Homeಕರ್ನಾಟಕಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

2008ರಲ್ಲಿ ಜೆಡಿಎಸ್‍ನಿಂದ ಸ್ಪರ್ಧೆ ಮಾಡಿದ್ದ ಹನುಮಂತರಾಯಪ್ಪ ಅವರ ಮಗಳು ಕುಸುಮಾ ಕಾಂಗ್ರೆಸ್ ಅಭ್ಯರ್ಥಿ! ಇದು ಕಾಂಗ್ರೆಸ್‍ಗೆ ತನ್ನ ಓಟಿನ ಬೇಟೆಯನ್ನು ಮತ್ತಷ್ಟು ಹೆಚ್ಚಿಸಲು ಉಪಯೋಗ ಆಗಬಹುದು ಎಂಬ ಲೆಕ್ಕಾಚಾರ ಕೂಡಾ ಇದೆ.

- Advertisement -
- Advertisement -

ರಾಜ್ಯದ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಗೆ ಬರುವ ರಾಜರಾಜೇಶ್ವರಿ ನಗರದಲ್ಲಿ (ಆರ್‌ಆರ್ ನಗರ) ಉಪ ಚುನಾವಣೆ ಘೋಷಣೆಯಾಗಿದೆ. ಮುಂದಿನ ತಿಂಗಳು ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು ನವೆಂಬರ್ 10ಕ್ಕೆ ಫಲಿತಾಂಶ ಘೋಷಣೆಯಾಗಲಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ – ರಾಜ್ಯದ ಮೂರೂ ಪ್ರಮುಖ ಪಕ್ಷಗಳಿಗೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ.

ರಾಜ್ಯದಲ್ಲಿ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿರುವುದಕ್ಕೆ ಕಾರಣ ಬೇರೆಬೇರೆ. ಶಿರಾ ಕ್ಷೇತ್ರದ ಶಾಸಕರಾಗಿದ್ದ ಸತ್ಯನಾರಾಯಣ ಅವರ ಸಾವಿನಿಂದಾಗಿ ಉಪಚುನಾವಣೆ ನಡೆಯುತ್ತಿದ್ದರೆ, ಆರ್‌ಆರ್ ನಗರ ಕ್ಷೇತ್ರದ ಚುನಾವಣೆ ಆಪರೇಷನ್ ಕಮಲದ ಕೃಪೆಯಿಂದ ನಡೆಯುತ್ತಿದೆ. ಹಾಗಾಗಿಯೇ ಆರ್‌ಆರ್ ನಗರ ಕ್ಷೇತ್ರದ ಉಪಚುನಾವಣೆ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ.

ಭೌಗೋಳಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಆರ್‌ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ 2018ರ ಮಾಹಿತಿಯಂತೆ 4,71,459 ಮತದಾರರಿದ್ದಾರೆ. ಕ್ಷೇತ್ರದೊಳಗೆ ಬಿಬಿಎಂಪಿಯ ಒಟ್ಟು ಒಂಬತ್ತು ವಾರ್ಡ್‍ಗಳಿವೆ; ಅದರಲ್ಲಿ ಐದು ವಾರ್ಡ್‍ಗಳನ್ನು ಕಾಂಗ್ರೆಸ್ ಗೆದ್ದಿತ್ತು, ಬಿಜೆಪಿ ಮೂರು ಹಾಗೂ ಜೆಡಿಎಸ್ ಒಂದನ್ನು ಕೊನೆಯ ಬಾರಿ ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಗೆದ್ದುಕೊಂಡಿದ್ದವು. (ಈಗ ಬಿಬಿಎಂಪಿ ಅವಧಿ ಪೂರ್ಣಗೊಂಡಿದ್ದು ಹೊಸದಾಗಿ ಚುನಾವಣೆ ನಡೆಯಬೇಕಿದೆ)

2008ರಲ್ಲಿ ಬಿಜೆಪಿಯ ಎಂ ಶ್ರೀನಿವಾಸ್ ಇಲ್ಲಿ ಗೆದ್ದಿದ್ದರಾದರೂ ನಂತರ ನಡೆದ ಎರಡು ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ವಿಜಯ ಪತಾಕೆಯನ್ನು ಹಾರಿಸುತ್ತಲೇ ಬಂದಿದೆ. ಕಾಂಗ್ರೆಸ್‍ನಿಂದ ವಿಜಯಿಯಾಗಿದ್ದು ಸಿನಿಮೋದ್ಯಮಿ ಮುನಿರತ್ನ ನಾಯ್ಡು ಅವರೇ ಆರ್‌ಆರ್ ನಗರ ಕ್ಷೇತ್ರದ ಈ ಬಾರಿಯ ಉಪಚುನಾವಣೆಗೆ ನೇರ ಕಾರಣಕರ್ತರು ಎನ್ನಬಹುದು.

ಮೇ 12, 2018ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಜಾಲಹಳ್ಳಿಯ ಅಪಾರ್ಟ್‍ಮೆಂಟ್ ಒಂದರಲ್ಲಿ 10 ಸಾವಿರ ಮತದಾರರ ಗುರುತಿನ ಚೀಟಿ ಸಿಕ್ಕಿ, ಚುನಾವಣಾ ಆಯೋಗ ಆರ್‌ಆರ್ ನಗರ ಕ್ಷೇತ್ರದ ಚುನಾವಣೆಯನ್ನು ಮುಂದೂಡಿತ್ತು. ಇದಾದ ಕೆಲವೇ ದಿನಗಳ ನಂತರ ಚುನಾವಣೆ ನಡೆದು (ಮೇ 28) ಕಾಂಗ್ರೆಸ್‍ನಿಂದ ಮುನಿರತ್ನ ಗೆದ್ದಿದ್ದರೂ, ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಕೆಡವಲು ನಡೆದ ರಾಜಕೀಯ ಆಟದಲ್ಲಿ ಮುನಿರತ್ನ ಬಿಜೆಪಿಗೆ ಗುಳೆ ಹೋಗಿದ್ದರು. ಆಗ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ ಶಾಸಕರಲ್ಲಿ ಮುನಿರತ್ನ ಕೂಡಾ ಒಬ್ಬರು. ಇದರಿಂದಾಗಿ ಇಲ್ಲಿ ಮತ್ತೆ ಚುನಾವಣೆ ನಡೆಯುತ್ತಿದೆ.

88% ಸಾಕ್ಷರತೆಯಿರುವ ಇಲ್ಲಿ ಸಾಮಾನ್ಯವಾಗಿ ಮಧ್ಯಮವರ್ಗದ ಮತ್ತು ಬಡಜನ ಹೆಚ್ಚಿದ್ದಾರೆ ಹಾಗು ಸ್ಲಂಗಳೇ ಅತ್ಯಧಿಕವಾಗಿರುವ ಕ್ಷೇತ್ರ ಇದಾಗಿದೆ. ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ 50% ಆಸುಪಾಸಿನಲ್ಲೇ ಮತದಾನ ಆಗಿರುವ ಈ ಕ್ಷೇತ್ರದಲ್ಲಿ ಈ ಬಾರಿ ಕೊರೊನಾ ಭಯದಿಂದ 30% ರಿಂದ 35% ದಷ್ಟು ಆಸುಪಾಸು ಮತ ಚಲಾವಣೆಯಾಗಬಹುದು ಎನ್ನುತ್ತಾರೆ ರಾಜಕೀಯ ಪರಿಣಿತರು. ಮೊದಲು ಉತ್ತರಹಳ್ಳಿ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿಕೊಂಡಿತ್ತಾದರೂ ಕ್ಷೇತ್ರ ವಿಭಜನೆಯ ನಂತರ ಆರ್‌ಆರ್ ನಗರ ಸ್ವತಂತ್ರ ವಿಧಾನಸಭಾ ಕ್ಷೇತ್ರವಾಗಿದೆ.

ಈಗಾಗಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಕುಸುಮಾ ಹನುಮಂತರಾಯಪ್ಪ ಅವರನ್ನು ಆಯ್ಕೆಮಾಡಿಕೊಂಡು ಪ್ರಚಾರದಲ್ಲಿ ತೊಡಗಿಕೊಂಡಿದೆ. ಬಿಜೆಪಿಯಲ್ಲಿ ಅಭ್ಯರ್ಥಿ ಯಾರೆಂಬ ಗೊಂದಲಗಳು ಮುಗಿದು ಮುನಿರತ್ನ ಅವರಿಗೆ ಕೊನೆಗೂ ಟಿಕೆಟ್ ನೀಡಿದೆ. ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬಣ ಮತ್ತು ಆರೆಸ್ಸೆಸ್ ನಿಯಂತ್ರಿತ ಬಿಎಲ್ ಸಂತೋಷ್ ಬಣಗಳ ನಡುವೆ ಮುನಿರತ್ನ ಅವರಿಗೆ ಟಿಕೆಟ್ ಕೊಡುವುದೆ ಬೇಡವೆ ಎನ್ನುವ ಬಗ್ಗೆ ಮಂಗಳವಾರ ಸಂಜೆಯವರೆಗೂ ಕುತೂಹಲವಿತ್ತು. ಯಡಿಯೂರಪ್ಪನವರು ತಮ್ಮ ಅಭ್ಯರ್ಥಿಯಾಗಿ ಮುನಿರತ್ನರನ್ನು ಶಿಫಾರಸ್ಸು ಮಾಡಿದ್ದರೆ, ಬಿಎಲ್ ಸಂತೋಷ್ ಬಣ ಮುನಿರಾಜು ಗೌಡರನ್ನು ಶಿಫಾರಸ್ಸು ಮಾಡಿದ್ದವು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಬಿಜೆಪಿಯ ಇಬ್ಬರೂ ಟಿಕೆಟ್ ಆಕಾಂಕ್ಷಿಗಳನ್ನು ಕರೆಸಿ, ಯಾರಿಗೆ ನಾಮಪತ್ರ ಒಲಿದರೂ ಪಕ್ಷಕ್ಕಾಗಿ ದುಡಿಯಬೇಕು ಎಂಬ ಕಿವಿಮಾತು ಹೇಳಿ ರಾಜಿಗೆ ಪ್ರಯತ್ನಪಟ್ಟಿರುವ ಸುದ್ದಿಯೂ ಹೊರಹೊಮ್ಮಿತ್ತು.

ಮುನಿರತ್ನ ಕಾಂಗ್ರೆಸ್‌ನಲ್ಲಿ ಶಾಸಕನಾಗಿದ್ದಾಗ ಬಿಬಿಎಂಪಿಯ ಬಿಜೆಪಿ ಕಾರ್ಪೋರೇಟರ್‌ಗಳಿಗೆ ಇನ್ನಿಲ್ಲದಂತೆ ಕಾಡಿದ್ದರು ಎನ್ನುವ ಆರೋಪ ಕೂಡಾ ಇದ್ದವು. 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುನಿರಾಜು ಗೌಡ ಪಿ.ಎಂ 82,572 ಮತಗಳನನ್ನು ಗಳಿಸಿದ್ದರು. ಆಗ ಮುನಿರತ್ನ 1,08,064 ಮತಗಳನ್ನೂ, ಜೆಡಿಎಸ್ ಅಭ್ಯರ್ಥಿ ಜಿ ಎಚ್ ರಾಮಚಂದ್ರ 60,360 ಮತಗಳನ್ನು ಗಳಿಸಿದ್ದರು. ಬಿಜೆಪಿಯಿಂದ ಮುನಿರತ್ನ ಅವರಿಗೆ ಕೊಟ್ಟರೆ ಬಿಜೆಪಿ ಕಾರ್ಪೋರೇಟರ್‌ಗಳ ಕೆಂಗಣ್ಣಿಗೆ ಗುರಿಯಾಗುವ ಭಯ ಬಿಜೆಪಿ ಹೈಕಮಾಂಡ್ ಗಿತ್ತಾದರೂ ಕೊನೆಗೂ ಯಡಿಯೂರಪ್ಪರ ಕೈಮೇಲಾಗಿದೆ. ಅಷ್ಟೇ ಅಲ್ಲದೆ ಬಿಜೆಪಿಯು ಅತೃಪ್ತರಿಗೆ ಜೆಡಿಎಸ್ ಟಿಕಟ್ ನೀಡುತ್ತದೆ ಎನ್ನುವ ವದಂತಿಗೂ ತೆರೆಬಿದ್ದಿದೆ.

ಜೆಡಿಎಸ್ ಬಿಜೆಪಿಯ ಅಭ್ಯರ್ಥಿಯ ಆಧಾರದಲ್ಲಿ ತನ್ನ ಅಭ್ಯರ್ಥಿ ಆಯ್ಕೆ ಮಾಡುತ್ತದೆ ಎಂಬ ವದಂತಿ ಹರಡಿತ್ತು. ಒಂದು ವೇಳೆ ಬಿಜೆಪಿ ಮುನಿರಾಜು ಅವರಿಗೆ ಟಿಕೆಟ್ ನೀಡಿದರೆ ಜೆಡಿಎಸ್‍ನಿಂದ ಮುನಿರತ್ನ ಅವರಿಗೆ ಟಿಕೆಟ್ ನೀಡಲು ತುದಿಗಾಲಲ್ಲಿ ನಿಂತಿದೆ, ಅದಕ್ಕಾಗಿಯೇ ಜೆಡಿಎಸ್ ತನ್ನ ಅಭ್ಯರ್ಥಿಯ ಹೆಸರು ಘೋಷಿಸಿರಲಿಲ್ಲ ಎನ್ನಲಾಗಿತ್ತು. ಇದೀಗ ಅದಕ್ಕೆ ತೆರೆಬಿದ್ದಿದ್ದು ವಿ. ಕೃಷ್ಣಮೂರ್ತಿ ಅವರಿಗೆ ಜೆಡಿಎಸ್ ಟಿಕೆಟ್ ನೀಡಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ “ನನ್ನ ಹಾಗೂ ಮುನಿರತ್ನ ಮಧ್ಯೆ ಸ್ನೇಹ ಇದೆ. ಆದರೆ ಸ್ನೇಹವೇ ಬೇರೆ, ಚುನಾವಣೆ ಬೇರೆ. ನಾನು ಮತ್ತು ಮುನಿರತ್ನ ಸಿನಿಮಾ ಕ್ಷೇತ್ರದವರು. ಹೀಗಾಗಿ ನಮ್ಮ ನಡುವಿನ ಸ್ನೇಹ ಚುನಾವಣೆ ಸಂದರ್ಭದಲಿ ಅನ್ವಯಿಸಲ್ಲ” ಎಂದು ಹೇಳಿದ್ದಾರೆ.

ಈ ಬಾರಿಯ ವಿಶೇಷವೇನೆಂದರೆ 2008ರಲ್ಲಿ ಜೆಡಿಎಸ್‍ನಿಂದ ಸ್ಪರ್ಧೆ ಮಾಡಿದ್ದ ಹನುಮಂತರಾಯಪ್ಪ ಅವರ ಮಗಳು ಕುಸುಮಾ ಕಾಂಗ್ರೆಸ್ ಅಭ್ಯರ್ಥಿ! ಇದು ಕಾಂಗ್ರೆಸ್‍ಗೆ ತನ್ನ ಓಟಿನ ಬೇಟೆಯನ್ನು ಮತ್ತಷ್ಟು ಹೆಚ್ಚಿಸಲು ಉಪಯೋಗ ಆಗಬಹುದು ಎಂಬ ಲೆಕ್ಕಾಚಾರ ಕೂಡಾ ಇದೆ. ಅಷ್ಟೇ ಅಲ್ಲದೆ ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳು ನಿರ್ಣಾಯಕವಾಗಿದ್ದು, ಕುಸುಮಾ ಅವರು ತಮ್ಮ ಇತ್ತೀಚೆಗಿನ ಸಂದರ್ಶನದಲ್ಲಿ ‘ಒಕ್ಕಲಿಗ ಹೆಣ್ಣು ಮಗಳಾಗಿರುವುದರ ಬಗ್ಗೆ ಹೆಮ್ಮಯಿದೆ’ ಎಂದು ಕೂಡ ಹೇಳಿದ್ದರು.

ಅಲ್ಲದೆ ಕುಸುಮ ಅವರು ದಿವಂಗತ ಜಿಲ್ಲಾಧಿಕಾರಿ ಡಿಕೆ ರವಿಯವರ ಪತ್ನಿಯಾಗಿದ್ದು, ರವಿ ಅವರ ಹೆಸರಿನಲ್ಲಿ ಈ ಹಿಂದೆ ಬಿಜೆಪಿ ರಾಜಕೀಯ ಮಾಡಿತ್ತು. ಅಷ್ಟೇ ಅಲ್ಲದೆ ಸಂಸದೆ ಶೋಭ ಕರಂದ್ಲಾಜೆ, ಕುಸುಮಾ ತಮ್ಮ ಪತಿಯ ಹೆಸರನ್ನು ಬಳಸಬಾರದು ಎಂದು ಡಿಕೆ ರವಿಯ ಬಗೆಗಿನ ಚರ್ಚೆಯನ್ನು ಈಗಾಗಲೇ ಮತ್ತೆ ಮುನ್ನಲೆಗೆ ತಂದಿದ್ದಾರೆ. ಅಕ್ಟೋಬರ್ 16 ರೊಳಗೆ ನಾಮಪತ್ರ ಸಲ್ಲಿಸಬೇಕಾಗಿದ್ದು, ಅ.19 ನಾಮಪತ್ರ ವಾಪಾಸು ಪಡೆಯಲು ಕೊನೆಯ ದಿನಾಂಕವಾಗಿದೆ. ಒಟ್ಟಿನಲ್ಲಿ ಪಕ್ಷಾಂತರದಿಂದ ಸೃಷ್ಟಿಯಾಗಿರುವ ಈ ಉಪಚುನಾವಣೆ ಪ್ರತಿಷ್ಟೆಯ ಕಣವಾಗಿದ್ದು ಇಡೀ ರಾಜ್ಯದ ಗಮನ ಸೆಳೆದಿರುವುದು ನಿಜ.


ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...