Homeಕರ್ನಾಟಕರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

- Advertisement -
- Advertisement -

ಮೈತ್ರಿ ಸರ್ಕಾರವಿದ್ದಾಗ ಒಂದು ವರ್ಷ ಪೂರ್ತಿ ಹಾವು ಮುಂಗುಸಿ ರೀತಿ ಕಿತ್ತಾಡಿದ ಜೆಡಿಎಸ್‌-ಕಾಂಗ್ರೆಸ್‌ ಪಕ್ಷಗಳು ಉಪಚುನಾವಣೆ ಬಂದ ತಕ್ಷಣ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ 15ಕ್ಷೇತ್ರಕ್ಕೆ ಅಭ್ಯರ್ಥಿ ಹಾಕಲು ಯೋಗ್ಯತೆಯಿಲ್ಲ. ಸೋಲುತ್ತೇವೆ ಎನ್ನುವ ಭಯದಿಂದ ಗೂಂಡಾಗಿರಿ ಮಾಡುವುದು, ಚಪ್ಪಲಿ ತೂರುವುದು, ಬಾವುಟದಲ್ಲಿ ಒಡೆಯುವುದು ಮಾಡುತ್ತಿದ್ದಾ ಇದು ಸರಿಯಲ್ಲ ಎಂದಿದ್ದಾರೆ.

ಜೆಡಿಎಸ್‌ ರಾಷ್ಟ್ರೀಯ ಪಕ್ಷನಾ? ಪ್ರಾದೇಶಿಕ ಪಕ್ಷನಾ? ಅರ್ಥವಾಗುತ್ತಿಲ್ಲ. ಅವರ ಬೆಂಬಲ ಯಾರಿಗೆ? ದಿನಕ್ಕೆ ಒಂದೊಂದು ಸುದ್ದಿ ಹರಡುತ್ತಾರೆ. ಒಂದು ದಿನ ಕಾಂಗ್ರೆಸ್‌ ಬೆಂಬಲ ಅನ್ನುತ್ತಾರೆ. ಇನ್ನೊಂದು ದಿನ ಬಿಜೆಪಿಗೆ ಇನ್ನೊಂದು ದಿನ ತಟಸ್ಥ ಎನ್ನುತ್ತಾರೆ. ಒಟ್ಟು ಆ ಪಕ್ಷ ಅತಂತ್ರ ಸ್ಥಿತಿಯಲ್ಲಿದ್ದು, ಡಿಸಾಲ್ವ್‌ ಆಗಿಬಿಟ್ಟರೆ ಒಳ್ಳೆಯದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ – ಸದಾನಂದಗೌಡ – ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

ಸೋಲುತ್ತೀವಿ ಎಂದು ಎರಡು ಪಕ್ಷಕ್ಕೂ ಭೀತಿ ಶುರುವಾಗಿದೆ. ಜೆಡಿಎಸ್‌ 3 ಕಡೆ ಮಾತ್ರ ಕಠಿಣ ಸ್ಪರ್ಧೆ ಮಾಡುತ್ತೇವೆ ಎಂದೂ, ಕಾಂಗ್ರೆಸ್‌ 12 ಕಡೆ ಕಠಿಣವಾಗಿ ಹೋರಾಡುತ್ತೇವೆ ಎಂದರೆ ಒಳ ಒಪ್ಪಂದ ಸ್ಪಷ್ಟವಾಗಿ ಕಾಣುತ್ತಿದೆ ಎಂದಿದ್ದಾರೆ.

ಇವರ ಒಂದು ವರ್ಷದ ದುರಾಡಳಿತ ನೋಡಿದ ಮೇಲೆ ಜನಕ್ಕೆ ಬೇಸರವಾಗಿದೆ. ಎತ್ತು ಏರಿಗೆ ಎಳೆದರೆ, ಕೋಣ ನೀರಿಗೆ ಎಳೆಯಿತು ಎನ್ನುವ ಹಾಗಿದೆ ಅವರ ವರ್ತನೆ. ಹಾಗಾಗಿ ಯಡಿಯೂರಪ್ಪನವರ ಸ್ಥಿರ ಸರ್ಕಾರ ಮುಂದುವರೆಯಬೇಕೆಂದು ಜನರ ಭಾವನೆ. 15ಕ್ಕೆ 15ನ್ನೂ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರಿಗೆ ಟಿಪ್ಪು ಭೂತ ಹಿಡಿದಿದೆ

ಪಕ್ಷಾಂತರಿಗಳು ಎಂದು ಬಿಜೆಪಿಯ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಹೋದಲ್ಲಿ, ಬಂದಲ್ಲಿ ತೆಗೆಳುತ್ತಿದ್ದಾರೆ. ಆದರೆ ವಿಪಕ್ಷದ ನಾಯಕರಾದ ಅವರು ಹಿಂದೆ ಸ್ವತಂತ್ರವಾಗಿ ಗೆದ್ದು, ಜನತಾದಳ, ಜೆಡಿಎಸ್‌ ಸೇರಿ ಈಗ ಕಾಂಗ್ರೆಸ್‌ ಸೇರುವ ಮೂಲಕ ಮೂರು ಪಕ್ಷ ಬದಲಾಯಿಸಿದ್ದಾರೆ. ಅವರಿಗೆ ಪಕ್ಷಾಂತರದ ವಿಷಯದಲ್ಲಿ ಒಂದು ಪಿಎಚ್‌ಡಿಯನ್ನು ಕೊಡಬೇಕು ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯನವರು ಎಂಎಲ್‌ಎಗಳನ್ನು ಕೋಳಿ, ಕುರಿ, ದನದ ರೀತಿ ಮಾರಾಟವಾಗುತ್ತಿದ್ದಾರೆ ಎಂದು ವ್ಯಾಖ್ಯಾನ ಮಾಡುತ್ತಿದ್ದಾರೆ. ನೀವು ಜೆಡಿಎಸ್‌ ಬಿಟ್ಟು ಬಂದಾಗ ತಾವು ಯಾವ ಪ್ರಾಣಿಯಾಗಿದ್ದೀರಿ ಎಂದು ಈಗ ಅವರನ್ನು ಜನ ಕೇಳುತ್ತಿದ್ದಾರೆ. ಪಕ್ಷಾಂತರ ಮಾಡುವುದರಲ್ಲಿ ಸಿದ್ದರಾಮಯ್ಯನವರು ಎತ್ತಿದ ಕೈ. ಅವರನ್ನು ವಿರೋಧ ಪಕ್ಷದ ನಾಯಕರಾಗಿ ಮಾಡಲಿಲ್ಲವಾದರೆ ಮತ್ತೆ ಅಹಿಂದ ಕಟ್ಟುತ್ತಿದ್ದರು ಎಂದು ಅಶೋಕ್‌ ವಾಗ್ದಾಳಿ ನಡೆಸಿದರು.

ಈ ರೀತಿಯ ಮಾತುಗಳನ್ನು ಬಿಟ್ಟು ಚುನಾವಣೆ ಮಾಡಿ. ನಿಮಗೆ ಟಿಪ್ಪು ಭೂತ ಅಂಟಿಕೊಂಡುಬಿಟ್ಟಿದೆ. ಅದರಿಂದ ಹೊರಗಡೆ ಬರುತ್ತಿಲ್ಲ. ನಿನ್ನೆ ಕೆ.ಆರ್‌ ಪೇಟೆಯಲ್ಲಿ ಮಹಿಳೆ ಹಣೆಗೆ ತಿಲಕ ಇಡಲು ಹೋದಾಗ ಬೇಡ ಅಂದಿದ್ದಾರೆ ಎಂದು ಸಿದ್ದು ವಿರುದ್ಧ ಗುಡುಗಿದರು.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

ಮೈಸೂರಿನ ಶಾಸಕ ತನ್ವೀರ್‌ ಸೇಠ್‌ ಮೇಲೆ ಹಲ್ಲೆಯಾಗಿದೆ. ಎಸ್‌ಡಿಪಿಐ ಮತ್ತು ಪಿಎಫ್‌ಐ ನ ಕಾರ್ಯಕರ್ತರೆ ಕಾರಣ ಎಂದು ಗೊತ್ತಾಗಿದೆ. ಅವರ ಮೇಲಿನ 120 ಕೇಸುಗಳನ್ನು ಸಿದ್ದರಾಮಯ್ಯನವರು ವಾಪಸ್ ಪಡೆದಿದ್ದು ಏಕೆ? ಕಾನೂನು ಸುವ್ಯವಸ್ಥೆ ಕುಸಿದು ಬೀಳಲು ಕಾರಣ ಯಾರು? ನಿಮ್ಮ ಹಳೆ ಸರ್ಕಾರ ಕಾರಣವೇ? ಕೆಎಫ್‌ಡಿಯಿಂದ ಹುಣಸೂರಿನಲ್ಲಿ ಇಬ್ಬರೂ ವಿದ್ಯಾರ್ಥಿಗಳ ಹತ್ಯೆಯಾದಾಗ ಅವರ ಮೇಲೆ ಕೇಸು ಹಾಕಿದ್ದೀರಿ. ಅದನ್ನು ವಾಪಸ್ ಪಡೆದಿದ್ದು ಏಕೆ? ಅವರ ಮೇಲೆ ಸಾಫ್ಟ್‌ ನೇಚರ್‌ ಏಕೆ? ಎಂದು ಅಶೋಕ್‌ ಪ್ರಶ್ನಿಸಿದ್ದಾರೆ.

ಹಾಗಾಗಿ ಟಿಪ್ಪು ಭೂತದಿಂದ ಆಚೆ ಬಂದರೆ ನೀವು ನಿಜವಾಗಿಯೂ ಸಿದ್ದರಾಮಯ್ಯನವರು ಆಗುತ್ತೀರಿ? ಇಲ್ಲದಿದ್ದರೆ ಟಿಪ್ಪು ಸಿದ್ದರಾಮಯ್ಯ ಆಗುತ್ತೀರಿ ಎಂದು ಛೇಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...