Homeಕರ್ನಾಟಕಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

2008ರಲ್ಲಿ ಜೆಡಿಎಸ್‍ನಿಂದ ಸ್ಪರ್ಧೆ ಮಾಡಿದ್ದ ಹನುಮಂತರಾಯಪ್ಪ ಅವರ ಮಗಳು ಕುಸುಮಾ ಕಾಂಗ್ರೆಸ್ ಅಭ್ಯರ್ಥಿ! ಇದು ಕಾಂಗ್ರೆಸ್‍ಗೆ ತನ್ನ ಓಟಿನ ಬೇಟೆಯನ್ನು ಮತ್ತಷ್ಟು ಹೆಚ್ಚಿಸಲು ಉಪಯೋಗ ಆಗಬಹುದು ಎಂಬ ಲೆಕ್ಕಾಚಾರ ಕೂಡಾ ಇದೆ.

- Advertisement -
- Advertisement -

ರಾಜ್ಯದ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಗೆ ಬರುವ ರಾಜರಾಜೇಶ್ವರಿ ನಗರದಲ್ಲಿ (ಆರ್‌ಆರ್ ನಗರ) ಉಪ ಚುನಾವಣೆ ಘೋಷಣೆಯಾಗಿದೆ. ಮುಂದಿನ ತಿಂಗಳು ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು ನವೆಂಬರ್ 10ಕ್ಕೆ ಫಲಿತಾಂಶ ಘೋಷಣೆಯಾಗಲಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ – ರಾಜ್ಯದ ಮೂರೂ ಪ್ರಮುಖ ಪಕ್ಷಗಳಿಗೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ.

ರಾಜ್ಯದಲ್ಲಿ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿರುವುದಕ್ಕೆ ಕಾರಣ ಬೇರೆಬೇರೆ. ಶಿರಾ ಕ್ಷೇತ್ರದ ಶಾಸಕರಾಗಿದ್ದ ಸತ್ಯನಾರಾಯಣ ಅವರ ಸಾವಿನಿಂದಾಗಿ ಉಪಚುನಾವಣೆ ನಡೆಯುತ್ತಿದ್ದರೆ, ಆರ್‌ಆರ್ ನಗರ ಕ್ಷೇತ್ರದ ಚುನಾವಣೆ ಆಪರೇಷನ್ ಕಮಲದ ಕೃಪೆಯಿಂದ ನಡೆಯುತ್ತಿದೆ. ಹಾಗಾಗಿಯೇ ಆರ್‌ಆರ್ ನಗರ ಕ್ಷೇತ್ರದ ಉಪಚುನಾವಣೆ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ.

ಭೌಗೋಳಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಆರ್‌ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ 2018ರ ಮಾಹಿತಿಯಂತೆ 4,71,459 ಮತದಾರರಿದ್ದಾರೆ. ಕ್ಷೇತ್ರದೊಳಗೆ ಬಿಬಿಎಂಪಿಯ ಒಟ್ಟು ಒಂಬತ್ತು ವಾರ್ಡ್‍ಗಳಿವೆ; ಅದರಲ್ಲಿ ಐದು ವಾರ್ಡ್‍ಗಳನ್ನು ಕಾಂಗ್ರೆಸ್ ಗೆದ್ದಿತ್ತು, ಬಿಜೆಪಿ ಮೂರು ಹಾಗೂ ಜೆಡಿಎಸ್ ಒಂದನ್ನು ಕೊನೆಯ ಬಾರಿ ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಗೆದ್ದುಕೊಂಡಿದ್ದವು. (ಈಗ ಬಿಬಿಎಂಪಿ ಅವಧಿ ಪೂರ್ಣಗೊಂಡಿದ್ದು ಹೊಸದಾಗಿ ಚುನಾವಣೆ ನಡೆಯಬೇಕಿದೆ)

2008ರಲ್ಲಿ ಬಿಜೆಪಿಯ ಎಂ ಶ್ರೀನಿವಾಸ್ ಇಲ್ಲಿ ಗೆದ್ದಿದ್ದರಾದರೂ ನಂತರ ನಡೆದ ಎರಡು ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ವಿಜಯ ಪತಾಕೆಯನ್ನು ಹಾರಿಸುತ್ತಲೇ ಬಂದಿದೆ. ಕಾಂಗ್ರೆಸ್‍ನಿಂದ ವಿಜಯಿಯಾಗಿದ್ದು ಸಿನಿಮೋದ್ಯಮಿ ಮುನಿರತ್ನ ನಾಯ್ಡು ಅವರೇ ಆರ್‌ಆರ್ ನಗರ ಕ್ಷೇತ್ರದ ಈ ಬಾರಿಯ ಉಪಚುನಾವಣೆಗೆ ನೇರ ಕಾರಣಕರ್ತರು ಎನ್ನಬಹುದು.

ಮೇ 12, 2018ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಜಾಲಹಳ್ಳಿಯ ಅಪಾರ್ಟ್‍ಮೆಂಟ್ ಒಂದರಲ್ಲಿ 10 ಸಾವಿರ ಮತದಾರರ ಗುರುತಿನ ಚೀಟಿ ಸಿಕ್ಕಿ, ಚುನಾವಣಾ ಆಯೋಗ ಆರ್‌ಆರ್ ನಗರ ಕ್ಷೇತ್ರದ ಚುನಾವಣೆಯನ್ನು ಮುಂದೂಡಿತ್ತು. ಇದಾದ ಕೆಲವೇ ದಿನಗಳ ನಂತರ ಚುನಾವಣೆ ನಡೆದು (ಮೇ 28) ಕಾಂಗ್ರೆಸ್‍ನಿಂದ ಮುನಿರತ್ನ ಗೆದ್ದಿದ್ದರೂ, ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಕೆಡವಲು ನಡೆದ ರಾಜಕೀಯ ಆಟದಲ್ಲಿ ಮುನಿರತ್ನ ಬಿಜೆಪಿಗೆ ಗುಳೆ ಹೋಗಿದ್ದರು. ಆಗ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ ಶಾಸಕರಲ್ಲಿ ಮುನಿರತ್ನ ಕೂಡಾ ಒಬ್ಬರು. ಇದರಿಂದಾಗಿ ಇಲ್ಲಿ ಮತ್ತೆ ಚುನಾವಣೆ ನಡೆಯುತ್ತಿದೆ.

88% ಸಾಕ್ಷರತೆಯಿರುವ ಇಲ್ಲಿ ಸಾಮಾನ್ಯವಾಗಿ ಮಧ್ಯಮವರ್ಗದ ಮತ್ತು ಬಡಜನ ಹೆಚ್ಚಿದ್ದಾರೆ ಹಾಗು ಸ್ಲಂಗಳೇ ಅತ್ಯಧಿಕವಾಗಿರುವ ಕ್ಷೇತ್ರ ಇದಾಗಿದೆ. ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ 50% ಆಸುಪಾಸಿನಲ್ಲೇ ಮತದಾನ ಆಗಿರುವ ಈ ಕ್ಷೇತ್ರದಲ್ಲಿ ಈ ಬಾರಿ ಕೊರೊನಾ ಭಯದಿಂದ 30% ರಿಂದ 35% ದಷ್ಟು ಆಸುಪಾಸು ಮತ ಚಲಾವಣೆಯಾಗಬಹುದು ಎನ್ನುತ್ತಾರೆ ರಾಜಕೀಯ ಪರಿಣಿತರು. ಮೊದಲು ಉತ್ತರಹಳ್ಳಿ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿಕೊಂಡಿತ್ತಾದರೂ ಕ್ಷೇತ್ರ ವಿಭಜನೆಯ ನಂತರ ಆರ್‌ಆರ್ ನಗರ ಸ್ವತಂತ್ರ ವಿಧಾನಸಭಾ ಕ್ಷೇತ್ರವಾಗಿದೆ.

ಈಗಾಗಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಕುಸುಮಾ ಹನುಮಂತರಾಯಪ್ಪ ಅವರನ್ನು ಆಯ್ಕೆಮಾಡಿಕೊಂಡು ಪ್ರಚಾರದಲ್ಲಿ ತೊಡಗಿಕೊಂಡಿದೆ. ಬಿಜೆಪಿಯಲ್ಲಿ ಅಭ್ಯರ್ಥಿ ಯಾರೆಂಬ ಗೊಂದಲಗಳು ಮುಗಿದು ಮುನಿರತ್ನ ಅವರಿಗೆ ಕೊನೆಗೂ ಟಿಕೆಟ್ ನೀಡಿದೆ. ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬಣ ಮತ್ತು ಆರೆಸ್ಸೆಸ್ ನಿಯಂತ್ರಿತ ಬಿಎಲ್ ಸಂತೋಷ್ ಬಣಗಳ ನಡುವೆ ಮುನಿರತ್ನ ಅವರಿಗೆ ಟಿಕೆಟ್ ಕೊಡುವುದೆ ಬೇಡವೆ ಎನ್ನುವ ಬಗ್ಗೆ ಮಂಗಳವಾರ ಸಂಜೆಯವರೆಗೂ ಕುತೂಹಲವಿತ್ತು. ಯಡಿಯೂರಪ್ಪನವರು ತಮ್ಮ ಅಭ್ಯರ್ಥಿಯಾಗಿ ಮುನಿರತ್ನರನ್ನು ಶಿಫಾರಸ್ಸು ಮಾಡಿದ್ದರೆ, ಬಿಎಲ್ ಸಂತೋಷ್ ಬಣ ಮುನಿರಾಜು ಗೌಡರನ್ನು ಶಿಫಾರಸ್ಸು ಮಾಡಿದ್ದವು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಬಿಜೆಪಿಯ ಇಬ್ಬರೂ ಟಿಕೆಟ್ ಆಕಾಂಕ್ಷಿಗಳನ್ನು ಕರೆಸಿ, ಯಾರಿಗೆ ನಾಮಪತ್ರ ಒಲಿದರೂ ಪಕ್ಷಕ್ಕಾಗಿ ದುಡಿಯಬೇಕು ಎಂಬ ಕಿವಿಮಾತು ಹೇಳಿ ರಾಜಿಗೆ ಪ್ರಯತ್ನಪಟ್ಟಿರುವ ಸುದ್ದಿಯೂ ಹೊರಹೊಮ್ಮಿತ್ತು.

ಮುನಿರತ್ನ ಕಾಂಗ್ರೆಸ್‌ನಲ್ಲಿ ಶಾಸಕನಾಗಿದ್ದಾಗ ಬಿಬಿಎಂಪಿಯ ಬಿಜೆಪಿ ಕಾರ್ಪೋರೇಟರ್‌ಗಳಿಗೆ ಇನ್ನಿಲ್ಲದಂತೆ ಕಾಡಿದ್ದರು ಎನ್ನುವ ಆರೋಪ ಕೂಡಾ ಇದ್ದವು. 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುನಿರಾಜು ಗೌಡ ಪಿ.ಎಂ 82,572 ಮತಗಳನನ್ನು ಗಳಿಸಿದ್ದರು. ಆಗ ಮುನಿರತ್ನ 1,08,064 ಮತಗಳನ್ನೂ, ಜೆಡಿಎಸ್ ಅಭ್ಯರ್ಥಿ ಜಿ ಎಚ್ ರಾಮಚಂದ್ರ 60,360 ಮತಗಳನ್ನು ಗಳಿಸಿದ್ದರು. ಬಿಜೆಪಿಯಿಂದ ಮುನಿರತ್ನ ಅವರಿಗೆ ಕೊಟ್ಟರೆ ಬಿಜೆಪಿ ಕಾರ್ಪೋರೇಟರ್‌ಗಳ ಕೆಂಗಣ್ಣಿಗೆ ಗುರಿಯಾಗುವ ಭಯ ಬಿಜೆಪಿ ಹೈಕಮಾಂಡ್ ಗಿತ್ತಾದರೂ ಕೊನೆಗೂ ಯಡಿಯೂರಪ್ಪರ ಕೈಮೇಲಾಗಿದೆ. ಅಷ್ಟೇ ಅಲ್ಲದೆ ಬಿಜೆಪಿಯು ಅತೃಪ್ತರಿಗೆ ಜೆಡಿಎಸ್ ಟಿಕಟ್ ನೀಡುತ್ತದೆ ಎನ್ನುವ ವದಂತಿಗೂ ತೆರೆಬಿದ್ದಿದೆ.

ಜೆಡಿಎಸ್ ಬಿಜೆಪಿಯ ಅಭ್ಯರ್ಥಿಯ ಆಧಾರದಲ್ಲಿ ತನ್ನ ಅಭ್ಯರ್ಥಿ ಆಯ್ಕೆ ಮಾಡುತ್ತದೆ ಎಂಬ ವದಂತಿ ಹರಡಿತ್ತು. ಒಂದು ವೇಳೆ ಬಿಜೆಪಿ ಮುನಿರಾಜು ಅವರಿಗೆ ಟಿಕೆಟ್ ನೀಡಿದರೆ ಜೆಡಿಎಸ್‍ನಿಂದ ಮುನಿರತ್ನ ಅವರಿಗೆ ಟಿಕೆಟ್ ನೀಡಲು ತುದಿಗಾಲಲ್ಲಿ ನಿಂತಿದೆ, ಅದಕ್ಕಾಗಿಯೇ ಜೆಡಿಎಸ್ ತನ್ನ ಅಭ್ಯರ್ಥಿಯ ಹೆಸರು ಘೋಷಿಸಿರಲಿಲ್ಲ ಎನ್ನಲಾಗಿತ್ತು. ಇದೀಗ ಅದಕ್ಕೆ ತೆರೆಬಿದ್ದಿದ್ದು ವಿ. ಕೃಷ್ಣಮೂರ್ತಿ ಅವರಿಗೆ ಜೆಡಿಎಸ್ ಟಿಕೆಟ್ ನೀಡಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ “ನನ್ನ ಹಾಗೂ ಮುನಿರತ್ನ ಮಧ್ಯೆ ಸ್ನೇಹ ಇದೆ. ಆದರೆ ಸ್ನೇಹವೇ ಬೇರೆ, ಚುನಾವಣೆ ಬೇರೆ. ನಾನು ಮತ್ತು ಮುನಿರತ್ನ ಸಿನಿಮಾ ಕ್ಷೇತ್ರದವರು. ಹೀಗಾಗಿ ನಮ್ಮ ನಡುವಿನ ಸ್ನೇಹ ಚುನಾವಣೆ ಸಂದರ್ಭದಲಿ ಅನ್ವಯಿಸಲ್ಲ” ಎಂದು ಹೇಳಿದ್ದಾರೆ.

ಈ ಬಾರಿಯ ವಿಶೇಷವೇನೆಂದರೆ 2008ರಲ್ಲಿ ಜೆಡಿಎಸ್‍ನಿಂದ ಸ್ಪರ್ಧೆ ಮಾಡಿದ್ದ ಹನುಮಂತರಾಯಪ್ಪ ಅವರ ಮಗಳು ಕುಸುಮಾ ಕಾಂಗ್ರೆಸ್ ಅಭ್ಯರ್ಥಿ! ಇದು ಕಾಂಗ್ರೆಸ್‍ಗೆ ತನ್ನ ಓಟಿನ ಬೇಟೆಯನ್ನು ಮತ್ತಷ್ಟು ಹೆಚ್ಚಿಸಲು ಉಪಯೋಗ ಆಗಬಹುದು ಎಂಬ ಲೆಕ್ಕಾಚಾರ ಕೂಡಾ ಇದೆ. ಅಷ್ಟೇ ಅಲ್ಲದೆ ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳು ನಿರ್ಣಾಯಕವಾಗಿದ್ದು, ಕುಸುಮಾ ಅವರು ತಮ್ಮ ಇತ್ತೀಚೆಗಿನ ಸಂದರ್ಶನದಲ್ಲಿ ‘ಒಕ್ಕಲಿಗ ಹೆಣ್ಣು ಮಗಳಾಗಿರುವುದರ ಬಗ್ಗೆ ಹೆಮ್ಮಯಿದೆ’ ಎಂದು ಕೂಡ ಹೇಳಿದ್ದರು.

ಅಲ್ಲದೆ ಕುಸುಮ ಅವರು ದಿವಂಗತ ಜಿಲ್ಲಾಧಿಕಾರಿ ಡಿಕೆ ರವಿಯವರ ಪತ್ನಿಯಾಗಿದ್ದು, ರವಿ ಅವರ ಹೆಸರಿನಲ್ಲಿ ಈ ಹಿಂದೆ ಬಿಜೆಪಿ ರಾಜಕೀಯ ಮಾಡಿತ್ತು. ಅಷ್ಟೇ ಅಲ್ಲದೆ ಸಂಸದೆ ಶೋಭ ಕರಂದ್ಲಾಜೆ, ಕುಸುಮಾ ತಮ್ಮ ಪತಿಯ ಹೆಸರನ್ನು ಬಳಸಬಾರದು ಎಂದು ಡಿಕೆ ರವಿಯ ಬಗೆಗಿನ ಚರ್ಚೆಯನ್ನು ಈಗಾಗಲೇ ಮತ್ತೆ ಮುನ್ನಲೆಗೆ ತಂದಿದ್ದಾರೆ. ಅಕ್ಟೋಬರ್ 16 ರೊಳಗೆ ನಾಮಪತ್ರ ಸಲ್ಲಿಸಬೇಕಾಗಿದ್ದು, ಅ.19 ನಾಮಪತ್ರ ವಾಪಾಸು ಪಡೆಯಲು ಕೊನೆಯ ದಿನಾಂಕವಾಗಿದೆ. ಒಟ್ಟಿನಲ್ಲಿ ಪಕ್ಷಾಂತರದಿಂದ ಸೃಷ್ಟಿಯಾಗಿರುವ ಈ ಉಪಚುನಾವಣೆ ಪ್ರತಿಷ್ಟೆಯ ಕಣವಾಗಿದ್ದು ಇಡೀ ರಾಜ್ಯದ ಗಮನ ಸೆಳೆದಿರುವುದು ನಿಜ.


ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...