Homeಮುಖಪುಟಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

- Advertisement -
- Advertisement -

20, ಮೇ 2021ರಂದು ಯುಜಿಸಿ ಒಂದು ಸುತ್ತೋಲೆ ಹೊರಡಿಸಿ ‘ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಶೇ. 40% ಪ್ರಮಾಣದಲ್ಲಿ ಆನ್ ಲೈನ್ ತರಗತಿಗಳನ್ನು ತೆಗೆದುಕೊಳ್ಳಬೇಕು ಮತ್ತು ಇದರ ಜೊತೆಗೆ ಈಗಾಗಲೇ ಇರುವ ಸ್ವಯಂ ಎನ್ನುವ ಆನ್ ಲೈನ್ ವೇದಿಕೆ ಮೂಲಕವೂ ವಾರಕ್ಕೆ ಹಲವು ಗಂಟೆಗಳ ಕಾಲ ಪಾಠ ಮಾಡಬೇಕು’ ಎಂದು ಆದೇಶ ಹೊರಡಿಸಿದೆ. ಬಹುಶಃ ಪದವಿ, ವಿವಿಗಳಲ್ಲಿ ಬೋಧಿಸುತ್ತಿರುವ ಪ್ರಾಧ್ಯಾಪಕರು ಇದನ್ನು ಗಮನಿಸಿದಂತಿಲ್ಲ, ಗಮನಿಸಿಯೂ ಈಗಾಗಲೇ ಒಂದು ವರ್ಷದಿಂದ ಆನ್ ಲೈನ್ ಕ್ಲಾಸ್ ಮಾಡುತ್ತಿದ್ದೇವೆ, ಇದನ್ನು ಮುಂದುವರಿಸಿದರಾಯಿತು ಎನ್ನುವ ಭಾವದಲ್ಲಿರಬಹುದು. ಇನ್ನುಳಿದಂತೆ ಇದರ ಅಪಾಯದ ಅರಿವಿರುವವರು ಏನೂ ಮಾಡಲಾಗದೆ ಅಸಹಾಯಕತೆಯಲ್ಲಿದ್ದಾರೆ.

 

ಈಗ ಆನ್ ಲೈನ್ ನ ಸಾಧಕ-ಬಾಧಕಗಳ ಚರ್ಚೆ ಸದ್ಯಕ್ಕೆ ಪಕ್ಕಕ್ಕೆ ಇಡೋಣ. ಈ ಆನ್ ಲೈನ್ ಕ್ಲಾಸ್ ಗಳ ಸಾಧ್ಯತೆ ಕುರಿತು ಪರಿಶೀಲಿಸೋಣ..

2018-19ರ ಅಧಿಕೃತ ಸಮೀಕ್ಷೆಯ ಪ್ರಕಾರ ಭಾರತದಲ್ಲಿ 993 ವಿಶ್ವವಿದ್ಯಾಲಯಗಳು, 39,000 ಕಾಲೇಜುಗಳು, 3.73 ಕೋಟಿ ವಿದ್ಯಾರ್ಥಿಗಳು ಮತ್ತು 14.13 ಲಕ್ಷ ಪ್ರಾಧ್ಯಾಪಕರಿದ್ದಾರೆ.

ಈಗ ಆನಲೈನ್ ತರಗತಿಗಳು ಮತ್ತು ಮುಂದಿನ ಶಿಕ್ಷಣಕ್ರಮ್ಕೆ ಸಂಬಂಧಪಟ್ಟಂತೆ ಯುಜಿಸಿಯ ಮುಂದೆ ಕೆಲವು ಮೂಲಭೂತ ಪ್ರಶ್ನೆಗಳಿವೆ. ಈ ಪ್ರಶ್ನೆಗಳಿಗೆ ಉತ್ತರ ದೊರೆಯದೇ ಹೊಸ ಶಿಕ್ಷಣ ಕ್ರಮವನ್ನು ಸಮರ್ಪಕವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ.

1. ಕೇಂದ್ರ ಸರಕಾರವು ಶಿಕ್ಷಣಕ್ಕೆ ಜಿಡಿಪಿಯ 1.9% ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 6.2% ಪ್ರಮಾಣದಲ್ಲಿ, ರಾಜ್ಯ ಸರಕಾರಗಳು ಜಿಡಿಪಿಯ 3.2 % ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 11% ಪ್ರಮಾಣದಲ್ಲಿ ಹಣವನ್ನು ಮೀಸಲಿಡುತ್ತಿವೆ. ಈ ಮೊತ್ತದಿಂದ ಆನ್ ಲೈನ್ ತರಗತಿಗೆ ಶೇ. 10% ಪ್ರಮಾಣದಲ್ಲಿ ಮಾತ್ರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸಾದ್ಯ. ಮಿಕ್ಕ 85% ಸೌಲಭ್ಯವನ್ನು ಯಾರು ಪೂರೈಸುತ್ತಾರೆ?

2. ಈ ನಿರ್ಧಾರಕ್ಕೆ ಬರುವುದಕ್ಕಿಂತ ಮೊದಲು ಇದರ ಹಕ್ಕುದಾರರಾದ ವಿದ್ಯಾರ್ಥಿಗಳ ಸಂಘಟನೆಗಳು, ಪೋಷಕರು, ಪ್ರಾಧ್ಯಾಪಕ ಸಂಘಟನೆಗಳು, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದೀರಾ? ಅವರ ಅಭಿಪ್ರಾಯ ಸಂಗ್ರಹಿಸಿದ್ದೀರಾ? ಹೌದು ಎಂದಾದರೆ ಅದರ ಮಾಹಿತಿಯನ್ನು ಸಾರ್ವಜನಿಕವಾಗಿ ಯುಜಿಸಿಯು ಪ್ರಕಟಿಸಬೇಕು.

3. ಗ್ರಾಮೀಣ ಬಾಗದಲ್ಲಿ ಕನಿಷ್ಠ 18 ತಾಸುಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಕೆ ಒದಗಿಸುವಿರಾ? Hardware and software ಸೌಲಭ್ಯಗಳಿವೆಯೇ?

4. ವ್ಯಾಸಂಗ ಮಾಡುತ್ತಿರುವ 3.73 ಕೋಟಿ ವಿದ್ಯಾರ್ಥಿಗಳ ಬಳಿ ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್ ಇದೆಯೇ? ಇದರ ದತ್ತಾಂಶ ಸಂಗ್ರಹಿಸಿದ್ದೀರಾ?

5. ಪ್ರತಿ ಗ್ರಾಮ, ಹೋಬಳಿಗೆ 4ಜಿ ನೆಟ್ ವರ್ಕ್ ಸಂಪರ್ಕ ಸತತವಾಗಿ ಯಾವುದೇ ಅಡೆತಡೆಗಳಿಲ್ಲದೆ ದೊರಕುವುದೇ? ಇದನ್ನು ಖಾತ್ರಿ ಪಡಿಸಿಕೊಂಡಿದ್ದೀರಾ?

6. ಎಲ್ಲಾ ಕಾಲೇಜುಗಳಲ್ಲಿ ಕಂಪ್ಯೂಟರ್ ಗಳಿವೆಯೇ? ಆನ್ ಲೈನ್ ಸಂಪರ್ಕ ಮತ್ತು ತಂತ್ರಜ್ಞಾನದ ಪೂರೈಕೆ ಸಮರ್ಪವಾಗಿದೆಯೇ?

7. ಆನ್ ಲೈನ್ ಕ್ಲಾಸ್ ಗಳಿಗೆ ಅಗತ್ಯವಾದ ‘ ವ್ಯಾಸಂಗ ಕ್ರಮ'(pedagogy) ಎಲ್ಲಿದೆ? Study materials ಎಲ್ಲಿದೆ? ಈ ಕುರಿತು ತಜ್ಞರ ಸಮಿತಿ ರಚಿಸಲಾಗಿದೆಯೇ?

8. ಪ್ರಾಧ್ಯಾಪಕರಿಗೆ ಆನ್ ಲೈನ್ ಭೋದನೆಗೆ ಅಗತ್ಯವಾದ ತರಬೇತಿ ದೊರಕಿದೆಯೇ?

9. ಮುಖ್ಯವಾಗಿ ಈ ಕೋವಿಡ್ ಸಾಂಕ್ರಾಮಿಕವನ್ನು ಸಂಪೂರ್ಣವಾಗಿ ನಿಯಂತ್ರಿಸಿ ಶೀಘ್ರದಲ್ಲೇ ಆಫ್ ಲೈನ್ ತರಗತಿಗಳನ್ನು ಪ್ರಾರಂಭಿಸಲು ಬೇಕಾದ ಕಾಲಮಿತಿಯನ್ನು ಸ್ಪಷ್ಟಪಡಿಸಬೇಕಿದೆ. ಮತ್ತು ಈ ಶೇ. 40% ಆನ್ ಲೈನ್ ನಿರಂತರವಾಗಿರುತ್ತದೆ ಎನ್ನುವುದು ನಿಮ್ಮ ನಿರ್ಧಾರವಾದರೆ ಅದಕ್ಕೆ ಸೂಕ್ತ ಸೌಲಭ್ಯಗಳು ಎಲ್ಲಿವೆ ಎಂಬುದನ್ನು ಯುಜಿಸಿಯೇ ಹೇಳಬೇಕು.

ಇನ್ನೂ ಹತ್ತಾರು ಪ್ರಶ್ನೆಗಳಿವೆ. ಈ ಎಲ್ಲದಕ್ಕೂ ಶಿಕ್ಷಣ ಇಲಾಖೆ ಮತ್ತು ಯುಜಿಸಿ ಸೂಕ್ತ ರೀತಿಯಲ್ಲಿ ಉತ್ತರಿಸಬೇಕು.

ಮುಖ್ಯವಾಗಿ ಪ್ರಾಧ್ಯಾಪಕರು, ವಿದ್ಯಾರ್ಥಿ ಸಂಘಟನೆಗಳು, ಪೋಷಕರು, ಶಿಕ್ಷಣ ತಜ್ಞರು ಯುಜಿಸಿಯ ಹೊಸ ಮಾರ್ಗಸೂಚಿಯಿಂದ ಗೊಂದಲಕ್ಕೀಡಾಗಿದ್ದಾರೆ. ನಿಧಾನಕ್ಕೆ ಕೊರೋನಾ, ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕತ್ತಲಾವರಿಸುವಂತೆ ಮಾಡುತ್ತಿದೆ.


ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...