Homeಮುಖಪುಟಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

- Advertisement -
- Advertisement -

20, ಮೇ 2021ರಂದು ಯುಜಿಸಿ ಒಂದು ಸುತ್ತೋಲೆ ಹೊರಡಿಸಿ ‘ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಶೇ. 40% ಪ್ರಮಾಣದಲ್ಲಿ ಆನ್ ಲೈನ್ ತರಗತಿಗಳನ್ನು ತೆಗೆದುಕೊಳ್ಳಬೇಕು ಮತ್ತು ಇದರ ಜೊತೆಗೆ ಈಗಾಗಲೇ ಇರುವ ಸ್ವಯಂ ಎನ್ನುವ ಆನ್ ಲೈನ್ ವೇದಿಕೆ ಮೂಲಕವೂ ವಾರಕ್ಕೆ ಹಲವು ಗಂಟೆಗಳ ಕಾಲ ಪಾಠ ಮಾಡಬೇಕು’ ಎಂದು ಆದೇಶ ಹೊರಡಿಸಿದೆ. ಬಹುಶಃ ಪದವಿ, ವಿವಿಗಳಲ್ಲಿ ಬೋಧಿಸುತ್ತಿರುವ ಪ್ರಾಧ್ಯಾಪಕರು ಇದನ್ನು ಗಮನಿಸಿದಂತಿಲ್ಲ, ಗಮನಿಸಿಯೂ ಈಗಾಗಲೇ ಒಂದು ವರ್ಷದಿಂದ ಆನ್ ಲೈನ್ ಕ್ಲಾಸ್ ಮಾಡುತ್ತಿದ್ದೇವೆ, ಇದನ್ನು ಮುಂದುವರಿಸಿದರಾಯಿತು ಎನ್ನುವ ಭಾವದಲ್ಲಿರಬಹುದು. ಇನ್ನುಳಿದಂತೆ ಇದರ ಅಪಾಯದ ಅರಿವಿರುವವರು ಏನೂ ಮಾಡಲಾಗದೆ ಅಸಹಾಯಕತೆಯಲ್ಲಿದ್ದಾರೆ.

 

ಈಗ ಆನ್ ಲೈನ್ ನ ಸಾಧಕ-ಬಾಧಕಗಳ ಚರ್ಚೆ ಸದ್ಯಕ್ಕೆ ಪಕ್ಕಕ್ಕೆ ಇಡೋಣ. ಈ ಆನ್ ಲೈನ್ ಕ್ಲಾಸ್ ಗಳ ಸಾಧ್ಯತೆ ಕುರಿತು ಪರಿಶೀಲಿಸೋಣ..

2018-19ರ ಅಧಿಕೃತ ಸಮೀಕ್ಷೆಯ ಪ್ರಕಾರ ಭಾರತದಲ್ಲಿ 993 ವಿಶ್ವವಿದ್ಯಾಲಯಗಳು, 39,000 ಕಾಲೇಜುಗಳು, 3.73 ಕೋಟಿ ವಿದ್ಯಾರ್ಥಿಗಳು ಮತ್ತು 14.13 ಲಕ್ಷ ಪ್ರಾಧ್ಯಾಪಕರಿದ್ದಾರೆ.

ಈಗ ಆನಲೈನ್ ತರಗತಿಗಳು ಮತ್ತು ಮುಂದಿನ ಶಿಕ್ಷಣಕ್ರಮ್ಕೆ ಸಂಬಂಧಪಟ್ಟಂತೆ ಯುಜಿಸಿಯ ಮುಂದೆ ಕೆಲವು ಮೂಲಭೂತ ಪ್ರಶ್ನೆಗಳಿವೆ. ಈ ಪ್ರಶ್ನೆಗಳಿಗೆ ಉತ್ತರ ದೊರೆಯದೇ ಹೊಸ ಶಿಕ್ಷಣ ಕ್ರಮವನ್ನು ಸಮರ್ಪಕವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ.

1. ಕೇಂದ್ರ ಸರಕಾರವು ಶಿಕ್ಷಣಕ್ಕೆ ಜಿಡಿಪಿಯ 1.9% ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 6.2% ಪ್ರಮಾಣದಲ್ಲಿ, ರಾಜ್ಯ ಸರಕಾರಗಳು ಜಿಡಿಪಿಯ 3.2 % ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 11% ಪ್ರಮಾಣದಲ್ಲಿ ಹಣವನ್ನು ಮೀಸಲಿಡುತ್ತಿವೆ. ಈ ಮೊತ್ತದಿಂದ ಆನ್ ಲೈನ್ ತರಗತಿಗೆ ಶೇ. 10% ಪ್ರಮಾಣದಲ್ಲಿ ಮಾತ್ರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸಾದ್ಯ. ಮಿಕ್ಕ 85% ಸೌಲಭ್ಯವನ್ನು ಯಾರು ಪೂರೈಸುತ್ತಾರೆ?

2. ಈ ನಿರ್ಧಾರಕ್ಕೆ ಬರುವುದಕ್ಕಿಂತ ಮೊದಲು ಇದರ ಹಕ್ಕುದಾರರಾದ ವಿದ್ಯಾರ್ಥಿಗಳ ಸಂಘಟನೆಗಳು, ಪೋಷಕರು, ಪ್ರಾಧ್ಯಾಪಕ ಸಂಘಟನೆಗಳು, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದೀರಾ? ಅವರ ಅಭಿಪ್ರಾಯ ಸಂಗ್ರಹಿಸಿದ್ದೀರಾ? ಹೌದು ಎಂದಾದರೆ ಅದರ ಮಾಹಿತಿಯನ್ನು ಸಾರ್ವಜನಿಕವಾಗಿ ಯುಜಿಸಿಯು ಪ್ರಕಟಿಸಬೇಕು.

3. ಗ್ರಾಮೀಣ ಬಾಗದಲ್ಲಿ ಕನಿಷ್ಠ 18 ತಾಸುಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಕೆ ಒದಗಿಸುವಿರಾ? Hardware and software ಸೌಲಭ್ಯಗಳಿವೆಯೇ?

4. ವ್ಯಾಸಂಗ ಮಾಡುತ್ತಿರುವ 3.73 ಕೋಟಿ ವಿದ್ಯಾರ್ಥಿಗಳ ಬಳಿ ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್ ಇದೆಯೇ? ಇದರ ದತ್ತಾಂಶ ಸಂಗ್ರಹಿಸಿದ್ದೀರಾ?

5. ಪ್ರತಿ ಗ್ರಾಮ, ಹೋಬಳಿಗೆ 4ಜಿ ನೆಟ್ ವರ್ಕ್ ಸಂಪರ್ಕ ಸತತವಾಗಿ ಯಾವುದೇ ಅಡೆತಡೆಗಳಿಲ್ಲದೆ ದೊರಕುವುದೇ? ಇದನ್ನು ಖಾತ್ರಿ ಪಡಿಸಿಕೊಂಡಿದ್ದೀರಾ?

6. ಎಲ್ಲಾ ಕಾಲೇಜುಗಳಲ್ಲಿ ಕಂಪ್ಯೂಟರ್ ಗಳಿವೆಯೇ? ಆನ್ ಲೈನ್ ಸಂಪರ್ಕ ಮತ್ತು ತಂತ್ರಜ್ಞಾನದ ಪೂರೈಕೆ ಸಮರ್ಪವಾಗಿದೆಯೇ?

7. ಆನ್ ಲೈನ್ ಕ್ಲಾಸ್ ಗಳಿಗೆ ಅಗತ್ಯವಾದ ‘ ವ್ಯಾಸಂಗ ಕ್ರಮ'(pedagogy) ಎಲ್ಲಿದೆ? Study materials ಎಲ್ಲಿದೆ? ಈ ಕುರಿತು ತಜ್ಞರ ಸಮಿತಿ ರಚಿಸಲಾಗಿದೆಯೇ?

8. ಪ್ರಾಧ್ಯಾಪಕರಿಗೆ ಆನ್ ಲೈನ್ ಭೋದನೆಗೆ ಅಗತ್ಯವಾದ ತರಬೇತಿ ದೊರಕಿದೆಯೇ?

9. ಮುಖ್ಯವಾಗಿ ಈ ಕೋವಿಡ್ ಸಾಂಕ್ರಾಮಿಕವನ್ನು ಸಂಪೂರ್ಣವಾಗಿ ನಿಯಂತ್ರಿಸಿ ಶೀಘ್ರದಲ್ಲೇ ಆಫ್ ಲೈನ್ ತರಗತಿಗಳನ್ನು ಪ್ರಾರಂಭಿಸಲು ಬೇಕಾದ ಕಾಲಮಿತಿಯನ್ನು ಸ್ಪಷ್ಟಪಡಿಸಬೇಕಿದೆ. ಮತ್ತು ಈ ಶೇ. 40% ಆನ್ ಲೈನ್ ನಿರಂತರವಾಗಿರುತ್ತದೆ ಎನ್ನುವುದು ನಿಮ್ಮ ನಿರ್ಧಾರವಾದರೆ ಅದಕ್ಕೆ ಸೂಕ್ತ ಸೌಲಭ್ಯಗಳು ಎಲ್ಲಿವೆ ಎಂಬುದನ್ನು ಯುಜಿಸಿಯೇ ಹೇಳಬೇಕು.

ಇನ್ನೂ ಹತ್ತಾರು ಪ್ರಶ್ನೆಗಳಿವೆ. ಈ ಎಲ್ಲದಕ್ಕೂ ಶಿಕ್ಷಣ ಇಲಾಖೆ ಮತ್ತು ಯುಜಿಸಿ ಸೂಕ್ತ ರೀತಿಯಲ್ಲಿ ಉತ್ತರಿಸಬೇಕು.

ಮುಖ್ಯವಾಗಿ ಪ್ರಾಧ್ಯಾಪಕರು, ವಿದ್ಯಾರ್ಥಿ ಸಂಘಟನೆಗಳು, ಪೋಷಕರು, ಶಿಕ್ಷಣ ತಜ್ಞರು ಯುಜಿಸಿಯ ಹೊಸ ಮಾರ್ಗಸೂಚಿಯಿಂದ ಗೊಂದಲಕ್ಕೀಡಾಗಿದ್ದಾರೆ. ನಿಧಾನಕ್ಕೆ ಕೊರೋನಾ, ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕತ್ತಲಾವರಿಸುವಂತೆ ಮಾಡುತ್ತಿದೆ.


ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...