Homeಕರ್ನಾಟಕರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

- Advertisement -
- Advertisement -

ಮೈತ್ರಿ ಸರ್ಕಾರವಿದ್ದಾಗ ಒಂದು ವರ್ಷ ಪೂರ್ತಿ ಹಾವು ಮುಂಗುಸಿ ರೀತಿ ಕಿತ್ತಾಡಿದ ಜೆಡಿಎಸ್‌-ಕಾಂಗ್ರೆಸ್‌ ಪಕ್ಷಗಳು ಉಪಚುನಾವಣೆ ಬಂದ ತಕ್ಷಣ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ 15ಕ್ಷೇತ್ರಕ್ಕೆ ಅಭ್ಯರ್ಥಿ ಹಾಕಲು ಯೋಗ್ಯತೆಯಿಲ್ಲ. ಸೋಲುತ್ತೇವೆ ಎನ್ನುವ ಭಯದಿಂದ ಗೂಂಡಾಗಿರಿ ಮಾಡುವುದು, ಚಪ್ಪಲಿ ತೂರುವುದು, ಬಾವುಟದಲ್ಲಿ ಒಡೆಯುವುದು ಮಾಡುತ್ತಿದ್ದಾ ಇದು ಸರಿಯಲ್ಲ ಎಂದಿದ್ದಾರೆ.

ಜೆಡಿಎಸ್‌ ರಾಷ್ಟ್ರೀಯ ಪಕ್ಷನಾ? ಪ್ರಾದೇಶಿಕ ಪಕ್ಷನಾ? ಅರ್ಥವಾಗುತ್ತಿಲ್ಲ. ಅವರ ಬೆಂಬಲ ಯಾರಿಗೆ? ದಿನಕ್ಕೆ ಒಂದೊಂದು ಸುದ್ದಿ ಹರಡುತ್ತಾರೆ. ಒಂದು ದಿನ ಕಾಂಗ್ರೆಸ್‌ ಬೆಂಬಲ ಅನ್ನುತ್ತಾರೆ. ಇನ್ನೊಂದು ದಿನ ಬಿಜೆಪಿಗೆ ಇನ್ನೊಂದು ದಿನ ತಟಸ್ಥ ಎನ್ನುತ್ತಾರೆ. ಒಟ್ಟು ಆ ಪಕ್ಷ ಅತಂತ್ರ ಸ್ಥಿತಿಯಲ್ಲಿದ್ದು, ಡಿಸಾಲ್ವ್‌ ಆಗಿಬಿಟ್ಟರೆ ಒಳ್ಳೆಯದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ – ಸದಾನಂದಗೌಡ – ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

ಸೋಲುತ್ತೀವಿ ಎಂದು ಎರಡು ಪಕ್ಷಕ್ಕೂ ಭೀತಿ ಶುರುವಾಗಿದೆ. ಜೆಡಿಎಸ್‌ 3 ಕಡೆ ಮಾತ್ರ ಕಠಿಣ ಸ್ಪರ್ಧೆ ಮಾಡುತ್ತೇವೆ ಎಂದೂ, ಕಾಂಗ್ರೆಸ್‌ 12 ಕಡೆ ಕಠಿಣವಾಗಿ ಹೋರಾಡುತ್ತೇವೆ ಎಂದರೆ ಒಳ ಒಪ್ಪಂದ ಸ್ಪಷ್ಟವಾಗಿ ಕಾಣುತ್ತಿದೆ ಎಂದಿದ್ದಾರೆ.

ಇವರ ಒಂದು ವರ್ಷದ ದುರಾಡಳಿತ ನೋಡಿದ ಮೇಲೆ ಜನಕ್ಕೆ ಬೇಸರವಾಗಿದೆ. ಎತ್ತು ಏರಿಗೆ ಎಳೆದರೆ, ಕೋಣ ನೀರಿಗೆ ಎಳೆಯಿತು ಎನ್ನುವ ಹಾಗಿದೆ ಅವರ ವರ್ತನೆ. ಹಾಗಾಗಿ ಯಡಿಯೂರಪ್ಪನವರ ಸ್ಥಿರ ಸರ್ಕಾರ ಮುಂದುವರೆಯಬೇಕೆಂದು ಜನರ ಭಾವನೆ. 15ಕ್ಕೆ 15ನ್ನೂ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರಿಗೆ ಟಿಪ್ಪು ಭೂತ ಹಿಡಿದಿದೆ

ಪಕ್ಷಾಂತರಿಗಳು ಎಂದು ಬಿಜೆಪಿಯ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಹೋದಲ್ಲಿ, ಬಂದಲ್ಲಿ ತೆಗೆಳುತ್ತಿದ್ದಾರೆ. ಆದರೆ ವಿಪಕ್ಷದ ನಾಯಕರಾದ ಅವರು ಹಿಂದೆ ಸ್ವತಂತ್ರವಾಗಿ ಗೆದ್ದು, ಜನತಾದಳ, ಜೆಡಿಎಸ್‌ ಸೇರಿ ಈಗ ಕಾಂಗ್ರೆಸ್‌ ಸೇರುವ ಮೂಲಕ ಮೂರು ಪಕ್ಷ ಬದಲಾಯಿಸಿದ್ದಾರೆ. ಅವರಿಗೆ ಪಕ್ಷಾಂತರದ ವಿಷಯದಲ್ಲಿ ಒಂದು ಪಿಎಚ್‌ಡಿಯನ್ನು ಕೊಡಬೇಕು ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯನವರು ಎಂಎಲ್‌ಎಗಳನ್ನು ಕೋಳಿ, ಕುರಿ, ದನದ ರೀತಿ ಮಾರಾಟವಾಗುತ್ತಿದ್ದಾರೆ ಎಂದು ವ್ಯಾಖ್ಯಾನ ಮಾಡುತ್ತಿದ್ದಾರೆ. ನೀವು ಜೆಡಿಎಸ್‌ ಬಿಟ್ಟು ಬಂದಾಗ ತಾವು ಯಾವ ಪ್ರಾಣಿಯಾಗಿದ್ದೀರಿ ಎಂದು ಈಗ ಅವರನ್ನು ಜನ ಕೇಳುತ್ತಿದ್ದಾರೆ. ಪಕ್ಷಾಂತರ ಮಾಡುವುದರಲ್ಲಿ ಸಿದ್ದರಾಮಯ್ಯನವರು ಎತ್ತಿದ ಕೈ. ಅವರನ್ನು ವಿರೋಧ ಪಕ್ಷದ ನಾಯಕರಾಗಿ ಮಾಡಲಿಲ್ಲವಾದರೆ ಮತ್ತೆ ಅಹಿಂದ ಕಟ್ಟುತ್ತಿದ್ದರು ಎಂದು ಅಶೋಕ್‌ ವಾಗ್ದಾಳಿ ನಡೆಸಿದರು.

ಈ ರೀತಿಯ ಮಾತುಗಳನ್ನು ಬಿಟ್ಟು ಚುನಾವಣೆ ಮಾಡಿ. ನಿಮಗೆ ಟಿಪ್ಪು ಭೂತ ಅಂಟಿಕೊಂಡುಬಿಟ್ಟಿದೆ. ಅದರಿಂದ ಹೊರಗಡೆ ಬರುತ್ತಿಲ್ಲ. ನಿನ್ನೆ ಕೆ.ಆರ್‌ ಪೇಟೆಯಲ್ಲಿ ಮಹಿಳೆ ಹಣೆಗೆ ತಿಲಕ ಇಡಲು ಹೋದಾಗ ಬೇಡ ಅಂದಿದ್ದಾರೆ ಎಂದು ಸಿದ್ದು ವಿರುದ್ಧ ಗುಡುಗಿದರು.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

ಮೈಸೂರಿನ ಶಾಸಕ ತನ್ವೀರ್‌ ಸೇಠ್‌ ಮೇಲೆ ಹಲ್ಲೆಯಾಗಿದೆ. ಎಸ್‌ಡಿಪಿಐ ಮತ್ತು ಪಿಎಫ್‌ಐ ನ ಕಾರ್ಯಕರ್ತರೆ ಕಾರಣ ಎಂದು ಗೊತ್ತಾಗಿದೆ. ಅವರ ಮೇಲಿನ 120 ಕೇಸುಗಳನ್ನು ಸಿದ್ದರಾಮಯ್ಯನವರು ವಾಪಸ್ ಪಡೆದಿದ್ದು ಏಕೆ? ಕಾನೂನು ಸುವ್ಯವಸ್ಥೆ ಕುಸಿದು ಬೀಳಲು ಕಾರಣ ಯಾರು? ನಿಮ್ಮ ಹಳೆ ಸರ್ಕಾರ ಕಾರಣವೇ? ಕೆಎಫ್‌ಡಿಯಿಂದ ಹುಣಸೂರಿನಲ್ಲಿ ಇಬ್ಬರೂ ವಿದ್ಯಾರ್ಥಿಗಳ ಹತ್ಯೆಯಾದಾಗ ಅವರ ಮೇಲೆ ಕೇಸು ಹಾಕಿದ್ದೀರಿ. ಅದನ್ನು ವಾಪಸ್ ಪಡೆದಿದ್ದು ಏಕೆ? ಅವರ ಮೇಲೆ ಸಾಫ್ಟ್‌ ನೇಚರ್‌ ಏಕೆ? ಎಂದು ಅಶೋಕ್‌ ಪ್ರಶ್ನಿಸಿದ್ದಾರೆ.

ಹಾಗಾಗಿ ಟಿಪ್ಪು ಭೂತದಿಂದ ಆಚೆ ಬಂದರೆ ನೀವು ನಿಜವಾಗಿಯೂ ಸಿದ್ದರಾಮಯ್ಯನವರು ಆಗುತ್ತೀರಿ? ಇಲ್ಲದಿದ್ದರೆ ಟಿಪ್ಪು ಸಿದ್ದರಾಮಯ್ಯ ಆಗುತ್ತೀರಿ ಎಂದು ಛೇಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...