Homeಕರ್ನಾಟಕರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

- Advertisement -
- Advertisement -

ಮೈತ್ರಿ ಸರ್ಕಾರವಿದ್ದಾಗ ಒಂದು ವರ್ಷ ಪೂರ್ತಿ ಹಾವು ಮುಂಗುಸಿ ರೀತಿ ಕಿತ್ತಾಡಿದ ಜೆಡಿಎಸ್‌-ಕಾಂಗ್ರೆಸ್‌ ಪಕ್ಷಗಳು ಉಪಚುನಾವಣೆ ಬಂದ ತಕ್ಷಣ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ 15ಕ್ಷೇತ್ರಕ್ಕೆ ಅಭ್ಯರ್ಥಿ ಹಾಕಲು ಯೋಗ್ಯತೆಯಿಲ್ಲ. ಸೋಲುತ್ತೇವೆ ಎನ್ನುವ ಭಯದಿಂದ ಗೂಂಡಾಗಿರಿ ಮಾಡುವುದು, ಚಪ್ಪಲಿ ತೂರುವುದು, ಬಾವುಟದಲ್ಲಿ ಒಡೆಯುವುದು ಮಾಡುತ್ತಿದ್ದಾ ಇದು ಸರಿಯಲ್ಲ ಎಂದಿದ್ದಾರೆ.

ಜೆಡಿಎಸ್‌ ರಾಷ್ಟ್ರೀಯ ಪಕ್ಷನಾ? ಪ್ರಾದೇಶಿಕ ಪಕ್ಷನಾ? ಅರ್ಥವಾಗುತ್ತಿಲ್ಲ. ಅವರ ಬೆಂಬಲ ಯಾರಿಗೆ? ದಿನಕ್ಕೆ ಒಂದೊಂದು ಸುದ್ದಿ ಹರಡುತ್ತಾರೆ. ಒಂದು ದಿನ ಕಾಂಗ್ರೆಸ್‌ ಬೆಂಬಲ ಅನ್ನುತ್ತಾರೆ. ಇನ್ನೊಂದು ದಿನ ಬಿಜೆಪಿಗೆ ಇನ್ನೊಂದು ದಿನ ತಟಸ್ಥ ಎನ್ನುತ್ತಾರೆ. ಒಟ್ಟು ಆ ಪಕ್ಷ ಅತಂತ್ರ ಸ್ಥಿತಿಯಲ್ಲಿದ್ದು, ಡಿಸಾಲ್ವ್‌ ಆಗಿಬಿಟ್ಟರೆ ಒಳ್ಳೆಯದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ – ಸದಾನಂದಗೌಡ – ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

ಸೋಲುತ್ತೀವಿ ಎಂದು ಎರಡು ಪಕ್ಷಕ್ಕೂ ಭೀತಿ ಶುರುವಾಗಿದೆ. ಜೆಡಿಎಸ್‌ 3 ಕಡೆ ಮಾತ್ರ ಕಠಿಣ ಸ್ಪರ್ಧೆ ಮಾಡುತ್ತೇವೆ ಎಂದೂ, ಕಾಂಗ್ರೆಸ್‌ 12 ಕಡೆ ಕಠಿಣವಾಗಿ ಹೋರಾಡುತ್ತೇವೆ ಎಂದರೆ ಒಳ ಒಪ್ಪಂದ ಸ್ಪಷ್ಟವಾಗಿ ಕಾಣುತ್ತಿದೆ ಎಂದಿದ್ದಾರೆ.

ಇವರ ಒಂದು ವರ್ಷದ ದುರಾಡಳಿತ ನೋಡಿದ ಮೇಲೆ ಜನಕ್ಕೆ ಬೇಸರವಾಗಿದೆ. ಎತ್ತು ಏರಿಗೆ ಎಳೆದರೆ, ಕೋಣ ನೀರಿಗೆ ಎಳೆಯಿತು ಎನ್ನುವ ಹಾಗಿದೆ ಅವರ ವರ್ತನೆ. ಹಾಗಾಗಿ ಯಡಿಯೂರಪ್ಪನವರ ಸ್ಥಿರ ಸರ್ಕಾರ ಮುಂದುವರೆಯಬೇಕೆಂದು ಜನರ ಭಾವನೆ. 15ಕ್ಕೆ 15ನ್ನೂ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರಿಗೆ ಟಿಪ್ಪು ಭೂತ ಹಿಡಿದಿದೆ

ಪಕ್ಷಾಂತರಿಗಳು ಎಂದು ಬಿಜೆಪಿಯ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಹೋದಲ್ಲಿ, ಬಂದಲ್ಲಿ ತೆಗೆಳುತ್ತಿದ್ದಾರೆ. ಆದರೆ ವಿಪಕ್ಷದ ನಾಯಕರಾದ ಅವರು ಹಿಂದೆ ಸ್ವತಂತ್ರವಾಗಿ ಗೆದ್ದು, ಜನತಾದಳ, ಜೆಡಿಎಸ್‌ ಸೇರಿ ಈಗ ಕಾಂಗ್ರೆಸ್‌ ಸೇರುವ ಮೂಲಕ ಮೂರು ಪಕ್ಷ ಬದಲಾಯಿಸಿದ್ದಾರೆ. ಅವರಿಗೆ ಪಕ್ಷಾಂತರದ ವಿಷಯದಲ್ಲಿ ಒಂದು ಪಿಎಚ್‌ಡಿಯನ್ನು ಕೊಡಬೇಕು ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯನವರು ಎಂಎಲ್‌ಎಗಳನ್ನು ಕೋಳಿ, ಕುರಿ, ದನದ ರೀತಿ ಮಾರಾಟವಾಗುತ್ತಿದ್ದಾರೆ ಎಂದು ವ್ಯಾಖ್ಯಾನ ಮಾಡುತ್ತಿದ್ದಾರೆ. ನೀವು ಜೆಡಿಎಸ್‌ ಬಿಟ್ಟು ಬಂದಾಗ ತಾವು ಯಾವ ಪ್ರಾಣಿಯಾಗಿದ್ದೀರಿ ಎಂದು ಈಗ ಅವರನ್ನು ಜನ ಕೇಳುತ್ತಿದ್ದಾರೆ. ಪಕ್ಷಾಂತರ ಮಾಡುವುದರಲ್ಲಿ ಸಿದ್ದರಾಮಯ್ಯನವರು ಎತ್ತಿದ ಕೈ. ಅವರನ್ನು ವಿರೋಧ ಪಕ್ಷದ ನಾಯಕರಾಗಿ ಮಾಡಲಿಲ್ಲವಾದರೆ ಮತ್ತೆ ಅಹಿಂದ ಕಟ್ಟುತ್ತಿದ್ದರು ಎಂದು ಅಶೋಕ್‌ ವಾಗ್ದಾಳಿ ನಡೆಸಿದರು.

ಈ ರೀತಿಯ ಮಾತುಗಳನ್ನು ಬಿಟ್ಟು ಚುನಾವಣೆ ಮಾಡಿ. ನಿಮಗೆ ಟಿಪ್ಪು ಭೂತ ಅಂಟಿಕೊಂಡುಬಿಟ್ಟಿದೆ. ಅದರಿಂದ ಹೊರಗಡೆ ಬರುತ್ತಿಲ್ಲ. ನಿನ್ನೆ ಕೆ.ಆರ್‌ ಪೇಟೆಯಲ್ಲಿ ಮಹಿಳೆ ಹಣೆಗೆ ತಿಲಕ ಇಡಲು ಹೋದಾಗ ಬೇಡ ಅಂದಿದ್ದಾರೆ ಎಂದು ಸಿದ್ದು ವಿರುದ್ಧ ಗುಡುಗಿದರು.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

ಮೈಸೂರಿನ ಶಾಸಕ ತನ್ವೀರ್‌ ಸೇಠ್‌ ಮೇಲೆ ಹಲ್ಲೆಯಾಗಿದೆ. ಎಸ್‌ಡಿಪಿಐ ಮತ್ತು ಪಿಎಫ್‌ಐ ನ ಕಾರ್ಯಕರ್ತರೆ ಕಾರಣ ಎಂದು ಗೊತ್ತಾಗಿದೆ. ಅವರ ಮೇಲಿನ 120 ಕೇಸುಗಳನ್ನು ಸಿದ್ದರಾಮಯ್ಯನವರು ವಾಪಸ್ ಪಡೆದಿದ್ದು ಏಕೆ? ಕಾನೂನು ಸುವ್ಯವಸ್ಥೆ ಕುಸಿದು ಬೀಳಲು ಕಾರಣ ಯಾರು? ನಿಮ್ಮ ಹಳೆ ಸರ್ಕಾರ ಕಾರಣವೇ? ಕೆಎಫ್‌ಡಿಯಿಂದ ಹುಣಸೂರಿನಲ್ಲಿ ಇಬ್ಬರೂ ವಿದ್ಯಾರ್ಥಿಗಳ ಹತ್ಯೆಯಾದಾಗ ಅವರ ಮೇಲೆ ಕೇಸು ಹಾಕಿದ್ದೀರಿ. ಅದನ್ನು ವಾಪಸ್ ಪಡೆದಿದ್ದು ಏಕೆ? ಅವರ ಮೇಲೆ ಸಾಫ್ಟ್‌ ನೇಚರ್‌ ಏಕೆ? ಎಂದು ಅಶೋಕ್‌ ಪ್ರಶ್ನಿಸಿದ್ದಾರೆ.

ಹಾಗಾಗಿ ಟಿಪ್ಪು ಭೂತದಿಂದ ಆಚೆ ಬಂದರೆ ನೀವು ನಿಜವಾಗಿಯೂ ಸಿದ್ದರಾಮಯ್ಯನವರು ಆಗುತ್ತೀರಿ? ಇಲ್ಲದಿದ್ದರೆ ಟಿಪ್ಪು ಸಿದ್ದರಾಮಯ್ಯ ಆಗುತ್ತೀರಿ ಎಂದು ಛೇಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....