Homeಮುಖಪುಟಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಮರಣದಂಡನೆ ವಿಧಿಸುವಂತೆ ಕೋರಿ ಹೈಕೋರ್ಟ್...

ಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಮರಣದಂಡನೆ ವಿಧಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬಂಗಾಳ ಸರ್ಕಾರ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಗೆ ಮರದಂಡನೆ ವಿಧಿಸುವಂತೆ ಕೋರಿ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ (ಜ.21) ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದೆ.

ಸೋಮವಾರ (ಜ.20) ಅಪರಾಧಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ (ಮರಣದವರೆಗೆ) ವಿಧಿಸಿ ಕೋಲ್ಕತ್ತಾದ ಸಿಯಾಲದಹ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ತೀರ್ಪು ಪ್ರಕಟಿಸಿದ್ದರು.

ಸಿಯಾಲದಹ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯದ ಅನುಮತಿ ಕೋರಿ ಅಡ್ವೊಕೇಟ್ ಜನರಲ್ ಕಿಶೋರ್ ದತ್ತ ಅವರು ಮಂಗಳವಾರ (ಜ. 21) ನ್ಯಾಯಮೂರ್ತಿ ದೇಬಾಂಗ್ಸು ಬಸಕ್ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ಶಬ್ಬರ್ ರಶೀದಿ ಅವರ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೆಷನ್ಸ್ ನ್ಯಾಯಾಲಯದ ತೀರ್ಪಿಗೆ ಅತೃಪ್ತಿ ವ್ಯಕ್ತಪಡಿಸಿದ ಬೆನ್ನಲ್ಲೇ ಸರ್ಕಾರ ಹೈಕೋರ್ಟ್‌ ಮೆಟ್ಟಿಲೇರಿದೆ. “ಜೀವಾವಧಿ ಶಿಕ್ಷೆಯ ಅರ್ಥವೇನು? ಅನೇಕ ಪ್ರಕರಣಗಳಲ್ಲಿ, ಘೋರ ಅಪರಾಧಗಳನ್ನು ಮಾಡಿದ ನಂತರವೂ ಅಪರಾಧಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲಾಗುತ್ತದೆ. ಆರ್‌ಜಿ ಕರ್ ಪ್ರಕರಣದ ತೀರ್ಪಿನಿಂದ ನಾನು ನಿಜವಾಗಿಯೂ ಆಘಾತಕ್ಕೊಳಗಾಗಿದ್ದೇನೆ” ಎಂದು ಮುಖ್ಯಮಂತ್ರಿ ಮಂಗಳವಾರ (ಜ. 21) ಹೇಳಿದ್ದರು.

“ನಾವೂ ಕಾನೂನು ಅಧ್ಯಯನ ಮಾಡಿದ್ದೇವೆ ಮತ್ತು ಅದನ್ನು ಅರ್ಥಮಾಡಿಕೊಂಡಿದ್ದೇವೆ. ಮರಣದಂಡನೆ ವಿಧಿಸಲು ಇದು ‘ಅಪರೂಪದಲ್ಲಿ ಅಪರೂಪದ ಪ್ರಕರಣವಲ್ಲ’ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. ನಾವು ನ್ಯಾಯಾಧೀಶರ ಹೇಳಿಕೆಯನ್ನು ವಿರೋಧಿಸುತ್ತಿಲ್ಲ. ಆದರೆ, ಇದು ನಿಜಕ್ಕೂ ಅಪರೂಪದ, ಸೂಕ್ಷ್ಮ ಮತ್ತು ಘೋರ ಅಪರಾಧ ಎಂದು ನಾನು ಭಾವಿಸುತ್ತೇನೆ. ಒಬ್ಬ ಅಪರಾಧಿಯನ್ನು ಬಿಡುಗಡೆ ಮಾಡಿದರೆ ಅಥವಾ ಶಿಕ್ಷೆಗೆ ಒಳಪಡಿಸದಿದ್ದರೆ, ಆತ ಇನ್ನಷ್ಟು ದುಷ್ಕೃತ್ಯ ಎಸಗಬಹುದು” ಎಂದಿದ್ದರು.

ಅಪರಾಧಿಗೆ ಮರಣದಂಡನೆ ವಿಧಿಸಲು ನಿರಾಕರಿಸುವ ವೇಳೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು, “ಜೀವಕ್ಕೆ ಮತ್ತೊಂದು ಜೀವ” ಎಂಬ ಹಳೆಯ ಪದ್ದತಿಯನ್ನು ಮೀರಿ ನಾವು ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟಿದ್ದರು.

“ಆಧುನಿಕ ನ್ಯಾಯ ಕ್ಷೇತ್ರದಲ್ಲಿ, ನಾವು ‘ಕಣ್ಣಿಗೆ ಕಣ್ಣು’, ‘ಹಲ್ಲಿಗೆ ಹಲ್ಲು’, ‘ಉಗುರಿಗೆ ಉಗುರು’ ಮತ್ತು ‘ಜೀವಕ್ಕೆ ಜೀವ’ ಎಂಬ ಪ್ರಾಚೀನ ಪ್ರವೃತ್ತಿಯನ್ನು ಮೀರಿ ಮುಂದುವರಿಯಬೇಕು. ಕ್ರೌರ್ಯವನ್ನು ಕ್ರೌರ್ಯದೊಂದಿಗೆ ಹೋಲಿಸುವುದು ನಮ್ಮ ಕರ್ತವ್ಯವಲ್ಲ, ಬದಲಿಗೆ ಬುದ್ಧಿವಂತಿಕೆ, ಕರುಣೆ ಮತ್ತು ನ್ಯಾಯದ ಆಳವಾದ ತಿಳುವಳಿಕೆಯ ಮೂಲಕ ಮಾನವೀಯತೆಯನ್ನು ಎತ್ತಿ ಹಿಡಿಯುವುದು ನಮ್ಮ ಕೆಲಸ” ಎಂದು ನ್ಯಾಯಾಧೀಶರು ಆದೇಶದಲ್ಲಿ ಉಲ್ಲೇಖಿಸಿದ್ದರು.

“ಈ ಪ್ರಕರಣವು “ಅಪರೂಪದಲ್ಲಿ ಅಪರೂಪ” ಎಂದು ವರ್ಗೀಕರಿಸಲು ಇರುವ ಕಠಿಣ ಮಾನದಂಡಗಳನ್ನು ಪೂರೈಸುವುದಿಲ್ಲ. ಹಾಗಾಗಿ, ಮರಣದಂಡನೆಗಾಗಿ ಪ್ರಾಸಿಕ್ಯೂಷನ್ ಮಾಡಿರುವ ಮನವಿಯನ್ನು ಪರಿಗಣಿಸುವುದು ಸೂಕ್ತವಲ್ಲ” ಎಂದು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಹೇಳಿದ್ದರು.

ಅದಾಗ್ಯೂ, ಮಮತಾ ಬ್ಯಾನರ್ಜಿ ನ್ಯಾಯಾಲಯದ ಆದೇಶಕ್ಕೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. “ಯಾರಾದರೊಬ್ಬ ರಾಕ್ಷಸನಾಗಿದ್ದರೆ ನಮ್ಮ ಸಮಾಜ ಮಾನವೀಯತೆ ತೋರಿಸುತ್ತಿತ್ತಾ? ನಮ್ಮ ತಾಯಂದಿರು ಮತ್ತು ಸಹೋದರಿಯರ ಕಡೆಗೆ ಸಮಾಜವನ್ನು ಮಾನವೀಯಗೊಳಿಸಬೇಕು. ಇಂತಹ ಪ್ರಕರಣಗಳಲ್ಲಿ ಮರಣದಂಡನೆ ವಿಧಿಸುವ ‘ಪಶ್ಚಿಮ ಬಂಗಾಳ ಅಪರಾಧ ಕಾನೂನು ತಿದ್ದುಪಡಿ ಮಸೂದೆ-2024 ಅನ್ನು ನಮ್ಮ ಸರ್ಕಾರ ಅಂಗೀಕರಿಸಿದೆ” ಎಂದು ಹೇಳಿದ್ದಾರೆ.

“ಆಸಿಡ್ ದಾಳಿ ಮತ್ತು ಇತರ ಘೋರ ಅಪರಾಧಗಳ ಪ್ರಕರಣಗಳಲ್ಲಿ ಕಠಿಣ ಶಿಕ್ಷೆ ವಿಧಿಸಲು ನಾವು ಮಸೂದೆ ತಂದಿದ್ದೇವೆ. ಆದರೆ, ಕೇಂದ್ರ ಸರ್ಕಾರ ಇದರ ಬಗ್ಗೆ ಗಮನಹರಿಸದ ಕಾರಣ ಮಸೂದೆ ಇನ್ನೂ ಬಾಕಿ ಇದೆ. ಈ ಮಸೂದೆಯು ಮಾದರಿಯಾಗಬೇಕೆಂದು ಮತ್ತು ದೇಶದಾದ್ಯಂತ ಜಾರಿಗೆ ಬರಬೇಕೆಂದು ನಾವು ಬಯಸುತ್ತೇವೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಹೈದರಾಬಾದ್| ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡಿ ಹಂಚಿಕೆ; ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...