಕಾರಣ ಸಾಧ್ಯವಾಗದಿದ್ದರಿಂದ ಈ ವರ್ಷ ಮಾರ್ಚ್ 4-5ರಂದು ಆಯೋಜಿಸಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಶಿವಾನಂದ ಜಾಮದರ್ ಹೇಳಿದರು. ಅಧಿವೇಶನವು ಎರಡು ದಿನಗಳ ಕಾಲ ಬಸವಕಲ್ಯಾಣದ ಥೇರ ಮೈದಾನದಲ್ಲಿ ನಡೆಸಲು ಅನುಮತಿ ಪಡೆಯಲಾಗಿತ್ತು. ಎಲ್ಲಾ ಸಿದ್ಧತೆಗಳು ನಡೆದಿದ್ದವು.

ಅಧಿವೇಶನದ ಮುನ್ನಾ ದಿನವೇ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ಜಾಗತಿಕ ಲಿಂಗಾಯತ ಮಹಾಸಭಾ ಆಯೋಜಿಸಿದ್ದ ಎರಡು ದಿನದ ಅಧಿವೇಶನದ ಮುನ್ನಾ ದಿನ ಅಂದರೆ ಮಾರ್ಚ್ 3ರಂದು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯನ್ನು ಏಕಾಏಕಿ ನಿಗದಿಗೊಳಿಸಿ ಅದೇ ಸ್ಥಳದಲ್ಲಿ ಆಯೋಜಿಸಲಾಯಿತು. ಪೂರ್ವ ನಿಯೋಜಿತವಾಗಿದ್ದ ಲಿಂಗಾಯತ ಮಹಾ ಅಧಿವೇಶನವನ್ನು ಅದೇ ಜಾಗದಲ್ಲಿ ನಡೆಸಲು ಒಂದಿಷ್ಟು ಮುಜುಗರವೂ ಉಂಟಾಯಿತು. ಬೃಹತ್ ವೇದಿಕೆ ಸೇರಿದಂತೆ ಬೇರೆ ರಾಜ್ಯಗಳಿಂದ ಅಧಿವೇಶನಕ್ಕೆ ಆಗಮಿಸುವ ವಿವಿಧ ಮಠಾಧೀಶರಿಗೆ, ಲಿಂಗಾಯತ ಅನುಯಾಯಿಗಳ ವಾಸ್ತವ್ಯಕ್ಕೆ ವಿವಿಧ ಕಾಲೇಜು, ಅನುಭವ ಮಂಟಪ ಸೇರಿದಂತೆ ನಾನಾ ಕಡೆ ವ್ಯವಸ್ಥೆ ಮಾಡಲಾಗಿತ್ತು. ಈ ಮಧ್ಯೆ ಬಿಜೆಪಿಯ ಕಾರ್ಯಕ್ರಮ ನಿಗದಿಯಾದ ಕಾರಣ ಹಲವರಿಗೆ ಅನುಮಾನ ಹುಟ್ಟಿಸಿತು.

ಅಧಿವೇಶನ ಮುನ್ನಾ ದಿನವೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವೇದಿಕೆ ಮೇಲಿದ್ದ ಬಿಜೆಪಿ ಕಾರ್ಯಕ್ರಮ ಆಯೋಜಿಸಿದ ಹಿಂದಿನ ಮರ್ಮವೇನು ಎಂಬುದು ಹಲವರಿಗೆ ಒಳಗೊಳಗೆ ಅನುಮಾನ ಕಾಡಿತು.

ಮಾರ್ಚ್ 3ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಸವಕಲ್ಯಾಣದ ಅನುಭವ ಮಂಟಪದಿಂದ ಯಾತ್ರೆಗೆ ಚಾಲನೆ ನೀಡಿ, ಬೃಹತ್ ರೋಡ್ ಶೋ ಹಾಗೂ ಬಹಿರಂಗ ಸಮಾವೇಶ ನಡೆಸಿದರು. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿಯ ಘಟಾನುಘಟಿ ನಾಯಕರು ಭಾಗವಹಿಸಿದ್ದರು. ವಿಜಯ ಸಂಕಲ್ಪ ಯಾತ್ರೆ ನೆಪದಲ್ಲಿ ಲಿಂಗಾಯತ ಸಮುದಾಯವನ್ನು ಸೆಳೆಯುವ ಪ್ರಯತ್ನ ಈ ಕಾರ್ಯಕ್ರಮದಲ್ಲಿ ನಡೆಯಿತು. ಲಿಂಗಾಯತರ ’ಜನಪ್ರಿಯ’ ನಾಯಕ ಎಂದು ಗುರುತಿಸಿಕೊಂಡಿದ್ದ ಬಿಎಸ್‌ವೈ ಅವರಿಗೆ ದಿಢೀರನೆ ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಲಿಂಗಾಯತ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದ ಬಿಜೆಪಿಗೆ ಲಿಂಗಾಯತ ಸಮುದಾಯದ ಸಿಟ್ಟನ್ನು ಶಮನಗೊಳಿಸುವುದು ಅತ್ಯಗತ್ಯವಾಗಿತ್ತು. ಅದಕ್ಕಾಗಿ ಈ ವೇದಿಕೆ ಸಜ್ಜಾಗಿತ್ತು. ಈ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರಿಂದ ಮಾತನಾಡಿಸಿ, ’ನನಗೆ ಯಾರೂ ಕುರ್ಚಿಯಿಂದ ಕೆಳಗಿಳಿಸಲಿಲ್ಲ, ನಾನೇ ಸ್ವಇಚ್ಛೆಯಿಂದ ಇಳಿದಿದ್ದೇನೆ, ಆದರೆ ಬಿಜೆಪಿ ಪಕ್ಷ ಸಂಘಟಿಸಲು ಉಸಿರಿರುವವರೆಗೆ ಶ್ರಮಿಸುವೆ’ ಎಂಬ ಸಂದೇಶವನ್ನು ರವಾನಿಸಲಾಗಿದೆ. ಇದರಿಂದ ಲಿಂಗಾಯತ ಸಮುದಾಯದ ಕೋಪ ಇಳಿಸಿದ್ದು ಅಷ್ಟೇ ಅಲ್ಲದೆ ಬಸವಕಲ್ಯಾಣದಲ್ಲಿ ಬಿಜೆಪಿ ಭದ್ರಕೋಟೆಯಾಗಿ ಕಟ್ಟಲು ಸಹಕಾರಿಯಾಗಿದೆ ಎಂದು ಮಾತನಾಡಿಕೊಳ್ಳಲಾಗುತ್ತಿದೆ.

ಬಸವಕಲ್ಯಾಣದ ಥೇರ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ವೇದಿಕೆ ಕಾರ್ಯಕ್ರಮ ಮುಗಿದ ಮರುದಿನವೇ ಅದೇ ಸ್ಥಳ ಹಾಗೂ ಅದೇ ವೇದಿಕೆಯಲ್ಲಿ ಲಿಂಗಾಯತ ಅಧಿವೇಶನ ಜರುಗಿತು. ರಾಜ್ಯ ಮತ್ತು ರಾಷ್ಟ್ರಮಟ್ಟದ ಬಿಜೆಪಿ ನಾಯಕರ ಅಬ್ಬರದ ಬ್ಯಾನರ್ ಮತ್ತು ಧ್ವಜಗಳು ಕಲ್ಯಾಣ ನೆಲದಲ್ಲಿ ರಾರಾಜಿಸುತ್ತಿದ್ದವು. ಅವುಗಳ ಮಧ್ಯೆ ಲಿಂಗಾಯತ ಅಧಿವೇಶನದ ಧ್ವಜಗಳು ಮತ್ತು ಬ್ಯಾನರ್‌ಗಳು ಸೇರಿದಂತೆ ಬಸವಾದಿ ಶರಣರ ಭಾವಚಿತ್ರಗಳು ಎದ್ದು ಕಾಣುತ್ತಿದ್ದವು.

ಜಾನಪದ ವಿದ್ವಾಂಸ ಗೋ.ರು. ಚನ್ನಬಸಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆದ ಈ ಅಧಿವೇಶನ ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಪಡೆಯಲು ಮುಂದಿನ ಹೋರಾಟ ಏನು? ಮೀಸಲಾತಿ ಹೇಗೆ ಸಿಗುತ್ತದೆ? ಕೇಂದ್ರಕ್ಕೆ ಶಿಫಾರಸ್ಸು ಮಾಡುವುದು ಸೇರಿದಂತೆ ವೀರಶೈವ-ಲಿಂಗಾಯತ ಗೊಂದಲ ಕುರಿತು ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆದವು.

ಬಾಲಾಜಿ ಕುಂಬಾರ ಚಟ್ನಾಳ

ಬಾಲಾಜಿ ಕುಂಬಾರ ಚಟ್ನಾಳ
ಬೀದರ್‌ನಲ್ಲಿ ವಾಸವಿರುವ ಬಾಲಾಜಿ ಕುಂಬಾರ ಚಟ್ನಾಳರವರು ಶಿಕ್ಷಕರು ಮತ್ತು ಯುವ ಬರಹಗಾರರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...