Homeಮುಖಪುಟಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಮರಣದಂಡನೆ ವಿಧಿಸುವಂತೆ ಕೋರಿ ಹೈಕೋರ್ಟ್...

ಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಮರಣದಂಡನೆ ವಿಧಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬಂಗಾಳ ಸರ್ಕಾರ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಗೆ ಮರದಂಡನೆ ವಿಧಿಸುವಂತೆ ಕೋರಿ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ (ಜ.21) ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದೆ.

ಸೋಮವಾರ (ಜ.20) ಅಪರಾಧಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ (ಮರಣದವರೆಗೆ) ವಿಧಿಸಿ ಕೋಲ್ಕತ್ತಾದ ಸಿಯಾಲದಹ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ತೀರ್ಪು ಪ್ರಕಟಿಸಿದ್ದರು.

ಸಿಯಾಲದಹ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯದ ಅನುಮತಿ ಕೋರಿ ಅಡ್ವೊಕೇಟ್ ಜನರಲ್ ಕಿಶೋರ್ ದತ್ತ ಅವರು ಮಂಗಳವಾರ (ಜ. 21) ನ್ಯಾಯಮೂರ್ತಿ ದೇಬಾಂಗ್ಸು ಬಸಕ್ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ಶಬ್ಬರ್ ರಶೀದಿ ಅವರ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೆಷನ್ಸ್ ನ್ಯಾಯಾಲಯದ ತೀರ್ಪಿಗೆ ಅತೃಪ್ತಿ ವ್ಯಕ್ತಪಡಿಸಿದ ಬೆನ್ನಲ್ಲೇ ಸರ್ಕಾರ ಹೈಕೋರ್ಟ್‌ ಮೆಟ್ಟಿಲೇರಿದೆ. “ಜೀವಾವಧಿ ಶಿಕ್ಷೆಯ ಅರ್ಥವೇನು? ಅನೇಕ ಪ್ರಕರಣಗಳಲ್ಲಿ, ಘೋರ ಅಪರಾಧಗಳನ್ನು ಮಾಡಿದ ನಂತರವೂ ಅಪರಾಧಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲಾಗುತ್ತದೆ. ಆರ್‌ಜಿ ಕರ್ ಪ್ರಕರಣದ ತೀರ್ಪಿನಿಂದ ನಾನು ನಿಜವಾಗಿಯೂ ಆಘಾತಕ್ಕೊಳಗಾಗಿದ್ದೇನೆ” ಎಂದು ಮುಖ್ಯಮಂತ್ರಿ ಮಂಗಳವಾರ (ಜ. 21) ಹೇಳಿದ್ದರು.

“ನಾವೂ ಕಾನೂನು ಅಧ್ಯಯನ ಮಾಡಿದ್ದೇವೆ ಮತ್ತು ಅದನ್ನು ಅರ್ಥಮಾಡಿಕೊಂಡಿದ್ದೇವೆ. ಮರಣದಂಡನೆ ವಿಧಿಸಲು ಇದು ‘ಅಪರೂಪದಲ್ಲಿ ಅಪರೂಪದ ಪ್ರಕರಣವಲ್ಲ’ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. ನಾವು ನ್ಯಾಯಾಧೀಶರ ಹೇಳಿಕೆಯನ್ನು ವಿರೋಧಿಸುತ್ತಿಲ್ಲ. ಆದರೆ, ಇದು ನಿಜಕ್ಕೂ ಅಪರೂಪದ, ಸೂಕ್ಷ್ಮ ಮತ್ತು ಘೋರ ಅಪರಾಧ ಎಂದು ನಾನು ಭಾವಿಸುತ್ತೇನೆ. ಒಬ್ಬ ಅಪರಾಧಿಯನ್ನು ಬಿಡುಗಡೆ ಮಾಡಿದರೆ ಅಥವಾ ಶಿಕ್ಷೆಗೆ ಒಳಪಡಿಸದಿದ್ದರೆ, ಆತ ಇನ್ನಷ್ಟು ದುಷ್ಕೃತ್ಯ ಎಸಗಬಹುದು” ಎಂದಿದ್ದರು.

ಅಪರಾಧಿಗೆ ಮರಣದಂಡನೆ ವಿಧಿಸಲು ನಿರಾಕರಿಸುವ ವೇಳೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು, “ಜೀವಕ್ಕೆ ಮತ್ತೊಂದು ಜೀವ” ಎಂಬ ಹಳೆಯ ಪದ್ದತಿಯನ್ನು ಮೀರಿ ನಾವು ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟಿದ್ದರು.

“ಆಧುನಿಕ ನ್ಯಾಯ ಕ್ಷೇತ್ರದಲ್ಲಿ, ನಾವು ‘ಕಣ್ಣಿಗೆ ಕಣ್ಣು’, ‘ಹಲ್ಲಿಗೆ ಹಲ್ಲು’, ‘ಉಗುರಿಗೆ ಉಗುರು’ ಮತ್ತು ‘ಜೀವಕ್ಕೆ ಜೀವ’ ಎಂಬ ಪ್ರಾಚೀನ ಪ್ರವೃತ್ತಿಯನ್ನು ಮೀರಿ ಮುಂದುವರಿಯಬೇಕು. ಕ್ರೌರ್ಯವನ್ನು ಕ್ರೌರ್ಯದೊಂದಿಗೆ ಹೋಲಿಸುವುದು ನಮ್ಮ ಕರ್ತವ್ಯವಲ್ಲ, ಬದಲಿಗೆ ಬುದ್ಧಿವಂತಿಕೆ, ಕರುಣೆ ಮತ್ತು ನ್ಯಾಯದ ಆಳವಾದ ತಿಳುವಳಿಕೆಯ ಮೂಲಕ ಮಾನವೀಯತೆಯನ್ನು ಎತ್ತಿ ಹಿಡಿಯುವುದು ನಮ್ಮ ಕೆಲಸ” ಎಂದು ನ್ಯಾಯಾಧೀಶರು ಆದೇಶದಲ್ಲಿ ಉಲ್ಲೇಖಿಸಿದ್ದರು.

“ಈ ಪ್ರಕರಣವು “ಅಪರೂಪದಲ್ಲಿ ಅಪರೂಪ” ಎಂದು ವರ್ಗೀಕರಿಸಲು ಇರುವ ಕಠಿಣ ಮಾನದಂಡಗಳನ್ನು ಪೂರೈಸುವುದಿಲ್ಲ. ಹಾಗಾಗಿ, ಮರಣದಂಡನೆಗಾಗಿ ಪ್ರಾಸಿಕ್ಯೂಷನ್ ಮಾಡಿರುವ ಮನವಿಯನ್ನು ಪರಿಗಣಿಸುವುದು ಸೂಕ್ತವಲ್ಲ” ಎಂದು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಹೇಳಿದ್ದರು.

ಅದಾಗ್ಯೂ, ಮಮತಾ ಬ್ಯಾನರ್ಜಿ ನ್ಯಾಯಾಲಯದ ಆದೇಶಕ್ಕೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. “ಯಾರಾದರೊಬ್ಬ ರಾಕ್ಷಸನಾಗಿದ್ದರೆ ನಮ್ಮ ಸಮಾಜ ಮಾನವೀಯತೆ ತೋರಿಸುತ್ತಿತ್ತಾ? ನಮ್ಮ ತಾಯಂದಿರು ಮತ್ತು ಸಹೋದರಿಯರ ಕಡೆಗೆ ಸಮಾಜವನ್ನು ಮಾನವೀಯಗೊಳಿಸಬೇಕು. ಇಂತಹ ಪ್ರಕರಣಗಳಲ್ಲಿ ಮರಣದಂಡನೆ ವಿಧಿಸುವ ‘ಪಶ್ಚಿಮ ಬಂಗಾಳ ಅಪರಾಧ ಕಾನೂನು ತಿದ್ದುಪಡಿ ಮಸೂದೆ-2024 ಅನ್ನು ನಮ್ಮ ಸರ್ಕಾರ ಅಂಗೀಕರಿಸಿದೆ” ಎಂದು ಹೇಳಿದ್ದಾರೆ.

“ಆಸಿಡ್ ದಾಳಿ ಮತ್ತು ಇತರ ಘೋರ ಅಪರಾಧಗಳ ಪ್ರಕರಣಗಳಲ್ಲಿ ಕಠಿಣ ಶಿಕ್ಷೆ ವಿಧಿಸಲು ನಾವು ಮಸೂದೆ ತಂದಿದ್ದೇವೆ. ಆದರೆ, ಕೇಂದ್ರ ಸರ್ಕಾರ ಇದರ ಬಗ್ಗೆ ಗಮನಹರಿಸದ ಕಾರಣ ಮಸೂದೆ ಇನ್ನೂ ಬಾಕಿ ಇದೆ. ಈ ಮಸೂದೆಯು ಮಾದರಿಯಾಗಬೇಕೆಂದು ಮತ್ತು ದೇಶದಾದ್ಯಂತ ಜಾರಿಗೆ ಬರಬೇಕೆಂದು ನಾವು ಬಯಸುತ್ತೇವೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಹೈದರಾಬಾದ್| ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡಿ ಹಂಚಿಕೆ; ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...