Homeಮುಖಪುಟಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಮರಣದಂಡನೆ ವಿಧಿಸುವಂತೆ ಕೋರಿ ಹೈಕೋರ್ಟ್...

ಆರ್‌ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಮರಣದಂಡನೆ ವಿಧಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬಂಗಾಳ ಸರ್ಕಾರ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಗೆ ಮರದಂಡನೆ ವಿಧಿಸುವಂತೆ ಕೋರಿ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ (ಜ.21) ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದೆ.

ಸೋಮವಾರ (ಜ.20) ಅಪರಾಧಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ (ಮರಣದವರೆಗೆ) ವಿಧಿಸಿ ಕೋಲ್ಕತ್ತಾದ ಸಿಯಾಲದಹ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ತೀರ್ಪು ಪ್ರಕಟಿಸಿದ್ದರು.

ಸಿಯಾಲದಹ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯದ ಅನುಮತಿ ಕೋರಿ ಅಡ್ವೊಕೇಟ್ ಜನರಲ್ ಕಿಶೋರ್ ದತ್ತ ಅವರು ಮಂಗಳವಾರ (ಜ. 21) ನ್ಯಾಯಮೂರ್ತಿ ದೇಬಾಂಗ್ಸು ಬಸಕ್ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ಶಬ್ಬರ್ ರಶೀದಿ ಅವರ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೆಷನ್ಸ್ ನ್ಯಾಯಾಲಯದ ತೀರ್ಪಿಗೆ ಅತೃಪ್ತಿ ವ್ಯಕ್ತಪಡಿಸಿದ ಬೆನ್ನಲ್ಲೇ ಸರ್ಕಾರ ಹೈಕೋರ್ಟ್‌ ಮೆಟ್ಟಿಲೇರಿದೆ. “ಜೀವಾವಧಿ ಶಿಕ್ಷೆಯ ಅರ್ಥವೇನು? ಅನೇಕ ಪ್ರಕರಣಗಳಲ್ಲಿ, ಘೋರ ಅಪರಾಧಗಳನ್ನು ಮಾಡಿದ ನಂತರವೂ ಅಪರಾಧಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲಾಗುತ್ತದೆ. ಆರ್‌ಜಿ ಕರ್ ಪ್ರಕರಣದ ತೀರ್ಪಿನಿಂದ ನಾನು ನಿಜವಾಗಿಯೂ ಆಘಾತಕ್ಕೊಳಗಾಗಿದ್ದೇನೆ” ಎಂದು ಮುಖ್ಯಮಂತ್ರಿ ಮಂಗಳವಾರ (ಜ. 21) ಹೇಳಿದ್ದರು.

“ನಾವೂ ಕಾನೂನು ಅಧ್ಯಯನ ಮಾಡಿದ್ದೇವೆ ಮತ್ತು ಅದನ್ನು ಅರ್ಥಮಾಡಿಕೊಂಡಿದ್ದೇವೆ. ಮರಣದಂಡನೆ ವಿಧಿಸಲು ಇದು ‘ಅಪರೂಪದಲ್ಲಿ ಅಪರೂಪದ ಪ್ರಕರಣವಲ್ಲ’ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. ನಾವು ನ್ಯಾಯಾಧೀಶರ ಹೇಳಿಕೆಯನ್ನು ವಿರೋಧಿಸುತ್ತಿಲ್ಲ. ಆದರೆ, ಇದು ನಿಜಕ್ಕೂ ಅಪರೂಪದ, ಸೂಕ್ಷ್ಮ ಮತ್ತು ಘೋರ ಅಪರಾಧ ಎಂದು ನಾನು ಭಾವಿಸುತ್ತೇನೆ. ಒಬ್ಬ ಅಪರಾಧಿಯನ್ನು ಬಿಡುಗಡೆ ಮಾಡಿದರೆ ಅಥವಾ ಶಿಕ್ಷೆಗೆ ಒಳಪಡಿಸದಿದ್ದರೆ, ಆತ ಇನ್ನಷ್ಟು ದುಷ್ಕೃತ್ಯ ಎಸಗಬಹುದು” ಎಂದಿದ್ದರು.

ಅಪರಾಧಿಗೆ ಮರಣದಂಡನೆ ವಿಧಿಸಲು ನಿರಾಕರಿಸುವ ವೇಳೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು, “ಜೀವಕ್ಕೆ ಮತ್ತೊಂದು ಜೀವ” ಎಂಬ ಹಳೆಯ ಪದ್ದತಿಯನ್ನು ಮೀರಿ ನಾವು ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟಿದ್ದರು.

“ಆಧುನಿಕ ನ್ಯಾಯ ಕ್ಷೇತ್ರದಲ್ಲಿ, ನಾವು ‘ಕಣ್ಣಿಗೆ ಕಣ್ಣು’, ‘ಹಲ್ಲಿಗೆ ಹಲ್ಲು’, ‘ಉಗುರಿಗೆ ಉಗುರು’ ಮತ್ತು ‘ಜೀವಕ್ಕೆ ಜೀವ’ ಎಂಬ ಪ್ರಾಚೀನ ಪ್ರವೃತ್ತಿಯನ್ನು ಮೀರಿ ಮುಂದುವರಿಯಬೇಕು. ಕ್ರೌರ್ಯವನ್ನು ಕ್ರೌರ್ಯದೊಂದಿಗೆ ಹೋಲಿಸುವುದು ನಮ್ಮ ಕರ್ತವ್ಯವಲ್ಲ, ಬದಲಿಗೆ ಬುದ್ಧಿವಂತಿಕೆ, ಕರುಣೆ ಮತ್ತು ನ್ಯಾಯದ ಆಳವಾದ ತಿಳುವಳಿಕೆಯ ಮೂಲಕ ಮಾನವೀಯತೆಯನ್ನು ಎತ್ತಿ ಹಿಡಿಯುವುದು ನಮ್ಮ ಕೆಲಸ” ಎಂದು ನ್ಯಾಯಾಧೀಶರು ಆದೇಶದಲ್ಲಿ ಉಲ್ಲೇಖಿಸಿದ್ದರು.

“ಈ ಪ್ರಕರಣವು “ಅಪರೂಪದಲ್ಲಿ ಅಪರೂಪ” ಎಂದು ವರ್ಗೀಕರಿಸಲು ಇರುವ ಕಠಿಣ ಮಾನದಂಡಗಳನ್ನು ಪೂರೈಸುವುದಿಲ್ಲ. ಹಾಗಾಗಿ, ಮರಣದಂಡನೆಗಾಗಿ ಪ್ರಾಸಿಕ್ಯೂಷನ್ ಮಾಡಿರುವ ಮನವಿಯನ್ನು ಪರಿಗಣಿಸುವುದು ಸೂಕ್ತವಲ್ಲ” ಎಂದು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಹೇಳಿದ್ದರು.

ಅದಾಗ್ಯೂ, ಮಮತಾ ಬ್ಯಾನರ್ಜಿ ನ್ಯಾಯಾಲಯದ ಆದೇಶಕ್ಕೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. “ಯಾರಾದರೊಬ್ಬ ರಾಕ್ಷಸನಾಗಿದ್ದರೆ ನಮ್ಮ ಸಮಾಜ ಮಾನವೀಯತೆ ತೋರಿಸುತ್ತಿತ್ತಾ? ನಮ್ಮ ತಾಯಂದಿರು ಮತ್ತು ಸಹೋದರಿಯರ ಕಡೆಗೆ ಸಮಾಜವನ್ನು ಮಾನವೀಯಗೊಳಿಸಬೇಕು. ಇಂತಹ ಪ್ರಕರಣಗಳಲ್ಲಿ ಮರಣದಂಡನೆ ವಿಧಿಸುವ ‘ಪಶ್ಚಿಮ ಬಂಗಾಳ ಅಪರಾಧ ಕಾನೂನು ತಿದ್ದುಪಡಿ ಮಸೂದೆ-2024 ಅನ್ನು ನಮ್ಮ ಸರ್ಕಾರ ಅಂಗೀಕರಿಸಿದೆ” ಎಂದು ಹೇಳಿದ್ದಾರೆ.

“ಆಸಿಡ್ ದಾಳಿ ಮತ್ತು ಇತರ ಘೋರ ಅಪರಾಧಗಳ ಪ್ರಕರಣಗಳಲ್ಲಿ ಕಠಿಣ ಶಿಕ್ಷೆ ವಿಧಿಸಲು ನಾವು ಮಸೂದೆ ತಂದಿದ್ದೇವೆ. ಆದರೆ, ಕೇಂದ್ರ ಸರ್ಕಾರ ಇದರ ಬಗ್ಗೆ ಗಮನಹರಿಸದ ಕಾರಣ ಮಸೂದೆ ಇನ್ನೂ ಬಾಕಿ ಇದೆ. ಈ ಮಸೂದೆಯು ಮಾದರಿಯಾಗಬೇಕೆಂದು ಮತ್ತು ದೇಶದಾದ್ಯಂತ ಜಾರಿಗೆ ಬರಬೇಕೆಂದು ನಾವು ಬಯಸುತ್ತೇವೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಹೈದರಾಬಾದ್| ಮಕ್ಕಳ ಅಶ್ಲೀಲ ಚಿತ್ರ ಡೌನ್‌ಲೋಡ್ ಮಾಡಿ ಹಂಚಿಕೆ; ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...