Homeಕರ್ನಾಟಕರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

- Advertisement -
- Advertisement -

ಮೈತ್ರಿ ಸರ್ಕಾರವಿದ್ದಾಗ ಒಂದು ವರ್ಷ ಪೂರ್ತಿ ಹಾವು ಮುಂಗುಸಿ ರೀತಿ ಕಿತ್ತಾಡಿದ ಜೆಡಿಎಸ್‌-ಕಾಂಗ್ರೆಸ್‌ ಪಕ್ಷಗಳು ಉಪಚುನಾವಣೆ ಬಂದ ತಕ್ಷಣ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ 15ಕ್ಷೇತ್ರಕ್ಕೆ ಅಭ್ಯರ್ಥಿ ಹಾಕಲು ಯೋಗ್ಯತೆಯಿಲ್ಲ. ಸೋಲುತ್ತೇವೆ ಎನ್ನುವ ಭಯದಿಂದ ಗೂಂಡಾಗಿರಿ ಮಾಡುವುದು, ಚಪ್ಪಲಿ ತೂರುವುದು, ಬಾವುಟದಲ್ಲಿ ಒಡೆಯುವುದು ಮಾಡುತ್ತಿದ್ದಾ ಇದು ಸರಿಯಲ್ಲ ಎಂದಿದ್ದಾರೆ.

ಜೆಡಿಎಸ್‌ ರಾಷ್ಟ್ರೀಯ ಪಕ್ಷನಾ? ಪ್ರಾದೇಶಿಕ ಪಕ್ಷನಾ? ಅರ್ಥವಾಗುತ್ತಿಲ್ಲ. ಅವರ ಬೆಂಬಲ ಯಾರಿಗೆ? ದಿನಕ್ಕೆ ಒಂದೊಂದು ಸುದ್ದಿ ಹರಡುತ್ತಾರೆ. ಒಂದು ದಿನ ಕಾಂಗ್ರೆಸ್‌ ಬೆಂಬಲ ಅನ್ನುತ್ತಾರೆ. ಇನ್ನೊಂದು ದಿನ ಬಿಜೆಪಿಗೆ ಇನ್ನೊಂದು ದಿನ ತಟಸ್ಥ ಎನ್ನುತ್ತಾರೆ. ಒಟ್ಟು ಆ ಪಕ್ಷ ಅತಂತ್ರ ಸ್ಥಿತಿಯಲ್ಲಿದ್ದು, ಡಿಸಾಲ್ವ್‌ ಆಗಿಬಿಟ್ಟರೆ ಒಳ್ಳೆಯದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ – ಸದಾನಂದಗೌಡ – ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

ಸೋಲುತ್ತೀವಿ ಎಂದು ಎರಡು ಪಕ್ಷಕ್ಕೂ ಭೀತಿ ಶುರುವಾಗಿದೆ. ಜೆಡಿಎಸ್‌ 3 ಕಡೆ ಮಾತ್ರ ಕಠಿಣ ಸ್ಪರ್ಧೆ ಮಾಡುತ್ತೇವೆ ಎಂದೂ, ಕಾಂಗ್ರೆಸ್‌ 12 ಕಡೆ ಕಠಿಣವಾಗಿ ಹೋರಾಡುತ್ತೇವೆ ಎಂದರೆ ಒಳ ಒಪ್ಪಂದ ಸ್ಪಷ್ಟವಾಗಿ ಕಾಣುತ್ತಿದೆ ಎಂದಿದ್ದಾರೆ.

ಇವರ ಒಂದು ವರ್ಷದ ದುರಾಡಳಿತ ನೋಡಿದ ಮೇಲೆ ಜನಕ್ಕೆ ಬೇಸರವಾಗಿದೆ. ಎತ್ತು ಏರಿಗೆ ಎಳೆದರೆ, ಕೋಣ ನೀರಿಗೆ ಎಳೆಯಿತು ಎನ್ನುವ ಹಾಗಿದೆ ಅವರ ವರ್ತನೆ. ಹಾಗಾಗಿ ಯಡಿಯೂರಪ್ಪನವರ ಸ್ಥಿರ ಸರ್ಕಾರ ಮುಂದುವರೆಯಬೇಕೆಂದು ಜನರ ಭಾವನೆ. 15ಕ್ಕೆ 15ನ್ನೂ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರಿಗೆ ಟಿಪ್ಪು ಭೂತ ಹಿಡಿದಿದೆ

ಪಕ್ಷಾಂತರಿಗಳು ಎಂದು ಬಿಜೆಪಿಯ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಹೋದಲ್ಲಿ, ಬಂದಲ್ಲಿ ತೆಗೆಳುತ್ತಿದ್ದಾರೆ. ಆದರೆ ವಿಪಕ್ಷದ ನಾಯಕರಾದ ಅವರು ಹಿಂದೆ ಸ್ವತಂತ್ರವಾಗಿ ಗೆದ್ದು, ಜನತಾದಳ, ಜೆಡಿಎಸ್‌ ಸೇರಿ ಈಗ ಕಾಂಗ್ರೆಸ್‌ ಸೇರುವ ಮೂಲಕ ಮೂರು ಪಕ್ಷ ಬದಲಾಯಿಸಿದ್ದಾರೆ. ಅವರಿಗೆ ಪಕ್ಷಾಂತರದ ವಿಷಯದಲ್ಲಿ ಒಂದು ಪಿಎಚ್‌ಡಿಯನ್ನು ಕೊಡಬೇಕು ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯನವರು ಎಂಎಲ್‌ಎಗಳನ್ನು ಕೋಳಿ, ಕುರಿ, ದನದ ರೀತಿ ಮಾರಾಟವಾಗುತ್ತಿದ್ದಾರೆ ಎಂದು ವ್ಯಾಖ್ಯಾನ ಮಾಡುತ್ತಿದ್ದಾರೆ. ನೀವು ಜೆಡಿಎಸ್‌ ಬಿಟ್ಟು ಬಂದಾಗ ತಾವು ಯಾವ ಪ್ರಾಣಿಯಾಗಿದ್ದೀರಿ ಎಂದು ಈಗ ಅವರನ್ನು ಜನ ಕೇಳುತ್ತಿದ್ದಾರೆ. ಪಕ್ಷಾಂತರ ಮಾಡುವುದರಲ್ಲಿ ಸಿದ್ದರಾಮಯ್ಯನವರು ಎತ್ತಿದ ಕೈ. ಅವರನ್ನು ವಿರೋಧ ಪಕ್ಷದ ನಾಯಕರಾಗಿ ಮಾಡಲಿಲ್ಲವಾದರೆ ಮತ್ತೆ ಅಹಿಂದ ಕಟ್ಟುತ್ತಿದ್ದರು ಎಂದು ಅಶೋಕ್‌ ವಾಗ್ದಾಳಿ ನಡೆಸಿದರು.

ಈ ರೀತಿಯ ಮಾತುಗಳನ್ನು ಬಿಟ್ಟು ಚುನಾವಣೆ ಮಾಡಿ. ನಿಮಗೆ ಟಿಪ್ಪು ಭೂತ ಅಂಟಿಕೊಂಡುಬಿಟ್ಟಿದೆ. ಅದರಿಂದ ಹೊರಗಡೆ ಬರುತ್ತಿಲ್ಲ. ನಿನ್ನೆ ಕೆ.ಆರ್‌ ಪೇಟೆಯಲ್ಲಿ ಮಹಿಳೆ ಹಣೆಗೆ ತಿಲಕ ಇಡಲು ಹೋದಾಗ ಬೇಡ ಅಂದಿದ್ದಾರೆ ಎಂದು ಸಿದ್ದು ವಿರುದ್ಧ ಗುಡುಗಿದರು.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

ಮೈಸೂರಿನ ಶಾಸಕ ತನ್ವೀರ್‌ ಸೇಠ್‌ ಮೇಲೆ ಹಲ್ಲೆಯಾಗಿದೆ. ಎಸ್‌ಡಿಪಿಐ ಮತ್ತು ಪಿಎಫ್‌ಐ ನ ಕಾರ್ಯಕರ್ತರೆ ಕಾರಣ ಎಂದು ಗೊತ್ತಾಗಿದೆ. ಅವರ ಮೇಲಿನ 120 ಕೇಸುಗಳನ್ನು ಸಿದ್ದರಾಮಯ್ಯನವರು ವಾಪಸ್ ಪಡೆದಿದ್ದು ಏಕೆ? ಕಾನೂನು ಸುವ್ಯವಸ್ಥೆ ಕುಸಿದು ಬೀಳಲು ಕಾರಣ ಯಾರು? ನಿಮ್ಮ ಹಳೆ ಸರ್ಕಾರ ಕಾರಣವೇ? ಕೆಎಫ್‌ಡಿಯಿಂದ ಹುಣಸೂರಿನಲ್ಲಿ ಇಬ್ಬರೂ ವಿದ್ಯಾರ್ಥಿಗಳ ಹತ್ಯೆಯಾದಾಗ ಅವರ ಮೇಲೆ ಕೇಸು ಹಾಕಿದ್ದೀರಿ. ಅದನ್ನು ವಾಪಸ್ ಪಡೆದಿದ್ದು ಏಕೆ? ಅವರ ಮೇಲೆ ಸಾಫ್ಟ್‌ ನೇಚರ್‌ ಏಕೆ? ಎಂದು ಅಶೋಕ್‌ ಪ್ರಶ್ನಿಸಿದ್ದಾರೆ.

ಹಾಗಾಗಿ ಟಿಪ್ಪು ಭೂತದಿಂದ ಆಚೆ ಬಂದರೆ ನೀವು ನಿಜವಾಗಿಯೂ ಸಿದ್ದರಾಮಯ್ಯನವರು ಆಗುತ್ತೀರಿ? ಇಲ್ಲದಿದ್ದರೆ ಟಿಪ್ಪು ಸಿದ್ದರಾಮಯ್ಯ ಆಗುತ್ತೀರಿ ಎಂದು ಛೇಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...