Homeಮುಖಪುಟಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

ಆನ್ ಲೈನ್ ತರಗತಿ ಕಡ್ಡಾಯಗೊಳಿಸಿದ ಯುಜಿಸಿಗೆ ಕೇಳಬೇಕಾದ ಪ್ರಶ್ನೆಗಳು

- Advertisement -
- Advertisement -

20, ಮೇ 2021ರಂದು ಯುಜಿಸಿ ಒಂದು ಸುತ್ತೋಲೆ ಹೊರಡಿಸಿ ‘ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಶೇ. 40% ಪ್ರಮಾಣದಲ್ಲಿ ಆನ್ ಲೈನ್ ತರಗತಿಗಳನ್ನು ತೆಗೆದುಕೊಳ್ಳಬೇಕು ಮತ್ತು ಇದರ ಜೊತೆಗೆ ಈಗಾಗಲೇ ಇರುವ ಸ್ವಯಂ ಎನ್ನುವ ಆನ್ ಲೈನ್ ವೇದಿಕೆ ಮೂಲಕವೂ ವಾರಕ್ಕೆ ಹಲವು ಗಂಟೆಗಳ ಕಾಲ ಪಾಠ ಮಾಡಬೇಕು’ ಎಂದು ಆದೇಶ ಹೊರಡಿಸಿದೆ. ಬಹುಶಃ ಪದವಿ, ವಿವಿಗಳಲ್ಲಿ ಬೋಧಿಸುತ್ತಿರುವ ಪ್ರಾಧ್ಯಾಪಕರು ಇದನ್ನು ಗಮನಿಸಿದಂತಿಲ್ಲ, ಗಮನಿಸಿಯೂ ಈಗಾಗಲೇ ಒಂದು ವರ್ಷದಿಂದ ಆನ್ ಲೈನ್ ಕ್ಲಾಸ್ ಮಾಡುತ್ತಿದ್ದೇವೆ, ಇದನ್ನು ಮುಂದುವರಿಸಿದರಾಯಿತು ಎನ್ನುವ ಭಾವದಲ್ಲಿರಬಹುದು. ಇನ್ನುಳಿದಂತೆ ಇದರ ಅಪಾಯದ ಅರಿವಿರುವವರು ಏನೂ ಮಾಡಲಾಗದೆ ಅಸಹಾಯಕತೆಯಲ್ಲಿದ್ದಾರೆ.

 

ಈಗ ಆನ್ ಲೈನ್ ನ ಸಾಧಕ-ಬಾಧಕಗಳ ಚರ್ಚೆ ಸದ್ಯಕ್ಕೆ ಪಕ್ಕಕ್ಕೆ ಇಡೋಣ. ಈ ಆನ್ ಲೈನ್ ಕ್ಲಾಸ್ ಗಳ ಸಾಧ್ಯತೆ ಕುರಿತು ಪರಿಶೀಲಿಸೋಣ..

2018-19ರ ಅಧಿಕೃತ ಸಮೀಕ್ಷೆಯ ಪ್ರಕಾರ ಭಾರತದಲ್ಲಿ 993 ವಿಶ್ವವಿದ್ಯಾಲಯಗಳು, 39,000 ಕಾಲೇಜುಗಳು, 3.73 ಕೋಟಿ ವಿದ್ಯಾರ್ಥಿಗಳು ಮತ್ತು 14.13 ಲಕ್ಷ ಪ್ರಾಧ್ಯಾಪಕರಿದ್ದಾರೆ.

ಈಗ ಆನಲೈನ್ ತರಗತಿಗಳು ಮತ್ತು ಮುಂದಿನ ಶಿಕ್ಷಣಕ್ರಮ್ಕೆ ಸಂಬಂಧಪಟ್ಟಂತೆ ಯುಜಿಸಿಯ ಮುಂದೆ ಕೆಲವು ಮೂಲಭೂತ ಪ್ರಶ್ನೆಗಳಿವೆ. ಈ ಪ್ರಶ್ನೆಗಳಿಗೆ ಉತ್ತರ ದೊರೆಯದೇ ಹೊಸ ಶಿಕ್ಷಣ ಕ್ರಮವನ್ನು ಸಮರ್ಪಕವಾಗಿ ಜಾರಿಗೊಳಿಸಲು ಸಾಧ್ಯವಿಲ್ಲ.

1. ಕೇಂದ್ರ ಸರಕಾರವು ಶಿಕ್ಷಣಕ್ಕೆ ಜಿಡಿಪಿಯ 1.9% ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 6.2% ಪ್ರಮಾಣದಲ್ಲಿ, ರಾಜ್ಯ ಸರಕಾರಗಳು ಜಿಡಿಪಿಯ 3.2 % ಪ್ರಮಾಣದಲ್ಲಿ, ತನ್ನ ಬಜೆಟ್ ಗಾತ್ರದ 11% ಪ್ರಮಾಣದಲ್ಲಿ ಹಣವನ್ನು ಮೀಸಲಿಡುತ್ತಿವೆ. ಈ ಮೊತ್ತದಿಂದ ಆನ್ ಲೈನ್ ತರಗತಿಗೆ ಶೇ. 10% ಪ್ರಮಾಣದಲ್ಲಿ ಮಾತ್ರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸಾದ್ಯ. ಮಿಕ್ಕ 85% ಸೌಲಭ್ಯವನ್ನು ಯಾರು ಪೂರೈಸುತ್ತಾರೆ?

2. ಈ ನಿರ್ಧಾರಕ್ಕೆ ಬರುವುದಕ್ಕಿಂತ ಮೊದಲು ಇದರ ಹಕ್ಕುದಾರರಾದ ವಿದ್ಯಾರ್ಥಿಗಳ ಸಂಘಟನೆಗಳು, ಪೋಷಕರು, ಪ್ರಾಧ್ಯಾಪಕ ಸಂಘಟನೆಗಳು, ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದೀರಾ? ಅವರ ಅಭಿಪ್ರಾಯ ಸಂಗ್ರಹಿಸಿದ್ದೀರಾ? ಹೌದು ಎಂದಾದರೆ ಅದರ ಮಾಹಿತಿಯನ್ನು ಸಾರ್ವಜನಿಕವಾಗಿ ಯುಜಿಸಿಯು ಪ್ರಕಟಿಸಬೇಕು.

3. ಗ್ರಾಮೀಣ ಬಾಗದಲ್ಲಿ ಕನಿಷ್ಠ 18 ತಾಸುಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಕೆ ಒದಗಿಸುವಿರಾ? Hardware and software ಸೌಲಭ್ಯಗಳಿವೆಯೇ?

4. ವ್ಯಾಸಂಗ ಮಾಡುತ್ತಿರುವ 3.73 ಕೋಟಿ ವಿದ್ಯಾರ್ಥಿಗಳ ಬಳಿ ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್ ಇದೆಯೇ? ಇದರ ದತ್ತಾಂಶ ಸಂಗ್ರಹಿಸಿದ್ದೀರಾ?

5. ಪ್ರತಿ ಗ್ರಾಮ, ಹೋಬಳಿಗೆ 4ಜಿ ನೆಟ್ ವರ್ಕ್ ಸಂಪರ್ಕ ಸತತವಾಗಿ ಯಾವುದೇ ಅಡೆತಡೆಗಳಿಲ್ಲದೆ ದೊರಕುವುದೇ? ಇದನ್ನು ಖಾತ್ರಿ ಪಡಿಸಿಕೊಂಡಿದ್ದೀರಾ?

6. ಎಲ್ಲಾ ಕಾಲೇಜುಗಳಲ್ಲಿ ಕಂಪ್ಯೂಟರ್ ಗಳಿವೆಯೇ? ಆನ್ ಲೈನ್ ಸಂಪರ್ಕ ಮತ್ತು ತಂತ್ರಜ್ಞಾನದ ಪೂರೈಕೆ ಸಮರ್ಪವಾಗಿದೆಯೇ?

7. ಆನ್ ಲೈನ್ ಕ್ಲಾಸ್ ಗಳಿಗೆ ಅಗತ್ಯವಾದ ‘ ವ್ಯಾಸಂಗ ಕ್ರಮ'(pedagogy) ಎಲ್ಲಿದೆ? Study materials ಎಲ್ಲಿದೆ? ಈ ಕುರಿತು ತಜ್ಞರ ಸಮಿತಿ ರಚಿಸಲಾಗಿದೆಯೇ?

8. ಪ್ರಾಧ್ಯಾಪಕರಿಗೆ ಆನ್ ಲೈನ್ ಭೋದನೆಗೆ ಅಗತ್ಯವಾದ ತರಬೇತಿ ದೊರಕಿದೆಯೇ?

9. ಮುಖ್ಯವಾಗಿ ಈ ಕೋವಿಡ್ ಸಾಂಕ್ರಾಮಿಕವನ್ನು ಸಂಪೂರ್ಣವಾಗಿ ನಿಯಂತ್ರಿಸಿ ಶೀಘ್ರದಲ್ಲೇ ಆಫ್ ಲೈನ್ ತರಗತಿಗಳನ್ನು ಪ್ರಾರಂಭಿಸಲು ಬೇಕಾದ ಕಾಲಮಿತಿಯನ್ನು ಸ್ಪಷ್ಟಪಡಿಸಬೇಕಿದೆ. ಮತ್ತು ಈ ಶೇ. 40% ಆನ್ ಲೈನ್ ನಿರಂತರವಾಗಿರುತ್ತದೆ ಎನ್ನುವುದು ನಿಮ್ಮ ನಿರ್ಧಾರವಾದರೆ ಅದಕ್ಕೆ ಸೂಕ್ತ ಸೌಲಭ್ಯಗಳು ಎಲ್ಲಿವೆ ಎಂಬುದನ್ನು ಯುಜಿಸಿಯೇ ಹೇಳಬೇಕು.

ಇನ್ನೂ ಹತ್ತಾರು ಪ್ರಶ್ನೆಗಳಿವೆ. ಈ ಎಲ್ಲದಕ್ಕೂ ಶಿಕ್ಷಣ ಇಲಾಖೆ ಮತ್ತು ಯುಜಿಸಿ ಸೂಕ್ತ ರೀತಿಯಲ್ಲಿ ಉತ್ತರಿಸಬೇಕು.

ಮುಖ್ಯವಾಗಿ ಪ್ರಾಧ್ಯಾಪಕರು, ವಿದ್ಯಾರ್ಥಿ ಸಂಘಟನೆಗಳು, ಪೋಷಕರು, ಶಿಕ್ಷಣ ತಜ್ಞರು ಯುಜಿಸಿಯ ಹೊಸ ಮಾರ್ಗಸೂಚಿಯಿಂದ ಗೊಂದಲಕ್ಕೀಡಾಗಿದ್ದಾರೆ. ನಿಧಾನಕ್ಕೆ ಕೊರೋನಾ, ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕತ್ತಲಾವರಿಸುವಂತೆ ಮಾಡುತ್ತಿದೆ.


ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....