Homeಮುಖಪುಟಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

- Advertisement -
- Advertisement -

20, ಮೇ 2021ರಂದು ಯುಜಿಸಿ ಒಂದು ಸುತ್ತೋಲೆ ಹೊರಡಿಸಿ ‘ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಶೇ. 40% ಪ್ರಮಾಣದಲ್ಲಿ ಆನ್ ಲೈನ್ ತರಗತಿಗಳನ್ನು ತೆಗೆದುಕೊಳ್ಳಬೇಕು ಮತ್ತು ಇದರ ಜೊತೆಗೆ ಈಗಾಗಲೇ ಇರುವ ಸ್ವಯಂ ಎನ್ನುವ ಆನ್ ಲೈನ್ ವೇದಿಕೆ ಮೂಲಕವೂ ವಾರಕ್ಕೆ ಹಲವು ಗಂಟೆಗಳ ಕಾಲ ಪಾಠ ಮಾಡಬೇಕು’ ಎಂದು ಆದೇಶ ಹೊರಡಿಸಿದೆ. ಬಹುಶಃ ಪದವಿ, ವಿವಿಗಳಲ್ಲಿ ಬೋಧಿಸುತ್ತಿರುವ ಪ್ರಾಧ್ಯಾಪಕರು ಇದನ್ನು ಗಮನಿಸಿದಂತಿಲ್ಲ, ಗಮನಿಸಿಯೂ ಈಗಾಗಲೇ ಒಂದು ವರ್ಷದಿಂದ ಆನ್ ಲೈನ್ ಕ್ಲಾಸ್ ಮಾಡುತ್ತಿದ್ದೇವೆ, ಇದನ್ನು ಮುಂದುವರಿಸಿದರಾಯಿತು ಎನ್ನುವ ಭಾವದಲ್ಲಿರಬಹುದು. ಇನ್ನುಳಿದಂತೆ ಇದರ ಅಪಾಯದ ಅರಿವಿರುವವರು ಏನೂ ಮಾಡಲಾಗದೆ ಅಸಹಾಯಕತೆಯಲ್ಲಿದ್ದಾರೆ.

 

ಈಗ ಆನ್ ಲೈನ್ ನ ಸಾಧಕ-ಬಾಧಕಗಳ ಚರ್ಚೆ ಸದ್ಯಕ್ಕೆ ಪಕ್ಕಕ್ಕೆ ಇಡೋಣ. ಈ ಆನ್ ಲೈನ್ ಕ್ಲಾಸ್ ಗಳ ಸಾಧ್ಯತೆ ಕುರಿತು ಪರಿಶೀಲಿಸೋಣ..

2018-19ರ ಅಧಿಕೃತ ಸಮೀಕ್ಷೆಯ ಪ್ರಕಾರ ಭಾರತದಲ್ಲಿ 993 ವಿಶ್ವವಿದ್ಯಾಲಯಗಳು, 39,000 ಕಾಲೇಜುಗಳು, 3.73 ಕೋಟಿ ವಿದ್ಯಾರ್ಥಿಗಳು ಮತ್ತು 14.13 ಲಕ್ಷ ಪ್ರಾಧ್ಯಾಪಕರಿದ್ದಾರೆ.

ಈಗ ಆನಲೈನ್ ತರಗತಿಗಳು ಮತ್ತು ಮುಂದಿನ ಶಿಕ್ಷಣಕ್ರಮ್ಕೆ ಸಂಬಂಧಪಟ್ಟಂತೆ ಯುಜಿಸಿಯ ಮುಂದೆ ಕೆಲವು ಮೂಲಭೂತ ಪ್ರಶ್ನೆಗಳಿವೆ. ಈ ಪ್ರಶ್ನೆಗಳಿಗೆ ಉತ್ತರ ದೊರೆಯದೇ ಹೊಸ ಶಿಕ್ಷಣ ಕ್ರಮವನ್ನು ಸಮರ್ಪಕವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ.

1. ಕೇಂದ್ರ ಸರಕಾರವು ಶಿಕ್ಷಣಕ್ಕೆ ಜಿಡಿಪಿಯ 1.9% ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 6.2% ಪ್ರಮಾಣದಲ್ಲಿ, ರಾಜ್ಯ ಸರಕಾರಗಳು ಜಿಡಿಪಿಯ 3.2 % ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 11% ಪ್ರಮಾಣದಲ್ಲಿ ಹಣವನ್ನು ಮೀಸಲಿಡುತ್ತಿವೆ. ಈ ಮೊತ್ತದಿಂದ ಆನ್ ಲೈನ್ ತರಗತಿಗೆ ಶೇ. 10% ಪ್ರಮಾಣದಲ್ಲಿ ಮಾತ್ರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸಾದ್ಯ. ಮಿಕ್ಕ 85% ಸೌಲಭ್ಯವನ್ನು ಯಾರು ಪೂರೈಸುತ್ತಾರೆ?

2. ಈ ನಿರ್ಧಾರಕ್ಕೆ ಬರುವುದಕ್ಕಿಂತ ಮೊದಲು ಇದರ ಹಕ್ಕುದಾರರಾದ ವಿದ್ಯಾರ್ಥಿಗಳ ಸಂಘಟನೆಗಳು, ಪೋಷಕರು, ಪ್ರಾಧ್ಯಾಪಕ ಸಂಘಟನೆಗಳು, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದೀರಾ? ಅವರ ಅಭಿಪ್ರಾಯ ಸಂಗ್ರಹಿಸಿದ್ದೀರಾ? ಹೌದು ಎಂದಾದರೆ ಅದರ ಮಾಹಿತಿಯನ್ನು ಸಾರ್ವಜನಿಕವಾಗಿ ಯುಜಿಸಿಯು ಪ್ರಕಟಿಸಬೇಕು.

3. ಗ್ರಾಮೀಣ ಬಾಗದಲ್ಲಿ ಕನಿಷ್ಠ 18 ತಾಸುಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಕೆ ಒದಗಿಸುವಿರಾ? Hardware and software ಸೌಲಭ್ಯಗಳಿವೆಯೇ?

4. ವ್ಯಾಸಂಗ ಮಾಡುತ್ತಿರುವ 3.73 ಕೋಟಿ ವಿದ್ಯಾರ್ಥಿಗಳ ಬಳಿ ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್ ಇದೆಯೇ? ಇದರ ದತ್ತಾಂಶ ಸಂಗ್ರಹಿಸಿದ್ದೀರಾ?

5. ಪ್ರತಿ ಗ್ರಾಮ, ಹೋಬಳಿಗೆ 4ಜಿ ನೆಟ್ ವರ್ಕ್ ಸಂಪರ್ಕ ಸತತವಾಗಿ ಯಾವುದೇ ಅಡೆತಡೆಗಳಿಲ್ಲದೆ ದೊರಕುವುದೇ? ಇದನ್ನು ಖಾತ್ರಿ ಪಡಿಸಿಕೊಂಡಿದ್ದೀರಾ?

6. ಎಲ್ಲಾ ಕಾಲೇಜುಗಳಲ್ಲಿ ಕಂಪ್ಯೂಟರ್ ಗಳಿವೆಯೇ? ಆನ್ ಲೈನ್ ಸಂಪರ್ಕ ಮತ್ತು ತಂತ್ರಜ್ಞಾನದ ಪೂರೈಕೆ ಸಮರ್ಪವಾಗಿದೆಯೇ?

7. ಆನ್ ಲೈನ್ ಕ್ಲಾಸ್ ಗಳಿಗೆ ಅಗತ್ಯವಾದ ‘ ವ್ಯಾಸಂಗ ಕ್ರಮ'(pedagogy) ಎಲ್ಲಿದೆ? Study materials ಎಲ್ಲಿದೆ? ಈ ಕುರಿತು ತಜ್ಞರ ಸಮಿತಿ ರಚಿಸಲಾಗಿದೆಯೇ?

8. ಪ್ರಾಧ್ಯಾಪಕರಿಗೆ ಆನ್ ಲೈನ್ ಭೋದನೆಗೆ ಅಗತ್ಯವಾದ ತರಬೇತಿ ದೊರಕಿದೆಯೇ?

9. ಮುಖ್ಯವಾಗಿ ಈ ಕೋವಿಡ್ ಸಾಂಕ್ರಾಮಿಕವನ್ನು ಸಂಪೂರ್ಣವಾಗಿ ನಿಯಂತ್ರಿಸಿ ಶೀಘ್ರದಲ್ಲೇ ಆಫ್ ಲೈನ್ ತರಗತಿಗಳನ್ನು ಪ್ರಾರಂಭಿಸಲು ಬೇಕಾದ ಕಾಲಮಿತಿಯನ್ನು ಸ್ಪಷ್ಟಪಡಿಸಬೇಕಿದೆ. ಮತ್ತು ಈ ಶೇ. 40% ಆನ್ ಲೈನ್ ನಿರಂತರವಾಗಿರುತ್ತದೆ ಎನ್ನುವುದು ನಿಮ್ಮ ನಿರ್ಧಾರವಾದರೆ ಅದಕ್ಕೆ ಸೂಕ್ತ ಸೌಲಭ್ಯಗಳು ಎಲ್ಲಿವೆ ಎಂಬುದನ್ನು ಯುಜಿಸಿಯೇ ಹೇಳಬೇಕು.

ಇನ್ನೂ ಹತ್ತಾರು ಪ್ರಶ್ನೆಗಳಿವೆ. ಈ ಎಲ್ಲದಕ್ಕೂ ಶಿಕ್ಷಣ ಇಲಾಖೆ ಮತ್ತು ಯುಜಿಸಿ ಸೂಕ್ತ ರೀತಿಯಲ್ಲಿ ಉತ್ತರಿಸಬೇಕು.

ಮುಖ್ಯವಾಗಿ ಪ್ರಾಧ್ಯಾಪಕರು, ವಿದ್ಯಾರ್ಥಿ ಸಂಘಟನೆಗಳು, ಪೋಷಕರು, ಶಿಕ್ಷಣ ತಜ್ಞರು ಯುಜಿಸಿಯ ಹೊಸ ಮಾರ್ಗಸೂಚಿಯಿಂದ ಗೊಂದಲಕ್ಕೀಡಾಗಿದ್ದಾರೆ. ನಿಧಾನಕ್ಕೆ ಕೊರೋನಾ, ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕತ್ತಲಾವರಿಸುವಂತೆ ಮಾಡುತ್ತಿದೆ.


ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...