Homeಕರ್ನಾಟಕರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆಯಾಗಿಬಿಡಬೇಕು, ಜೆಡಿಎಸ್‌-ಕಾಂಗ್ರೆಸ್‌ ಒಳ ಒಪ್ಪಂದ ಮಾಡಿಕೊಂಡಿವೆ: ಆರ್‌.ಅಶೋಕ್‌

- Advertisement -
- Advertisement -

ಮೈತ್ರಿ ಸರ್ಕಾರವಿದ್ದಾಗ ಒಂದು ವರ್ಷ ಪೂರ್ತಿ ಹಾವು ಮುಂಗುಸಿ ರೀತಿ ಕಿತ್ತಾಡಿದ ಜೆಡಿಎಸ್‌-ಕಾಂಗ್ರೆಸ್‌ ಪಕ್ಷಗಳು ಉಪಚುನಾವಣೆ ಬಂದ ತಕ್ಷಣ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ 15ಕ್ಷೇತ್ರಕ್ಕೆ ಅಭ್ಯರ್ಥಿ ಹಾಕಲು ಯೋಗ್ಯತೆಯಿಲ್ಲ. ಸೋಲುತ್ತೇವೆ ಎನ್ನುವ ಭಯದಿಂದ ಗೂಂಡಾಗಿರಿ ಮಾಡುವುದು, ಚಪ್ಪಲಿ ತೂರುವುದು, ಬಾವುಟದಲ್ಲಿ ಒಡೆಯುವುದು ಮಾಡುತ್ತಿದ್ದಾ ಇದು ಸರಿಯಲ್ಲ ಎಂದಿದ್ದಾರೆ.

ಜೆಡಿಎಸ್‌ ರಾಷ್ಟ್ರೀಯ ಪಕ್ಷನಾ? ಪ್ರಾದೇಶಿಕ ಪಕ್ಷನಾ? ಅರ್ಥವಾಗುತ್ತಿಲ್ಲ. ಅವರ ಬೆಂಬಲ ಯಾರಿಗೆ? ದಿನಕ್ಕೆ ಒಂದೊಂದು ಸುದ್ದಿ ಹರಡುತ್ತಾರೆ. ಒಂದು ದಿನ ಕಾಂಗ್ರೆಸ್‌ ಬೆಂಬಲ ಅನ್ನುತ್ತಾರೆ. ಇನ್ನೊಂದು ದಿನ ಬಿಜೆಪಿಗೆ ಇನ್ನೊಂದು ದಿನ ತಟಸ್ಥ ಎನ್ನುತ್ತಾರೆ. ಒಟ್ಟು ಆ ಪಕ್ಷ ಅತಂತ್ರ ಸ್ಥಿತಿಯಲ್ಲಿದ್ದು, ಡಿಸಾಲ್ವ್‌ ಆಗಿಬಿಟ್ಟರೆ ಒಳ್ಳೆಯದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ – ಸದಾನಂದಗೌಡ – ಶ್ರೀರಾಮುಲು ಕದನ: ಪರಸ್ಪರ ಆರೋಪ ಪ್ರತ್ಯಾರೋಪ

ಸೋಲುತ್ತೀವಿ ಎಂದು ಎರಡು ಪಕ್ಷಕ್ಕೂ ಭೀತಿ ಶುರುವಾಗಿದೆ. ಜೆಡಿಎಸ್‌ 3 ಕಡೆ ಮಾತ್ರ ಕಠಿಣ ಸ್ಪರ್ಧೆ ಮಾಡುತ್ತೇವೆ ಎಂದೂ, ಕಾಂಗ್ರೆಸ್‌ 12 ಕಡೆ ಕಠಿಣವಾಗಿ ಹೋರಾಡುತ್ತೇವೆ ಎಂದರೆ ಒಳ ಒಪ್ಪಂದ ಸ್ಪಷ್ಟವಾಗಿ ಕಾಣುತ್ತಿದೆ ಎಂದಿದ್ದಾರೆ.

ಇವರ ಒಂದು ವರ್ಷದ ದುರಾಡಳಿತ ನೋಡಿದ ಮೇಲೆ ಜನಕ್ಕೆ ಬೇಸರವಾಗಿದೆ. ಎತ್ತು ಏರಿಗೆ ಎಳೆದರೆ, ಕೋಣ ನೀರಿಗೆ ಎಳೆಯಿತು ಎನ್ನುವ ಹಾಗಿದೆ ಅವರ ವರ್ತನೆ. ಹಾಗಾಗಿ ಯಡಿಯೂರಪ್ಪನವರ ಸ್ಥಿರ ಸರ್ಕಾರ ಮುಂದುವರೆಯಬೇಕೆಂದು ಜನರ ಭಾವನೆ. 15ಕ್ಕೆ 15ನ್ನೂ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರಿಗೆ ಟಿಪ್ಪು ಭೂತ ಹಿಡಿದಿದೆ

ಪಕ್ಷಾಂತರಿಗಳು ಎಂದು ಬಿಜೆಪಿಯ ಅಭ್ಯರ್ಥಿಗಳನ್ನು ಸಿದ್ದರಾಮಯ್ಯ ಹೋದಲ್ಲಿ, ಬಂದಲ್ಲಿ ತೆಗೆಳುತ್ತಿದ್ದಾರೆ. ಆದರೆ ವಿಪಕ್ಷದ ನಾಯಕರಾದ ಅವರು ಹಿಂದೆ ಸ್ವತಂತ್ರವಾಗಿ ಗೆದ್ದು, ಜನತಾದಳ, ಜೆಡಿಎಸ್‌ ಸೇರಿ ಈಗ ಕಾಂಗ್ರೆಸ್‌ ಸೇರುವ ಮೂಲಕ ಮೂರು ಪಕ್ಷ ಬದಲಾಯಿಸಿದ್ದಾರೆ. ಅವರಿಗೆ ಪಕ್ಷಾಂತರದ ವಿಷಯದಲ್ಲಿ ಒಂದು ಪಿಎಚ್‌ಡಿಯನ್ನು ಕೊಡಬೇಕು ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯನವರು ಎಂಎಲ್‌ಎಗಳನ್ನು ಕೋಳಿ, ಕುರಿ, ದನದ ರೀತಿ ಮಾರಾಟವಾಗುತ್ತಿದ್ದಾರೆ ಎಂದು ವ್ಯಾಖ್ಯಾನ ಮಾಡುತ್ತಿದ್ದಾರೆ. ನೀವು ಜೆಡಿಎಸ್‌ ಬಿಟ್ಟು ಬಂದಾಗ ತಾವು ಯಾವ ಪ್ರಾಣಿಯಾಗಿದ್ದೀರಿ ಎಂದು ಈಗ ಅವರನ್ನು ಜನ ಕೇಳುತ್ತಿದ್ದಾರೆ. ಪಕ್ಷಾಂತರ ಮಾಡುವುದರಲ್ಲಿ ಸಿದ್ದರಾಮಯ್ಯನವರು ಎತ್ತಿದ ಕೈ. ಅವರನ್ನು ವಿರೋಧ ಪಕ್ಷದ ನಾಯಕರಾಗಿ ಮಾಡಲಿಲ್ಲವಾದರೆ ಮತ್ತೆ ಅಹಿಂದ ಕಟ್ಟುತ್ತಿದ್ದರು ಎಂದು ಅಶೋಕ್‌ ವಾಗ್ದಾಳಿ ನಡೆಸಿದರು.

ಈ ರೀತಿಯ ಮಾತುಗಳನ್ನು ಬಿಟ್ಟು ಚುನಾವಣೆ ಮಾಡಿ. ನಿಮಗೆ ಟಿಪ್ಪು ಭೂತ ಅಂಟಿಕೊಂಡುಬಿಟ್ಟಿದೆ. ಅದರಿಂದ ಹೊರಗಡೆ ಬರುತ್ತಿಲ್ಲ. ನಿನ್ನೆ ಕೆ.ಆರ್‌ ಪೇಟೆಯಲ್ಲಿ ಮಹಿಳೆ ಹಣೆಗೆ ತಿಲಕ ಇಡಲು ಹೋದಾಗ ಬೇಡ ಅಂದಿದ್ದಾರೆ ಎಂದು ಸಿದ್ದು ವಿರುದ್ಧ ಗುಡುಗಿದರು.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್ ಕೊಲೆಯತ್ನ: ಪಿಎಫ್‌ಐ ಮುಗಿಸಲು ಬಿಜೆಪಿ ಶತಪ್ರಯತ್ನ

ಮೈಸೂರಿನ ಶಾಸಕ ತನ್ವೀರ್‌ ಸೇಠ್‌ ಮೇಲೆ ಹಲ್ಲೆಯಾಗಿದೆ. ಎಸ್‌ಡಿಪಿಐ ಮತ್ತು ಪಿಎಫ್‌ಐ ನ ಕಾರ್ಯಕರ್ತರೆ ಕಾರಣ ಎಂದು ಗೊತ್ತಾಗಿದೆ. ಅವರ ಮೇಲಿನ 120 ಕೇಸುಗಳನ್ನು ಸಿದ್ದರಾಮಯ್ಯನವರು ವಾಪಸ್ ಪಡೆದಿದ್ದು ಏಕೆ? ಕಾನೂನು ಸುವ್ಯವಸ್ಥೆ ಕುಸಿದು ಬೀಳಲು ಕಾರಣ ಯಾರು? ನಿಮ್ಮ ಹಳೆ ಸರ್ಕಾರ ಕಾರಣವೇ? ಕೆಎಫ್‌ಡಿಯಿಂದ ಹುಣಸೂರಿನಲ್ಲಿ ಇಬ್ಬರೂ ವಿದ್ಯಾರ್ಥಿಗಳ ಹತ್ಯೆಯಾದಾಗ ಅವರ ಮೇಲೆ ಕೇಸು ಹಾಕಿದ್ದೀರಿ. ಅದನ್ನು ವಾಪಸ್ ಪಡೆದಿದ್ದು ಏಕೆ? ಅವರ ಮೇಲೆ ಸಾಫ್ಟ್‌ ನೇಚರ್‌ ಏಕೆ? ಎಂದು ಅಶೋಕ್‌ ಪ್ರಶ್ನಿಸಿದ್ದಾರೆ.

ಹಾಗಾಗಿ ಟಿಪ್ಪು ಭೂತದಿಂದ ಆಚೆ ಬಂದರೆ ನೀವು ನಿಜವಾಗಿಯೂ ಸಿದ್ದರಾಮಯ್ಯನವರು ಆಗುತ್ತೀರಿ? ಇಲ್ಲದಿದ್ದರೆ ಟಿಪ್ಪು ಸಿದ್ದರಾಮಯ್ಯ ಆಗುತ್ತೀರಿ ಎಂದು ಛೇಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...