Homeಕರ್ನಾಟಕರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

- Advertisement -
- Advertisement -

ಮೈತ್ರಿ ಸರ್ಕಾರವಿದ್ದಾಗ ಒಂದು ವರ್ಷ ಪೂರ್ತಿ ಹಾವು ಮುಂಗುಸಿ ರೀತಿ ಕಿತ್ತಾಡಿದ ಜೆಡಿಎಸ್‌-ಕಾಂಗ್ರೆಸ್‌ ಪಕ್ಷಗಳು ಉಪಚುನಾವಣೆ ಬಂದ ತಕ್ಷಣ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ 15ಕ್ಷೇತ್ರಕ್ಕೆ ಅಭ್ಯರ್ಥಿ ಹಾಕಲು ಯೋಗ್ಯತೆಯಿಲ್ಲ. ಸೋಲುತ್ತೇವೆ ಎನ್ನುವ ಭಯದಿಂದ ಗೂಂಡಾಗಿರಿ ಮಾಡುವುದು, ಚಪ್ಪಲಿ ತೂರುವುದು, ಬಾವುಟದಲ್ಲಿ ಒಡೆಯುವುದು ಮಾಡುತ್ತಿದ್ದಾ ಇದು ಸರಿಯಲ್ಲ ಎಂದಿದ್ದಾರೆ.

ಜೆಡಿಎಸ್‌ ರಾಷ್ಟ್ರೀಯ ಪಕ್ಷನಾ? ಪ್ರಾದೇಶಿಕ ಪಕ್ಷನಾ? ಅರ್ಥವಾಗುತ್ತಿಲ್ಲ. ಅವರ ಬೆಂಬಲ ಯಾರಿಗೆ? ದಿನಕ್ಕೆ ಒಂದೊಂದು ಸುದ್ದಿ ಹರಡುತ್ತಾರೆ. ಒಂದು ದಿನ ಕಾಂಗ್ರೆಸ್‌ ಬೆಂಬಲ ಅನ್ನುತ್ತಾರೆ. ಇನ್ನೊಂದು ದಿನ ಬಿಜೆಪಿಗೆ ಇನ್ನೊಂದು ದಿನ ತಟಸ್ಥ ಎನ್ನುತ್ತಾರೆ. ಒಟ್ಟು ಆ ಪಕ್ಷ ಅತಂತ್ರ ಸ್ಥಿತಿಯಲ್ಲಿದ್ದು, ಡಿಸಾಲ್ವ್‌ ಆಗಿಬಿಟ್ಟರೆ ಒಳ್ಳೆಯದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ – ಸದಾನಂದಗೌಡ – ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

ಸೋಲುತ್ತೀವಿ ಎಂದು ಎರಡು ಪಕ್ಷಕ್ಕೂ ಭೀತಿ ಶುರುವಾಗಿದೆ. ಜೆಡಿಎಸ್‌ 3 ಕಡೆ ಮಾತ್ರ ಕಠಿಣ ಸ್ಪರ್ಧೆ ಮಾಡುತ್ತೇವೆ ಎಂದೂ, ಕಾಂಗ್ರೆಸ್‌ 12 ಕಡೆ ಕಠಿಣವಾಗಿ ಹೋರಾಡುತ್ತೇವೆ ಎಂದರೆ ಒಳ ಒಪ್ಪಂದ ಸ್ಪಷ್ಟವಾಗಿ ಕಾಣುತ್ತಿದೆ ಎಂದಿದ್ದಾರೆ.

ಇವರ ಒಂದು ವರ್ಷದ ದುರಾಡಳಿತ ನೋಡಿದ ಮೇಲೆ ಜನಕ್ಕೆ ಬೇಸರವಾಗಿದೆ. ಎತ್ತು ಏರಿಗೆ ಎಳೆದರೆ, ಕೋಣ ನೀರಿಗೆ ಎಳೆಯಿತು ಎನ್ನುವ ಹಾಗಿದೆ ಅವರ ವರ್ತನೆ. ಹಾಗಾಗಿ ಯಡಿಯೂರಪ್ಪನವರ ಸ್ಥಿರ ಸರ್ಕಾರ ಮುಂದುವರೆಯಬೇಕೆಂದು ಜನರ ಭಾವನೆ. 15ಕ್ಕೆ 15ನ್ನೂ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರಿಗೆ ಟಿಪ್ಪು ಭೂತ ಹಿಡಿದಿದೆ

ಪಕ್ಷಾಂತರಿಗಳು ಎಂದು ಬಿಜೆಪಿಯ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಹೋದಲ್ಲಿ, ಬಂದಲ್ಲಿ ತೆಗೆಳುತ್ತಿದ್ದಾರೆ. ಆದರೆ ವಿಪಕ್ಷದ ನಾಯಕರಾದ ಅವರು ಹಿಂದೆ ಸ್ವತಂತ್ರವಾಗಿ ಗೆದ್ದು, ಜನತಾದಳ, ಜೆಡಿಎಸ್‌ ಸೇರಿ ಈಗ ಕಾಂಗ್ರೆಸ್‌ ಸೇರುವ ಮೂಲಕ ಮೂರು ಪಕ್ಷ ಬದಲಾಯಿಸಿದ್ದಾರೆ. ಅವರಿಗೆ ಪಕ್ಷಾಂತರದ ವಿಷಯದಲ್ಲಿ ಒಂದು ಪಿಎಚ್‌ಡಿಯನ್ನು ಕೊಡಬೇಕು ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯನವರು ಎಂಎಲ್‌ಎಗಳನ್ನು ಕೋಳಿ, ಕುರಿ, ದನದ ರೀತಿ ಮಾರಾಟವಾಗುತ್ತಿದ್ದಾರೆ ಎಂದು ವ್ಯಾಖ್ಯಾನ ಮಾಡುತ್ತಿದ್ದಾರೆ. ನೀವು ಜೆಡಿಎಸ್‌ ಬಿಟ್ಟು ಬಂದಾಗ ತಾವು ಯಾವ ಪ್ರಾಣಿಯಾಗಿದ್ದೀರಿ ಎಂದು ಈಗ ಅವರನ್ನು ಜನ ಕೇಳುತ್ತಿದ್ದಾರೆ. ಪಕ್ಷಾಂತರ ಮಾಡುವುದರಲ್ಲಿ ಸಿದ್ದರಾಮಯ್ಯನವರು ಎತ್ತಿದ ಕೈ. ಅವರನ್ನು ವಿರೋಧ ಪಕ್ಷದ ನಾಯಕರಾಗಿ ಮಾಡಲಿಲ್ಲವಾದರೆ ಮತ್ತೆ ಅಹಿಂದ ಕಟ್ಟುತ್ತಿದ್ದರು ಎಂದು ಅಶೋಕ್‌ ವಾಗ್ದಾಳಿ ನಡೆಸಿದರು.

ಈ ರೀತಿಯ ಮಾತುಗಳನ್ನು ಬಿಟ್ಟು ಚುನಾವಣೆ ಮಾಡಿ. ನಿಮಗೆ ಟಿಪ್ಪು ಭೂತ ಅಂಟಿಕೊಂಡುಬಿಟ್ಟಿದೆ. ಅದರಿಂದ ಹೊರಗಡೆ ಬರುತ್ತಿಲ್ಲ. ನಿನ್ನೆ ಕೆ.ಆರ್‌ ಪೇಟೆಯಲ್ಲಿ ಮಹಿಳೆ ಹಣೆಗೆ ತಿಲಕ ಇಡಲು ಹೋದಾಗ ಬೇಡ ಅಂದಿದ್ದಾರೆ ಎಂದು ಸಿದ್ದು ವಿರುದ್ಧ ಗುಡುಗಿದರು.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

ಮೈಸೂರಿನ ಶಾಸಕ ತನ್ವೀರ್‌ ಸೇಠ್‌ ಮೇಲೆ ಹಲ್ಲೆಯಾಗಿದೆ. ಎಸ್‌ಡಿಪಿಐ ಮತ್ತು ಪಿಎಫ್‌ಐ ನ ಕಾರ್ಯಕರ್ತರೆ ಕಾರಣ ಎಂದು ಗೊತ್ತಾಗಿದೆ. ಅವರ ಮೇಲಿನ 120 ಕೇಸುಗಳನ್ನು ಸಿದ್ದರಾಮಯ್ಯನವರು ವಾಪಸ್ ಪಡೆದಿದ್ದು ಏಕೆ? ಕಾನೂನು ಸುವ್ಯವಸ್ಥೆ ಕುಸಿದು ಬೀಳಲು ಕಾರಣ ಯಾರು? ನಿಮ್ಮ ಹಳೆ ಸರ್ಕಾರ ಕಾರಣವೇ? ಕೆಎಫ್‌ಡಿಯಿಂದ ಹುಣಸೂರಿನಲ್ಲಿ ಇಬ್ಬರೂ ವಿದ್ಯಾರ್ಥಿಗಳ ಹತ್ಯೆಯಾದಾಗ ಅವರ ಮೇಲೆ ಕೇಸು ಹಾಕಿದ್ದೀರಿ. ಅದನ್ನು ವಾಪಸ್ ಪಡೆದಿದ್ದು ಏಕೆ? ಅವರ ಮೇಲೆ ಸಾಫ್ಟ್‌ ನೇಚರ್‌ ಏಕೆ? ಎಂದು ಅಶೋಕ್‌ ಪ್ರಶ್ನಿಸಿದ್ದಾರೆ.

ಹಾಗಾಗಿ ಟಿಪ್ಪು ಭೂತದಿಂದ ಆಚೆ ಬಂದರೆ ನೀವು ನಿಜವಾಗಿಯೂ ಸಿದ್ದರಾಮಯ್ಯನವರು ಆಗುತ್ತೀರಿ? ಇಲ್ಲದಿದ್ದರೆ ಟಿಪ್ಪು ಸಿದ್ದರಾಮಯ್ಯ ಆಗುತ್ತೀರಿ ಎಂದು ಛೇಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...