Homeಮುಖಪುಟಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

- Advertisement -
- Advertisement -

20, ಮೇ 2021ರಂದು ಯುಜಿಸಿ ಒಂದು ಸುತ್ತೋಲೆ ಹೊರಡಿಸಿ ‘ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಶೇ. 40% ಪ್ರಮಾಣದಲ್ಲಿ ಆನ್ ಲೈನ್ ತರಗತಿಗಳನ್ನು ತೆಗೆದುಕೊಳ್ಳಬೇಕು ಮತ್ತು ಇದರ ಜೊತೆಗೆ ಈಗಾಗಲೇ ಇರುವ ಸ್ವಯಂ ಎನ್ನುವ ಆನ್ ಲೈನ್ ವೇದಿಕೆ ಮೂಲಕವೂ ವಾರಕ್ಕೆ ಹಲವು ಗಂಟೆಗಳ ಕಾಲ ಪಾಠ ಮಾಡಬೇಕು’ ಎಂದು ಆದೇಶ ಹೊರಡಿಸಿದೆ. ಬಹುಶಃ ಪದವಿ, ವಿವಿಗಳಲ್ಲಿ ಬೋಧಿಸುತ್ತಿರುವ ಪ್ರಾಧ್ಯಾಪಕರು ಇದನ್ನು ಗಮನಿಸಿದಂತಿಲ್ಲ, ಗಮನಿಸಿಯೂ ಈಗಾಗಲೇ ಒಂದು ವರ್ಷದಿಂದ ಆನ್ ಲೈನ್ ಕ್ಲಾಸ್ ಮಾಡುತ್ತಿದ್ದೇವೆ, ಇದನ್ನು ಮುಂದುವರಿಸಿದರಾಯಿತು ಎನ್ನುವ ಭಾವದಲ್ಲಿರಬಹುದು. ಇನ್ನುಳಿದಂತೆ ಇದರ ಅಪಾಯದ ಅರಿವಿರುವವರು ಏನೂ ಮಾಡಲಾಗದೆ ಅಸಹಾಯಕತೆಯಲ್ಲಿದ್ದಾರೆ.

 

ಈಗ ಆನ್ ಲೈನ್ ನ ಸಾಧಕ-ಬಾಧಕಗಳ ಚರ್ಚೆ ಸದ್ಯಕ್ಕೆ ಪಕ್ಕಕ್ಕೆ ಇಡೋಣ. ಈ ಆನ್ ಲೈನ್ ಕ್ಲಾಸ್ ಗಳ ಸಾಧ್ಯತೆ ಕುರಿತು ಪರಿಶೀಲಿಸೋಣ..

2018-19ರ ಅಧಿಕೃತ ಸಮೀಕ್ಷೆಯ ಪ್ರಕಾರ ಭಾರತದಲ್ಲಿ 993 ವಿಶ್ವವಿದ್ಯಾಲಯಗಳು, 39,000 ಕಾಲೇಜುಗಳು, 3.73 ಕೋಟಿ ವಿದ್ಯಾರ್ಥಿಗಳು ಮತ್ತು 14.13 ಲಕ್ಷ ಪ್ರಾಧ್ಯಾಪಕರಿದ್ದಾರೆ.

ಈಗ ಆನಲೈನ್ ತರಗತಿಗಳು ಮತ್ತು ಮುಂದಿನ ಶಿಕ್ಷಣಕ್ರಮ್ಕೆ ಸಂಬಂಧಪಟ್ಟಂತೆ ಯುಜಿಸಿಯ ಮುಂದೆ ಕೆಲವು ಮೂಲಭೂತ ಪ್ರಶ್ನೆಗಳಿವೆ. ಈ ಪ್ರಶ್ನೆಗಳಿಗೆ ಉತ್ತರ ದೊರೆಯದೇ ಹೊಸ ಶಿಕ್ಷಣ ಕ್ರಮವನ್ನು ಸಮರ್ಪಕವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ.

1. ಕೇಂದ್ರ ಸರಕಾರವು ಶಿಕ್ಷಣಕ್ಕೆ ಜಿಡಿಪಿಯ 1.9% ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 6.2% ಪ್ರಮಾಣದಲ್ಲಿ, ರಾಜ್ಯ ಸರಕಾರಗಳು ಜಿಡಿಪಿಯ 3.2 % ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 11% ಪ್ರಮಾಣದಲ್ಲಿ ಹಣವನ್ನು ಮೀಸಲಿಡುತ್ತಿವೆ. ಈ ಮೊತ್ತದಿಂದ ಆನ್ ಲೈನ್ ತರಗತಿಗೆ ಶೇ. 10% ಪ್ರಮಾಣದಲ್ಲಿ ಮಾತ್ರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸಾದ್ಯ. ಮಿಕ್ಕ 85% ಸೌಲಭ್ಯವನ್ನು ಯಾರು ಪೂರೈಸುತ್ತಾರೆ?

2. ಈ ನಿರ್ಧಾರಕ್ಕೆ ಬರುವುದಕ್ಕಿಂತ ಮೊದಲು ಇದರ ಹಕ್ಕುದಾರರಾದ ವಿದ್ಯಾರ್ಥಿಗಳ ಸಂಘಟನೆಗಳು, ಪೋಷಕರು, ಪ್ರಾಧ್ಯಾಪಕ ಸಂಘಟನೆಗಳು, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದೀರಾ? ಅವರ ಅಭಿಪ್ರಾಯ ಸಂಗ್ರಹಿಸಿದ್ದೀರಾ? ಹೌದು ಎಂದಾದರೆ ಅದರ ಮಾಹಿತಿಯನ್ನು ಸಾರ್ವಜನಿಕವಾಗಿ ಯುಜಿಸಿಯು ಪ್ರಕಟಿಸಬೇಕು.

3. ಗ್ರಾಮೀಣ ಬಾಗದಲ್ಲಿ ಕನಿಷ್ಠ 18 ತಾಸುಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಕೆ ಒದಗಿಸುವಿರಾ? Hardware and software ಸೌಲಭ್ಯಗಳಿವೆಯೇ?

4. ವ್ಯಾಸಂಗ ಮಾಡುತ್ತಿರುವ 3.73 ಕೋಟಿ ವಿದ್ಯಾರ್ಥಿಗಳ ಬಳಿ ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್ ಇದೆಯೇ? ಇದರ ದತ್ತಾಂಶ ಸಂಗ್ರಹಿಸಿದ್ದೀರಾ?

5. ಪ್ರತಿ ಗ್ರಾಮ, ಹೋಬಳಿಗೆ 4ಜಿ ನೆಟ್ ವರ್ಕ್ ಸಂಪರ್ಕ ಸತತವಾಗಿ ಯಾವುದೇ ಅಡೆತಡೆಗಳಿಲ್ಲದೆ ದೊರಕುವುದೇ? ಇದನ್ನು ಖಾತ್ರಿ ಪಡಿಸಿಕೊಂಡಿದ್ದೀರಾ?

6. ಎಲ್ಲಾ ಕಾಲೇಜುಗಳಲ್ಲಿ ಕಂಪ್ಯೂಟರ್ ಗಳಿವೆಯೇ? ಆನ್ ಲೈನ್ ಸಂಪರ್ಕ ಮತ್ತು ತಂತ್ರಜ್ಞಾನದ ಪೂರೈಕೆ ಸಮರ್ಪವಾಗಿದೆಯೇ?

7. ಆನ್ ಲೈನ್ ಕ್ಲಾಸ್ ಗಳಿಗೆ ಅಗತ್ಯವಾದ ‘ ವ್ಯಾಸಂಗ ಕ್ರಮ'(pedagogy) ಎಲ್ಲಿದೆ? Study materials ಎಲ್ಲಿದೆ? ಈ ಕುರಿತು ತಜ್ಞರ ಸಮಿತಿ ರಚಿಸಲಾಗಿದೆಯೇ?

8. ಪ್ರಾಧ್ಯಾಪಕರಿಗೆ ಆನ್ ಲೈನ್ ಭೋದನೆಗೆ ಅಗತ್ಯವಾದ ತರಬೇತಿ ದೊರಕಿದೆಯೇ?

9. ಮುಖ್ಯವಾಗಿ ಈ ಕೋವಿಡ್ ಸಾಂಕ್ರಾಮಿಕವನ್ನು ಸಂಪೂರ್ಣವಾಗಿ ನಿಯಂತ್ರಿಸಿ ಶೀಘ್ರದಲ್ಲೇ ಆಫ್ ಲೈನ್ ತರಗತಿಗಳನ್ನು ಪ್ರಾರಂಭಿಸಲು ಬೇಕಾದ ಕಾಲಮಿತಿಯನ್ನು ಸ್ಪಷ್ಟಪಡಿಸಬೇಕಿದೆ. ಮತ್ತು ಈ ಶೇ. 40% ಆನ್ ಲೈನ್ ನಿರಂತರವಾಗಿರುತ್ತದೆ ಎನ್ನುವುದು ನಿಮ್ಮ ನಿರ್ಧಾರವಾದರೆ ಅದಕ್ಕೆ ಸೂಕ್ತ ಸೌಲಭ್ಯಗಳು ಎಲ್ಲಿವೆ ಎಂಬುದನ್ನು ಯುಜಿಸಿಯೇ ಹೇಳಬೇಕು.

ಇನ್ನೂ ಹತ್ತಾರು ಪ್ರಶ್ನೆಗಳಿವೆ. ಈ ಎಲ್ಲದಕ್ಕೂ ಶಿಕ್ಷಣ ಇಲಾಖೆ ಮತ್ತು ಯುಜಿಸಿ ಸೂಕ್ತ ರೀತಿಯಲ್ಲಿ ಉತ್ತರಿಸಬೇಕು.

ಮುಖ್ಯವಾಗಿ ಪ್ರಾಧ್ಯಾಪಕರು, ವಿದ್ಯಾರ್ಥಿ ಸಂಘಟನೆಗಳು, ಪೋಷಕರು, ಶಿಕ್ಷಣ ತಜ್ಞರು ಯುಜಿಸಿಯ ಹೊಸ ಮಾರ್ಗಸೂಚಿಯಿಂದ ಗೊಂದಲಕ್ಕೀಡಾಗಿದ್ದಾರೆ. ನಿಧಾನಕ್ಕೆ ಕೊರೋನಾ, ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕತ್ತಲಾವರಿಸುವಂತೆ ಮಾಡುತ್ತಿದೆ.


ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...