Homeಮುಖಪುಟಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

- Advertisement -
- Advertisement -

20, ಮೇ 2021ರಂದು ಯುಜಿಸಿ ಒಂದು ಸುತ್ತೋಲೆ ಹೊರಡಿಸಿ ‘ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಶೇ. 40% ಪ್ರಮಾಣದಲ್ಲಿ ಆನ್ ಲೈನ್ ತರಗತಿಗಳನ್ನು ತೆಗೆದುಕೊಳ್ಳಬೇಕು ಮತ್ತು ಇದರ ಜೊತೆಗೆ ಈಗಾಗಲೇ ಇರುವ ಸ್ವಯಂ ಎನ್ನುವ ಆನ್ ಲೈನ್ ವೇದಿಕೆ ಮೂಲಕವೂ ವಾರಕ್ಕೆ ಹಲವು ಗಂಟೆಗಳ ಕಾಲ ಪಾಠ ಮಾಡಬೇಕು’ ಎಂದು ಆದೇಶ ಹೊರಡಿಸಿದೆ. ಬಹುಶಃ ಪದವಿ, ವಿವಿಗಳಲ್ಲಿ ಬೋಧಿಸುತ್ತಿರುವ ಪ್ರಾಧ್ಯಾಪಕರು ಇದನ್ನು ಗಮನಿಸಿದಂತಿಲ್ಲ, ಗಮನಿಸಿಯೂ ಈಗಾಗಲೇ ಒಂದು ವರ್ಷದಿಂದ ಆನ್ ಲೈನ್ ಕ್ಲಾಸ್ ಮಾಡುತ್ತಿದ್ದೇವೆ, ಇದನ್ನು ಮುಂದುವರಿಸಿದರಾಯಿತು ಎನ್ನುವ ಭಾವದಲ್ಲಿರಬಹುದು. ಇನ್ನುಳಿದಂತೆ ಇದರ ಅಪಾಯದ ಅರಿವಿರುವವರು ಏನೂ ಮಾಡಲಾಗದೆ ಅಸಹಾಯಕತೆಯಲ್ಲಿದ್ದಾರೆ.

 

ಈಗ ಆನ್ ಲೈನ್ ನ ಸಾಧಕ-ಬಾಧಕಗಳ ಚರ್ಚೆ ಸದ್ಯಕ್ಕೆ ಪಕ್ಕಕ್ಕೆ ಇಡೋಣ. ಈ ಆನ್ ಲೈನ್ ಕ್ಲಾಸ್ ಗಳ ಸಾಧ್ಯತೆ ಕುರಿತು ಪರಿಶೀಲಿಸೋಣ..

2018-19ರ ಅಧಿಕೃತ ಸಮೀಕ್ಷೆಯ ಪ್ರಕಾರ ಭಾರತದಲ್ಲಿ 993 ವಿಶ್ವವಿದ್ಯಾಲಯಗಳು, 39,000 ಕಾಲೇಜುಗಳು, 3.73 ಕೋಟಿ ವಿದ್ಯಾರ್ಥಿಗಳು ಮತ್ತು 14.13 ಲಕ್ಷ ಪ್ರಾಧ್ಯಾಪಕರಿದ್ದಾರೆ.

ಈಗ ಆನಲೈನ್ ತರಗತಿಗಳು ಮತ್ತು ಮುಂದಿನ ಶಿಕ್ಷಣಕ್ರಮ್ಕೆ ಸಂಬಂಧಪಟ್ಟಂತೆ ಯುಜಿಸಿಯ ಮುಂದೆ ಕೆಲವು ಮೂಲಭೂತ ಪ್ರಶ್ನೆಗಳಿವೆ. ಈ ಪ್ರಶ್ನೆಗಳಿಗೆ ಉತ್ತರ ದೊರೆಯದೇ ಹೊಸ ಶಿಕ್ಷಣ ಕ್ರಮವನ್ನು ಸಮರ್ಪಕವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ.

1. ಕೇಂದ್ರ ಸರಕಾರವು ಶಿಕ್ಷಣಕ್ಕೆ ಜಿಡಿಪಿಯ 1.9% ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 6.2% ಪ್ರಮಾಣದಲ್ಲಿ, ರಾಜ್ಯ ಸರಕಾರಗಳು ಜಿಡಿಪಿಯ 3.2 % ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 11% ಪ್ರಮಾಣದಲ್ಲಿ ಹಣವನ್ನು ಮೀಸಲಿಡುತ್ತಿವೆ. ಈ ಮೊತ್ತದಿಂದ ಆನ್ ಲೈನ್ ತರಗತಿಗೆ ಶೇ. 10% ಪ್ರಮಾಣದಲ್ಲಿ ಮಾತ್ರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸಾದ್ಯ. ಮಿಕ್ಕ 85% ಸೌಲಭ್ಯವನ್ನು ಯಾರು ಪೂರೈಸುತ್ತಾರೆ?

2. ಈ ನಿರ್ಧಾರಕ್ಕೆ ಬರುವುದಕ್ಕಿಂತ ಮೊದಲು ಇದರ ಹಕ್ಕುದಾರರಾದ ವಿದ್ಯಾರ್ಥಿಗಳ ಸಂಘಟನೆಗಳು, ಪೋಷಕರು, ಪ್ರಾಧ್ಯಾಪಕ ಸಂಘಟನೆಗಳು, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದೀರಾ? ಅವರ ಅಭಿಪ್ರಾಯ ಸಂಗ್ರಹಿಸಿದ್ದೀರಾ? ಹೌದು ಎಂದಾದರೆ ಅದರ ಮಾಹಿತಿಯನ್ನು ಸಾರ್ವಜನಿಕವಾಗಿ ಯುಜಿಸಿಯು ಪ್ರಕಟಿಸಬೇಕು.

3. ಗ್ರಾಮೀಣ ಬಾಗದಲ್ಲಿ ಕನಿಷ್ಠ 18 ತಾಸುಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಕೆ ಒದಗಿಸುವಿರಾ? Hardware and software ಸೌಲಭ್ಯಗಳಿವೆಯೇ?

4. ವ್ಯಾಸಂಗ ಮಾಡುತ್ತಿರುವ 3.73 ಕೋಟಿ ವಿದ್ಯಾರ್ಥಿಗಳ ಬಳಿ ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್ ಇದೆಯೇ? ಇದರ ದತ್ತಾಂಶ ಸಂಗ್ರಹಿಸಿದ್ದೀರಾ?

5. ಪ್ರತಿ ಗ್ರಾಮ, ಹೋಬಳಿಗೆ 4ಜಿ ನೆಟ್ ವರ್ಕ್ ಸಂಪರ್ಕ ಸತತವಾಗಿ ಯಾವುದೇ ಅಡೆತಡೆಗಳಿಲ್ಲದೆ ದೊರಕುವುದೇ? ಇದನ್ನು ಖಾತ್ರಿ ಪಡಿಸಿಕೊಂಡಿದ್ದೀರಾ?

6. ಎಲ್ಲಾ ಕಾಲೇಜುಗಳಲ್ಲಿ ಕಂಪ್ಯೂಟರ್ ಗಳಿವೆಯೇ? ಆನ್ ಲೈನ್ ಸಂಪರ್ಕ ಮತ್ತು ತಂತ್ರಜ್ಞಾನದ ಪೂರೈಕೆ ಸಮರ್ಪವಾಗಿದೆಯೇ?

7. ಆನ್ ಲೈನ್ ಕ್ಲಾಸ್ ಗಳಿಗೆ ಅಗತ್ಯವಾದ ‘ ವ್ಯಾಸಂಗ ಕ್ರಮ'(pedagogy) ಎಲ್ಲಿದೆ? Study materials ಎಲ್ಲಿದೆ? ಈ ಕುರಿತು ತಜ್ಞರ ಸಮಿತಿ ರಚಿಸಲಾಗಿದೆಯೇ?

8. ಪ್ರಾಧ್ಯಾಪಕರಿಗೆ ಆನ್ ಲೈನ್ ಭೋದನೆಗೆ ಅಗತ್ಯವಾದ ತರಬೇತಿ ದೊರಕಿದೆಯೇ?

9. ಮುಖ್ಯವಾಗಿ ಈ ಕೋವಿಡ್ ಸಾಂಕ್ರಾಮಿಕವನ್ನು ಸಂಪೂರ್ಣವಾಗಿ ನಿಯಂತ್ರಿಸಿ ಶೀಘ್ರದಲ್ಲೇ ಆಫ್ ಲೈನ್ ತರಗತಿಗಳನ್ನು ಪ್ರಾರಂಭಿಸಲು ಬೇಕಾದ ಕಾಲಮಿತಿಯನ್ನು ಸ್ಪಷ್ಟಪಡಿಸಬೇಕಿದೆ. ಮತ್ತು ಈ ಶೇ. 40% ಆನ್ ಲೈನ್ ನಿರಂತರವಾಗಿರುತ್ತದೆ ಎನ್ನುವುದು ನಿಮ್ಮ ನಿರ್ಧಾರವಾದರೆ ಅದಕ್ಕೆ ಸೂಕ್ತ ಸೌಲಭ್ಯಗಳು ಎಲ್ಲಿವೆ ಎಂಬುದನ್ನು ಯುಜಿಸಿಯೇ ಹೇಳಬೇಕು.

ಇನ್ನೂ ಹತ್ತಾರು ಪ್ರಶ್ನೆಗಳಿವೆ. ಈ ಎಲ್ಲದಕ್ಕೂ ಶಿಕ್ಷಣ ಇಲಾಖೆ ಮತ್ತು ಯುಜಿಸಿ ಸೂಕ್ತ ರೀತಿಯಲ್ಲಿ ಉತ್ತರಿಸಬೇಕು.

ಮುಖ್ಯವಾಗಿ ಪ್ರಾಧ್ಯಾಪಕರು, ವಿದ್ಯಾರ್ಥಿ ಸಂಘಟನೆಗಳು, ಪೋಷಕರು, ಶಿಕ್ಷಣ ತಜ್ಞರು ಯುಜಿಸಿಯ ಹೊಸ ಮಾರ್ಗಸೂಚಿಯಿಂದ ಗೊಂದಲಕ್ಕೀಡಾಗಿದ್ದಾರೆ. ನಿಧಾನಕ್ಕೆ ಕೊರೋನಾ, ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕತ್ತಲಾವರಿಸುವಂತೆ ಮಾಡುತ್ತಿದೆ.


ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...