Homeಮುಖಪುಟಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

- Advertisement -
- Advertisement -

20, ಮೇ 2021ರಂದು ಯುಜಿಸಿ ಒಂದು ಸುತ್ತೋಲೆ ಹೊರಡಿಸಿ ‘ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಶೇ. 40% ಪ್ರಮಾಣದಲ್ಲಿ ಆನ್ ಲೈನ್ ತರಗತಿಗಳನ್ನು ತೆಗೆದುಕೊಳ್ಳಬೇಕು ಮತ್ತು ಇದರ ಜೊತೆಗೆ ಈಗಾಗಲೇ ಇರುವ ಸ್ವಯಂ ಎನ್ನುವ ಆನ್ ಲೈನ್ ವೇದಿಕೆ ಮೂಲಕವೂ ವಾರಕ್ಕೆ ಹಲವು ಗಂಟೆಗಳ ಕಾಲ ಪಾಠ ಮಾಡಬೇಕು’ ಎಂದು ಆದೇಶ ಹೊರಡಿಸಿದೆ. ಬಹುಶಃ ಪದವಿ, ವಿವಿಗಳಲ್ಲಿ ಬೋಧಿಸುತ್ತಿರುವ ಪ್ರಾಧ್ಯಾಪಕರು ಇದನ್ನು ಗಮನಿಸಿದಂತಿಲ್ಲ, ಗಮನಿಸಿಯೂ ಈಗಾಗಲೇ ಒಂದು ವರ್ಷದಿಂದ ಆನ್ ಲೈನ್ ಕ್ಲಾಸ್ ಮಾಡುತ್ತಿದ್ದೇವೆ, ಇದನ್ನು ಮುಂದುವರಿಸಿದರಾಯಿತು ಎನ್ನುವ ಭಾವದಲ್ಲಿರಬಹುದು. ಇನ್ನುಳಿದಂತೆ ಇದರ ಅಪಾಯದ ಅರಿವಿರುವವರು ಏನೂ ಮಾಡಲಾಗದೆ ಅಸಹಾಯಕತೆಯಲ್ಲಿದ್ದಾರೆ.

 

ಈಗ ಆನ್ ಲೈನ್ ನ ಸಾಧಕ-ಬಾಧಕಗಳ ಚರ್ಚೆ ಸದ್ಯಕ್ಕೆ ಪಕ್ಕಕ್ಕೆ ಇಡೋಣ. ಈ ಆನ್ ಲೈನ್ ಕ್ಲಾಸ್ ಗಳ ಸಾಧ್ಯತೆ ಕುರಿತು ಪರಿಶೀಲಿಸೋಣ..

2018-19ರ ಅಧಿಕೃತ ಸಮೀಕ್ಷೆಯ ಪ್ರಕಾರ ಭಾರತದಲ್ಲಿ 993 ವಿಶ್ವವಿದ್ಯಾಲಯಗಳು, 39,000 ಕಾಲೇಜುಗಳು, 3.73 ಕೋಟಿ ವಿದ್ಯಾರ್ಥಿಗಳು ಮತ್ತು 14.13 ಲಕ್ಷ ಪ್ರಾಧ್ಯಾಪಕರಿದ್ದಾರೆ.

ಈಗ ಆನಲೈನ್ ತರಗತಿಗಳು ಮತ್ತು ಮುಂದಿನ ಶಿಕ್ಷಣಕ್ರಮ್ಕೆ ಸಂಬಂಧಪಟ್ಟಂತೆ ಯುಜಿಸಿಯ ಮುಂದೆ ಕೆಲವು ಮೂಲಭೂತ ಪ್ರಶ್ನೆಗಳಿವೆ. ಈ ಪ್ರಶ್ನೆಗಳಿಗೆ ಉತ್ತರ ದೊರೆಯದೇ ಹೊಸ ಶಿಕ್ಷಣ ಕ್ರಮವನ್ನು ಸಮರ್ಪಕವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ.

1. ಕೇಂದ್ರ ಸರಕಾರವು ಶಿಕ್ಷಣಕ್ಕೆ ಜಿಡಿಪಿಯ 1.9% ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 6.2% ಪ್ರಮಾಣದಲ್ಲಿ, ರಾಜ್ಯ ಸರಕಾರಗಳು ಜಿಡಿಪಿಯ 3.2 % ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 11% ಪ್ರಮಾಣದಲ್ಲಿ ಹಣವನ್ನು ಮೀಸಲಿಡುತ್ತಿವೆ. ಈ ಮೊತ್ತದಿಂದ ಆನ್ ಲೈನ್ ತರಗತಿಗೆ ಶೇ. 10% ಪ್ರಮಾಣದಲ್ಲಿ ಮಾತ್ರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸಾದ್ಯ. ಮಿಕ್ಕ 85% ಸೌಲಭ್ಯವನ್ನು ಯಾರು ಪೂರೈಸುತ್ತಾರೆ?

2. ಈ ನಿರ್ಧಾರಕ್ಕೆ ಬರುವುದಕ್ಕಿಂತ ಮೊದಲು ಇದರ ಹಕ್ಕುದಾರರಾದ ವಿದ್ಯಾರ್ಥಿಗಳ ಸಂಘಟನೆಗಳು, ಪೋಷಕರು, ಪ್ರಾಧ್ಯಾಪಕ ಸಂಘಟನೆಗಳು, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದೀರಾ? ಅವರ ಅಭಿಪ್ರಾಯ ಸಂಗ್ರಹಿಸಿದ್ದೀರಾ? ಹೌದು ಎಂದಾದರೆ ಅದರ ಮಾಹಿತಿಯನ್ನು ಸಾರ್ವಜನಿಕವಾಗಿ ಯುಜಿಸಿಯು ಪ್ರಕಟಿಸಬೇಕು.

3. ಗ್ರಾಮೀಣ ಬಾಗದಲ್ಲಿ ಕನಿಷ್ಠ 18 ತಾಸುಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಕೆ ಒದಗಿಸುವಿರಾ? Hardware and software ಸೌಲಭ್ಯಗಳಿವೆಯೇ?

4. ವ್ಯಾಸಂಗ ಮಾಡುತ್ತಿರುವ 3.73 ಕೋಟಿ ವಿದ್ಯಾರ್ಥಿಗಳ ಬಳಿ ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್ ಇದೆಯೇ? ಇದರ ದತ್ತಾಂಶ ಸಂಗ್ರಹಿಸಿದ್ದೀರಾ?

5. ಪ್ರತಿ ಗ್ರಾಮ, ಹೋಬಳಿಗೆ 4ಜಿ ನೆಟ್ ವರ್ಕ್ ಸಂಪರ್ಕ ಸತತವಾಗಿ ಯಾವುದೇ ಅಡೆತಡೆಗಳಿಲ್ಲದೆ ದೊರಕುವುದೇ? ಇದನ್ನು ಖಾತ್ರಿ ಪಡಿಸಿಕೊಂಡಿದ್ದೀರಾ?

6. ಎಲ್ಲಾ ಕಾಲೇಜುಗಳಲ್ಲಿ ಕಂಪ್ಯೂಟರ್ ಗಳಿವೆಯೇ? ಆನ್ ಲೈನ್ ಸಂಪರ್ಕ ಮತ್ತು ತಂತ್ರಜ್ಞಾನದ ಪೂರೈಕೆ ಸಮರ್ಪವಾಗಿದೆಯೇ?

7. ಆನ್ ಲೈನ್ ಕ್ಲಾಸ್ ಗಳಿಗೆ ಅಗತ್ಯವಾದ ‘ ವ್ಯಾಸಂಗ ಕ್ರಮ'(pedagogy) ಎಲ್ಲಿದೆ? Study materials ಎಲ್ಲಿದೆ? ಈ ಕುರಿತು ತಜ್ಞರ ಸಮಿತಿ ರಚಿಸಲಾಗಿದೆಯೇ?

8. ಪ್ರಾಧ್ಯಾಪಕರಿಗೆ ಆನ್ ಲೈನ್ ಭೋದನೆಗೆ ಅಗತ್ಯವಾದ ತರಬೇತಿ ದೊರಕಿದೆಯೇ?

9. ಮುಖ್ಯವಾಗಿ ಈ ಕೋವಿಡ್ ಸಾಂಕ್ರಾಮಿಕವನ್ನು ಸಂಪೂರ್ಣವಾಗಿ ನಿಯಂತ್ರಿಸಿ ಶೀಘ್ರದಲ್ಲೇ ಆಫ್ ಲೈನ್ ತರಗತಿಗಳನ್ನು ಪ್ರಾರಂಭಿಸಲು ಬೇಕಾದ ಕಾಲಮಿತಿಯನ್ನು ಸ್ಪಷ್ಟಪಡಿಸಬೇಕಿದೆ. ಮತ್ತು ಈ ಶೇ. 40% ಆನ್ ಲೈನ್ ನಿರಂತರವಾಗಿರುತ್ತದೆ ಎನ್ನುವುದು ನಿಮ್ಮ ನಿರ್ಧಾರವಾದರೆ ಅದಕ್ಕೆ ಸೂಕ್ತ ಸೌಲಭ್ಯಗಳು ಎಲ್ಲಿವೆ ಎಂಬುದನ್ನು ಯುಜಿಸಿಯೇ ಹೇಳಬೇಕು.

ಇನ್ನೂ ಹತ್ತಾರು ಪ್ರಶ್ನೆಗಳಿವೆ. ಈ ಎಲ್ಲದಕ್ಕೂ ಶಿಕ್ಷಣ ಇಲಾಖೆ ಮತ್ತು ಯುಜಿಸಿ ಸೂಕ್ತ ರೀತಿಯಲ್ಲಿ ಉತ್ತರಿಸಬೇಕು.

ಮುಖ್ಯವಾಗಿ ಪ್ರಾಧ್ಯಾಪಕರು, ವಿದ್ಯಾರ್ಥಿ ಸಂಘಟನೆಗಳು, ಪೋಷಕರು, ಶಿಕ್ಷಣ ತಜ್ಞರು ಯುಜಿಸಿಯ ಹೊಸ ಮಾರ್ಗಸೂಚಿಯಿಂದ ಗೊಂದಲಕ್ಕೀಡಾಗಿದ್ದಾರೆ. ನಿಧಾನಕ್ಕೆ ಕೊರೋನಾ, ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕತ್ತಲಾವರಿಸುವಂತೆ ಮಾಡುತ್ತಿದೆ.


ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...